Homeಮುಖಪುಟತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

ತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

- Advertisement -
- Advertisement -

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರಿಗೆ ಮಗಳು ಕೆ.ಕವಿತಾ ಅವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ವೈರಲ್ ಆಗಿದ್ದು, ರಾಜ್ಯದಲ್ಲಿ ಹೊಸ ರಾಜಕೀಯ ಚರ್ಚೆಯನ್ನು ಹುಟ್ಟು ಹಾಕಿದೆ.

ತೆಲಂಗಾಣದಲ್ಲಿ ಬಿಜೆಪಿ ಜೊತೆ ಬಿಆರ್‌ಎಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಗಳು ದಟ್ಟವಾಗಿ ಹರಡಿತ್ತು. ಈ ನಡುವೆ ಕವಿತಾ ಅವರದ್ದು ಎನ್ನಲಾದ ಪತ್ರದ ಕೆಲವೊಂದು ಅಂಶಗಳು ಸಂಚಲನ ಸೃಷ್ಟಿಸಿದೆ.

ವೈರಲ್ ಪತ್ರದ ನೈಜತೆ ಇನ್ನೂ ದೃಢಪಡದಿದ್ದರೂ, ಈ ಕುರಿತು ಕವಿತಾರ ಕಚೇರಿಯಾಗಲಿ ಅಥವಾ ಕೆ.ಚಂದ್ರಶೇಖರ್ ಅವರಿಂದಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

“ನೀವು (ಕೆಸಿಆರ್) ಕೇವಲ ಎರಡು ನಿಮಿಷಗಳ ಕಾಲ ಮಾತನಾಡಿದರೂ, ಭವಿಷ್ಯದಲ್ಲಿ ಬಿಜೆಪಿ ಜೊತೆ ಮೈತ್ರಿ ಏರ್ಪಡುತ್ತದೆ ಎಂದು ಕೆಲವರು ಊಹಿಸಲು ಪ್ರಾರಂಭಿಸಿದ್ದಾರೆ. ನೀವು (ಬಿಜೆಪಿ ವಿರುದ್ಧ) ಇನ್ನೂ ಬಲವಾಗಿ ಮಾತನಾಡಬೇಕಿತ್ತು ಎಂದು ನಾನು ವೈಯಕ್ತಿಕವಾಗಿ ಭಾವಿಸಿದ್ದೇನೆ. ಬಹುಶಃ ನಾನು (ಬಿಜೆಪಿಯಿಂದಾಗಿ) ತೊಂದರೆ ಅನುಭವಿಸಿದ್ದರಿಂದ ಹಾಗೆ ಅನಿಸಿರಬಹುದು. ಆದರೆ, ನೀವು ಬಿಜೆಪಿಯನ್ನು ಇನ್ನೂ ಸ್ವಲ್ಪ ಹೆಚ್ಚು ಗುರಿಯಾಗಿಸಿಕೊಳ್ಳಬೇಕಿತ್ತು ಅಪ್ಪಾ” ಎಂದು ಕವಿತಾ ಅವರು ತಂದೆಗೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ, ಪರಿಶಿಷ್ಟ ಜಾತಿ ಒಳ ಮೀಸಲಾತಿ, ವಕ್ಫ್ ತಿದ್ದುಪಡಿ ಕಾಯ್ದೆ ಮತ್ತು ತಮ್ಮ ಭಾಷಣದಲ್ಲಿ ಉರ್ದು ಭಾಷೆಯನ್ನು ಕೈಬಿಟ್ಟಿರುವುದು ಮುಂತಾದ ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ನೀವು (ಕೆಸಿಆರ್) ಮೌನ ವಹಿಸಿರುವುದು ನಕಾರಾತ್ಮಕ ಪ್ರತಿಕ್ರಿಯೆಗೆ ಕಾರಣ” ಎಂದು ಪತ್ರದಲ್ಲಿ ಹೇಳಲಾಗಿದೆ

“ಕಾಂಗ್ರೆಸ್ ಸರ್ಕಾರವು ತಳಮಟ್ಟದ ಜನ ಬೆಂಬಲವನ್ನು ಕಳೆದುಕೊಂಡಿದೆ. ಕೆಲವು ಬಿಆರ್‌ಎಸ್ ಕಾರ್ಯಕರ್ತರು ಈಗ ಬಿಜೆಪಿಯನ್ನು ಪರ್ಯಾಯವಾಗಿ ನೋಡುತ್ತಿದ್ದಾರೆ. ಇತ್ತೀಚಿನ ಎಂಎಲ್‌ಸಿ ಚುನಾವಣೆಯಲ್ಲಿ ಬಿಆರ್‌ಎಸ್ ಸ್ಪರ್ಧಿಸದಿರಲು ನಿರ್ಧರಿಸಿದ್ದು, ನಾವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬ ಬಲವಾದ ಸೂಚನೆಯನ್ನು ಪಕ್ಷದ ಕಾರ್ಯಕರ್ತರಿಗೆ ರವಾನಿಸಿದೆ” ಎನ್ನಲಾಗಿದೆ.

“ರಾಜಕೀಯ ಸನ್ನಿವೇಶವನ್ನು ಪರಿಹರಿಸಲು ನೀವು ನಿರ್ದಿಷ್ಟ ಕಾರ್ಯಕ್ರಮಗಳು ಅಥವಾ ಮಾರ್ಗಸೂಚಿಗಳನ್ನು ನೀಡುತ್ತೀರಿ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಕನಿಷ್ಠ ಈಗ ನಾವು ಒಂದು ಅಥವಾ ಎರಡು ದಿನಗಳ ಕಾಲ ಸಮಗ್ರ ಸಭೆಯನ್ನು ನಡೆಸಬಹುದು. ಕಾರ್ಯಕರ್ತರಿಂದ ಸಾಧ್ಯವಾದಷ್ಟು ಅಭಿಪ್ರಾಯಗಳನ್ನು ಸಂಗ್ರಹಿಸಿ ಅವರಿಗೆ ಮಾರ್ಗಸೂಚಿಯನ್ನು ನೀಡಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಈ ಪತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಗಂಟೆಗಳೇ ಕಳೆದಿದ್ದರೂ, ವಿರೋಧ ಪಕ್ಷವಾದ ಬಿಆರ್‌ಎಸ್‌ ಈವರೆಗೆ ಪತ್ರವನ್ನು ನಿರಾಕರಿಸಿಲ್ಲ. ಬಿಆರ್‌ಎಸ್ ತನ್ನ ವಜ್ರ ಮಹೋತ್ಸವವನ್ನು ಏಪ್ರಿಲ್ 27 ರಂದು ವಾರಂಗಲ್‌ನಲ್ಲಿ ಆಚರಿಸಿತ್ತು.

ವಾರಂಗಲ್ ಕಾರ್ಯಕ್ರಮದ ಸಂದರ್ಭದಲ್ಲಿ ತೆಲಂಗಾಣ ಚಳವಳಿಯ ಕೆಲವು ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳಲಾಗಿಲ್ಲ ಅಥವಾ ಮಾತನಾಡಲು ಅವಕಾಶ ನೀಡಲಾಗಿಲ್ಲ ಎಂದು ಪತ್ರವು ಕಳವಳ ವ್ಯಕ್ತಪಡಿಸಿದೆ.

ಸಕಾರಾತ್ಮಕವಾಗಿ, “ಆಪರೇಷನ್ ಕಾಗರ್” ಬಗೆಗಿನ ಕೆಸಿಆರ್ ನಿಲುವನ್ನು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳಿಗಾಗಿ ಅವರು ಮೌನ ಆಚರಿಸಿದ ಕ್ಷಣವನ್ನು ಶ್ಲಾಘಿಸಲಾಗಿದೆ. ವಾರಂಗಲ್ ಕಾರ್ಯಕ್ರಮದ ಯಶಸ್ಸಿಗೆ ಕೆಸಿಆರ್ ಅವರನ್ನು ಅಭಿನಂದಿಸುತ್ತಾ ಪತ್ರವನ್ನು ಮುಕ್ತಾಯಗೊಳಿಸಲಾಗಿದೆ.

ಬಿಆರ್‌ಎಸ್ ಎಂಎಲ್‌ಸಿಯೂ ಆಗಿರುವ ಕವಿತಾ ಅವರು ತಮ್ಮ ಮಗನ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಪ್ರಸ್ತುತ ಅಮೆರಿಕದಲ್ಲಿರುವುದರಿಂದ ಅವರು ವೈರಲ್ ಪತ್ರದ ಬಗ್ಗೆ ತಕ್ಷಣದ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ವರದಿಗಳು ತಿಳಿಸಿವೆ.

ವೈರಲ್ ಪತ್ರವನ್ನು ಕವಿತಾ ಅವರೇ ನಿಜವಾಗಿಯೂ ಬರೆದಿದ್ದಾರೆಯೇ ಎಂಬುವುದು ಖಚಿತವಾಗಿಲ್ಲ. ಒಂದು ವೇಳೆ ಅವರೇ ಬರೆದಿದ್ದರೂ, ಅದರಲ್ಲಿ ಆಶ್ಚರ್ಯ ಪಡುವಂತದ್ದು ಏನೂ ಇಲ್ಲ. ಪತ್ರದ ವಿಷಯಗಳು ಪ್ರತಿಕ್ರಿಯೆಯ ಸ್ವರೂಪದ್ದಾಗಿವೆ ಎಂದು ಬಿಆರ್‌ಎಸ್ ಎಂಎಲ್‌ಸಿ ಶ್ರವಣ್ ದಾಸೋಜು ಹೇಳಿದ್ದಾರೆ.

“ಒಬ್ಬರು ಮಗಳು ತಂದೆಗೆ ಅಥವಾ ಒಬ್ಬ ಸರ್ವೋಚ್ಚ ನಾಯಕನಿಗೆ ನೀಡುವ ಸಾಮಾನ್ಯ ಪ್ರತಿಕ್ರಿಯೆ ಇದು. ಇದು ಜನರಿಂದ ಪಡೆದ ಪ್ರತಿಕ್ರಿಯೆಯನ್ನು ಕ್ರೋಢೀಕರಿಸಿ ರವಾನಿಸಿದಂತಿದೆ” ಎಂದಿದ್ದಾರೆ.

ವೈರಲ್ ಪತ್ರವು ಬಿಆರ್‌ಎಸ್‌ ಪಕ್ಷದಲ್ಲಿನ ಆಂತರಿಕ ಬಿರುಕುಗಳನ್ನು ಬಯಲು ಮಾಡಿದೆ ಎಂಬ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಅಭಿಪ್ರಾಯಗಳ ಬಗ್ಗೆ ಕೇಳಿದಾಗ, “ಭತ್ತ ಖರೀದಿ ಮತ್ತು ನಿರುದ್ಯೋಗದಂತಹ ಜನರಿಗೆ ಹೆಚ್ಚು ಪ್ರಸ್ತುತವಾದ ಇತರ ವಿಷಯಗಳಿವೆ” ಎಂದು ದಾಸೋಜು ಹೇಳಿದ್ದಾರೆ.

ನಿವೃತ್ತಿ ನಂತರ ಯಾವುದೇ ಹುದ್ದೆ ಪಡೆಯದಿರಲು ನ್ಯಾ. ಓಕಾ ಮತ್ತು ನಾನು ನಿರ್ಧರಿಸಿದ್ದೇವೆ: ಸಿಜೆಐ ಬಿ.ಆರ್‌ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...