Homeಮುಖಪುಟತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

ತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

- Advertisement -
- Advertisement -

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರಿಗೆ ಮಗಳು ಕೆ.ಕವಿತಾ ಅವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ವೈರಲ್ ಆಗಿದ್ದು, ರಾಜ್ಯದಲ್ಲಿ ಹೊಸ ರಾಜಕೀಯ ಚರ್ಚೆಯನ್ನು ಹುಟ್ಟು ಹಾಕಿದೆ.

ತೆಲಂಗಾಣದಲ್ಲಿ ಬಿಜೆಪಿ ಜೊತೆ ಬಿಆರ್‌ಎಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಗಳು ದಟ್ಟವಾಗಿ ಹರಡಿತ್ತು. ಈ ನಡುವೆ ಕವಿತಾ ಅವರದ್ದು ಎನ್ನಲಾದ ಪತ್ರದ ಕೆಲವೊಂದು ಅಂಶಗಳು ಸಂಚಲನ ಸೃಷ್ಟಿಸಿದೆ.

ವೈರಲ್ ಪತ್ರದ ನೈಜತೆ ಇನ್ನೂ ದೃಢಪಡದಿದ್ದರೂ, ಈ ಕುರಿತು ಕವಿತಾರ ಕಚೇರಿಯಾಗಲಿ ಅಥವಾ ಕೆ.ಚಂದ್ರಶೇಖರ್ ಅವರಿಂದಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

“ನೀವು (ಕೆಸಿಆರ್) ಕೇವಲ ಎರಡು ನಿಮಿಷಗಳ ಕಾಲ ಮಾತನಾಡಿದರೂ, ಭವಿಷ್ಯದಲ್ಲಿ ಬಿಜೆಪಿ ಜೊತೆ ಮೈತ್ರಿ ಏರ್ಪಡುತ್ತದೆ ಎಂದು ಕೆಲವರು ಊಹಿಸಲು ಪ್ರಾರಂಭಿಸಿದ್ದಾರೆ. ನೀವು (ಬಿಜೆಪಿ ವಿರುದ್ಧ) ಇನ್ನೂ ಬಲವಾಗಿ ಮಾತನಾಡಬೇಕಿತ್ತು ಎಂದು ನಾನು ವೈಯಕ್ತಿಕವಾಗಿ ಭಾವಿಸಿದ್ದೇನೆ. ಬಹುಶಃ ನಾನು (ಬಿಜೆಪಿಯಿಂದಾಗಿ) ತೊಂದರೆ ಅನುಭವಿಸಿದ್ದರಿಂದ ಹಾಗೆ ಅನಿಸಿರಬಹುದು. ಆದರೆ, ನೀವು ಬಿಜೆಪಿಯನ್ನು ಇನ್ನೂ ಸ್ವಲ್ಪ ಹೆಚ್ಚು ಗುರಿಯಾಗಿಸಿಕೊಳ್ಳಬೇಕಿತ್ತು ಅಪ್ಪಾ” ಎಂದು ಕವಿತಾ ಅವರು ತಂದೆಗೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ, ಪರಿಶಿಷ್ಟ ಜಾತಿ ಒಳ ಮೀಸಲಾತಿ, ವಕ್ಫ್ ತಿದ್ದುಪಡಿ ಕಾಯ್ದೆ ಮತ್ತು ತಮ್ಮ ಭಾಷಣದಲ್ಲಿ ಉರ್ದು ಭಾಷೆಯನ್ನು ಕೈಬಿಟ್ಟಿರುವುದು ಮುಂತಾದ ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ನೀವು (ಕೆಸಿಆರ್) ಮೌನ ವಹಿಸಿರುವುದು ನಕಾರಾತ್ಮಕ ಪ್ರತಿಕ್ರಿಯೆಗೆ ಕಾರಣ” ಎಂದು ಪತ್ರದಲ್ಲಿ ಹೇಳಲಾಗಿದೆ

“ಕಾಂಗ್ರೆಸ್ ಸರ್ಕಾರವು ತಳಮಟ್ಟದ ಜನ ಬೆಂಬಲವನ್ನು ಕಳೆದುಕೊಂಡಿದೆ. ಕೆಲವು ಬಿಆರ್‌ಎಸ್ ಕಾರ್ಯಕರ್ತರು ಈಗ ಬಿಜೆಪಿಯನ್ನು ಪರ್ಯಾಯವಾಗಿ ನೋಡುತ್ತಿದ್ದಾರೆ. ಇತ್ತೀಚಿನ ಎಂಎಲ್‌ಸಿ ಚುನಾವಣೆಯಲ್ಲಿ ಬಿಆರ್‌ಎಸ್ ಸ್ಪರ್ಧಿಸದಿರಲು ನಿರ್ಧರಿಸಿದ್ದು, ನಾವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬ ಬಲವಾದ ಸೂಚನೆಯನ್ನು ಪಕ್ಷದ ಕಾರ್ಯಕರ್ತರಿಗೆ ರವಾನಿಸಿದೆ” ಎನ್ನಲಾಗಿದೆ.

“ರಾಜಕೀಯ ಸನ್ನಿವೇಶವನ್ನು ಪರಿಹರಿಸಲು ನೀವು ನಿರ್ದಿಷ್ಟ ಕಾರ್ಯಕ್ರಮಗಳು ಅಥವಾ ಮಾರ್ಗಸೂಚಿಗಳನ್ನು ನೀಡುತ್ತೀರಿ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಕನಿಷ್ಠ ಈಗ ನಾವು ಒಂದು ಅಥವಾ ಎರಡು ದಿನಗಳ ಕಾಲ ಸಮಗ್ರ ಸಭೆಯನ್ನು ನಡೆಸಬಹುದು. ಕಾರ್ಯಕರ್ತರಿಂದ ಸಾಧ್ಯವಾದಷ್ಟು ಅಭಿಪ್ರಾಯಗಳನ್ನು ಸಂಗ್ರಹಿಸಿ ಅವರಿಗೆ ಮಾರ್ಗಸೂಚಿಯನ್ನು ನೀಡಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಈ ಪತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಗಂಟೆಗಳೇ ಕಳೆದಿದ್ದರೂ, ವಿರೋಧ ಪಕ್ಷವಾದ ಬಿಆರ್‌ಎಸ್‌ ಈವರೆಗೆ ಪತ್ರವನ್ನು ನಿರಾಕರಿಸಿಲ್ಲ. ಬಿಆರ್‌ಎಸ್ ತನ್ನ ವಜ್ರ ಮಹೋತ್ಸವವನ್ನು ಏಪ್ರಿಲ್ 27 ರಂದು ವಾರಂಗಲ್‌ನಲ್ಲಿ ಆಚರಿಸಿತ್ತು.

ವಾರಂಗಲ್ ಕಾರ್ಯಕ್ರಮದ ಸಂದರ್ಭದಲ್ಲಿ ತೆಲಂಗಾಣ ಚಳವಳಿಯ ಕೆಲವು ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳಲಾಗಿಲ್ಲ ಅಥವಾ ಮಾತನಾಡಲು ಅವಕಾಶ ನೀಡಲಾಗಿಲ್ಲ ಎಂದು ಪತ್ರವು ಕಳವಳ ವ್ಯಕ್ತಪಡಿಸಿದೆ.

ಸಕಾರಾತ್ಮಕವಾಗಿ, “ಆಪರೇಷನ್ ಕಾಗರ್” ಬಗೆಗಿನ ಕೆಸಿಆರ್ ನಿಲುವನ್ನು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳಿಗಾಗಿ ಅವರು ಮೌನ ಆಚರಿಸಿದ ಕ್ಷಣವನ್ನು ಶ್ಲಾಘಿಸಲಾಗಿದೆ. ವಾರಂಗಲ್ ಕಾರ್ಯಕ್ರಮದ ಯಶಸ್ಸಿಗೆ ಕೆಸಿಆರ್ ಅವರನ್ನು ಅಭಿನಂದಿಸುತ್ತಾ ಪತ್ರವನ್ನು ಮುಕ್ತಾಯಗೊಳಿಸಲಾಗಿದೆ.

ಬಿಆರ್‌ಎಸ್ ಎಂಎಲ್‌ಸಿಯೂ ಆಗಿರುವ ಕವಿತಾ ಅವರು ತಮ್ಮ ಮಗನ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಪ್ರಸ್ತುತ ಅಮೆರಿಕದಲ್ಲಿರುವುದರಿಂದ ಅವರು ವೈರಲ್ ಪತ್ರದ ಬಗ್ಗೆ ತಕ್ಷಣದ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ವರದಿಗಳು ತಿಳಿಸಿವೆ.

ವೈರಲ್ ಪತ್ರವನ್ನು ಕವಿತಾ ಅವರೇ ನಿಜವಾಗಿಯೂ ಬರೆದಿದ್ದಾರೆಯೇ ಎಂಬುವುದು ಖಚಿತವಾಗಿಲ್ಲ. ಒಂದು ವೇಳೆ ಅವರೇ ಬರೆದಿದ್ದರೂ, ಅದರಲ್ಲಿ ಆಶ್ಚರ್ಯ ಪಡುವಂತದ್ದು ಏನೂ ಇಲ್ಲ. ಪತ್ರದ ವಿಷಯಗಳು ಪ್ರತಿಕ್ರಿಯೆಯ ಸ್ವರೂಪದ್ದಾಗಿವೆ ಎಂದು ಬಿಆರ್‌ಎಸ್ ಎಂಎಲ್‌ಸಿ ಶ್ರವಣ್ ದಾಸೋಜು ಹೇಳಿದ್ದಾರೆ.

“ಒಬ್ಬರು ಮಗಳು ತಂದೆಗೆ ಅಥವಾ ಒಬ್ಬ ಸರ್ವೋಚ್ಚ ನಾಯಕನಿಗೆ ನೀಡುವ ಸಾಮಾನ್ಯ ಪ್ರತಿಕ್ರಿಯೆ ಇದು. ಇದು ಜನರಿಂದ ಪಡೆದ ಪ್ರತಿಕ್ರಿಯೆಯನ್ನು ಕ್ರೋಢೀಕರಿಸಿ ರವಾನಿಸಿದಂತಿದೆ” ಎಂದಿದ್ದಾರೆ.

ವೈರಲ್ ಪತ್ರವು ಬಿಆರ್‌ಎಸ್‌ ಪಕ್ಷದಲ್ಲಿನ ಆಂತರಿಕ ಬಿರುಕುಗಳನ್ನು ಬಯಲು ಮಾಡಿದೆ ಎಂಬ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಅಭಿಪ್ರಾಯಗಳ ಬಗ್ಗೆ ಕೇಳಿದಾಗ, “ಭತ್ತ ಖರೀದಿ ಮತ್ತು ನಿರುದ್ಯೋಗದಂತಹ ಜನರಿಗೆ ಹೆಚ್ಚು ಪ್ರಸ್ತುತವಾದ ಇತರ ವಿಷಯಗಳಿವೆ” ಎಂದು ದಾಸೋಜು ಹೇಳಿದ್ದಾರೆ.

ನಿವೃತ್ತಿ ನಂತರ ಯಾವುದೇ ಹುದ್ದೆ ಪಡೆಯದಿರಲು ನ್ಯಾ. ಓಕಾ ಮತ್ತು ನಾನು ನಿರ್ಧರಿಸಿದ್ದೇವೆ: ಸಿಜೆಐ ಬಿ.ಆರ್‌ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...