Homeಮುಖಪುಟತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

ತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

- Advertisement -
- Advertisement -

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರಿಗೆ ಮಗಳು ಕೆ.ಕವಿತಾ ಅವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ವೈರಲ್ ಆಗಿದ್ದು, ರಾಜ್ಯದಲ್ಲಿ ಹೊಸ ರಾಜಕೀಯ ಚರ್ಚೆಯನ್ನು ಹುಟ್ಟು ಹಾಕಿದೆ.

ತೆಲಂಗಾಣದಲ್ಲಿ ಬಿಜೆಪಿ ಜೊತೆ ಬಿಆರ್‌ಎಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಗಳು ದಟ್ಟವಾಗಿ ಹರಡಿತ್ತು. ಈ ನಡುವೆ ಕವಿತಾ ಅವರದ್ದು ಎನ್ನಲಾದ ಪತ್ರದ ಕೆಲವೊಂದು ಅಂಶಗಳು ಸಂಚಲನ ಸೃಷ್ಟಿಸಿದೆ.

ವೈರಲ್ ಪತ್ರದ ನೈಜತೆ ಇನ್ನೂ ದೃಢಪಡದಿದ್ದರೂ, ಈ ಕುರಿತು ಕವಿತಾರ ಕಚೇರಿಯಾಗಲಿ ಅಥವಾ ಕೆ.ಚಂದ್ರಶೇಖರ್ ಅವರಿಂದಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

“ನೀವು (ಕೆಸಿಆರ್) ಕೇವಲ ಎರಡು ನಿಮಿಷಗಳ ಕಾಲ ಮಾತನಾಡಿದರೂ, ಭವಿಷ್ಯದಲ್ಲಿ ಬಿಜೆಪಿ ಜೊತೆ ಮೈತ್ರಿ ಏರ್ಪಡುತ್ತದೆ ಎಂದು ಕೆಲವರು ಊಹಿಸಲು ಪ್ರಾರಂಭಿಸಿದ್ದಾರೆ. ನೀವು (ಬಿಜೆಪಿ ವಿರುದ್ಧ) ಇನ್ನೂ ಬಲವಾಗಿ ಮಾತನಾಡಬೇಕಿತ್ತು ಎಂದು ನಾನು ವೈಯಕ್ತಿಕವಾಗಿ ಭಾವಿಸಿದ್ದೇನೆ. ಬಹುಶಃ ನಾನು (ಬಿಜೆಪಿಯಿಂದಾಗಿ) ತೊಂದರೆ ಅನುಭವಿಸಿದ್ದರಿಂದ ಹಾಗೆ ಅನಿಸಿರಬಹುದು. ಆದರೆ, ನೀವು ಬಿಜೆಪಿಯನ್ನು ಇನ್ನೂ ಸ್ವಲ್ಪ ಹೆಚ್ಚು ಗುರಿಯಾಗಿಸಿಕೊಳ್ಳಬೇಕಿತ್ತು ಅಪ್ಪಾ” ಎಂದು ಕವಿತಾ ಅವರು ತಂದೆಗೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ, ಪರಿಶಿಷ್ಟ ಜಾತಿ ಒಳ ಮೀಸಲಾತಿ, ವಕ್ಫ್ ತಿದ್ದುಪಡಿ ಕಾಯ್ದೆ ಮತ್ತು ತಮ್ಮ ಭಾಷಣದಲ್ಲಿ ಉರ್ದು ಭಾಷೆಯನ್ನು ಕೈಬಿಟ್ಟಿರುವುದು ಮುಂತಾದ ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ನೀವು (ಕೆಸಿಆರ್) ಮೌನ ವಹಿಸಿರುವುದು ನಕಾರಾತ್ಮಕ ಪ್ರತಿಕ್ರಿಯೆಗೆ ಕಾರಣ” ಎಂದು ಪತ್ರದಲ್ಲಿ ಹೇಳಲಾಗಿದೆ

“ಕಾಂಗ್ರೆಸ್ ಸರ್ಕಾರವು ತಳಮಟ್ಟದ ಜನ ಬೆಂಬಲವನ್ನು ಕಳೆದುಕೊಂಡಿದೆ. ಕೆಲವು ಬಿಆರ್‌ಎಸ್ ಕಾರ್ಯಕರ್ತರು ಈಗ ಬಿಜೆಪಿಯನ್ನು ಪರ್ಯಾಯವಾಗಿ ನೋಡುತ್ತಿದ್ದಾರೆ. ಇತ್ತೀಚಿನ ಎಂಎಲ್‌ಸಿ ಚುನಾವಣೆಯಲ್ಲಿ ಬಿಆರ್‌ಎಸ್ ಸ್ಪರ್ಧಿಸದಿರಲು ನಿರ್ಧರಿಸಿದ್ದು, ನಾವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬ ಬಲವಾದ ಸೂಚನೆಯನ್ನು ಪಕ್ಷದ ಕಾರ್ಯಕರ್ತರಿಗೆ ರವಾನಿಸಿದೆ” ಎನ್ನಲಾಗಿದೆ.

“ರಾಜಕೀಯ ಸನ್ನಿವೇಶವನ್ನು ಪರಿಹರಿಸಲು ನೀವು ನಿರ್ದಿಷ್ಟ ಕಾರ್ಯಕ್ರಮಗಳು ಅಥವಾ ಮಾರ್ಗಸೂಚಿಗಳನ್ನು ನೀಡುತ್ತೀರಿ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಕನಿಷ್ಠ ಈಗ ನಾವು ಒಂದು ಅಥವಾ ಎರಡು ದಿನಗಳ ಕಾಲ ಸಮಗ್ರ ಸಭೆಯನ್ನು ನಡೆಸಬಹುದು. ಕಾರ್ಯಕರ್ತರಿಂದ ಸಾಧ್ಯವಾದಷ್ಟು ಅಭಿಪ್ರಾಯಗಳನ್ನು ಸಂಗ್ರಹಿಸಿ ಅವರಿಗೆ ಮಾರ್ಗಸೂಚಿಯನ್ನು ನೀಡಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಈ ಪತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಗಂಟೆಗಳೇ ಕಳೆದಿದ್ದರೂ, ವಿರೋಧ ಪಕ್ಷವಾದ ಬಿಆರ್‌ಎಸ್‌ ಈವರೆಗೆ ಪತ್ರವನ್ನು ನಿರಾಕರಿಸಿಲ್ಲ. ಬಿಆರ್‌ಎಸ್ ತನ್ನ ವಜ್ರ ಮಹೋತ್ಸವವನ್ನು ಏಪ್ರಿಲ್ 27 ರಂದು ವಾರಂಗಲ್‌ನಲ್ಲಿ ಆಚರಿಸಿತ್ತು.

ವಾರಂಗಲ್ ಕಾರ್ಯಕ್ರಮದ ಸಂದರ್ಭದಲ್ಲಿ ತೆಲಂಗಾಣ ಚಳವಳಿಯ ಕೆಲವು ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳಲಾಗಿಲ್ಲ ಅಥವಾ ಮಾತನಾಡಲು ಅವಕಾಶ ನೀಡಲಾಗಿಲ್ಲ ಎಂದು ಪತ್ರವು ಕಳವಳ ವ್ಯಕ್ತಪಡಿಸಿದೆ.

ಸಕಾರಾತ್ಮಕವಾಗಿ, “ಆಪರೇಷನ್ ಕಾಗರ್” ಬಗೆಗಿನ ಕೆಸಿಆರ್ ನಿಲುವನ್ನು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳಿಗಾಗಿ ಅವರು ಮೌನ ಆಚರಿಸಿದ ಕ್ಷಣವನ್ನು ಶ್ಲಾಘಿಸಲಾಗಿದೆ. ವಾರಂಗಲ್ ಕಾರ್ಯಕ್ರಮದ ಯಶಸ್ಸಿಗೆ ಕೆಸಿಆರ್ ಅವರನ್ನು ಅಭಿನಂದಿಸುತ್ತಾ ಪತ್ರವನ್ನು ಮುಕ್ತಾಯಗೊಳಿಸಲಾಗಿದೆ.

ಬಿಆರ್‌ಎಸ್ ಎಂಎಲ್‌ಸಿಯೂ ಆಗಿರುವ ಕವಿತಾ ಅವರು ತಮ್ಮ ಮಗನ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಪ್ರಸ್ತುತ ಅಮೆರಿಕದಲ್ಲಿರುವುದರಿಂದ ಅವರು ವೈರಲ್ ಪತ್ರದ ಬಗ್ಗೆ ತಕ್ಷಣದ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ವರದಿಗಳು ತಿಳಿಸಿವೆ.

ವೈರಲ್ ಪತ್ರವನ್ನು ಕವಿತಾ ಅವರೇ ನಿಜವಾಗಿಯೂ ಬರೆದಿದ್ದಾರೆಯೇ ಎಂಬುವುದು ಖಚಿತವಾಗಿಲ್ಲ. ಒಂದು ವೇಳೆ ಅವರೇ ಬರೆದಿದ್ದರೂ, ಅದರಲ್ಲಿ ಆಶ್ಚರ್ಯ ಪಡುವಂತದ್ದು ಏನೂ ಇಲ್ಲ. ಪತ್ರದ ವಿಷಯಗಳು ಪ್ರತಿಕ್ರಿಯೆಯ ಸ್ವರೂಪದ್ದಾಗಿವೆ ಎಂದು ಬಿಆರ್‌ಎಸ್ ಎಂಎಲ್‌ಸಿ ಶ್ರವಣ್ ದಾಸೋಜು ಹೇಳಿದ್ದಾರೆ.

“ಒಬ್ಬರು ಮಗಳು ತಂದೆಗೆ ಅಥವಾ ಒಬ್ಬ ಸರ್ವೋಚ್ಚ ನಾಯಕನಿಗೆ ನೀಡುವ ಸಾಮಾನ್ಯ ಪ್ರತಿಕ್ರಿಯೆ ಇದು. ಇದು ಜನರಿಂದ ಪಡೆದ ಪ್ರತಿಕ್ರಿಯೆಯನ್ನು ಕ್ರೋಢೀಕರಿಸಿ ರವಾನಿಸಿದಂತಿದೆ” ಎಂದಿದ್ದಾರೆ.

ವೈರಲ್ ಪತ್ರವು ಬಿಆರ್‌ಎಸ್‌ ಪಕ್ಷದಲ್ಲಿನ ಆಂತರಿಕ ಬಿರುಕುಗಳನ್ನು ಬಯಲು ಮಾಡಿದೆ ಎಂಬ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಅಭಿಪ್ರಾಯಗಳ ಬಗ್ಗೆ ಕೇಳಿದಾಗ, “ಭತ್ತ ಖರೀದಿ ಮತ್ತು ನಿರುದ್ಯೋಗದಂತಹ ಜನರಿಗೆ ಹೆಚ್ಚು ಪ್ರಸ್ತುತವಾದ ಇತರ ವಿಷಯಗಳಿವೆ” ಎಂದು ದಾಸೋಜು ಹೇಳಿದ್ದಾರೆ.

ನಿವೃತ್ತಿ ನಂತರ ಯಾವುದೇ ಹುದ್ದೆ ಪಡೆಯದಿರಲು ನ್ಯಾ. ಓಕಾ ಮತ್ತು ನಾನು ನಿರ್ಧರಿಸಿದ್ದೇವೆ: ಸಿಜೆಐ ಬಿ.ಆರ್‌ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...