Homeಮುಖಪುಟದೆಹಲಿ ಸೇವಾ ಮಸೂದೆ ವಿರುದ್ಧ ಮತ ಚಲಾಯಿಸುವಂತೆ ತನ್ನ ಸಂಸದರಿಗೆ ವಿಪ್ ಜಾರಿ ಮಾಡಿದ ಬಿಆರ್‌ಎಸ್

ದೆಹಲಿ ಸೇವಾ ಮಸೂದೆ ವಿರುದ್ಧ ಮತ ಚಲಾಯಿಸುವಂತೆ ತನ್ನ ಸಂಸದರಿಗೆ ವಿಪ್ ಜಾರಿ ಮಾಡಿದ ಬಿಆರ್‌ಎಸ್

- Advertisement -
- Advertisement -

ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯು ಸೋಮವಾರ ತನ್ನ ಎಲ್ಲಾ ರಾಜ್ಯಸಭಾ ಸಂಸದರಿಗೆ ಸದನದಲ್ಲಿ ಹಾಜರಾಗುವಂತೆ ಮತ್ತು ದೆಹಲಿ ಸೇವೆಗಳ ಸುಗ್ರೀವಾಜ್ಞೆ ಮಸೂದೆಯ ವಿರುದ್ಧ ಮತ ಚಲಾಯಿಸುವಂತೆ ವಿಪ್ ಜಾರಿಗೊಳಿಸಿದೆ.

”ಬಿಆರ್‌ಎಸ್ (ರಾಜ್ಯಸಭೆ)ನ ಎಲ್ಲಾ ಸಂಸದರು ದೆಹಲಿ ಸೇವೆಗಳ ಸುಗ್ರೀವಾಜ್ಞೆ ಮಸೂದೆಯನ್ನು ಸದನದ ಮುಂದೆ ಯಾವುದೇ ಸಮಯದಲ್ಲಿ ತರಬಹುದು ಹಾಗಾಗಿ ಪಕ್ಷದ ಎಲ್ಲ ಸದಸ್ಯರು ಅದರ ವಿರುದ್ಧ ಮತ ಚಲಾಯಿಸಲು ವಿನಂತಿಸಲಾಗಿದೆ” ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಮೇಲ್ಮನೆಯಲ್ಲಿ ಬಿಆರ್‌ಎಸ್ ಏಳು ಸಂಸದರನ್ನು ಹೊಂದಿದೆ. ”ಜುಲೈ 31ರಿಂದ ಆಗಸ್ಟ್ 4ರವರೆಗೆ ಮತ್ತು ಮಸೂದೆಯ ಮೇಲಿನ ಮತದಾನ ಮುಗಿಯುವವರೆಗೆ ಅವರೆಲ್ಲರೂ ಸದನದಲ್ಲಿ ಹಾಜರಿರಬೇಕು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೆಹಲಿಯ NCT ಸರ್ಕಾರ (ತಿದ್ದುಪಡಿ) ಸುಗ್ರೀವಾಜ್ಞೆಯು ದೆಹಲಿ ಸರ್ಕಾರದಿಂದ ಸೇವೆಗಳ ಮೇಲಿನ ನಿಯಂತ್ರಣವನ್ನು ತೆಗೆದುಹಾಕುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: INDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

ಮಸೂದೆ ವಿಚಾರಕ್ಕೆ ಕೇಂದ್ರದ ವಿರುದ್ಧ ಎಎಪಿ ಸಂಸದ ಕಿಡಿ

ಸುಗ್ರೀವಾಜ್ಞೆಯನ್ನು ಪ್ರಜಾಸತ್ತಾತ್ಮಕವಲ್ಲ ಎಂದು ಕರೆದ ಎಎಪಿ ಸಂಸದ ರಾಘವ್ ಚಡ್ಡಾ, ರಾಷ್ಟ್ರ ರಾಜಧಾನಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರವನ್ನು ನಾಶಮಾಡಲು ಇದು ಬಿಜೆಪಿಯ ತಂತ್ರವಾಗಿದೆ ಎಂದು ಹೇಳಿದರು.

”ಈ ಮಸೂದೆ ಕೇವಲ ದೇಶದ ಸಂವಿಧಾನದ ವಿರುದ್ಧ ಮಾತ್ರವಲ್ಲದೆ ದೆಹಲಿಯ 2 ಕೋಟಿ ಜನರ ವಿರುದ್ಧವೂ ಆಗಿದೆ. ದೆಹಲಿಯ ಜನರು ಅವರನ್ನು ಧಿಕ್ಕರಿಸಿ, ಎಎಪಿಗೆ ಬೆಂಬಲಿಸಿದ್ದಾರೆ. ಹಾಗಾಗಿ ಬಿಜೆಪಿ ಹೈಕಮಾಂಡ್ ಇದೀಗ ದೆಹಲಿ ಸರ್ಕಾರವನ್ನು ನಾಶಮಾಡಲು ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಅವರು ಹೇಳಿದರು.

ಆಗಸ್ಟ್ 4ರವರೆಗೆ ಸದನದಲ್ಲಿ ಹಾಜರಿರಲು ರಾಜ್ಯಸಭೆಯಲ್ಲಿ ತನ್ನ ಎಲ್ಲಾ ಸಂಸದರಿಗೆ ಎಎಪಿ ಮೂರು ಸಾಲಿನ ವಿಪ್ ನೀಡಿದೆ. ಈ ಮಸೂದೆಯು ದೆಹಲಿ ಸರ್ಕಾರಕ್ಕೆ ವರ್ಗಾವಣೆ ಮತ್ತು ಪೋಸ್ಟಿಂಗ್ ಅಧಿಕಾರವನ್ನು ನೀಡುವ ಸುಪ್ರೀಂ ಕೋರ್ಟ್ ಆದೇಶವನ್ನು ನಿರಾಕರಿಸುವ ಸುಗ್ರೀವಾಜ್ಞೆಯನ್ನು ಬದಲಿಸಲು ಪ್ರಯತ್ನಿಸುತ್ತದೆ.

ಕೇಂದ್ರ ಸರ್ಕಾರವು ಉಭಯ ಸದನಗಳಲ್ಲಿ ಸಾಕಷ್ಟು ಸಂಖ್ಯಾಬಲ ಹೊಂದಿದ್ದರೂ ಮಸೂದೆ ಅಂಗೀಕಾರವನ್ನು ವಿರೋಧಿಸುವುದಾಗಿ I.N.D.I.A ಗುಂಪು ಈ ಹಿಂದೆ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...