Homeಮುಖಪುಟಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಸೀತಾನಗರಂ ಪೊಲೀಸರು ದಲಿತ ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿ ಪೊಲೀಸರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ”ಎಂದು ಡಿಐಜಿ ಹೇಳಿದ್ದಾರೆ.

- Advertisement -
- Advertisement -

ಸ್ಥಳೀಯ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಜಗಳವಾಡಿದ ಕಾರಣಕ್ಕೆ ಆಂಧ್ರ ಪ್ರದೇಶ ಪೊಲೀಸರು ದಲಿತ ಯುವಕನ ಮೇಲೆ ಅಮಾನುಷವಾಗಿ ಥಳಿಸಿದ ಆರೋಪದ ಮೇಲೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಲಾಗಿದೆ.

ಘಟನೆಯು ಸೀತಾನಗರಂ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ವೇದುಲ್ಲಪಲ್ಲಿ ಗ್ರಾಮದ ಸಂತ್ರಸ್ತ ಐ ವರ ಪ್ರಸಾದ್ ಅವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:

ವೇದುಲ್ಲಪಲ್ಲಿ ಗ್ರಾಮದಲ್ಲಿ ಐ ವರಪ್ರಸಾದ್‌ ವಾಸಿಸುತ್ತಿದ್ದ ರಸ್ತೆಯಲ್ಲಿ ಭಾನುವಾರ ಸಂಜೆ ಒಬ್ಬರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರಕ್ಕೆ ಸಿದ್ದತೆಗಳು ನಡೆಯುತ್ತಿದ್ದ ಕಾರಣಕ್ಕೆ ಆ ರಸ್ತೆಯನ್ನು ಕೆಲ ಸಮಯ ನಿರ್ಬಂಧಿಸಲಾಗಿತ್ತು. ಈ ಕಾರಣಕ್ಕೆ ಜಗಳ ಆರಂಭವಾಗಿದೆ.

“ಸ್ಥಳೀಯ ವೈಎಸ್‌ಆರ್ ಕಾಂಗ್ರೆಸ್ ಮುಖಂಡರು ಅಲ್ಲಿಗೆ ಬಂದು ಮರಳು ಲಾರಿಗಳನ್ನು ನಿಲ್ಲಿಸಿದ್ದಕ್ಕಾಗಿ ನಮ್ಮನ್ನು ಪ್ರಶ್ನಿಸಿದರು. ನಾವು ಸ್ವಲ್ಪ ಸಮಯ ಕಾಯಿರಿ ಶವ ತೆಗೆದುಕೊಂಡ ಹೋದ ಕೂಡಲೇ ತೆರವುಗೊಳಿಸುತ್ತೇವೆ ಎಂದು ಹೇಳಿದೆವು. ಇದು ವಾದಕ್ಕೆ ಕಾರಣವಾಯಿತು. ಸೋಮವಾರ ಬೆಳಿಗ್ಗೆ, ಸೀತಾನಗರಂ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪೊಲೀಸ್ ಶೇಕ್ ಫಿರೋಜ್ ಶಾ ಮತ್ತು ಇತರ ಇಬ್ಬರು ಕಾನ್‌ಸ್ಟೆಬಲ್‌ಗಳು ಗ್ರಾಮಕ್ಕೆ ಬಂದು ನನ್ನನ್ನು ಮತ್ತು ಇತರ ಇಬ್ಬರನ್ನು ತನಿಖೆಯ ಹೆಸರಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಸಂತ್ರಸ್ತ ವರಪ್ರಸಾದ್ ಹೇಳಿದ್ದಾರೆ.

ಕಸ್ಟಡಿಯಲ್ಲಿ ನಮ್ಮ ಮೇಲೆ ಎಸ್‌ಐ ಬೆಲ್ಟ್‌ನಿಂದ ತೀವ್ರವಾಗಿ ಹೊಡೆದು ಒದೆದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಅವರು ನಂತರ ಕ್ಷೌರಿಕನನ್ನು ಕರೆದರ ನನ್ನ ತಲೆಗೆ ಹೊಡೆದು ನನ್ನ ಮೀಸೆಗಳನ್ನು ಬಲವಂತವಾಗಿ ಬೋಳಿಸಲಾಯಿತು ಎಂದು ಅವರು ಹೇಳಿದ್ದಾರೆ

ಈ ಘಟನೆಯನ್ನು ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಖಂಡಿಸಿದ್ದಾರೆ. ದಲಿತ ಯುವಕರನ್ನು ಥಳಿಸುವ ಮೂಲಕ ಆಂಧ್ರಪ್ರದೇಶ ಮತ್ತೆ ಜಂಗಲ್ ರಾಜ್‌ಗೆ ಮರಳಿದೆ, ವೈಎಸ್‌ಆರ್ ಕಾಂಗ್ರೆಸ್ ಕಾರ್ಯಕರ್ತರು ದಲಿತನ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ಸಮ್ಮುಖದಲ್ಲಿ ದಲಿತ ವ್ಯಕ್ತಿಯನ್ನು ಹೊಡೆದಿದ್ದಾರೆ. ದಲಿತ ವ್ಯಕ್ತಿಯ ಮೀಸೆ ಬೋಳಿಸುವ ಮೂಲಕ ಅವರ ಸ್ವಾಭಿಮಾನವನ್ನು ಹಾಳುಮಾಡುತ್ತಿದ್ದಾರೆ. ಈ ಪ್ರದೇಶದಲ್ಲಿನ ಅಕ್ರಮ ಮರಳು ಗಣಿಗಾರಿಕೆಯನ್ನು ಪ್ರಶ್ನಿಸುವುದು ಅವರ ಏಕೈಕ ತಪ್ಪು. ಪೊಲೀಸರಿಗೆ ಏನಾಗಿದೆ? ಭ್ರಷ್ಟ ಆಡಳಿತ ಪಕ್ಷದ ಕೈಯಲ್ಲಿ ಅವರು ಆಟಿಕೆಗಳಾಗಿರುವುದು ಏಕೆ? ಇದು ಅವರ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ಘಟನೆಯನ್ನು ಖಂಡಿಸಿ ಸ್ಥಳೀಯ ದಲಿತ ಸಂಘಟನೆಗಳ ತೀವ್ರ ಪ್ರತಿಭಟನೆಯ ನಂತರ, ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎಸ್.ಎನ್ ರಾವ್ ಈ ಘಟನೆಯ ಬಗ್ಗೆ ತನಿಖೆ ನಡೆಸಿ ಫಿರೋಜ್ ಶಾ ಮತ್ತು ಇನ್ನೊಬ್ಬ ಕಾನ್‌ಸ್ಟೆಬಲ್ ಅವರನ್ನು ಅಮಾನತುಗೊಳಿಸುವುದಾಗಿ ಘೋಷಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 324, 323 ಮತ್ತು 506 ರ ಅಡಿಯಲ್ಲಿ ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ (ತಡೆಗಟ್ಟುವಿಕೆ) ಕಾಯ್ದೆಯಡಿ ಸಬ್ ಇನ್ಸ್‌ಪೆಕ್ಟರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಕೆ.ವಿ.ಮೋಹನ್ ರಾವ್ ಹೇಳಿದ್ದಾರೆ.

“ಸೀತಾನಗರಂ ಪೊಲೀಸರು ದಲಿತ ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿ ಪೊಲೀಸರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ”ಎಂದು ಡಿಐಜಿ ಹೇಳಿದ್ದಾರೆ.

ದಲಿತ ಯುವಕರನ್ನು ಅವಮಾನಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಾಜಿ ಅಮಲಪುರಂ ಸಂಸದ ಜಿ.ವಿ.ಹರ್ಷ ಕುಮಾರ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...