Homeಮುಖಪುಟಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಸೀತಾನಗರಂ ಪೊಲೀಸರು ದಲಿತ ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿ ಪೊಲೀಸರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ”ಎಂದು ಡಿಐಜಿ ಹೇಳಿದ್ದಾರೆ.

- Advertisement -
- Advertisement -

ಸ್ಥಳೀಯ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಜಗಳವಾಡಿದ ಕಾರಣಕ್ಕೆ ಆಂಧ್ರ ಪ್ರದೇಶ ಪೊಲೀಸರು ದಲಿತ ಯುವಕನ ಮೇಲೆ ಅಮಾನುಷವಾಗಿ ಥಳಿಸಿದ ಆರೋಪದ ಮೇಲೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಲಾಗಿದೆ.

ಘಟನೆಯು ಸೀತಾನಗರಂ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ವೇದುಲ್ಲಪಲ್ಲಿ ಗ್ರಾಮದ ಸಂತ್ರಸ್ತ ಐ ವರ ಪ್ರಸಾದ್ ಅವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:

ವೇದುಲ್ಲಪಲ್ಲಿ ಗ್ರಾಮದಲ್ಲಿ ಐ ವರಪ್ರಸಾದ್‌ ವಾಸಿಸುತ್ತಿದ್ದ ರಸ್ತೆಯಲ್ಲಿ ಭಾನುವಾರ ಸಂಜೆ ಒಬ್ಬರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರಕ್ಕೆ ಸಿದ್ದತೆಗಳು ನಡೆಯುತ್ತಿದ್ದ ಕಾರಣಕ್ಕೆ ಆ ರಸ್ತೆಯನ್ನು ಕೆಲ ಸಮಯ ನಿರ್ಬಂಧಿಸಲಾಗಿತ್ತು. ಈ ಕಾರಣಕ್ಕೆ ಜಗಳ ಆರಂಭವಾಗಿದೆ.

“ಸ್ಥಳೀಯ ವೈಎಸ್‌ಆರ್ ಕಾಂಗ್ರೆಸ್ ಮುಖಂಡರು ಅಲ್ಲಿಗೆ ಬಂದು ಮರಳು ಲಾರಿಗಳನ್ನು ನಿಲ್ಲಿಸಿದ್ದಕ್ಕಾಗಿ ನಮ್ಮನ್ನು ಪ್ರಶ್ನಿಸಿದರು. ನಾವು ಸ್ವಲ್ಪ ಸಮಯ ಕಾಯಿರಿ ಶವ ತೆಗೆದುಕೊಂಡ ಹೋದ ಕೂಡಲೇ ತೆರವುಗೊಳಿಸುತ್ತೇವೆ ಎಂದು ಹೇಳಿದೆವು. ಇದು ವಾದಕ್ಕೆ ಕಾರಣವಾಯಿತು. ಸೋಮವಾರ ಬೆಳಿಗ್ಗೆ, ಸೀತಾನಗರಂ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪೊಲೀಸ್ ಶೇಕ್ ಫಿರೋಜ್ ಶಾ ಮತ್ತು ಇತರ ಇಬ್ಬರು ಕಾನ್‌ಸ್ಟೆಬಲ್‌ಗಳು ಗ್ರಾಮಕ್ಕೆ ಬಂದು ನನ್ನನ್ನು ಮತ್ತು ಇತರ ಇಬ್ಬರನ್ನು ತನಿಖೆಯ ಹೆಸರಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಸಂತ್ರಸ್ತ ವರಪ್ರಸಾದ್ ಹೇಳಿದ್ದಾರೆ.

ಕಸ್ಟಡಿಯಲ್ಲಿ ನಮ್ಮ ಮೇಲೆ ಎಸ್‌ಐ ಬೆಲ್ಟ್‌ನಿಂದ ತೀವ್ರವಾಗಿ ಹೊಡೆದು ಒದೆದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಅವರು ನಂತರ ಕ್ಷೌರಿಕನನ್ನು ಕರೆದರ ನನ್ನ ತಲೆಗೆ ಹೊಡೆದು ನನ್ನ ಮೀಸೆಗಳನ್ನು ಬಲವಂತವಾಗಿ ಬೋಳಿಸಲಾಯಿತು ಎಂದು ಅವರು ಹೇಳಿದ್ದಾರೆ

ಈ ಘಟನೆಯನ್ನು ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಖಂಡಿಸಿದ್ದಾರೆ. ದಲಿತ ಯುವಕರನ್ನು ಥಳಿಸುವ ಮೂಲಕ ಆಂಧ್ರಪ್ರದೇಶ ಮತ್ತೆ ಜಂಗಲ್ ರಾಜ್‌ಗೆ ಮರಳಿದೆ, ವೈಎಸ್‌ಆರ್ ಕಾಂಗ್ರೆಸ್ ಕಾರ್ಯಕರ್ತರು ದಲಿತನ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ಸಮ್ಮುಖದಲ್ಲಿ ದಲಿತ ವ್ಯಕ್ತಿಯನ್ನು ಹೊಡೆದಿದ್ದಾರೆ. ದಲಿತ ವ್ಯಕ್ತಿಯ ಮೀಸೆ ಬೋಳಿಸುವ ಮೂಲಕ ಅವರ ಸ್ವಾಭಿಮಾನವನ್ನು ಹಾಳುಮಾಡುತ್ತಿದ್ದಾರೆ. ಈ ಪ್ರದೇಶದಲ್ಲಿನ ಅಕ್ರಮ ಮರಳು ಗಣಿಗಾರಿಕೆಯನ್ನು ಪ್ರಶ್ನಿಸುವುದು ಅವರ ಏಕೈಕ ತಪ್ಪು. ಪೊಲೀಸರಿಗೆ ಏನಾಗಿದೆ? ಭ್ರಷ್ಟ ಆಡಳಿತ ಪಕ್ಷದ ಕೈಯಲ್ಲಿ ಅವರು ಆಟಿಕೆಗಳಾಗಿರುವುದು ಏಕೆ? ಇದು ಅವರ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ಘಟನೆಯನ್ನು ಖಂಡಿಸಿ ಸ್ಥಳೀಯ ದಲಿತ ಸಂಘಟನೆಗಳ ತೀವ್ರ ಪ್ರತಿಭಟನೆಯ ನಂತರ, ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎಸ್.ಎನ್ ರಾವ್ ಈ ಘಟನೆಯ ಬಗ್ಗೆ ತನಿಖೆ ನಡೆಸಿ ಫಿರೋಜ್ ಶಾ ಮತ್ತು ಇನ್ನೊಬ್ಬ ಕಾನ್‌ಸ್ಟೆಬಲ್ ಅವರನ್ನು ಅಮಾನತುಗೊಳಿಸುವುದಾಗಿ ಘೋಷಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 324, 323 ಮತ್ತು 506 ರ ಅಡಿಯಲ್ಲಿ ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ (ತಡೆಗಟ್ಟುವಿಕೆ) ಕಾಯ್ದೆಯಡಿ ಸಬ್ ಇನ್ಸ್‌ಪೆಕ್ಟರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಕೆ.ವಿ.ಮೋಹನ್ ರಾವ್ ಹೇಳಿದ್ದಾರೆ.

“ಸೀತಾನಗರಂ ಪೊಲೀಸರು ದಲಿತ ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿ ಪೊಲೀಸರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ”ಎಂದು ಡಿಐಜಿ ಹೇಳಿದ್ದಾರೆ.

ದಲಿತ ಯುವಕರನ್ನು ಅವಮಾನಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಾಜಿ ಅಮಲಪುರಂ ಸಂಸದ ಜಿ.ವಿ.ಹರ್ಷ ಕುಮಾರ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...