Homeಮುಖಪುಟಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಸೀತಾನಗರಂ ಪೊಲೀಸರು ದಲಿತ ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿ ಪೊಲೀಸರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ”ಎಂದು ಡಿಐಜಿ ಹೇಳಿದ್ದಾರೆ.

- Advertisement -
- Advertisement -

ಸ್ಥಳೀಯ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಜಗಳವಾಡಿದ ಕಾರಣಕ್ಕೆ ಆಂಧ್ರ ಪ್ರದೇಶ ಪೊಲೀಸರು ದಲಿತ ಯುವಕನ ಮೇಲೆ ಅಮಾನುಷವಾಗಿ ಥಳಿಸಿದ ಆರೋಪದ ಮೇಲೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಲಾಗಿದೆ.

ಘಟನೆಯು ಸೀತಾನಗರಂ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ವೇದುಲ್ಲಪಲ್ಲಿ ಗ್ರಾಮದ ಸಂತ್ರಸ್ತ ಐ ವರ ಪ್ರಸಾದ್ ಅವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:

ವೇದುಲ್ಲಪಲ್ಲಿ ಗ್ರಾಮದಲ್ಲಿ ಐ ವರಪ್ರಸಾದ್‌ ವಾಸಿಸುತ್ತಿದ್ದ ರಸ್ತೆಯಲ್ಲಿ ಭಾನುವಾರ ಸಂಜೆ ಒಬ್ಬರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರಕ್ಕೆ ಸಿದ್ದತೆಗಳು ನಡೆಯುತ್ತಿದ್ದ ಕಾರಣಕ್ಕೆ ಆ ರಸ್ತೆಯನ್ನು ಕೆಲ ಸಮಯ ನಿರ್ಬಂಧಿಸಲಾಗಿತ್ತು. ಈ ಕಾರಣಕ್ಕೆ ಜಗಳ ಆರಂಭವಾಗಿದೆ.

“ಸ್ಥಳೀಯ ವೈಎಸ್‌ಆರ್ ಕಾಂಗ್ರೆಸ್ ಮುಖಂಡರು ಅಲ್ಲಿಗೆ ಬಂದು ಮರಳು ಲಾರಿಗಳನ್ನು ನಿಲ್ಲಿಸಿದ್ದಕ್ಕಾಗಿ ನಮ್ಮನ್ನು ಪ್ರಶ್ನಿಸಿದರು. ನಾವು ಸ್ವಲ್ಪ ಸಮಯ ಕಾಯಿರಿ ಶವ ತೆಗೆದುಕೊಂಡ ಹೋದ ಕೂಡಲೇ ತೆರವುಗೊಳಿಸುತ್ತೇವೆ ಎಂದು ಹೇಳಿದೆವು. ಇದು ವಾದಕ್ಕೆ ಕಾರಣವಾಯಿತು. ಸೋಮವಾರ ಬೆಳಿಗ್ಗೆ, ಸೀತಾನಗರಂ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪೊಲೀಸ್ ಶೇಕ್ ಫಿರೋಜ್ ಶಾ ಮತ್ತು ಇತರ ಇಬ್ಬರು ಕಾನ್‌ಸ್ಟೆಬಲ್‌ಗಳು ಗ್ರಾಮಕ್ಕೆ ಬಂದು ನನ್ನನ್ನು ಮತ್ತು ಇತರ ಇಬ್ಬರನ್ನು ತನಿಖೆಯ ಹೆಸರಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಸಂತ್ರಸ್ತ ವರಪ್ರಸಾದ್ ಹೇಳಿದ್ದಾರೆ.

ಕಸ್ಟಡಿಯಲ್ಲಿ ನಮ್ಮ ಮೇಲೆ ಎಸ್‌ಐ ಬೆಲ್ಟ್‌ನಿಂದ ತೀವ್ರವಾಗಿ ಹೊಡೆದು ಒದೆದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಅವರು ನಂತರ ಕ್ಷೌರಿಕನನ್ನು ಕರೆದರ ನನ್ನ ತಲೆಗೆ ಹೊಡೆದು ನನ್ನ ಮೀಸೆಗಳನ್ನು ಬಲವಂತವಾಗಿ ಬೋಳಿಸಲಾಯಿತು ಎಂದು ಅವರು ಹೇಳಿದ್ದಾರೆ

ಈ ಘಟನೆಯನ್ನು ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಖಂಡಿಸಿದ್ದಾರೆ. ದಲಿತ ಯುವಕರನ್ನು ಥಳಿಸುವ ಮೂಲಕ ಆಂಧ್ರಪ್ರದೇಶ ಮತ್ತೆ ಜಂಗಲ್ ರಾಜ್‌ಗೆ ಮರಳಿದೆ, ವೈಎಸ್‌ಆರ್ ಕಾಂಗ್ರೆಸ್ ಕಾರ್ಯಕರ್ತರು ದಲಿತನ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ಸಮ್ಮುಖದಲ್ಲಿ ದಲಿತ ವ್ಯಕ್ತಿಯನ್ನು ಹೊಡೆದಿದ್ದಾರೆ. ದಲಿತ ವ್ಯಕ್ತಿಯ ಮೀಸೆ ಬೋಳಿಸುವ ಮೂಲಕ ಅವರ ಸ್ವಾಭಿಮಾನವನ್ನು ಹಾಳುಮಾಡುತ್ತಿದ್ದಾರೆ. ಈ ಪ್ರದೇಶದಲ್ಲಿನ ಅಕ್ರಮ ಮರಳು ಗಣಿಗಾರಿಕೆಯನ್ನು ಪ್ರಶ್ನಿಸುವುದು ಅವರ ಏಕೈಕ ತಪ್ಪು. ಪೊಲೀಸರಿಗೆ ಏನಾಗಿದೆ? ಭ್ರಷ್ಟ ಆಡಳಿತ ಪಕ್ಷದ ಕೈಯಲ್ಲಿ ಅವರು ಆಟಿಕೆಗಳಾಗಿರುವುದು ಏಕೆ? ಇದು ಅವರ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ಘಟನೆಯನ್ನು ಖಂಡಿಸಿ ಸ್ಥಳೀಯ ದಲಿತ ಸಂಘಟನೆಗಳ ತೀವ್ರ ಪ್ರತಿಭಟನೆಯ ನಂತರ, ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎಸ್.ಎನ್ ರಾವ್ ಈ ಘಟನೆಯ ಬಗ್ಗೆ ತನಿಖೆ ನಡೆಸಿ ಫಿರೋಜ್ ಶಾ ಮತ್ತು ಇನ್ನೊಬ್ಬ ಕಾನ್‌ಸ್ಟೆಬಲ್ ಅವರನ್ನು ಅಮಾನತುಗೊಳಿಸುವುದಾಗಿ ಘೋಷಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 324, 323 ಮತ್ತು 506 ರ ಅಡಿಯಲ್ಲಿ ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ (ತಡೆಗಟ್ಟುವಿಕೆ) ಕಾಯ್ದೆಯಡಿ ಸಬ್ ಇನ್ಸ್‌ಪೆಕ್ಟರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಕೆ.ವಿ.ಮೋಹನ್ ರಾವ್ ಹೇಳಿದ್ದಾರೆ.

“ಸೀತಾನಗರಂ ಪೊಲೀಸರು ದಲಿತ ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿ ಪೊಲೀಸರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ”ಎಂದು ಡಿಐಜಿ ಹೇಳಿದ್ದಾರೆ.

ದಲಿತ ಯುವಕರನ್ನು ಅವಮಾನಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಾಜಿ ಅಮಲಪುರಂ ಸಂಸದ ಜಿ.ವಿ.ಹರ್ಷ ಕುಮಾರ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...