Homeಮುಖಪುಟಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಸೀತಾನಗರಂ ಪೊಲೀಸರು ದಲಿತ ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿ ಪೊಲೀಸರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ”ಎಂದು ಡಿಐಜಿ ಹೇಳಿದ್ದಾರೆ.

- Advertisement -
- Advertisement -

ಸ್ಥಳೀಯ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಜಗಳವಾಡಿದ ಕಾರಣಕ್ಕೆ ಆಂಧ್ರ ಪ್ರದೇಶ ಪೊಲೀಸರು ದಲಿತ ಯುವಕನ ಮೇಲೆ ಅಮಾನುಷವಾಗಿ ಥಳಿಸಿದ ಆರೋಪದ ಮೇಲೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಲಾಗಿದೆ.

ಘಟನೆಯು ಸೀತಾನಗರಂ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ವೇದುಲ್ಲಪಲ್ಲಿ ಗ್ರಾಮದ ಸಂತ್ರಸ್ತ ಐ ವರ ಪ್ರಸಾದ್ ಅವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:

ವೇದುಲ್ಲಪಲ್ಲಿ ಗ್ರಾಮದಲ್ಲಿ ಐ ವರಪ್ರಸಾದ್‌ ವಾಸಿಸುತ್ತಿದ್ದ ರಸ್ತೆಯಲ್ಲಿ ಭಾನುವಾರ ಸಂಜೆ ಒಬ್ಬರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರಕ್ಕೆ ಸಿದ್ದತೆಗಳು ನಡೆಯುತ್ತಿದ್ದ ಕಾರಣಕ್ಕೆ ಆ ರಸ್ತೆಯನ್ನು ಕೆಲ ಸಮಯ ನಿರ್ಬಂಧಿಸಲಾಗಿತ್ತು. ಈ ಕಾರಣಕ್ಕೆ ಜಗಳ ಆರಂಭವಾಗಿದೆ.

“ಸ್ಥಳೀಯ ವೈಎಸ್‌ಆರ್ ಕಾಂಗ್ರೆಸ್ ಮುಖಂಡರು ಅಲ್ಲಿಗೆ ಬಂದು ಮರಳು ಲಾರಿಗಳನ್ನು ನಿಲ್ಲಿಸಿದ್ದಕ್ಕಾಗಿ ನಮ್ಮನ್ನು ಪ್ರಶ್ನಿಸಿದರು. ನಾವು ಸ್ವಲ್ಪ ಸಮಯ ಕಾಯಿರಿ ಶವ ತೆಗೆದುಕೊಂಡ ಹೋದ ಕೂಡಲೇ ತೆರವುಗೊಳಿಸುತ್ತೇವೆ ಎಂದು ಹೇಳಿದೆವು. ಇದು ವಾದಕ್ಕೆ ಕಾರಣವಾಯಿತು. ಸೋಮವಾರ ಬೆಳಿಗ್ಗೆ, ಸೀತಾನಗರಂ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪೊಲೀಸ್ ಶೇಕ್ ಫಿರೋಜ್ ಶಾ ಮತ್ತು ಇತರ ಇಬ್ಬರು ಕಾನ್‌ಸ್ಟೆಬಲ್‌ಗಳು ಗ್ರಾಮಕ್ಕೆ ಬಂದು ನನ್ನನ್ನು ಮತ್ತು ಇತರ ಇಬ್ಬರನ್ನು ತನಿಖೆಯ ಹೆಸರಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಸಂತ್ರಸ್ತ ವರಪ್ರಸಾದ್ ಹೇಳಿದ್ದಾರೆ.

ಕಸ್ಟಡಿಯಲ್ಲಿ ನಮ್ಮ ಮೇಲೆ ಎಸ್‌ಐ ಬೆಲ್ಟ್‌ನಿಂದ ತೀವ್ರವಾಗಿ ಹೊಡೆದು ಒದೆದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಅವರು ನಂತರ ಕ್ಷೌರಿಕನನ್ನು ಕರೆದರ ನನ್ನ ತಲೆಗೆ ಹೊಡೆದು ನನ್ನ ಮೀಸೆಗಳನ್ನು ಬಲವಂತವಾಗಿ ಬೋಳಿಸಲಾಯಿತು ಎಂದು ಅವರು ಹೇಳಿದ್ದಾರೆ

ಈ ಘಟನೆಯನ್ನು ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಖಂಡಿಸಿದ್ದಾರೆ. ದಲಿತ ಯುವಕರನ್ನು ಥಳಿಸುವ ಮೂಲಕ ಆಂಧ್ರಪ್ರದೇಶ ಮತ್ತೆ ಜಂಗಲ್ ರಾಜ್‌ಗೆ ಮರಳಿದೆ, ವೈಎಸ್‌ಆರ್ ಕಾಂಗ್ರೆಸ್ ಕಾರ್ಯಕರ್ತರು ದಲಿತನ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ಸಮ್ಮುಖದಲ್ಲಿ ದಲಿತ ವ್ಯಕ್ತಿಯನ್ನು ಹೊಡೆದಿದ್ದಾರೆ. ದಲಿತ ವ್ಯಕ್ತಿಯ ಮೀಸೆ ಬೋಳಿಸುವ ಮೂಲಕ ಅವರ ಸ್ವಾಭಿಮಾನವನ್ನು ಹಾಳುಮಾಡುತ್ತಿದ್ದಾರೆ. ಈ ಪ್ರದೇಶದಲ್ಲಿನ ಅಕ್ರಮ ಮರಳು ಗಣಿಗಾರಿಕೆಯನ್ನು ಪ್ರಶ್ನಿಸುವುದು ಅವರ ಏಕೈಕ ತಪ್ಪು. ಪೊಲೀಸರಿಗೆ ಏನಾಗಿದೆ? ಭ್ರಷ್ಟ ಆಡಳಿತ ಪಕ್ಷದ ಕೈಯಲ್ಲಿ ಅವರು ಆಟಿಕೆಗಳಾಗಿರುವುದು ಏಕೆ? ಇದು ಅವರ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ಘಟನೆಯನ್ನು ಖಂಡಿಸಿ ಸ್ಥಳೀಯ ದಲಿತ ಸಂಘಟನೆಗಳ ತೀವ್ರ ಪ್ರತಿಭಟನೆಯ ನಂತರ, ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎಸ್.ಎನ್ ರಾವ್ ಈ ಘಟನೆಯ ಬಗ್ಗೆ ತನಿಖೆ ನಡೆಸಿ ಫಿರೋಜ್ ಶಾ ಮತ್ತು ಇನ್ನೊಬ್ಬ ಕಾನ್‌ಸ್ಟೆಬಲ್ ಅವರನ್ನು ಅಮಾನತುಗೊಳಿಸುವುದಾಗಿ ಘೋಷಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 324, 323 ಮತ್ತು 506 ರ ಅಡಿಯಲ್ಲಿ ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ (ತಡೆಗಟ್ಟುವಿಕೆ) ಕಾಯ್ದೆಯಡಿ ಸಬ್ ಇನ್ಸ್‌ಪೆಕ್ಟರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಕೆ.ವಿ.ಮೋಹನ್ ರಾವ್ ಹೇಳಿದ್ದಾರೆ.

“ಸೀತಾನಗರಂ ಪೊಲೀಸರು ದಲಿತ ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿ ಪೊಲೀಸರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ”ಎಂದು ಡಿಐಜಿ ಹೇಳಿದ್ದಾರೆ.

ದಲಿತ ಯುವಕರನ್ನು ಅವಮಾನಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಾಜಿ ಅಮಲಪುರಂ ಸಂಸದ ಜಿ.ವಿ.ಹರ್ಷ ಕುಮಾರ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...