Homeಮುಖಪುಟದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ನಡೆದ ಕ್ರೂರ ಹಲ್ಲೆಯನ್ನು ಲಕ್ಷಾಂತರ ಜನರು ಖಂಡಿಸಿದ್ದಾರೆ. ‘ಸಾರಿ ಆಸಿಫ್’ ಹ್ಯಾಷ್‌ಟ್ಯಾಗ್‌ ಬಳಸಿ ಟ್ವಿಟರ್‌ನಲ್ಲಿ ಕ್ಷಮೆ ಕೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂಟು ಟ್ವಿಟರ್‌ನಲ್ಲಿ #SorryAsif ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್‌ ಆಗಿದೆ. ಅದೇ ಸಮಯದಲ್ಲಿ 96 ವರ್ಷದ ಹಿಂದೆ ಡಾ.ಬಿ.ಆರ್ ಅಂಬೇಡ್ಕರ್‌ರವರು ನಡೆಸಿದ ಚೌಡಾರ್ ಕೆರೆ ಹೋರಾಟವನ್ನು ನೆಟ್ಟಿಗರು ನೆನಪಿಸಿಕೊಂಡಿದ್ದಾರೆ. “ನೀರು ಕುಡಿಯುವುದಕ್ಕಾಗಿನ ಸಂಘರ್ಷ ಬಹಳ ಹಿಂದಿನದ್ದು” ಎಂಬ ಶೀರ್ಷಿಕೆಯೊಂದಿಗೆ ಅಂಬೇಡ್ಕರ್ ಆಸಿಫ್‌ನನ್ನು ಸಂತೈಸುತ್ತಿರುವ ಕಾರ್ಟೂನ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ನಾನೊಬ್ಬ ಹಿಂದೂ ಬ್ರಾಹ್ಮಣ. ಆದರೆ ಅನ್ಯಧರ್ಮೀಯರು ನೀರು ಕುಡಿದ ಕಾರಣಕ್ಕೆ ಅವರ ಮೇಲೆ ಹಲ್ಲೆಗಳಾಗುವುದಾದರೆ ನಾನು ಇನ್ನು ಮುಂದೆ ನನ್ನ ಜೀವಮಾನವಿಡಿ ಅಂತಹ ದೇವಾಸ್ಥಾನಗಳಿಗೆ ಹೋಗುವುದಿಲ್ಲ” ಎಂದು ಮುಕುಲ್ ಚತುರ್ವೇದಿ ಎಂಬುವವರು ಟ್ವೀಟ್ ಮಾಡಿದ್ದಾರೆ.

“ನೀರು ಕುಡಿಯಲು ದೇವಸ್ಥಾನಕ್ಕೆ ಹೋಗಿದ್ದಕ್ಕಾಗಿ ಮುಸ್ಲಿಂ ಬಾಲಕನನ್ನು ಥಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ನೀರು ಅಥವಾ ಆಹಾರದ ಅಗತ್ಯವಿರುವ ಪ್ರತಿಯೊಬ್ಬರಿಗೂ (ಅವರ ಧರ್ಮವನ್ನು ಲೆಕ್ಕಿಸದೆ) ಮಸೀದಿಗಳನ್ನು ತೆರೆಯುವುದಾಗಿದೆ. ಈ ದ್ವೇಷ ಮತ್ತು ಕತ್ತಲೆಯ ವಿರುದ್ಧ ನಾವು ಹೋರಾಡುವ ಬೇರೆ ದಾರಿ ನನಗೆ ತಿಳಿದಿಲ್ಲ” ಎಂದು ಖ್ಯಾತ ಪತ್ರಕರ್ತೆ ಅರ್ಫ ಖಾನುಂ ಶೆರ್ವಾನಿ ಟ್ವೀಟ್ ಮಾಡಿದ್ದಾರೆ.

“ನಿನಗಾದ ಅನ್ಯಾಯಕ್ಕೆ ಮಾತ್ರವಲ್ಲದೆ ದೇಶದಲ್ಲಿ ವರದಿಯಾಗದ ಅಸಂಖ್ಯಾತದ ಅನ್ಯಾಯಗಳಿಗೆ ಕ್ಷಮೆ ಯಾಚಿಸುತ್ತಿದ್ದೇನೆ. ಇಂದಿನ ನಮ್ಮ ಸಮಾಜದ ಪರಿಸ್ಥಿತಿ ಕಂಡು ನಾಚಿಕೆಯಾಗುತ್ತಿದೆ. ಈ ದ್ವೇಷದಿಂದ ತುಂಬಿದ ವಿಭಜಕ ಶಕ್ತಿಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳುತ್ತೇನೆ” ಎಂದು ಯುವಹಲ್ಲಾಬೋಲ್ ಆಂದೋಲನದ ಮುಖಂಡ ಅನುಪಮ್ ತಿಳಿಸಿದ್ದಾರೆ.

“ಟ್ವಿಟರ್‌ನಲ್ಲಿ ಸಾರಿ ಆಸಿಫ್ ಟ್ರೆಂಡ್‌ ಆಗುತ್ತಿದೆ. ಅಂದರೆ ದ್ವೇಷಿಸುವವರಿಗಿಂತ ಪ್ರೀತಿಸುವವರ ಸಂಖ್ಯೆ ಹೆಚ್ಚು ಎಂಬುದು ಆಗ ಮಗುವಿಗೆ ಗೊತ್ತಾಗಲಿ. ಜೊತೆಗೆ ಅಮಾನವೀಯವಾಗಿ ಥಳಿಸಿದ ಶೃಂಗಿ ನಂದನ್‌ ಯಾದವ್ ಎಂಬ ಹುಡುಗನಿಗೂ ಸಹ ಹೇಗೆ ಹಿಂದುತ್ವವಾದಿ ಶಕ್ತಿಗಳು ತನ್ನನ್ನು ದಾರಿ ತಪ್ಪಿಸಿದವು ಮತ್ತು ದ್ವೇಷಿಸುವುದರಿಂದ ಯಾವುದೇ ಲಾಭವಿಲ್ಲ ಎಂಬುದು ಅರಿವಾಗಲಿ” ಎಂದು ರಿಫತ್ ಜಾವೇದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜನ ಹಿಂದೂ ಮುಸ್ಲಿಂ ಬಾಲಕರು ಮತ್ತು ಯುವಕರು ಕೂಡಿ ಬಾಳುವ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ನಿಮ್ಮ ದ್ವೇಷಕ್ಕಿಂತ ನಮ್ಮ ಪ್ರೀತಿ ದೊಡ್ಡದು ಎಂದು ಸಾರಿದ್ದಾರೆ.

ನಿನ್ನೆ ದೇವಸ್ಥಾನದಲ್ಲಿ ನೀರು ಕುಡಿದಿದ್ದಕ್ಕಾಗಿ ಆಸಿಫ್ ಎಂಬ ಬಾಲಕನ ಮೇಲೆ ಶೃಂಗಿ ನಂದನ್ ಯಾದವ್ ಎಂಬ ವ್ಯಕ್ತಿಯು ಕ್ರೂರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವರದಿಯಾಗಿತ್ತು. ಆ ವಿಡಿಯೋ ವೈರಲ್ ಆದ ನಂತರ ಗಾಜಿಯಾಬಾದ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.


ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....