Homeಮುಖಪುಟದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ನಡೆದ ಕ್ರೂರ ಹಲ್ಲೆಯನ್ನು ಲಕ್ಷಾಂತರ ಜನರು ಖಂಡಿಸಿದ್ದಾರೆ. ‘ಸಾರಿ ಆಸಿಫ್’ ಹ್ಯಾಷ್‌ಟ್ಯಾಗ್‌ ಬಳಸಿ ಟ್ವಿಟರ್‌ನಲ್ಲಿ ಕ್ಷಮೆ ಕೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂಟು ಟ್ವಿಟರ್‌ನಲ್ಲಿ #SorryAsif ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್‌ ಆಗಿದೆ. ಅದೇ ಸಮಯದಲ್ಲಿ 96 ವರ್ಷದ ಹಿಂದೆ ಡಾ.ಬಿ.ಆರ್ ಅಂಬೇಡ್ಕರ್‌ರವರು ನಡೆಸಿದ ಚೌಡಾರ್ ಕೆರೆ ಹೋರಾಟವನ್ನು ನೆಟ್ಟಿಗರು ನೆನಪಿಸಿಕೊಂಡಿದ್ದಾರೆ. “ನೀರು ಕುಡಿಯುವುದಕ್ಕಾಗಿನ ಸಂಘರ್ಷ ಬಹಳ ಹಿಂದಿನದ್ದು” ಎಂಬ ಶೀರ್ಷಿಕೆಯೊಂದಿಗೆ ಅಂಬೇಡ್ಕರ್ ಆಸಿಫ್‌ನನ್ನು ಸಂತೈಸುತ್ತಿರುವ ಕಾರ್ಟೂನ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ನಾನೊಬ್ಬ ಹಿಂದೂ ಬ್ರಾಹ್ಮಣ. ಆದರೆ ಅನ್ಯಧರ್ಮೀಯರು ನೀರು ಕುಡಿದ ಕಾರಣಕ್ಕೆ ಅವರ ಮೇಲೆ ಹಲ್ಲೆಗಳಾಗುವುದಾದರೆ ನಾನು ಇನ್ನು ಮುಂದೆ ನನ್ನ ಜೀವಮಾನವಿಡಿ ಅಂತಹ ದೇವಾಸ್ಥಾನಗಳಿಗೆ ಹೋಗುವುದಿಲ್ಲ” ಎಂದು ಮುಕುಲ್ ಚತುರ್ವೇದಿ ಎಂಬುವವರು ಟ್ವೀಟ್ ಮಾಡಿದ್ದಾರೆ.

“ನೀರು ಕುಡಿಯಲು ದೇವಸ್ಥಾನಕ್ಕೆ ಹೋಗಿದ್ದಕ್ಕಾಗಿ ಮುಸ್ಲಿಂ ಬಾಲಕನನ್ನು ಥಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ನೀರು ಅಥವಾ ಆಹಾರದ ಅಗತ್ಯವಿರುವ ಪ್ರತಿಯೊಬ್ಬರಿಗೂ (ಅವರ ಧರ್ಮವನ್ನು ಲೆಕ್ಕಿಸದೆ) ಮಸೀದಿಗಳನ್ನು ತೆರೆಯುವುದಾಗಿದೆ. ಈ ದ್ವೇಷ ಮತ್ತು ಕತ್ತಲೆಯ ವಿರುದ್ಧ ನಾವು ಹೋರಾಡುವ ಬೇರೆ ದಾರಿ ನನಗೆ ತಿಳಿದಿಲ್ಲ” ಎಂದು ಖ್ಯಾತ ಪತ್ರಕರ್ತೆ ಅರ್ಫ ಖಾನುಂ ಶೆರ್ವಾನಿ ಟ್ವೀಟ್ ಮಾಡಿದ್ದಾರೆ.

“ನಿನಗಾದ ಅನ್ಯಾಯಕ್ಕೆ ಮಾತ್ರವಲ್ಲದೆ ದೇಶದಲ್ಲಿ ವರದಿಯಾಗದ ಅಸಂಖ್ಯಾತದ ಅನ್ಯಾಯಗಳಿಗೆ ಕ್ಷಮೆ ಯಾಚಿಸುತ್ತಿದ್ದೇನೆ. ಇಂದಿನ ನಮ್ಮ ಸಮಾಜದ ಪರಿಸ್ಥಿತಿ ಕಂಡು ನಾಚಿಕೆಯಾಗುತ್ತಿದೆ. ಈ ದ್ವೇಷದಿಂದ ತುಂಬಿದ ವಿಭಜಕ ಶಕ್ತಿಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳುತ್ತೇನೆ” ಎಂದು ಯುವಹಲ್ಲಾಬೋಲ್ ಆಂದೋಲನದ ಮುಖಂಡ ಅನುಪಮ್ ತಿಳಿಸಿದ್ದಾರೆ.

“ಟ್ವಿಟರ್‌ನಲ್ಲಿ ಸಾರಿ ಆಸಿಫ್ ಟ್ರೆಂಡ್‌ ಆಗುತ್ತಿದೆ. ಅಂದರೆ ದ್ವೇಷಿಸುವವರಿಗಿಂತ ಪ್ರೀತಿಸುವವರ ಸಂಖ್ಯೆ ಹೆಚ್ಚು ಎಂಬುದು ಆಗ ಮಗುವಿಗೆ ಗೊತ್ತಾಗಲಿ. ಜೊತೆಗೆ ಅಮಾನವೀಯವಾಗಿ ಥಳಿಸಿದ ಶೃಂಗಿ ನಂದನ್‌ ಯಾದವ್ ಎಂಬ ಹುಡುಗನಿಗೂ ಸಹ ಹೇಗೆ ಹಿಂದುತ್ವವಾದಿ ಶಕ್ತಿಗಳು ತನ್ನನ್ನು ದಾರಿ ತಪ್ಪಿಸಿದವು ಮತ್ತು ದ್ವೇಷಿಸುವುದರಿಂದ ಯಾವುದೇ ಲಾಭವಿಲ್ಲ ಎಂಬುದು ಅರಿವಾಗಲಿ” ಎಂದು ರಿಫತ್ ಜಾವೇದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜನ ಹಿಂದೂ ಮುಸ್ಲಿಂ ಬಾಲಕರು ಮತ್ತು ಯುವಕರು ಕೂಡಿ ಬಾಳುವ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ನಿಮ್ಮ ದ್ವೇಷಕ್ಕಿಂತ ನಮ್ಮ ಪ್ರೀತಿ ದೊಡ್ಡದು ಎಂದು ಸಾರಿದ್ದಾರೆ.

ನಿನ್ನೆ ದೇವಸ್ಥಾನದಲ್ಲಿ ನೀರು ಕುಡಿದಿದ್ದಕ್ಕಾಗಿ ಆಸಿಫ್ ಎಂಬ ಬಾಲಕನ ಮೇಲೆ ಶೃಂಗಿ ನಂದನ್ ಯಾದವ್ ಎಂಬ ವ್ಯಕ್ತಿಯು ಕ್ರೂರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವರದಿಯಾಗಿತ್ತು. ಆ ವಿಡಿಯೋ ವೈರಲ್ ಆದ ನಂತರ ಗಾಜಿಯಾಬಾದ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.


ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...