Homeಮುಖಪುಟದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ನಡೆದ ಕ್ರೂರ ಹಲ್ಲೆಯನ್ನು ಲಕ್ಷಾಂತರ ಜನರು ಖಂಡಿಸಿದ್ದಾರೆ. ‘ಸಾರಿ ಆಸಿಫ್’ ಹ್ಯಾಷ್‌ಟ್ಯಾಗ್‌ ಬಳಸಿ ಟ್ವಿಟರ್‌ನಲ್ಲಿ ಕ್ಷಮೆ ಕೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂಟು ಟ್ವಿಟರ್‌ನಲ್ಲಿ #SorryAsif ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್‌ ಆಗಿದೆ. ಅದೇ ಸಮಯದಲ್ಲಿ 96 ವರ್ಷದ ಹಿಂದೆ ಡಾ.ಬಿ.ಆರ್ ಅಂಬೇಡ್ಕರ್‌ರವರು ನಡೆಸಿದ ಚೌಡಾರ್ ಕೆರೆ ಹೋರಾಟವನ್ನು ನೆಟ್ಟಿಗರು ನೆನಪಿಸಿಕೊಂಡಿದ್ದಾರೆ. “ನೀರು ಕುಡಿಯುವುದಕ್ಕಾಗಿನ ಸಂಘರ್ಷ ಬಹಳ ಹಿಂದಿನದ್ದು” ಎಂಬ ಶೀರ್ಷಿಕೆಯೊಂದಿಗೆ ಅಂಬೇಡ್ಕರ್ ಆಸಿಫ್‌ನನ್ನು ಸಂತೈಸುತ್ತಿರುವ ಕಾರ್ಟೂನ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ನಾನೊಬ್ಬ ಹಿಂದೂ ಬ್ರಾಹ್ಮಣ. ಆದರೆ ಅನ್ಯಧರ್ಮೀಯರು ನೀರು ಕುಡಿದ ಕಾರಣಕ್ಕೆ ಅವರ ಮೇಲೆ ಹಲ್ಲೆಗಳಾಗುವುದಾದರೆ ನಾನು ಇನ್ನು ಮುಂದೆ ನನ್ನ ಜೀವಮಾನವಿಡಿ ಅಂತಹ ದೇವಾಸ್ಥಾನಗಳಿಗೆ ಹೋಗುವುದಿಲ್ಲ” ಎಂದು ಮುಕುಲ್ ಚತುರ್ವೇದಿ ಎಂಬುವವರು ಟ್ವೀಟ್ ಮಾಡಿದ್ದಾರೆ.

“ನೀರು ಕುಡಿಯಲು ದೇವಸ್ಥಾನಕ್ಕೆ ಹೋಗಿದ್ದಕ್ಕಾಗಿ ಮುಸ್ಲಿಂ ಬಾಲಕನನ್ನು ಥಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ನೀರು ಅಥವಾ ಆಹಾರದ ಅಗತ್ಯವಿರುವ ಪ್ರತಿಯೊಬ್ಬರಿಗೂ (ಅವರ ಧರ್ಮವನ್ನು ಲೆಕ್ಕಿಸದೆ) ಮಸೀದಿಗಳನ್ನು ತೆರೆಯುವುದಾಗಿದೆ. ಈ ದ್ವೇಷ ಮತ್ತು ಕತ್ತಲೆಯ ವಿರುದ್ಧ ನಾವು ಹೋರಾಡುವ ಬೇರೆ ದಾರಿ ನನಗೆ ತಿಳಿದಿಲ್ಲ” ಎಂದು ಖ್ಯಾತ ಪತ್ರಕರ್ತೆ ಅರ್ಫ ಖಾನುಂ ಶೆರ್ವಾನಿ ಟ್ವೀಟ್ ಮಾಡಿದ್ದಾರೆ.

“ನಿನಗಾದ ಅನ್ಯಾಯಕ್ಕೆ ಮಾತ್ರವಲ್ಲದೆ ದೇಶದಲ್ಲಿ ವರದಿಯಾಗದ ಅಸಂಖ್ಯಾತದ ಅನ್ಯಾಯಗಳಿಗೆ ಕ್ಷಮೆ ಯಾಚಿಸುತ್ತಿದ್ದೇನೆ. ಇಂದಿನ ನಮ್ಮ ಸಮಾಜದ ಪರಿಸ್ಥಿತಿ ಕಂಡು ನಾಚಿಕೆಯಾಗುತ್ತಿದೆ. ಈ ದ್ವೇಷದಿಂದ ತುಂಬಿದ ವಿಭಜಕ ಶಕ್ತಿಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳುತ್ತೇನೆ” ಎಂದು ಯುವಹಲ್ಲಾಬೋಲ್ ಆಂದೋಲನದ ಮುಖಂಡ ಅನುಪಮ್ ತಿಳಿಸಿದ್ದಾರೆ.

“ಟ್ವಿಟರ್‌ನಲ್ಲಿ ಸಾರಿ ಆಸಿಫ್ ಟ್ರೆಂಡ್‌ ಆಗುತ್ತಿದೆ. ಅಂದರೆ ದ್ವೇಷಿಸುವವರಿಗಿಂತ ಪ್ರೀತಿಸುವವರ ಸಂಖ್ಯೆ ಹೆಚ್ಚು ಎಂಬುದು ಆಗ ಮಗುವಿಗೆ ಗೊತ್ತಾಗಲಿ. ಜೊತೆಗೆ ಅಮಾನವೀಯವಾಗಿ ಥಳಿಸಿದ ಶೃಂಗಿ ನಂದನ್‌ ಯಾದವ್ ಎಂಬ ಹುಡುಗನಿಗೂ ಸಹ ಹೇಗೆ ಹಿಂದುತ್ವವಾದಿ ಶಕ್ತಿಗಳು ತನ್ನನ್ನು ದಾರಿ ತಪ್ಪಿಸಿದವು ಮತ್ತು ದ್ವೇಷಿಸುವುದರಿಂದ ಯಾವುದೇ ಲಾಭವಿಲ್ಲ ಎಂಬುದು ಅರಿವಾಗಲಿ” ಎಂದು ರಿಫತ್ ಜಾವೇದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜನ ಹಿಂದೂ ಮುಸ್ಲಿಂ ಬಾಲಕರು ಮತ್ತು ಯುವಕರು ಕೂಡಿ ಬಾಳುವ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ನಿಮ್ಮ ದ್ವೇಷಕ್ಕಿಂತ ನಮ್ಮ ಪ್ರೀತಿ ದೊಡ್ಡದು ಎಂದು ಸಾರಿದ್ದಾರೆ.

ನಿನ್ನೆ ದೇವಸ್ಥಾನದಲ್ಲಿ ನೀರು ಕುಡಿದಿದ್ದಕ್ಕಾಗಿ ಆಸಿಫ್ ಎಂಬ ಬಾಲಕನ ಮೇಲೆ ಶೃಂಗಿ ನಂದನ್ ಯಾದವ್ ಎಂಬ ವ್ಯಕ್ತಿಯು ಕ್ರೂರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವರದಿಯಾಗಿತ್ತು. ಆ ವಿಡಿಯೋ ವೈರಲ್ ಆದ ನಂತರ ಗಾಜಿಯಾಬಾದ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.


ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...