Homeಮುಖಪುಟದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ನಡೆದ ಕ್ರೂರ ಹಲ್ಲೆಯನ್ನು ಲಕ್ಷಾಂತರ ಜನರು ಖಂಡಿಸಿದ್ದಾರೆ. ‘ಸಾರಿ ಆಸಿಫ್’ ಹ್ಯಾಷ್‌ಟ್ಯಾಗ್‌ ಬಳಸಿ ಟ್ವಿಟರ್‌ನಲ್ಲಿ ಕ್ಷಮೆ ಕೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂಟು ಟ್ವಿಟರ್‌ನಲ್ಲಿ #SorryAsif ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್‌ ಆಗಿದೆ. ಅದೇ ಸಮಯದಲ್ಲಿ 96 ವರ್ಷದ ಹಿಂದೆ ಡಾ.ಬಿ.ಆರ್ ಅಂಬೇಡ್ಕರ್‌ರವರು ನಡೆಸಿದ ಚೌಡಾರ್ ಕೆರೆ ಹೋರಾಟವನ್ನು ನೆಟ್ಟಿಗರು ನೆನಪಿಸಿಕೊಂಡಿದ್ದಾರೆ. “ನೀರು ಕುಡಿಯುವುದಕ್ಕಾಗಿನ ಸಂಘರ್ಷ ಬಹಳ ಹಿಂದಿನದ್ದು” ಎಂಬ ಶೀರ್ಷಿಕೆಯೊಂದಿಗೆ ಅಂಬೇಡ್ಕರ್ ಆಸಿಫ್‌ನನ್ನು ಸಂತೈಸುತ್ತಿರುವ ಕಾರ್ಟೂನ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ನಾನೊಬ್ಬ ಹಿಂದೂ ಬ್ರಾಹ್ಮಣ. ಆದರೆ ಅನ್ಯಧರ್ಮೀಯರು ನೀರು ಕುಡಿದ ಕಾರಣಕ್ಕೆ ಅವರ ಮೇಲೆ ಹಲ್ಲೆಗಳಾಗುವುದಾದರೆ ನಾನು ಇನ್ನು ಮುಂದೆ ನನ್ನ ಜೀವಮಾನವಿಡಿ ಅಂತಹ ದೇವಾಸ್ಥಾನಗಳಿಗೆ ಹೋಗುವುದಿಲ್ಲ” ಎಂದು ಮುಕುಲ್ ಚತುರ್ವೇದಿ ಎಂಬುವವರು ಟ್ವೀಟ್ ಮಾಡಿದ್ದಾರೆ.

“ನೀರು ಕುಡಿಯಲು ದೇವಸ್ಥಾನಕ್ಕೆ ಹೋಗಿದ್ದಕ್ಕಾಗಿ ಮುಸ್ಲಿಂ ಬಾಲಕನನ್ನು ಥಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ನೀರು ಅಥವಾ ಆಹಾರದ ಅಗತ್ಯವಿರುವ ಪ್ರತಿಯೊಬ್ಬರಿಗೂ (ಅವರ ಧರ್ಮವನ್ನು ಲೆಕ್ಕಿಸದೆ) ಮಸೀದಿಗಳನ್ನು ತೆರೆಯುವುದಾಗಿದೆ. ಈ ದ್ವೇಷ ಮತ್ತು ಕತ್ತಲೆಯ ವಿರುದ್ಧ ನಾವು ಹೋರಾಡುವ ಬೇರೆ ದಾರಿ ನನಗೆ ತಿಳಿದಿಲ್ಲ” ಎಂದು ಖ್ಯಾತ ಪತ್ರಕರ್ತೆ ಅರ್ಫ ಖಾನುಂ ಶೆರ್ವಾನಿ ಟ್ವೀಟ್ ಮಾಡಿದ್ದಾರೆ.

“ನಿನಗಾದ ಅನ್ಯಾಯಕ್ಕೆ ಮಾತ್ರವಲ್ಲದೆ ದೇಶದಲ್ಲಿ ವರದಿಯಾಗದ ಅಸಂಖ್ಯಾತದ ಅನ್ಯಾಯಗಳಿಗೆ ಕ್ಷಮೆ ಯಾಚಿಸುತ್ತಿದ್ದೇನೆ. ಇಂದಿನ ನಮ್ಮ ಸಮಾಜದ ಪರಿಸ್ಥಿತಿ ಕಂಡು ನಾಚಿಕೆಯಾಗುತ್ತಿದೆ. ಈ ದ್ವೇಷದಿಂದ ತುಂಬಿದ ವಿಭಜಕ ಶಕ್ತಿಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳುತ್ತೇನೆ” ಎಂದು ಯುವಹಲ್ಲಾಬೋಲ್ ಆಂದೋಲನದ ಮುಖಂಡ ಅನುಪಮ್ ತಿಳಿಸಿದ್ದಾರೆ.

“ಟ್ವಿಟರ್‌ನಲ್ಲಿ ಸಾರಿ ಆಸಿಫ್ ಟ್ರೆಂಡ್‌ ಆಗುತ್ತಿದೆ. ಅಂದರೆ ದ್ವೇಷಿಸುವವರಿಗಿಂತ ಪ್ರೀತಿಸುವವರ ಸಂಖ್ಯೆ ಹೆಚ್ಚು ಎಂಬುದು ಆಗ ಮಗುವಿಗೆ ಗೊತ್ತಾಗಲಿ. ಜೊತೆಗೆ ಅಮಾನವೀಯವಾಗಿ ಥಳಿಸಿದ ಶೃಂಗಿ ನಂದನ್‌ ಯಾದವ್ ಎಂಬ ಹುಡುಗನಿಗೂ ಸಹ ಹೇಗೆ ಹಿಂದುತ್ವವಾದಿ ಶಕ್ತಿಗಳು ತನ್ನನ್ನು ದಾರಿ ತಪ್ಪಿಸಿದವು ಮತ್ತು ದ್ವೇಷಿಸುವುದರಿಂದ ಯಾವುದೇ ಲಾಭವಿಲ್ಲ ಎಂಬುದು ಅರಿವಾಗಲಿ” ಎಂದು ರಿಫತ್ ಜಾವೇದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜನ ಹಿಂದೂ ಮುಸ್ಲಿಂ ಬಾಲಕರು ಮತ್ತು ಯುವಕರು ಕೂಡಿ ಬಾಳುವ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ನಿಮ್ಮ ದ್ವೇಷಕ್ಕಿಂತ ನಮ್ಮ ಪ್ರೀತಿ ದೊಡ್ಡದು ಎಂದು ಸಾರಿದ್ದಾರೆ.

ನಿನ್ನೆ ದೇವಸ್ಥಾನದಲ್ಲಿ ನೀರು ಕುಡಿದಿದ್ದಕ್ಕಾಗಿ ಆಸಿಫ್ ಎಂಬ ಬಾಲಕನ ಮೇಲೆ ಶೃಂಗಿ ನಂದನ್ ಯಾದವ್ ಎಂಬ ವ್ಯಕ್ತಿಯು ಕ್ರೂರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವರದಿಯಾಗಿತ್ತು. ಆ ವಿಡಿಯೋ ವೈರಲ್ ಆದ ನಂತರ ಗಾಜಿಯಾಬಾದ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.


ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...