Homeಮುಖಪುಟದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ನಡೆದ ಕ್ರೂರ ಹಲ್ಲೆಯನ್ನು ಲಕ್ಷಾಂತರ ಜನರು ಖಂಡಿಸಿದ್ದಾರೆ. ‘ಸಾರಿ ಆಸಿಫ್’ ಹ್ಯಾಷ್‌ಟ್ಯಾಗ್‌ ಬಳಸಿ ಟ್ವಿಟರ್‌ನಲ್ಲಿ ಕ್ಷಮೆ ಕೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂಟು ಟ್ವಿಟರ್‌ನಲ್ಲಿ #SorryAsif ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್‌ ಆಗಿದೆ. ಅದೇ ಸಮಯದಲ್ಲಿ 96 ವರ್ಷದ ಹಿಂದೆ ಡಾ.ಬಿ.ಆರ್ ಅಂಬೇಡ್ಕರ್‌ರವರು ನಡೆಸಿದ ಚೌಡಾರ್ ಕೆರೆ ಹೋರಾಟವನ್ನು ನೆಟ್ಟಿಗರು ನೆನಪಿಸಿಕೊಂಡಿದ್ದಾರೆ. “ನೀರು ಕುಡಿಯುವುದಕ್ಕಾಗಿನ ಸಂಘರ್ಷ ಬಹಳ ಹಿಂದಿನದ್ದು” ಎಂಬ ಶೀರ್ಷಿಕೆಯೊಂದಿಗೆ ಅಂಬೇಡ್ಕರ್ ಆಸಿಫ್‌ನನ್ನು ಸಂತೈಸುತ್ತಿರುವ ಕಾರ್ಟೂನ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ನಾನೊಬ್ಬ ಹಿಂದೂ ಬ್ರಾಹ್ಮಣ. ಆದರೆ ಅನ್ಯಧರ್ಮೀಯರು ನೀರು ಕುಡಿದ ಕಾರಣಕ್ಕೆ ಅವರ ಮೇಲೆ ಹಲ್ಲೆಗಳಾಗುವುದಾದರೆ ನಾನು ಇನ್ನು ಮುಂದೆ ನನ್ನ ಜೀವಮಾನವಿಡಿ ಅಂತಹ ದೇವಾಸ್ಥಾನಗಳಿಗೆ ಹೋಗುವುದಿಲ್ಲ” ಎಂದು ಮುಕುಲ್ ಚತುರ್ವೇದಿ ಎಂಬುವವರು ಟ್ವೀಟ್ ಮಾಡಿದ್ದಾರೆ.

“ನೀರು ಕುಡಿಯಲು ದೇವಸ್ಥಾನಕ್ಕೆ ಹೋಗಿದ್ದಕ್ಕಾಗಿ ಮುಸ್ಲಿಂ ಬಾಲಕನನ್ನು ಥಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ನೀರು ಅಥವಾ ಆಹಾರದ ಅಗತ್ಯವಿರುವ ಪ್ರತಿಯೊಬ್ಬರಿಗೂ (ಅವರ ಧರ್ಮವನ್ನು ಲೆಕ್ಕಿಸದೆ) ಮಸೀದಿಗಳನ್ನು ತೆರೆಯುವುದಾಗಿದೆ. ಈ ದ್ವೇಷ ಮತ್ತು ಕತ್ತಲೆಯ ವಿರುದ್ಧ ನಾವು ಹೋರಾಡುವ ಬೇರೆ ದಾರಿ ನನಗೆ ತಿಳಿದಿಲ್ಲ” ಎಂದು ಖ್ಯಾತ ಪತ್ರಕರ್ತೆ ಅರ್ಫ ಖಾನುಂ ಶೆರ್ವಾನಿ ಟ್ವೀಟ್ ಮಾಡಿದ್ದಾರೆ.

“ನಿನಗಾದ ಅನ್ಯಾಯಕ್ಕೆ ಮಾತ್ರವಲ್ಲದೆ ದೇಶದಲ್ಲಿ ವರದಿಯಾಗದ ಅಸಂಖ್ಯಾತದ ಅನ್ಯಾಯಗಳಿಗೆ ಕ್ಷಮೆ ಯಾಚಿಸುತ್ತಿದ್ದೇನೆ. ಇಂದಿನ ನಮ್ಮ ಸಮಾಜದ ಪರಿಸ್ಥಿತಿ ಕಂಡು ನಾಚಿಕೆಯಾಗುತ್ತಿದೆ. ಈ ದ್ವೇಷದಿಂದ ತುಂಬಿದ ವಿಭಜಕ ಶಕ್ತಿಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳುತ್ತೇನೆ” ಎಂದು ಯುವಹಲ್ಲಾಬೋಲ್ ಆಂದೋಲನದ ಮುಖಂಡ ಅನುಪಮ್ ತಿಳಿಸಿದ್ದಾರೆ.

“ಟ್ವಿಟರ್‌ನಲ್ಲಿ ಸಾರಿ ಆಸಿಫ್ ಟ್ರೆಂಡ್‌ ಆಗುತ್ತಿದೆ. ಅಂದರೆ ದ್ವೇಷಿಸುವವರಿಗಿಂತ ಪ್ರೀತಿಸುವವರ ಸಂಖ್ಯೆ ಹೆಚ್ಚು ಎಂಬುದು ಆಗ ಮಗುವಿಗೆ ಗೊತ್ತಾಗಲಿ. ಜೊತೆಗೆ ಅಮಾನವೀಯವಾಗಿ ಥಳಿಸಿದ ಶೃಂಗಿ ನಂದನ್‌ ಯಾದವ್ ಎಂಬ ಹುಡುಗನಿಗೂ ಸಹ ಹೇಗೆ ಹಿಂದುತ್ವವಾದಿ ಶಕ್ತಿಗಳು ತನ್ನನ್ನು ದಾರಿ ತಪ್ಪಿಸಿದವು ಮತ್ತು ದ್ವೇಷಿಸುವುದರಿಂದ ಯಾವುದೇ ಲಾಭವಿಲ್ಲ ಎಂಬುದು ಅರಿವಾಗಲಿ” ಎಂದು ರಿಫತ್ ಜಾವೇದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜನ ಹಿಂದೂ ಮುಸ್ಲಿಂ ಬಾಲಕರು ಮತ್ತು ಯುವಕರು ಕೂಡಿ ಬಾಳುವ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ನಿಮ್ಮ ದ್ವೇಷಕ್ಕಿಂತ ನಮ್ಮ ಪ್ರೀತಿ ದೊಡ್ಡದು ಎಂದು ಸಾರಿದ್ದಾರೆ.

ನಿನ್ನೆ ದೇವಸ್ಥಾನದಲ್ಲಿ ನೀರು ಕುಡಿದಿದ್ದಕ್ಕಾಗಿ ಆಸಿಫ್ ಎಂಬ ಬಾಲಕನ ಮೇಲೆ ಶೃಂಗಿ ನಂದನ್ ಯಾದವ್ ಎಂಬ ವ್ಯಕ್ತಿಯು ಕ್ರೂರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವರದಿಯಾಗಿತ್ತು. ಆ ವಿಡಿಯೋ ವೈರಲ್ ಆದ ನಂತರ ಗಾಜಿಯಾಬಾದ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.


ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...