Homeಮುಖಪುಟಉತ್ತರ ಪ್ರದೇಶದ 6 ವರ್ಷದ ಬಾಲಕಿ ಮೇಲೆ ಕ್ರೂರ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಯ ಬಂಧನ

ಉತ್ತರ ಪ್ರದೇಶದ 6 ವರ್ಷದ ಬಾಲಕಿ ಮೇಲೆ ಕ್ರೂರ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಯ ಬಂಧನ

- Advertisement -
- Advertisement -

ಮಕ್ಕಳು, ಮಹಿಳೆಯರ ಮೇಲಿನ ಅತ್ಯಾಚಾರ ಕೊಲೆ ಪ್ರಕರಣಗಳು ಇಂದಿಗೂ ಮುಂದುವರೆಯುತ್ತಿರುವುದು ನಾಗರಿಕ ಸಮಾಜ ಕೊಳೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಸರ್ಕಾರಗಳ ನಿರ್ಲಕ್ಷ್ಯ, ಇಚ್ಛಾಶಕ್ತಿಯ ಕೊರತೆಯಿಂದಾಗಿ ಅಮಾಯಕರು ಅಸುನೀಗುತ್ತಿರುವ ಘಟನೆಗಳು ನಡೆಯುತ್ತಲೇ ಇವೆ. ಉತ್ತರ ಪ್ರದೇಶದ 6 ವರ್ಷದ ಬಾಲಕಿ ಮೇಲೆ ಕ್ರೂರ ಲೈಂಗಿಕ ದೌರ್ಜನ್ಯವೆಸಗಿ, ಕೊಲೆಗೈದು ಮೃತದೇಹವನ್ನು ಟ್ರಂಕ್‌ನಲ್ಲಿ ಬಚ್ಚಿಟ್ಟಿದ್ದನ್ನು ಭೇದಿಸಿರುವ ಪೊಲೀಸರು ಅಮ್ಜದ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಹಾಪುರ್ ನಗರದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಪಕ್ಕದ ಮನೆಯ ಬಾಲಕಿಯನ್ನು ಎಳೆದುತಂದು ಲೈಂಗಿಕ ಹಿಂಸೆ ನೀಡಿ ಕೊಲೆಗೈದಿರುವುದನ್ನು ಆರೋಪಿ 38 ವರ್ಷದ ಅಜ್ಮದ್ ಒಪ್ಪಿಕೊಂಡಿದ್ದು, ಆತನ ಮನೆಯ ಟ್ರಂಕ್‌ನಿಂದ ಮೃತದೇಹವನ್ನು ವಶಪಡಿಸಿಕೊಂಡಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.

6 ವರ್ಷದ ಬಾಲಕಿ ಅಂಗಡಿಗೆ ತೆರಳಿದ್ದಾಗ ಆರೋಪಿ ಮನೆಗೆ ಎಳೆದೊಯ್ದಿದ್ದ. ದುಷ್ಕೃತ್ಯವೆಸಗೆ ಯಾರಿಗೂ ತಿಳಿಯಬಾರದೆಂದು ಬಾಲಕಿಯ ಮೃತದೇಹವನ್ನು ತನ್ನ ಮನೆಯ ಟ್ರಂಕಿನಲ್ಲಿ ಬಚ್ಚಿಟ್ಟಿದ್ದ. ಆ ಸಮಯದಲ್ಲಿ ಆತನ ಹೆಂಡತಿ ಮತ್ತು ಮಕ್ಕಳು ಮನೆಯಲ್ಲಿರಲಿಲ್ಲ. ಬಾಲಕಿ ಮನೆಗೆ ಹಿಂದಿರುಗದಿದ್ದಾಗ ಆಕೆಯ ಕುಟುಂಬದವರು ಶುಕ್ರವಾರ ಪೊಲೀಸ್ ದೂರು ನೀಡಿದ್ದರು. ಅದೇ ಸಮಯದಲ್ಲಿ ನೆರ ಮನೆಯವರು ಕೆಟ್ಟ ವಾಸನೆ ಬರುತ್ತಿದೆಯೆಂದು ದೂರು ನೀಡಿದಾಗ ಪೊಲೀಸರು ಮನೆಗಳನ್ನು ಪರೀಶಿಲಿಸಿದಾಗ ಮೃತ ದೇಹ ಕಂಡುಬಂದಿದೆ.

ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಸಂದರ್ಭದಲ್ಲಿ ಆಕ್ರೋಶಭರಿತ ಜನಸಮೂಹದಿಂದ ಆತನನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಕೊಲೆಯನ್ನು ಒಪ್ಪಿಕೊಂಡಿದ್ದು, ತಾನು ಆ ವೇಳೆ ಡ್ರಗ್ ಸೇವಿಸಿದ್ದೆ ಎಂದು ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದು ವಿಚಾರಣೆ ಮುಂದುವರೆದಿದೆ.

ಲೈಂಗಿಕ ದೌರ್ಜನ್ಯ ಎನ್ನುವುದು ಅತಿ ಕ್ರೂರ ಅಪರಾಧವಾಗಿದೆ. ಅದಕ್ಕೆ ತೀವ್ರತೆರನಾದ ಶಿಕ್ಷೆ ವಿಧಿಸಲಾಗುತ್ತದೆ. 18 ವರ್ಷಕ್ಕಿಂತ ಕೆಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವು ಪೊಕ್ಸೊ ಕಾಯ್ದೆಯಡಿ ಬರಲಿದ್ದು, ಆರೋಪಿಯೇ ತಾನು ತಪ್ಪಿತಸ್ಥನಲ್ಲ ಎಂದು ಸಾಬೀತುಪಡಿಸಬೇಕಾಗುತ್ತದೆ. ಈ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದರ ಜೊತೆಗೆ ಅತ್ಯಾಚಾರಕ್ಕೆ ತೀವ್ರ ಶಿಕ್ಷೆಯಿದೆಯೆಂದು ಸರ್ಕಾರ ಎಲ್ಲೆಡೆ ಪ್ರಚಾರ ಮಾಡಬೇಕಿದೆ. ಜೊತೆಗೆ ಮಹಿಳಾ ಸಮಾನತೆ, ರಕ್ಷಣೆ ಮತ್ತು ಪ್ರೋತ್ಸಾಹದಾಯಕ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆ ಮೂಲಕ ಅತ್ಯಾಚಾರಗಳೆಂಬ ಹೀನ ಕೃತ್ಯಗಳನ್ನು ತಡೆಯಲು ಸಾಧ್ಯ.


ಇದನ್ನೂ ಓದಿ: ಬ್ಯಾಟರಾಯನಪುರ ಠಾಣೆಯಲ್ಲಿ ಯುವಕನಿಗೆ ಕಸ್ಟಡಿ ಹಿಂಸೆ: ಪಾಪ್ಯುಲರ್ ಫ್ರಂಟ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...