Homeಕರ್ನಾಟಕಕರ್ನಾಟಕದಲ್ಲಿ ರಾಜಾ ಹುಲಿ, ಮೋದಿ ಎದುರು ಇಲಿ: ಬಿಎಸ್‌ವೈಗೆ ಸಿದ್ದು ವ್ಯಂಗ್ಯ

ಕರ್ನಾಟಕದಲ್ಲಿ ರಾಜಾ ಹುಲಿ, ಮೋದಿ ಎದುರು ಇಲಿ: ಬಿಎಸ್‌ವೈಗೆ ಸಿದ್ದು ವ್ಯಂಗ್ಯ

- Advertisement -
- Advertisement -

ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಬಿಎಸ್ ಯಡಿಯೂರಪ್ಪ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಎಕ್ಸಾನಲ್ಲಿ ಸರಣಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ”ಪ್ರತಿನಿತ್ಯ ಬೈದರೆ ನರೇಂದ್ರ ಮೋದಿ ಅವರು  ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ” ಎಂದಿದ್ದಾರೆ.

”ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಬೈದಾಡಿದ್ದ ಯಡಿಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ. ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಇಲ್ಲವೇ ದ್ವೇಷ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ” ಎಂದು ಹೇಳಿದ್ದಾರೆ.

”ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಬಿಎಸ್‌ ಯಡಿಯೂರಪ್ಪ ಅವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿಯ ಗುಲಾಮರಲ್ಲ. ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ. ಬಹಳ ಮುಖ್ಯವಾಗಿ ಬಿ.ಎಸ್. ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

”ರಾಜ್ಯ ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ನರೇಂದ್ರ ಮೋದಿ ಅವರ ವಿರುದ್ಧ ಮಾತ್ರ ಅಲ್ಲ ಎಲ್.ಕೆ.ಅಡ್ವಾನಿಯವರಂತಹ ಅವರ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ” ಎಂದಿದ್ದಾರೆ.

”ಬಿ.ಎಸ್.ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್‌ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಬಿಎಸ್ ಯಡಿಯೂರಪ್ಪ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ” ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

”ಮೊನ್ನೆಮೊನ್ನೆಯ ವರೆಗೆ ಆರ್.ಎಸ್.ಎಸ್, ರಾಜ್ಯ ಬಿಜೆಪಿ ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಆಗಿರುವ ಹೆಚ್. ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ. ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ” ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

”ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ನನಗೆ ತೀವ್ರ ಅಸಮಾಧಾನ ಇದೆ. ಇದಕ್ಕಿಂತಲೂ ಅಸಮಾಧಾನ ಎಲ್.ಕೆ.ಅಡ್ವಾಣಿ, ಬಿ.ಎಸ್. ಯಡಿಯೂರಪ್ಪನವರಂತಹ ತಮ್ಮದೇ ಪಕ್ಷದ ಹಿರಿಯ ನಾಯಕರನ್ನು ನಡೆಸಿಕೊಳ್ಳುವ ಬಗ್ಗೆಯೂ ಇದೆ” ಎಂದಿದ್ದಾರೆ.

”ಯಡಿಯೂರಪ್ಪ ಅವರೇ, ನೀವು ನಿಮ್ಮ ನಾಯಕರ ಮೇಲೆ ಬರಪೂರ ಹೊಗಳಿಕೆಯ ಮಳೆ ಸುರಿಸಿ, ಮನಸ್ಸಿಗೆ ತೃಪ್ತಿ ಆಗುವಷ್ಟು ಓಲೈಸಿ, ಬೇಕಿದ್ದರೆ ಕಾಲುಗಳನ್ನು ಬೇಕಾದರೂ ಹಿಡಿಯಿರಿ, ನಮಗೇನು ಅಭ್ಯಂತರ ಇಲ್ಲ. ಅದರಿಂದಾದರೂ ರಾಜ್ಯದ ಜನತೆಗೆ ನ್ಯಾಯ ಸಿಗಲಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: BJP ಲೀಡರ್ ಲೆಸ್, JDS ಪೀಪಲ್ ಲೆಸ್ ಪಾರ್ಟಿ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...