Homeಕರ್ನಾಟಕಕರ್ನಾಟಕದಲ್ಲಿ ರಾಜಾ ಹುಲಿ, ಮೋದಿ ಎದುರು ಇಲಿ: ಬಿಎಸ್‌ವೈಗೆ ಸಿದ್ದು ವ್ಯಂಗ್ಯ

ಕರ್ನಾಟಕದಲ್ಲಿ ರಾಜಾ ಹುಲಿ, ಮೋದಿ ಎದುರು ಇಲಿ: ಬಿಎಸ್‌ವೈಗೆ ಸಿದ್ದು ವ್ಯಂಗ್ಯ

- Advertisement -
- Advertisement -

ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಬಿಎಸ್ ಯಡಿಯೂರಪ್ಪ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಎಕ್ಸಾನಲ್ಲಿ ಸರಣಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ”ಪ್ರತಿನಿತ್ಯ ಬೈದರೆ ನರೇಂದ್ರ ಮೋದಿ ಅವರು  ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ” ಎಂದಿದ್ದಾರೆ.

”ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಬೈದಾಡಿದ್ದ ಯಡಿಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ. ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಇಲ್ಲವೇ ದ್ವೇಷ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ” ಎಂದು ಹೇಳಿದ್ದಾರೆ.

”ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಬಿಎಸ್‌ ಯಡಿಯೂರಪ್ಪ ಅವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿಯ ಗುಲಾಮರಲ್ಲ. ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ. ಬಹಳ ಮುಖ್ಯವಾಗಿ ಬಿ.ಎಸ್. ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

”ರಾಜ್ಯ ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ನರೇಂದ್ರ ಮೋದಿ ಅವರ ವಿರುದ್ಧ ಮಾತ್ರ ಅಲ್ಲ ಎಲ್.ಕೆ.ಅಡ್ವಾನಿಯವರಂತಹ ಅವರ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ” ಎಂದಿದ್ದಾರೆ.

”ಬಿ.ಎಸ್.ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್‌ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಬಿಎಸ್ ಯಡಿಯೂರಪ್ಪ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ” ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

”ಮೊನ್ನೆಮೊನ್ನೆಯ ವರೆಗೆ ಆರ್.ಎಸ್.ಎಸ್, ರಾಜ್ಯ ಬಿಜೆಪಿ ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಆಗಿರುವ ಹೆಚ್. ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ. ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ” ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

”ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ನನಗೆ ತೀವ್ರ ಅಸಮಾಧಾನ ಇದೆ. ಇದಕ್ಕಿಂತಲೂ ಅಸಮಾಧಾನ ಎಲ್.ಕೆ.ಅಡ್ವಾಣಿ, ಬಿ.ಎಸ್. ಯಡಿಯೂರಪ್ಪನವರಂತಹ ತಮ್ಮದೇ ಪಕ್ಷದ ಹಿರಿಯ ನಾಯಕರನ್ನು ನಡೆಸಿಕೊಳ್ಳುವ ಬಗ್ಗೆಯೂ ಇದೆ” ಎಂದಿದ್ದಾರೆ.

”ಯಡಿಯೂರಪ್ಪ ಅವರೇ, ನೀವು ನಿಮ್ಮ ನಾಯಕರ ಮೇಲೆ ಬರಪೂರ ಹೊಗಳಿಕೆಯ ಮಳೆ ಸುರಿಸಿ, ಮನಸ್ಸಿಗೆ ತೃಪ್ತಿ ಆಗುವಷ್ಟು ಓಲೈಸಿ, ಬೇಕಿದ್ದರೆ ಕಾಲುಗಳನ್ನು ಬೇಕಾದರೂ ಹಿಡಿಯಿರಿ, ನಮಗೇನು ಅಭ್ಯಂತರ ಇಲ್ಲ. ಅದರಿಂದಾದರೂ ರಾಜ್ಯದ ಜನತೆಗೆ ನ್ಯಾಯ ಸಿಗಲಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: BJP ಲೀಡರ್ ಲೆಸ್, JDS ಪೀಪಲ್ ಲೆಸ್ ಪಾರ್ಟಿ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...