Homeಕರ್ನಾಟಕಕರ್ನಾಟಕದಲ್ಲಿ ರಾಜಾ ಹುಲಿ, ಮೋದಿ ಎದುರು ಇಲಿ: ಬಿಎಸ್‌ವೈಗೆ ಸಿದ್ದು ವ್ಯಂಗ್ಯ

ಕರ್ನಾಟಕದಲ್ಲಿ ರಾಜಾ ಹುಲಿ, ಮೋದಿ ಎದುರು ಇಲಿ: ಬಿಎಸ್‌ವೈಗೆ ಸಿದ್ದು ವ್ಯಂಗ್ಯ

- Advertisement -
- Advertisement -

ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಬಿಎಸ್ ಯಡಿಯೂರಪ್ಪ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಎಕ್ಸಾನಲ್ಲಿ ಸರಣಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ”ಪ್ರತಿನಿತ್ಯ ಬೈದರೆ ನರೇಂದ್ರ ಮೋದಿ ಅವರು  ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ” ಎಂದಿದ್ದಾರೆ.

”ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಬೈದಾಡಿದ್ದ ಯಡಿಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ. ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಇಲ್ಲವೇ ದ್ವೇಷ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ” ಎಂದು ಹೇಳಿದ್ದಾರೆ.

”ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಬಿಎಸ್‌ ಯಡಿಯೂರಪ್ಪ ಅವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿಯ ಗುಲಾಮರಲ್ಲ. ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ. ಬಹಳ ಮುಖ್ಯವಾಗಿ ಬಿ.ಎಸ್. ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

”ರಾಜ್ಯ ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ನರೇಂದ್ರ ಮೋದಿ ಅವರ ವಿರುದ್ಧ ಮಾತ್ರ ಅಲ್ಲ ಎಲ್.ಕೆ.ಅಡ್ವಾನಿಯವರಂತಹ ಅವರ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ” ಎಂದಿದ್ದಾರೆ.

”ಬಿ.ಎಸ್.ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್‌ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಬಿಎಸ್ ಯಡಿಯೂರಪ್ಪ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ” ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

”ಮೊನ್ನೆಮೊನ್ನೆಯ ವರೆಗೆ ಆರ್.ಎಸ್.ಎಸ್, ರಾಜ್ಯ ಬಿಜೆಪಿ ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಆಗಿರುವ ಹೆಚ್. ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ. ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ” ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

”ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ನನಗೆ ತೀವ್ರ ಅಸಮಾಧಾನ ಇದೆ. ಇದಕ್ಕಿಂತಲೂ ಅಸಮಾಧಾನ ಎಲ್.ಕೆ.ಅಡ್ವಾಣಿ, ಬಿ.ಎಸ್. ಯಡಿಯೂರಪ್ಪನವರಂತಹ ತಮ್ಮದೇ ಪಕ್ಷದ ಹಿರಿಯ ನಾಯಕರನ್ನು ನಡೆಸಿಕೊಳ್ಳುವ ಬಗ್ಗೆಯೂ ಇದೆ” ಎಂದಿದ್ದಾರೆ.

”ಯಡಿಯೂರಪ್ಪ ಅವರೇ, ನೀವು ನಿಮ್ಮ ನಾಯಕರ ಮೇಲೆ ಬರಪೂರ ಹೊಗಳಿಕೆಯ ಮಳೆ ಸುರಿಸಿ, ಮನಸ್ಸಿಗೆ ತೃಪ್ತಿ ಆಗುವಷ್ಟು ಓಲೈಸಿ, ಬೇಕಿದ್ದರೆ ಕಾಲುಗಳನ್ನು ಬೇಕಾದರೂ ಹಿಡಿಯಿರಿ, ನಮಗೇನು ಅಭ್ಯಂತರ ಇಲ್ಲ. ಅದರಿಂದಾದರೂ ರಾಜ್ಯದ ಜನತೆಗೆ ನ್ಯಾಯ ಸಿಗಲಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: BJP ಲೀಡರ್ ಲೆಸ್, JDS ಪೀಪಲ್ ಲೆಸ್ ಪಾರ್ಟಿ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...