Homeಕರ್ನಾಟಕಬಿಎಸ್‌ವೈ ಪೋಕ್ಸೋ ಪ್ರಕರಣ| 'ಕೆಟ್ಟ ಘಟನೆಗಳು ತಂಗಿಯನ್ನು ನಿತ್ಯ ಕಾಡುತ್ತಿವೆ..'; ಅಸಹಾಯಕತೆ ವ್ಯಕ್ತಪಡಿಸಿದ ಸಂತ್ರಸ್ತೆ ಸಹೋದರ

ಬಿಎಸ್‌ವೈ ಪೋಕ್ಸೋ ಪ್ರಕರಣ| ‘ಕೆಟ್ಟ ಘಟನೆಗಳು ತಂಗಿಯನ್ನು ನಿತ್ಯ ಕಾಡುತ್ತಿವೆ..’; ಅಸಹಾಯಕತೆ ವ್ಯಕ್ತಪಡಿಸಿದ ಸಂತ್ರಸ್ತೆ ಸಹೋದರ

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ದಾಖಲಾಗಿ ಸುಮಾರು 10 ತಿಂಗಳುಗಳಾಗಿದ್ದು, ಸಂತ್ರಸ್ತೆಯ ಸಹೋದರ ವಿಡಿಯೋ ಬಿಡುಗಡೆ ಮಾಡಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

“ಪ್ರಕರಣದ ತನಿಖೆ ತ್ವರಿತವಾಗಿ ನಡೆಯುತ್ತಿಲ್ಲ; ನಮಗೆ ನ್ಯಾಯವೂ ಸಿಗುತ್ತಿಲ್ಲ. ನಿತ್ಯವೂ ನರಕಯಾತನೆಯಾಗಿದೆ” ಎಂದು ಅಳಲು ತೋಡಿಕೊಂಡಿದ್ದಾರೆ. ಪ್ರಕರಣ ದಾಖಲಾದ ಬಳಿಕ ತಾವು ಅನುಭವಿಸುತ್ತಿರುವ ಸಂಕಷ್ಟಗಳು ಮತ್ತು ಯಡಿಯೂರಪ್ಪ ವಿರುದ್ಧ ಹಲವಾರು ಆರೋಪಗಳನ್ನು ಮಾಡಿ ಸಂತ್ರಸ್ತೆಯ ಸಹೋದರ ವಿಡಿಯೋ ಹಂಚಿಕೊಂಡಿದ್ದಾರೆ.

“ಅತೀವ ದುಃಖದಿಂದ ನಾನು ಈ ವಿಡಿಯೋ ಮಾಡುತ್ತಿದ್ದೇನೆ. ನನ್ನ ಪುಟ್ಟ ತಂಗಿ ಮೇಲಾದ ದೌರ್ಜನ್ಯದಿಂದಾಗಿ ನನ್ನ ಕುಟುಂಬ ಚೇತರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಾರಣ. ನಿಜಕ್ಕೂ ಯಡಿಯೂರಪ್ಪ ರೀತಿಯ ಜನರು ಇಂತಹ ಕೃತ್ಯವೆಸಗುತ್ತಾರೆಂದು ಊಹಿಸಲೂ ಅಸಾಧ್ಯ. ಅದೂ ಕೂಡ ಅವರ ಮೊಮ್ಮಕ್ಕಳಿಗಿಂತಲೂ ಚಿಕ್ಕವಳಾದ ನನ್ನ ಪುಟ್ಟ ತಂಗಿ ಮೇಲೆ ಇಂತಹ ಕೃತ್ಯ ನಡೆಸಿದ್ಜಾರೆ. ನನಗೆ ಮತ್ತು ನನ್ನ ಪುಟ್ಟ ತಂಗಿಗೆ ಇದು ನಿಜಕ್ಕೂ ಆಘಾತವಾಗಿದೆ” ಎಂದು ಬೇಸರ ಹೊರಹಾಕಿದ್ದಾರೆ.

“ತನ್ನ ಮೇಲಾದ ದೌರ್ಜನ್ಯದಿಂದಾಗಿ ನನ್ನ ತಂಗಿ ನಿತ್ಯವೂ ನರಕ ಯಾತನೆ ಅನುಭವಿಸುತ್ತಿದ್ದಾಳೆ. ಅಂದು ನಡೆದ ಆ ಕೆಟ್ಟ ಘಟನೆಗಳು ಆಕೆಯನ್ನು ಕಾಡುತ್ತಿವೆ. ನನ್ನ ತಂಗಿಯ ಮೇಲಾದ ದೌರ್ಜನ್ಯದ ವಿರುದ್ಧದ ಹೋರಾಟ ನಡೆಸುತ್ತಿದ್ದ ನಮ್ಮ ತಾಯಿ ಕೂಡ ಸಾವನ್ನಪ್ಪಿದ್ದಾರೆ. ಅವರ ಸಾವು ನಮ್ಮನ್ನು ಮತ್ತಷ್ಟು ಆಘಾತಕ್ಕೀಡುಮಾಡಿದೆ. ನಮ್ಮ ತಾಯಿ ಸುಮಾರು 10 ವರ್ಷಗಳ ಹಿಂದೆ ಮೊದಲ ಪೋಕ್ಸೋ ಪ್ರಕರಣ ದಾಖಲಿಸಿದಾಗಿನಿಂದಲೂ ಹೋರಾಟ ನಡೆಸುತ್ತಿದ್ದರು. ನಮ್ಮ ತಾಯಿಯೇ ನಮಗೆ ಧೈರ್ಯವಾಗಿದ್ದರು. ಆದರೆ, ಅವರಿಲ್ಲ ನಾವು ಕಷ್ಟಪಡುತ್ತಿದ್ದೇವೆ. ನಮ್ಮ ಭಾವನೆ, ಆಕ್ರೋಶ ಎಲ್ಲವನ್ನೂ ನಮ್ಮೊಳಗೇ ಇಟ್ಟುಕೊಂಡು ಒದ್ದಾಡುತ್ತಿದ್ದೇವೆ” ಎಂದು ವಿವರಿಸಿದ್ದಾರೆ.

“ನ್ಯಾಯಕ್ಕಾಗಿ ನಮ್ಮ ತಾಯಿ ಹಲವು ರಾಜಕೀಯ ನಾಯಕರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿದ್ದರು. ಮನವಿ ಸಲ್ಲಿಸಿದ್ದರು. ಆದರೆ, ಯಾರಿಂದಲೂ ನ್ಯಾಯ ದೊರೆಯಲಿಲ್ಲ. ಆಕೆಯ ವಿರುದ್ಧವೇ ಸುಳ್ಳು ಪ್ರಕರಣಗಳು ದಾಖಲಾದವು. ಯಡಿಯೂರಪ್ಪರನ್ನು ರಕ್ಷಿಸಲು ನಮ್ಮ ತಾಯಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ನ್ಯಾಯ ಕೇಳಲು ಹೋದ ನಮ್ಮ ತಾಯಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಹಲ್ಲೆ ನಡೆಸಲು ಯತ್ನಿಸಿದ್ದರು. ಇಂತಹ ಕೃತ್ಯಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕು. ಯಡಿಯೂರಪ್ಪ ಮೇಲಿನ ಪ್ರಕರಣವನ್ನು ವಾಪಸ್ ಪಡೆಯಲು ಬೆದರಿಕೆಗಳು ಬರುತ್ತಿವೆ. ನಮ್ಮ ಕುಟುಂಬ ಜೀವನ ನಡೆಸುವುದೇ ಸವಾಲಾಗಿದೆ. ನನ್ನ ತಂಗಿ ಜರ್ಜಿರಿತಳಾಗಿದ್ದಾಳೆ. ಶಾಲೆಗೆ ಹೋಗುವುದನ್ನೂ ನಿಲ್ಲಿಸಿದ್ದಾಳೆ. ಹೊರ ಹೋಗಲು ಭಯವಾಗುತ್ತಿದೆ ಎನ್ನುತ್ತಿದ್ದಾಳೆ. ನನ್ನ ತಂಗಿಗಾದ ಅನ್ಯಾಯ ಬೇರೆ ಯಾರಿಗೂ ಆಗಬಾರದು. ಅಪರಾಧಿಗೆ ಶಿಕ್ಷೆಯಾಗಬೇಕು. ಪ್ರಕರಣ ರದ್ದಾಗದಂತೆ ನೋಡಿಕೊಳ್ಳಬೇಕು. ನಮಗೆ ನ್ಯಾಯ ಕೊಡಿಸಿ, ನ್ಯಾಯಕ್ಕಾಗಿ ವಾದ ಮಂಡಿಸಲು ಒಳ್ಳೆಯ ವಕೀಲರನ್ನು ನೇಮಿಸಿಕೊಡಿ ಎಂದು ನಾನು ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡುತ್ತಿದ್ದೇನೆ” ಎಂದು ಮನವಿ ಮಾಡಿಕೊಂಡಿದ್ದಾರೆ.

ಇದೆಲ್ಲದರ ನಡುವೆ ತಮ್ಮ ವಿರುದ್ಧದ ದಾಖಲಾಗಿರುವ ಪೋಕ್ಸೋ ಪ್ರಕರಣ‌ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಜ.10ಕ್ಕೆ ಮುಂದೂಡಿದೆ.

ತಮ್ಮ ಮಗಳ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯ ಪಡೆಯಲು ಸಹಾಯ ಕೇಳಲು ಹೋಗಿದ್ದಾಗ ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಬಾಲಕಿಯ ಖಾಸಗಿ ಅಂಗ ಸ್ಪರ್ಶಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಸಿದ್ದರು. ಅವರ ದೂರಿನ ಆಧಾರದ ಮೇಲೆ 2024ರ ಮಾರ್ಚ್‌ 15ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ; ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...