Homeಕರ್ನಾಟಕಬಿಎಸ್‌ವೈ ಪೋಕ್ಸೋ ಪ್ರಕರಣ| 'ಕೆಟ್ಟ ಘಟನೆಗಳು ತಂಗಿಯನ್ನು ನಿತ್ಯ ಕಾಡುತ್ತಿವೆ..'; ಅಸಹಾಯಕತೆ ವ್ಯಕ್ತಪಡಿಸಿದ ಸಂತ್ರಸ್ತೆ ಸಹೋದರ

ಬಿಎಸ್‌ವೈ ಪೋಕ್ಸೋ ಪ್ರಕರಣ| ‘ಕೆಟ್ಟ ಘಟನೆಗಳು ತಂಗಿಯನ್ನು ನಿತ್ಯ ಕಾಡುತ್ತಿವೆ..’; ಅಸಹಾಯಕತೆ ವ್ಯಕ್ತಪಡಿಸಿದ ಸಂತ್ರಸ್ತೆ ಸಹೋದರ

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ದಾಖಲಾಗಿ ಸುಮಾರು 10 ತಿಂಗಳುಗಳಾಗಿದ್ದು, ಸಂತ್ರಸ್ತೆಯ ಸಹೋದರ ವಿಡಿಯೋ ಬಿಡುಗಡೆ ಮಾಡಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

“ಪ್ರಕರಣದ ತನಿಖೆ ತ್ವರಿತವಾಗಿ ನಡೆಯುತ್ತಿಲ್ಲ; ನಮಗೆ ನ್ಯಾಯವೂ ಸಿಗುತ್ತಿಲ್ಲ. ನಿತ್ಯವೂ ನರಕಯಾತನೆಯಾಗಿದೆ” ಎಂದು ಅಳಲು ತೋಡಿಕೊಂಡಿದ್ದಾರೆ. ಪ್ರಕರಣ ದಾಖಲಾದ ಬಳಿಕ ತಾವು ಅನುಭವಿಸುತ್ತಿರುವ ಸಂಕಷ್ಟಗಳು ಮತ್ತು ಯಡಿಯೂರಪ್ಪ ವಿರುದ್ಧ ಹಲವಾರು ಆರೋಪಗಳನ್ನು ಮಾಡಿ ಸಂತ್ರಸ್ತೆಯ ಸಹೋದರ ವಿಡಿಯೋ ಹಂಚಿಕೊಂಡಿದ್ದಾರೆ.

“ಅತೀವ ದುಃಖದಿಂದ ನಾನು ಈ ವಿಡಿಯೋ ಮಾಡುತ್ತಿದ್ದೇನೆ. ನನ್ನ ಪುಟ್ಟ ತಂಗಿ ಮೇಲಾದ ದೌರ್ಜನ್ಯದಿಂದಾಗಿ ನನ್ನ ಕುಟುಂಬ ಚೇತರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಾರಣ. ನಿಜಕ್ಕೂ ಯಡಿಯೂರಪ್ಪ ರೀತಿಯ ಜನರು ಇಂತಹ ಕೃತ್ಯವೆಸಗುತ್ತಾರೆಂದು ಊಹಿಸಲೂ ಅಸಾಧ್ಯ. ಅದೂ ಕೂಡ ಅವರ ಮೊಮ್ಮಕ್ಕಳಿಗಿಂತಲೂ ಚಿಕ್ಕವಳಾದ ನನ್ನ ಪುಟ್ಟ ತಂಗಿ ಮೇಲೆ ಇಂತಹ ಕೃತ್ಯ ನಡೆಸಿದ್ಜಾರೆ. ನನಗೆ ಮತ್ತು ನನ್ನ ಪುಟ್ಟ ತಂಗಿಗೆ ಇದು ನಿಜಕ್ಕೂ ಆಘಾತವಾಗಿದೆ” ಎಂದು ಬೇಸರ ಹೊರಹಾಕಿದ್ದಾರೆ.

“ತನ್ನ ಮೇಲಾದ ದೌರ್ಜನ್ಯದಿಂದಾಗಿ ನನ್ನ ತಂಗಿ ನಿತ್ಯವೂ ನರಕ ಯಾತನೆ ಅನುಭವಿಸುತ್ತಿದ್ದಾಳೆ. ಅಂದು ನಡೆದ ಆ ಕೆಟ್ಟ ಘಟನೆಗಳು ಆಕೆಯನ್ನು ಕಾಡುತ್ತಿವೆ. ನನ್ನ ತಂಗಿಯ ಮೇಲಾದ ದೌರ್ಜನ್ಯದ ವಿರುದ್ಧದ ಹೋರಾಟ ನಡೆಸುತ್ತಿದ್ದ ನಮ್ಮ ತಾಯಿ ಕೂಡ ಸಾವನ್ನಪ್ಪಿದ್ದಾರೆ. ಅವರ ಸಾವು ನಮ್ಮನ್ನು ಮತ್ತಷ್ಟು ಆಘಾತಕ್ಕೀಡುಮಾಡಿದೆ. ನಮ್ಮ ತಾಯಿ ಸುಮಾರು 10 ವರ್ಷಗಳ ಹಿಂದೆ ಮೊದಲ ಪೋಕ್ಸೋ ಪ್ರಕರಣ ದಾಖಲಿಸಿದಾಗಿನಿಂದಲೂ ಹೋರಾಟ ನಡೆಸುತ್ತಿದ್ದರು. ನಮ್ಮ ತಾಯಿಯೇ ನಮಗೆ ಧೈರ್ಯವಾಗಿದ್ದರು. ಆದರೆ, ಅವರಿಲ್ಲ ನಾವು ಕಷ್ಟಪಡುತ್ತಿದ್ದೇವೆ. ನಮ್ಮ ಭಾವನೆ, ಆಕ್ರೋಶ ಎಲ್ಲವನ್ನೂ ನಮ್ಮೊಳಗೇ ಇಟ್ಟುಕೊಂಡು ಒದ್ದಾಡುತ್ತಿದ್ದೇವೆ” ಎಂದು ವಿವರಿಸಿದ್ದಾರೆ.

“ನ್ಯಾಯಕ್ಕಾಗಿ ನಮ್ಮ ತಾಯಿ ಹಲವು ರಾಜಕೀಯ ನಾಯಕರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿದ್ದರು. ಮನವಿ ಸಲ್ಲಿಸಿದ್ದರು. ಆದರೆ, ಯಾರಿಂದಲೂ ನ್ಯಾಯ ದೊರೆಯಲಿಲ್ಲ. ಆಕೆಯ ವಿರುದ್ಧವೇ ಸುಳ್ಳು ಪ್ರಕರಣಗಳು ದಾಖಲಾದವು. ಯಡಿಯೂರಪ್ಪರನ್ನು ರಕ್ಷಿಸಲು ನಮ್ಮ ತಾಯಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ನ್ಯಾಯ ಕೇಳಲು ಹೋದ ನಮ್ಮ ತಾಯಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಹಲ್ಲೆ ನಡೆಸಲು ಯತ್ನಿಸಿದ್ದರು. ಇಂತಹ ಕೃತ್ಯಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕು. ಯಡಿಯೂರಪ್ಪ ಮೇಲಿನ ಪ್ರಕರಣವನ್ನು ವಾಪಸ್ ಪಡೆಯಲು ಬೆದರಿಕೆಗಳು ಬರುತ್ತಿವೆ. ನಮ್ಮ ಕುಟುಂಬ ಜೀವನ ನಡೆಸುವುದೇ ಸವಾಲಾಗಿದೆ. ನನ್ನ ತಂಗಿ ಜರ್ಜಿರಿತಳಾಗಿದ್ದಾಳೆ. ಶಾಲೆಗೆ ಹೋಗುವುದನ್ನೂ ನಿಲ್ಲಿಸಿದ್ದಾಳೆ. ಹೊರ ಹೋಗಲು ಭಯವಾಗುತ್ತಿದೆ ಎನ್ನುತ್ತಿದ್ದಾಳೆ. ನನ್ನ ತಂಗಿಗಾದ ಅನ್ಯಾಯ ಬೇರೆ ಯಾರಿಗೂ ಆಗಬಾರದು. ಅಪರಾಧಿಗೆ ಶಿಕ್ಷೆಯಾಗಬೇಕು. ಪ್ರಕರಣ ರದ್ದಾಗದಂತೆ ನೋಡಿಕೊಳ್ಳಬೇಕು. ನಮಗೆ ನ್ಯಾಯ ಕೊಡಿಸಿ, ನ್ಯಾಯಕ್ಕಾಗಿ ವಾದ ಮಂಡಿಸಲು ಒಳ್ಳೆಯ ವಕೀಲರನ್ನು ನೇಮಿಸಿಕೊಡಿ ಎಂದು ನಾನು ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡುತ್ತಿದ್ದೇನೆ” ಎಂದು ಮನವಿ ಮಾಡಿಕೊಂಡಿದ್ದಾರೆ.

ಇದೆಲ್ಲದರ ನಡುವೆ ತಮ್ಮ ವಿರುದ್ಧದ ದಾಖಲಾಗಿರುವ ಪೋಕ್ಸೋ ಪ್ರಕರಣ‌ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಜ.10ಕ್ಕೆ ಮುಂದೂಡಿದೆ.

ತಮ್ಮ ಮಗಳ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯ ಪಡೆಯಲು ಸಹಾಯ ಕೇಳಲು ಹೋಗಿದ್ದಾಗ ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಬಾಲಕಿಯ ಖಾಸಗಿ ಅಂಗ ಸ್ಪರ್ಶಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಸಿದ್ದರು. ಅವರ ದೂರಿನ ಆಧಾರದ ಮೇಲೆ 2024ರ ಮಾರ್ಚ್‌ 15ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ; ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...