Homeಮುಖಪುಟಮೋದಿ ವಿರುದ್ಧ ಮಾಜಿ ಬಿಎಸ್ಎಫ್ ಯೋಧ ಕಣಕ್ಕೆ

ಮೋದಿ ವಿರುದ್ಧ ಮಾಜಿ ಬಿಎಸ್ಎಫ್ ಯೋಧ ಕಣಕ್ಕೆ

- Advertisement -
- Advertisement -

ಸೈನ್ಯದಲ್ಲಿ ಕಳಪೆ ಆಹಾರ ನೀಡುವುದರಿಂದ ಬೇಸೆತ್ತು ಸೋಷಿಯಲ್ ಮಿಡೀಯಾದಲ್ಲಿ ದೊಡ್ಡ ಪ್ರಚಾರಾಂದೋಲನ ನಡೆಸಿದ್ದ ತೇಜ್ ಬಹದ್ದೂರ್ ಯಾದವ್ ಎಂಬ ಯೋಧನು ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಕಳೆದ ವರ್ಷ ಇವರು ಬಿಎಸ್ಎಫ್ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದಾಗ ಸರಿಯಾದ ಸೌಲಭ್ಯಗಳಿಲ್ಲದಿರುವುದು ಮತ್ತು ಅತ್ಯಂತ ಕಳಪೆ ಆಹಾರದ ವಿರುದ್ಧ ದನಿಯೆತ್ತಿ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಬೆಂಬಲಿಸಿ ಸಾವಿರಾರು ಜನ  ವಿಡಿಯೋವನ್ನು ಷೇರ್ ಮಾಡಿದ್ದರು. ಸಿಕ್ಕಾಪಟ್ಟೆ ವೈರಲ್ ಆದ ವಿಡಿಯೋ ಮೋದಿ ಸರ್ಕಾರಕ್ಕೆ ಮುಜುಗರ ತಂದಿತ್ತು. ಆ ಸಮಸ್ಯೆಯನ್ನು ಬಗೆಹರಿಸುವ ಬದಲು ಆತನನ್ನು ಸೇನೆಯಿಂದ ವಜಾಗೊಳಿಸಲಾಗಿತ್ತು.

ಹರಿಯಾಣದ ರಿವಾರಿ ನಿವಾಸಿಯಾದ ತೇಜ್ ಬಹದ್ದೂರ್ ಯಾದವ್ ರವರನ್ನು ತಮ್ಮ ಪಕ್ಷಕ್ಕೆ ಸೇರುವಂತೆ ಹಲವು ಪಕ್ಷಗಳು ಆಹ್ವಾನ ನೀಡಿದ್ದವು. ಆದರೆ ಅದನ್ನು ತಿರಸ್ಕರಿಸಿರುವ ಅವರು ಸದ್ಯ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಮೋದಿ ವಿರುದ್ಧವೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವುದು, ಸೋಲುವುದು ನನಗೆ ಮುಖ್ಯವಲ್ಲ, ನನ್ನ ಸ್ಫರ್ಧೆಯ ಮೂಲಕ ಸೇನೆಯ ಬಗ್ಗೆ ಈ ಸರ್ಕಾರ ಹೊಂದಿರವು ತಿರಸ್ಕಾರದ ಭಾವನೆಯನ್ನು, ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಮುಖ್ಯವಾಹಿನಿ ಚರ್ಚೆಗೆ ತರಬೇಕು, ಅದರಲ್ಲಿಯೂ ಪ್ಯಾರಮಿಲಿಟರಿ ಸೇನೆ ಅನುಭವಿಸುತ್ತಿರುವ ಸಂಕಷ್ಟಗಳಿಗೆ ಪರಿಹಾರ ಸಿಗಬೇಕು ಎಂದು ತೇಜ್ ಬಹದ್ದೂರ್ ಹೇಳುತ್ತಾರೆ.

ಇತ್ತೀಚೆಗೆ ಪುಲ್ವಾಮ ಘಟನೆಯಲ್ಲಿ 40ಕ್ಕೂ ಹೆಚ್ಚು ಸಿ.ಆರ್.ಪಿ.ಎಫ್ ಯೋಧರು ಮೃತಪಟ್ಟಿದ್ದರೂ ಈವರೆಗೆ ಅವರಿಗೆ ಹುತಾತ್ಮ ಪಟ್ಟ ನೀಡಲು ಮೋದಿ ಸರ್ಕಾರ ಸಿದ್ಧವಿಲ್ಲ, ಬದಲಿಗೆ ಸೈನಿಕರ ಹೆಸರಿನಲ್ಲಿ ವೋಟು ಪಡೆಯಲು ಮಾತ್ರ ಈ ಸರ್ಕಾರ ಹವಣಿಸುತ್ತಿದ್ದು ಸೈನಿಕರು ಸಂಕಷ್ಟದಲ್ಲಿದ್ದಾರೆ ಎಂದು ಅವರು ನೇರ ಆರೋಪ ಮಾಡಿದ್ದಾರೆ. ನಾನು ಸೈನ್ಯದಲ್ಲಿನ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದೆ. ಅದನ್ನು ಸರಿಪಡಿಸುವ ಬದಲು ನನ್ನ ಮೇಲೆಯೇ ಸುಳ್ಳು ಕೇಸುಗಳನ್ನು ಹಾಕಿ ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲಿಯೇ ವಾರಣಾಸಿಗೆ ತೆರಳಿ ಮಾಜಿ ಯೋಧರು ಮತ್ತು ರೈತರ ನೆರವಿನಿಂದ ಚುನಾವಣಾ ಪ್ರಚಾರ ಕೈಗೊಳ್ಳುವುದಾಗಿ ಅವರು ಘೋಷಿಸಿದ್ದಾರೆ.

ನಾವೆಲ್ಲರೂ ಸೈನ್ಯಕ್ಕೆ ಬಹಳ ಗೌರವ ಕೊಡುತ್ತೇವೆ, ಆದರೆ ಅಲ್ಲಿಯೇ ಭ್ರಷ್ಟಾಚಾರವಿದೆ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕಿದೆ. ಭಾರತದ ಬಹುತೇಕ ಮಾಧ್ಯಮಗಳು ಮೋದಿ ಪರವಾಗಿಯೂ, ಸೈನ್ಯವನ್ನು ವಿಜೃಂಭಿಸಿ ವರದಿ ಪ್ರಸಾರ ಮಾಡುತ್ತಿರುವಾಗ ತೇಜ್ ಬಹದ್ದೂರ್ ರವರ  ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...