Homeಮುಖಪುಟಮೋದಿ ವಿರುದ್ಧ ಮಾಜಿ ಬಿಎಸ್ಎಫ್ ಯೋಧ ಕಣಕ್ಕೆ

ಮೋದಿ ವಿರುದ್ಧ ಮಾಜಿ ಬಿಎಸ್ಎಫ್ ಯೋಧ ಕಣಕ್ಕೆ

- Advertisement -
- Advertisement -

ಸೈನ್ಯದಲ್ಲಿ ಕಳಪೆ ಆಹಾರ ನೀಡುವುದರಿಂದ ಬೇಸೆತ್ತು ಸೋಷಿಯಲ್ ಮಿಡೀಯಾದಲ್ಲಿ ದೊಡ್ಡ ಪ್ರಚಾರಾಂದೋಲನ ನಡೆಸಿದ್ದ ತೇಜ್ ಬಹದ್ದೂರ್ ಯಾದವ್ ಎಂಬ ಯೋಧನು ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಕಳೆದ ವರ್ಷ ಇವರು ಬಿಎಸ್ಎಫ್ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದಾಗ ಸರಿಯಾದ ಸೌಲಭ್ಯಗಳಿಲ್ಲದಿರುವುದು ಮತ್ತು ಅತ್ಯಂತ ಕಳಪೆ ಆಹಾರದ ವಿರುದ್ಧ ದನಿಯೆತ್ತಿ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಬೆಂಬಲಿಸಿ ಸಾವಿರಾರು ಜನ  ವಿಡಿಯೋವನ್ನು ಷೇರ್ ಮಾಡಿದ್ದರು. ಸಿಕ್ಕಾಪಟ್ಟೆ ವೈರಲ್ ಆದ ವಿಡಿಯೋ ಮೋದಿ ಸರ್ಕಾರಕ್ಕೆ ಮುಜುಗರ ತಂದಿತ್ತು. ಆ ಸಮಸ್ಯೆಯನ್ನು ಬಗೆಹರಿಸುವ ಬದಲು ಆತನನ್ನು ಸೇನೆಯಿಂದ ವಜಾಗೊಳಿಸಲಾಗಿತ್ತು.

ಹರಿಯಾಣದ ರಿವಾರಿ ನಿವಾಸಿಯಾದ ತೇಜ್ ಬಹದ್ದೂರ್ ಯಾದವ್ ರವರನ್ನು ತಮ್ಮ ಪಕ್ಷಕ್ಕೆ ಸೇರುವಂತೆ ಹಲವು ಪಕ್ಷಗಳು ಆಹ್ವಾನ ನೀಡಿದ್ದವು. ಆದರೆ ಅದನ್ನು ತಿರಸ್ಕರಿಸಿರುವ ಅವರು ಸದ್ಯ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಮೋದಿ ವಿರುದ್ಧವೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವುದು, ಸೋಲುವುದು ನನಗೆ ಮುಖ್ಯವಲ್ಲ, ನನ್ನ ಸ್ಫರ್ಧೆಯ ಮೂಲಕ ಸೇನೆಯ ಬಗ್ಗೆ ಈ ಸರ್ಕಾರ ಹೊಂದಿರವು ತಿರಸ್ಕಾರದ ಭಾವನೆಯನ್ನು, ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಮುಖ್ಯವಾಹಿನಿ ಚರ್ಚೆಗೆ ತರಬೇಕು, ಅದರಲ್ಲಿಯೂ ಪ್ಯಾರಮಿಲಿಟರಿ ಸೇನೆ ಅನುಭವಿಸುತ್ತಿರುವ ಸಂಕಷ್ಟಗಳಿಗೆ ಪರಿಹಾರ ಸಿಗಬೇಕು ಎಂದು ತೇಜ್ ಬಹದ್ದೂರ್ ಹೇಳುತ್ತಾರೆ.

ಇತ್ತೀಚೆಗೆ ಪುಲ್ವಾಮ ಘಟನೆಯಲ್ಲಿ 40ಕ್ಕೂ ಹೆಚ್ಚು ಸಿ.ಆರ್.ಪಿ.ಎಫ್ ಯೋಧರು ಮೃತಪಟ್ಟಿದ್ದರೂ ಈವರೆಗೆ ಅವರಿಗೆ ಹುತಾತ್ಮ ಪಟ್ಟ ನೀಡಲು ಮೋದಿ ಸರ್ಕಾರ ಸಿದ್ಧವಿಲ್ಲ, ಬದಲಿಗೆ ಸೈನಿಕರ ಹೆಸರಿನಲ್ಲಿ ವೋಟು ಪಡೆಯಲು ಮಾತ್ರ ಈ ಸರ್ಕಾರ ಹವಣಿಸುತ್ತಿದ್ದು ಸೈನಿಕರು ಸಂಕಷ್ಟದಲ್ಲಿದ್ದಾರೆ ಎಂದು ಅವರು ನೇರ ಆರೋಪ ಮಾಡಿದ್ದಾರೆ. ನಾನು ಸೈನ್ಯದಲ್ಲಿನ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದೆ. ಅದನ್ನು ಸರಿಪಡಿಸುವ ಬದಲು ನನ್ನ ಮೇಲೆಯೇ ಸುಳ್ಳು ಕೇಸುಗಳನ್ನು ಹಾಕಿ ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲಿಯೇ ವಾರಣಾಸಿಗೆ ತೆರಳಿ ಮಾಜಿ ಯೋಧರು ಮತ್ತು ರೈತರ ನೆರವಿನಿಂದ ಚುನಾವಣಾ ಪ್ರಚಾರ ಕೈಗೊಳ್ಳುವುದಾಗಿ ಅವರು ಘೋಷಿಸಿದ್ದಾರೆ.

ನಾವೆಲ್ಲರೂ ಸೈನ್ಯಕ್ಕೆ ಬಹಳ ಗೌರವ ಕೊಡುತ್ತೇವೆ, ಆದರೆ ಅಲ್ಲಿಯೇ ಭ್ರಷ್ಟಾಚಾರವಿದೆ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕಿದೆ. ಭಾರತದ ಬಹುತೇಕ ಮಾಧ್ಯಮಗಳು ಮೋದಿ ಪರವಾಗಿಯೂ, ಸೈನ್ಯವನ್ನು ವಿಜೃಂಭಿಸಿ ವರದಿ ಪ್ರಸಾರ ಮಾಡುತ್ತಿರುವಾಗ ತೇಜ್ ಬಹದ್ದೂರ್ ರವರ  ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...