Homeಮುಖಪುಟಬಿಎಸ್ಪಿ ಪಕ್ಷಕ್ಕೆ ಉತ್ತರಾಧಿಕಾರಿಯನ್ನು ನೇಮಿಸಿದ ಮಾಯಾವತಿ

ಬಿಎಸ್ಪಿ ಪಕ್ಷಕ್ಕೆ ಉತ್ತರಾಧಿಕಾರಿಯನ್ನು ನೇಮಿಸಿದ ಮಾಯಾವತಿ

- Advertisement -
- Advertisement -

ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಉತ್ತರಾಧಿಕಾರಿಯಾಗಿ ಘೋಷಿಸಿದ್ದಾರೆ ಎಂದು ಪಕ್ಷದ ಮುಖಂಡರು ಭಾನುವಾರ ತಿಳಿಸಿದ್ದಾರೆ.

ಭಾನುವಾರ ಲಕ್ನೋದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಮುಂಬರುವ 2024ರ ಲೋಕಸಭೆ ಚುನಾವಣೆ ಹಿನ್ನೆಲೆ ನಡೆದ ಪಕ್ಷದ ಸಭೆಯಲ್ಲಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಸೋದರಳಿಯ ಆನಂದ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಘೋಷಿಸಿದ್ದಾರೆ ಮತ್ತು ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಬಿಎಸ್ಪಿ ನಾಯಕರು ಮಾಹಿತಿ ನೀಡಿರುವ ಬಗ್ಗೆ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ನಮ್ಮ ನಾಯಕಿ ಮಾಯಾವತಿ ಅವರು ಭವಿಷ್ಯದಲ್ಲಿ ಆಕಾಶ್ ಆನಂದ್ ಜಿ ಅವರು ಪಕ್ಷದ ಉತ್ತರಾಧಿಕಾರಿಯಾಗುತ್ತಾರೆ ಎಂದು ಹೇಳಿದ್ದಾರೆ. ಪಕ್ಷ ದುರ್ಬಲವಾಗಿರುವ ರಾಜ್ಯಗಳಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಿದ್ದಾರೆ. ತಾನು ಯುಪಿ ಮತ್ತು ಉತ್ತರಾಖಂಡದಲ್ಲಿ ಪಕ್ಷವನ್ನು ಮುನ್ನಡೆಸುತ್ತೇನೆ ಎಂದು ಆನಂದ್ ಅವರು ಹೇಳಿದ್ದಾರೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಉದಯ್‌ ವೀರ್‌ ಸಿಂಗ್‌ ಅವರು ಹೇಳಿದ್ದಾರೆ.

ಆಕಾಶ್ ಆನಂದ್ ಅವರು ಕಳೆದ ವರ್ಷದಿಂದ ಬಿಎಸ್ಪಿ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಅವರು ಮಾಯಾವತಿಯವರ ಕಿರಿಯ ಸಹೋದರ ಆನಂದ್ ಕುಮಾರ್ ಅವರ ಪುತ್ರರಾಗಿದ್ದಾರೆ. ಅವರು ಬಿಎಸ್ಪಿಯಲ್ಲಿ ಬೆಹೆನ್ ಜಿ(ಮಾಯಾವತಿಯ) ನಂತರದ ಸ್ಥಾನದಲ್ಲಿದ್ದಾರೆ. ಮಾಯಾವತಿಯವರ ಸಹೋದರ ಆನಂದ್ ಕುಮಾರ್ ಅವರನ್ನು 2019ರಲ್ಲಿ ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು ಮತ್ತು ಆಕಾಶ್ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿತ್ತು.

ಆಕಾಶ್ ಆನಂದ್ ರಾಜಸ್ಥಾನದಲ್ಲಿ 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿದ್ದರು. ರಾಜಸ್ಥಾನದಲ್ಲಿ ಅವರು ಬಿಎಸ್ಪಿ ಪರ ಚುನಾವಣಾ ಪ್ರಚಾರವನ್ನು ಮಾಡಿದ್ದರು. ಆಕಾಶ್ ಆನಂದ್ ಅವರು ಇತ್ತೀಚೆಗೆ ನಡೆದ 4 ರಾಜ್ಯಗಳ ಚುನಾವಣೆಗಳಲ್ಲಿ ವಿಶೇಷವಾಗಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ರಾಜಸ್ಥಾನದಲ್ಲಿ ಬಿಎಸ್‌ಪಿ 2 ಸ್ಥಾನಗಳಲ್ಲಿ ಗೆಲುವನ್ನು ಕಂಡಿದೆ, ಆದರೆ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಯಾವುದೇ ಖಾತೆಯನ್ನು ತೆರೆದಿಲ್ಲ.

ಆನಂದ್ ಅವರು 2022ರಲ್ಲಿ ರಾಜಸ್ಥಾನದ ಅಲ್ವಾರ್‌ನಲ್ಲಿ ಪಾದಯಾತ್ರೆ ನಡೆಸಿದ್ದರು. 28 ವರ್ಷದ ಆನಂದ್ ಅವರು ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮದಿನದಂದು ಆಲ್ವಾರ್‌ನಲ್ಲಿ 13 ಕಿಮೀ ಸ್ವಾಭಿಮಾನ್ ಸಂಕಲ್ಪ ಯಾತ್ರೆ ನಡೆಸಿ ಗಮನ ಸೆಳೆದಿದ್ದರು.

ಇದನ್ನು ಓದಿ: ಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...