Homeಕರ್ನಾಟಕಬಿ.ಎಸ್.ಪಿ ಶಾಸಕ ಎನ್ ಮಹೇಶ್ ಉಚ್ಚಾಟನೆ: ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್...

ಬಿ.ಎಸ್.ಪಿ ಶಾಸಕ ಎನ್ ಮಹೇಶ್ ಉಚ್ಚಾಟನೆ: ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್ ಉಲ್ಲಂಘನೆ ಆರೋಪ

- Advertisement -
- Advertisement -

ಕರ್ನಾಟಕದ ಕೊಳ್ಳೆಗಾಲದ ಬಿ.ಎಸ್.ಪಿ ಶಾಸಕ ಎನ್ ಮಹೇಶ್ ರವರನ್ನು ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಪಕ್ಷದ ನಾಯಕಿ ಮಾಯವತಿಯವರು ಟ್ವೀಟ್ ಮಾಡಿದ್ದಾರೆ.

ಅಷ್ಟೂ ದಿನ ಸದನದಲ್ಲಿ ಭಾಗವಹಿಸದೇ ಗೈರು ಹಾಜರಾಗಿದ್ದ ಅವರು ಪಕ್ಷದ ಸೂಚನೆಯನ್ನು ಮೀರಿದ್ದಾರೆ. ಹಾಗಾಗಿ ಕೂಡಲೇ ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಇನ್ನು ಈ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಪ್ರಗತಿಪರರು ಎನ್.ಮಹೇಶ್ ರವರ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಎನ್ ಮಹೇಶ್ ಅವರು ವಿಶ್ವಾಸ ಮತ ಯಾಚಿಸುವ ಅಧಿವೇಶನಕ್ಕೆ ಗೈರು ಉಳಿದರೇಕೆ? ಈ ಸರಕಾರವನ್ನು ಅವರು ರಕ್ಷಿಸಬೇಕಿರಲಿಲ್ಲ.. ಬಾಬಾ ಸಾಹೇಬರ ಸಂವಿಧಾನದ ಮೂಲಕ ಮೂರ್ತ ರೂಪ ಪಡೆದ ಪ್ರಜಾಪ್ರಭುತ್ವವನ್ನೇ ಪಕ್ಷಾಂತರದ ಮೂಲಕ ನಾಶ ಮಾಡುವ
ವ್ಯವಸ್ಥಿತ ಪ್ರಯತ್ನಗಳು ನಡೆದ ಈ ಸಂದರ್ಭದಲ್ಲಿ ಬಾಬಾ ಸಾಹೇಬರ ಪ್ರಜಾಪ್ರಭುತ್ವದ ಆಶಯಗಳನ್ನು ತಿಳಿಯಪಡಿಸುವ ಮಾತುಗಳನ್ನು ಆಡಲು ಈ ಅಧಿವೇಶನವನ್ನು ಬಳಿಸಿಕೊಳ್ಳಬಹುದಿತ್ತು. ಸರಕಾರದ ವೈಫಲ್ಯವನ್ನು ಎತ್ತಿ ತೋರಿಸಬಹುದಿತ್ತು. ಪ್ರಜಾಪ್ರಭುತ್ವವನ್ನೇ ಅಪೋಷನ್ ಮಾಡುತ್ತಿರುವ ಬಿಜೆಪಿಯ ಹುನ್ನಾರಗಳನ್ನು ಬಯಲು ಮಾಡಬಹುದಿತ್ತು. ಅಸೆಂಬ್ಲಿಯಲ್ಲಿ ಅಷ್ಟೆಲ್ಲ ಚರ್ಚೆ ನಡೆಯುತ್ತಿರುವಾಗ ಯಾವ ಮಹಾನ್ ಸಾಧನೆಗಾಗಿ ಇವರು ಗೈರಾದರೋ? ಗೈರಾಗುವ ಮೂಲಕ ಬಿಜೆಪಿಯನ್ನು ಇವರು ಈ ಪರಿ ಬೆಂಬಲಿಸಬಾರದಿತ್ತು. ಪರ್ಯಾಯ ನಾಯಕರಾಗಿ ಬೆಳೆಯಬಲ್ಲರೆಂಬ ನನ್ನ ಆಶಯಗಳಿಗೆ ಎಳ್ಳು ನೀರು ಬಿಟ್ಟು ಅವರ ಬಗೆಗಿನ ನನ್ನ ಕನಸುಗಳು ಕಮರಿವೆ. ಎಂದು ಬಸವರಾಜ ಸೂಳಿಬಾವಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಎನ್. ಮಹೇಶ್ ಬಂದು ಮೂರೂ ಪಕ್ಷಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಂದು, ಕಡೆಯವರೆಗೂ ಕಾದೆ.. ಕಡೆಗೂ ಅವರು ಗೈರು ಆದದ್ದು ಏಕೆಂದು ತಿಳಿಯಲೇಯಿಲ್ಲ..!? ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಮತ್ತು ಬಿ.ಎಸ್.ಪಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಿ.ಎಸ್ ದ್ವಾರಕನಾಥ್ ರವರು ಬರೆದಿದ್ದಾರೆ.

ಬಿ.ಜೆ.ಪಿ. ಹಾಗೆ, ಕಾಂಗ್ರಸ್ ಹೀಗೆ, ಸರಿ. ಬಿ.ಎಸ್.ಪಿ.ಯಾಕೆ ಹೀಗೆ? ಶಾಸಕ ಮಹೇಶ್ ಅವರ ಗೈರು ಹಾಜರಿ ಸಂಸದೀಯ ಬೇಜವಾಬ್ದಾರಿ ಅಲ್ಲವೇ? ನಿರ್ಣಾಯಕ ಸಂದರ್ಭದಲ್ಲಿ ಇವರು ಸದನಕ್ಕೆ ಹೋಗುವುದಿಲ್ಲ ಎಂದರೇನರ್ಥ? ಏನೇ ಅಭಿಪ್ರಾಯವಿದ್ದರೂ ಸದನಕ್ಕೆ ಹಾಜರಾಗಿ ತಮ್ಮ ವಿಚಾರವನ್ನು ಸದನದ ಮೂಲಕ ಜನರೆದುರು ಮಂಡಿಸಬೇಕಿತ್ತು. ಜನರೂ ಇವರಿಗೆ ಬೇಡವಾದರೆ? ಹಾಗಾದರೆ ಇವರು ಜನರಿಗೇಕೇ ಬೇಕು? ಸದನ ಬೇಡವಾದರೆ ಶಾಸಕತ್ವ ಏಕೆ ಬೇಕು? ಅವರೇ ನಿರ್ಧರಿಸಲಿ. ಇಬ್ಬಂದಿತನ ಖಂಡಿತ ಗೌರವಾರ್ಹವಲ್ಲ.

ಎನ್.ಮಹೇಶ್ ರಂತಹ ಹಿರಿಯರು ಪಕ್ಷದಿಂದ ಅಮಾನತ್ತಾಗುವುದು ನಿಜಕ್ಕೂ ದುಃಖಕರ. ಆದರೆ ಅವರ ತಪ್ಪು ನಡೆಯೇ ಇದಕ್ಕೆ ಕಾರಣವಾಯ್ತು. ಈ ಹಿನ್ನೆಲೆಯಲ್ಲಿ ಮಾಯಾವತಿಯವರ ತಕ್ಷಣದ ಕ್ರಮ ಸ್ವಾಗತಾರ್ಹ ಎಂದು ಬಿ ಪೀರ್ ಭಾಷಾರವರು ಪ್ರತಿಕ್ರಿಯಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...