Homeಕರ್ನಾಟಕಬಿ.ಎಸ್.ಪಿ ಶಾಸಕ ಎನ್ ಮಹೇಶ್ ಉಚ್ಚಾಟನೆ: ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್...

ಬಿ.ಎಸ್.ಪಿ ಶಾಸಕ ಎನ್ ಮಹೇಶ್ ಉಚ್ಚಾಟನೆ: ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್ ಉಲ್ಲಂಘನೆ ಆರೋಪ

- Advertisement -
- Advertisement -

ಕರ್ನಾಟಕದ ಕೊಳ್ಳೆಗಾಲದ ಬಿ.ಎಸ್.ಪಿ ಶಾಸಕ ಎನ್ ಮಹೇಶ್ ರವರನ್ನು ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಪಕ್ಷದ ನಾಯಕಿ ಮಾಯವತಿಯವರು ಟ್ವೀಟ್ ಮಾಡಿದ್ದಾರೆ.

ಅಷ್ಟೂ ದಿನ ಸದನದಲ್ಲಿ ಭಾಗವಹಿಸದೇ ಗೈರು ಹಾಜರಾಗಿದ್ದ ಅವರು ಪಕ್ಷದ ಸೂಚನೆಯನ್ನು ಮೀರಿದ್ದಾರೆ. ಹಾಗಾಗಿ ಕೂಡಲೇ ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಇನ್ನು ಈ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಪ್ರಗತಿಪರರು ಎನ್.ಮಹೇಶ್ ರವರ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಎನ್ ಮಹೇಶ್ ಅವರು ವಿಶ್ವಾಸ ಮತ ಯಾಚಿಸುವ ಅಧಿವೇಶನಕ್ಕೆ ಗೈರು ಉಳಿದರೇಕೆ? ಈ ಸರಕಾರವನ್ನು ಅವರು ರಕ್ಷಿಸಬೇಕಿರಲಿಲ್ಲ.. ಬಾಬಾ ಸಾಹೇಬರ ಸಂವಿಧಾನದ ಮೂಲಕ ಮೂರ್ತ ರೂಪ ಪಡೆದ ಪ್ರಜಾಪ್ರಭುತ್ವವನ್ನೇ ಪಕ್ಷಾಂತರದ ಮೂಲಕ ನಾಶ ಮಾಡುವ
ವ್ಯವಸ್ಥಿತ ಪ್ರಯತ್ನಗಳು ನಡೆದ ಈ ಸಂದರ್ಭದಲ್ಲಿ ಬಾಬಾ ಸಾಹೇಬರ ಪ್ರಜಾಪ್ರಭುತ್ವದ ಆಶಯಗಳನ್ನು ತಿಳಿಯಪಡಿಸುವ ಮಾತುಗಳನ್ನು ಆಡಲು ಈ ಅಧಿವೇಶನವನ್ನು ಬಳಿಸಿಕೊಳ್ಳಬಹುದಿತ್ತು. ಸರಕಾರದ ವೈಫಲ್ಯವನ್ನು ಎತ್ತಿ ತೋರಿಸಬಹುದಿತ್ತು. ಪ್ರಜಾಪ್ರಭುತ್ವವನ್ನೇ ಅಪೋಷನ್ ಮಾಡುತ್ತಿರುವ ಬಿಜೆಪಿಯ ಹುನ್ನಾರಗಳನ್ನು ಬಯಲು ಮಾಡಬಹುದಿತ್ತು. ಅಸೆಂಬ್ಲಿಯಲ್ಲಿ ಅಷ್ಟೆಲ್ಲ ಚರ್ಚೆ ನಡೆಯುತ್ತಿರುವಾಗ ಯಾವ ಮಹಾನ್ ಸಾಧನೆಗಾಗಿ ಇವರು ಗೈರಾದರೋ? ಗೈರಾಗುವ ಮೂಲಕ ಬಿಜೆಪಿಯನ್ನು ಇವರು ಈ ಪರಿ ಬೆಂಬಲಿಸಬಾರದಿತ್ತು. ಪರ್ಯಾಯ ನಾಯಕರಾಗಿ ಬೆಳೆಯಬಲ್ಲರೆಂಬ ನನ್ನ ಆಶಯಗಳಿಗೆ ಎಳ್ಳು ನೀರು ಬಿಟ್ಟು ಅವರ ಬಗೆಗಿನ ನನ್ನ ಕನಸುಗಳು ಕಮರಿವೆ. ಎಂದು ಬಸವರಾಜ ಸೂಳಿಬಾವಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಎನ್. ಮಹೇಶ್ ಬಂದು ಮೂರೂ ಪಕ್ಷಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಂದು, ಕಡೆಯವರೆಗೂ ಕಾದೆ.. ಕಡೆಗೂ ಅವರು ಗೈರು ಆದದ್ದು ಏಕೆಂದು ತಿಳಿಯಲೇಯಿಲ್ಲ..!? ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಮತ್ತು ಬಿ.ಎಸ್.ಪಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಿ.ಎಸ್ ದ್ವಾರಕನಾಥ್ ರವರು ಬರೆದಿದ್ದಾರೆ.

ಬಿ.ಜೆ.ಪಿ. ಹಾಗೆ, ಕಾಂಗ್ರಸ್ ಹೀಗೆ, ಸರಿ. ಬಿ.ಎಸ್.ಪಿ.ಯಾಕೆ ಹೀಗೆ? ಶಾಸಕ ಮಹೇಶ್ ಅವರ ಗೈರು ಹಾಜರಿ ಸಂಸದೀಯ ಬೇಜವಾಬ್ದಾರಿ ಅಲ್ಲವೇ? ನಿರ್ಣಾಯಕ ಸಂದರ್ಭದಲ್ಲಿ ಇವರು ಸದನಕ್ಕೆ ಹೋಗುವುದಿಲ್ಲ ಎಂದರೇನರ್ಥ? ಏನೇ ಅಭಿಪ್ರಾಯವಿದ್ದರೂ ಸದನಕ್ಕೆ ಹಾಜರಾಗಿ ತಮ್ಮ ವಿಚಾರವನ್ನು ಸದನದ ಮೂಲಕ ಜನರೆದುರು ಮಂಡಿಸಬೇಕಿತ್ತು. ಜನರೂ ಇವರಿಗೆ ಬೇಡವಾದರೆ? ಹಾಗಾದರೆ ಇವರು ಜನರಿಗೇಕೇ ಬೇಕು? ಸದನ ಬೇಡವಾದರೆ ಶಾಸಕತ್ವ ಏಕೆ ಬೇಕು? ಅವರೇ ನಿರ್ಧರಿಸಲಿ. ಇಬ್ಬಂದಿತನ ಖಂಡಿತ ಗೌರವಾರ್ಹವಲ್ಲ.

ಎನ್.ಮಹೇಶ್ ರಂತಹ ಹಿರಿಯರು ಪಕ್ಷದಿಂದ ಅಮಾನತ್ತಾಗುವುದು ನಿಜಕ್ಕೂ ದುಃಖಕರ. ಆದರೆ ಅವರ ತಪ್ಪು ನಡೆಯೇ ಇದಕ್ಕೆ ಕಾರಣವಾಯ್ತು. ಈ ಹಿನ್ನೆಲೆಯಲ್ಲಿ ಮಾಯಾವತಿಯವರ ತಕ್ಷಣದ ಕ್ರಮ ಸ್ವಾಗತಾರ್ಹ ಎಂದು ಬಿ ಪೀರ್ ಭಾಷಾರವರು ಪ್ರತಿಕ್ರಿಯಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...