Homeಕರ್ನಾಟಕಬಿ.ಎಸ್.ಪಿ ಶಾಸಕ ಎನ್ ಮಹೇಶ್ ಉಚ್ಚಾಟನೆ: ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್...

ಬಿ.ಎಸ್.ಪಿ ಶಾಸಕ ಎನ್ ಮಹೇಶ್ ಉಚ್ಚಾಟನೆ: ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್ ಉಲ್ಲಂಘನೆ ಆರೋಪ

- Advertisement -
- Advertisement -

ಕರ್ನಾಟಕದ ಕೊಳ್ಳೆಗಾಲದ ಬಿ.ಎಸ್.ಪಿ ಶಾಸಕ ಎನ್ ಮಹೇಶ್ ರವರನ್ನು ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಪಕ್ಷದ ನಾಯಕಿ ಮಾಯವತಿಯವರು ಟ್ವೀಟ್ ಮಾಡಿದ್ದಾರೆ.

ಅಷ್ಟೂ ದಿನ ಸದನದಲ್ಲಿ ಭಾಗವಹಿಸದೇ ಗೈರು ಹಾಜರಾಗಿದ್ದ ಅವರು ಪಕ್ಷದ ಸೂಚನೆಯನ್ನು ಮೀರಿದ್ದಾರೆ. ಹಾಗಾಗಿ ಕೂಡಲೇ ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಇನ್ನು ಈ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಪ್ರಗತಿಪರರು ಎನ್.ಮಹೇಶ್ ರವರ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಎನ್ ಮಹೇಶ್ ಅವರು ವಿಶ್ವಾಸ ಮತ ಯಾಚಿಸುವ ಅಧಿವೇಶನಕ್ಕೆ ಗೈರು ಉಳಿದರೇಕೆ? ಈ ಸರಕಾರವನ್ನು ಅವರು ರಕ್ಷಿಸಬೇಕಿರಲಿಲ್ಲ.. ಬಾಬಾ ಸಾಹೇಬರ ಸಂವಿಧಾನದ ಮೂಲಕ ಮೂರ್ತ ರೂಪ ಪಡೆದ ಪ್ರಜಾಪ್ರಭುತ್ವವನ್ನೇ ಪಕ್ಷಾಂತರದ ಮೂಲಕ ನಾಶ ಮಾಡುವ
ವ್ಯವಸ್ಥಿತ ಪ್ರಯತ್ನಗಳು ನಡೆದ ಈ ಸಂದರ್ಭದಲ್ಲಿ ಬಾಬಾ ಸಾಹೇಬರ ಪ್ರಜಾಪ್ರಭುತ್ವದ ಆಶಯಗಳನ್ನು ತಿಳಿಯಪಡಿಸುವ ಮಾತುಗಳನ್ನು ಆಡಲು ಈ ಅಧಿವೇಶನವನ್ನು ಬಳಿಸಿಕೊಳ್ಳಬಹುದಿತ್ತು. ಸರಕಾರದ ವೈಫಲ್ಯವನ್ನು ಎತ್ತಿ ತೋರಿಸಬಹುದಿತ್ತು. ಪ್ರಜಾಪ್ರಭುತ್ವವನ್ನೇ ಅಪೋಷನ್ ಮಾಡುತ್ತಿರುವ ಬಿಜೆಪಿಯ ಹುನ್ನಾರಗಳನ್ನು ಬಯಲು ಮಾಡಬಹುದಿತ್ತು. ಅಸೆಂಬ್ಲಿಯಲ್ಲಿ ಅಷ್ಟೆಲ್ಲ ಚರ್ಚೆ ನಡೆಯುತ್ತಿರುವಾಗ ಯಾವ ಮಹಾನ್ ಸಾಧನೆಗಾಗಿ ಇವರು ಗೈರಾದರೋ? ಗೈರಾಗುವ ಮೂಲಕ ಬಿಜೆಪಿಯನ್ನು ಇವರು ಈ ಪರಿ ಬೆಂಬಲಿಸಬಾರದಿತ್ತು. ಪರ್ಯಾಯ ನಾಯಕರಾಗಿ ಬೆಳೆಯಬಲ್ಲರೆಂಬ ನನ್ನ ಆಶಯಗಳಿಗೆ ಎಳ್ಳು ನೀರು ಬಿಟ್ಟು ಅವರ ಬಗೆಗಿನ ನನ್ನ ಕನಸುಗಳು ಕಮರಿವೆ. ಎಂದು ಬಸವರಾಜ ಸೂಳಿಬಾವಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಎನ್. ಮಹೇಶ್ ಬಂದು ಮೂರೂ ಪಕ್ಷಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಂದು, ಕಡೆಯವರೆಗೂ ಕಾದೆ.. ಕಡೆಗೂ ಅವರು ಗೈರು ಆದದ್ದು ಏಕೆಂದು ತಿಳಿಯಲೇಯಿಲ್ಲ..!? ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಮತ್ತು ಬಿ.ಎಸ್.ಪಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಿ.ಎಸ್ ದ್ವಾರಕನಾಥ್ ರವರು ಬರೆದಿದ್ದಾರೆ.

ಬಿ.ಜೆ.ಪಿ. ಹಾಗೆ, ಕಾಂಗ್ರಸ್ ಹೀಗೆ, ಸರಿ. ಬಿ.ಎಸ್.ಪಿ.ಯಾಕೆ ಹೀಗೆ? ಶಾಸಕ ಮಹೇಶ್ ಅವರ ಗೈರು ಹಾಜರಿ ಸಂಸದೀಯ ಬೇಜವಾಬ್ದಾರಿ ಅಲ್ಲವೇ? ನಿರ್ಣಾಯಕ ಸಂದರ್ಭದಲ್ಲಿ ಇವರು ಸದನಕ್ಕೆ ಹೋಗುವುದಿಲ್ಲ ಎಂದರೇನರ್ಥ? ಏನೇ ಅಭಿಪ್ರಾಯವಿದ್ದರೂ ಸದನಕ್ಕೆ ಹಾಜರಾಗಿ ತಮ್ಮ ವಿಚಾರವನ್ನು ಸದನದ ಮೂಲಕ ಜನರೆದುರು ಮಂಡಿಸಬೇಕಿತ್ತು. ಜನರೂ ಇವರಿಗೆ ಬೇಡವಾದರೆ? ಹಾಗಾದರೆ ಇವರು ಜನರಿಗೇಕೇ ಬೇಕು? ಸದನ ಬೇಡವಾದರೆ ಶಾಸಕತ್ವ ಏಕೆ ಬೇಕು? ಅವರೇ ನಿರ್ಧರಿಸಲಿ. ಇಬ್ಬಂದಿತನ ಖಂಡಿತ ಗೌರವಾರ್ಹವಲ್ಲ.

ಎನ್.ಮಹೇಶ್ ರಂತಹ ಹಿರಿಯರು ಪಕ್ಷದಿಂದ ಅಮಾನತ್ತಾಗುವುದು ನಿಜಕ್ಕೂ ದುಃಖಕರ. ಆದರೆ ಅವರ ತಪ್ಪು ನಡೆಯೇ ಇದಕ್ಕೆ ಕಾರಣವಾಯ್ತು. ಈ ಹಿನ್ನೆಲೆಯಲ್ಲಿ ಮಾಯಾವತಿಯವರ ತಕ್ಷಣದ ಕ್ರಮ ಸ್ವಾಗತಾರ್ಹ ಎಂದು ಬಿ ಪೀರ್ ಭಾಷಾರವರು ಪ್ರತಿಕ್ರಿಯಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...