Homeಕರ್ನಾಟಕಬಿ.ಎಸ್.ಪಿ ಶಾಸಕ ಎನ್ ಮಹೇಶ್ ಉಚ್ಚಾಟನೆ: ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್...

ಬಿ.ಎಸ್.ಪಿ ಶಾಸಕ ಎನ್ ಮಹೇಶ್ ಉಚ್ಚಾಟನೆ: ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್ ಉಲ್ಲಂಘನೆ ಆರೋಪ

- Advertisement -
- Advertisement -

ಕರ್ನಾಟಕದ ಕೊಳ್ಳೆಗಾಲದ ಬಿ.ಎಸ್.ಪಿ ಶಾಸಕ ಎನ್ ಮಹೇಶ್ ರವರನ್ನು ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಪಕ್ಷದ ನಾಯಕಿ ಮಾಯವತಿಯವರು ಟ್ವೀಟ್ ಮಾಡಿದ್ದಾರೆ.

ಅಷ್ಟೂ ದಿನ ಸದನದಲ್ಲಿ ಭಾಗವಹಿಸದೇ ಗೈರು ಹಾಜರಾಗಿದ್ದ ಅವರು ಪಕ್ಷದ ಸೂಚನೆಯನ್ನು ಮೀರಿದ್ದಾರೆ. ಹಾಗಾಗಿ ಕೂಡಲೇ ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಇನ್ನು ಈ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಪ್ರಗತಿಪರರು ಎನ್.ಮಹೇಶ್ ರವರ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಎನ್ ಮಹೇಶ್ ಅವರು ವಿಶ್ವಾಸ ಮತ ಯಾಚಿಸುವ ಅಧಿವೇಶನಕ್ಕೆ ಗೈರು ಉಳಿದರೇಕೆ? ಈ ಸರಕಾರವನ್ನು ಅವರು ರಕ್ಷಿಸಬೇಕಿರಲಿಲ್ಲ.. ಬಾಬಾ ಸಾಹೇಬರ ಸಂವಿಧಾನದ ಮೂಲಕ ಮೂರ್ತ ರೂಪ ಪಡೆದ ಪ್ರಜಾಪ್ರಭುತ್ವವನ್ನೇ ಪಕ್ಷಾಂತರದ ಮೂಲಕ ನಾಶ ಮಾಡುವ
ವ್ಯವಸ್ಥಿತ ಪ್ರಯತ್ನಗಳು ನಡೆದ ಈ ಸಂದರ್ಭದಲ್ಲಿ ಬಾಬಾ ಸಾಹೇಬರ ಪ್ರಜಾಪ್ರಭುತ್ವದ ಆಶಯಗಳನ್ನು ತಿಳಿಯಪಡಿಸುವ ಮಾತುಗಳನ್ನು ಆಡಲು ಈ ಅಧಿವೇಶನವನ್ನು ಬಳಿಸಿಕೊಳ್ಳಬಹುದಿತ್ತು. ಸರಕಾರದ ವೈಫಲ್ಯವನ್ನು ಎತ್ತಿ ತೋರಿಸಬಹುದಿತ್ತು. ಪ್ರಜಾಪ್ರಭುತ್ವವನ್ನೇ ಅಪೋಷನ್ ಮಾಡುತ್ತಿರುವ ಬಿಜೆಪಿಯ ಹುನ್ನಾರಗಳನ್ನು ಬಯಲು ಮಾಡಬಹುದಿತ್ತು. ಅಸೆಂಬ್ಲಿಯಲ್ಲಿ ಅಷ್ಟೆಲ್ಲ ಚರ್ಚೆ ನಡೆಯುತ್ತಿರುವಾಗ ಯಾವ ಮಹಾನ್ ಸಾಧನೆಗಾಗಿ ಇವರು ಗೈರಾದರೋ? ಗೈರಾಗುವ ಮೂಲಕ ಬಿಜೆಪಿಯನ್ನು ಇವರು ಈ ಪರಿ ಬೆಂಬಲಿಸಬಾರದಿತ್ತು. ಪರ್ಯಾಯ ನಾಯಕರಾಗಿ ಬೆಳೆಯಬಲ್ಲರೆಂಬ ನನ್ನ ಆಶಯಗಳಿಗೆ ಎಳ್ಳು ನೀರು ಬಿಟ್ಟು ಅವರ ಬಗೆಗಿನ ನನ್ನ ಕನಸುಗಳು ಕಮರಿವೆ. ಎಂದು ಬಸವರಾಜ ಸೂಳಿಬಾವಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಎನ್. ಮಹೇಶ್ ಬಂದು ಮೂರೂ ಪಕ್ಷಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಂದು, ಕಡೆಯವರೆಗೂ ಕಾದೆ.. ಕಡೆಗೂ ಅವರು ಗೈರು ಆದದ್ದು ಏಕೆಂದು ತಿಳಿಯಲೇಯಿಲ್ಲ..!? ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಮತ್ತು ಬಿ.ಎಸ್.ಪಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಿ.ಎಸ್ ದ್ವಾರಕನಾಥ್ ರವರು ಬರೆದಿದ್ದಾರೆ.

ಬಿ.ಜೆ.ಪಿ. ಹಾಗೆ, ಕಾಂಗ್ರಸ್ ಹೀಗೆ, ಸರಿ. ಬಿ.ಎಸ್.ಪಿ.ಯಾಕೆ ಹೀಗೆ? ಶಾಸಕ ಮಹೇಶ್ ಅವರ ಗೈರು ಹಾಜರಿ ಸಂಸದೀಯ ಬೇಜವಾಬ್ದಾರಿ ಅಲ್ಲವೇ? ನಿರ್ಣಾಯಕ ಸಂದರ್ಭದಲ್ಲಿ ಇವರು ಸದನಕ್ಕೆ ಹೋಗುವುದಿಲ್ಲ ಎಂದರೇನರ್ಥ? ಏನೇ ಅಭಿಪ್ರಾಯವಿದ್ದರೂ ಸದನಕ್ಕೆ ಹಾಜರಾಗಿ ತಮ್ಮ ವಿಚಾರವನ್ನು ಸದನದ ಮೂಲಕ ಜನರೆದುರು ಮಂಡಿಸಬೇಕಿತ್ತು. ಜನರೂ ಇವರಿಗೆ ಬೇಡವಾದರೆ? ಹಾಗಾದರೆ ಇವರು ಜನರಿಗೇಕೇ ಬೇಕು? ಸದನ ಬೇಡವಾದರೆ ಶಾಸಕತ್ವ ಏಕೆ ಬೇಕು? ಅವರೇ ನಿರ್ಧರಿಸಲಿ. ಇಬ್ಬಂದಿತನ ಖಂಡಿತ ಗೌರವಾರ್ಹವಲ್ಲ.

ಎನ್.ಮಹೇಶ್ ರಂತಹ ಹಿರಿಯರು ಪಕ್ಷದಿಂದ ಅಮಾನತ್ತಾಗುವುದು ನಿಜಕ್ಕೂ ದುಃಖಕರ. ಆದರೆ ಅವರ ತಪ್ಪು ನಡೆಯೇ ಇದಕ್ಕೆ ಕಾರಣವಾಯ್ತು. ಈ ಹಿನ್ನೆಲೆಯಲ್ಲಿ ಮಾಯಾವತಿಯವರ ತಕ್ಷಣದ ಕ್ರಮ ಸ್ವಾಗತಾರ್ಹ ಎಂದು ಬಿ ಪೀರ್ ಭಾಷಾರವರು ಪ್ರತಿಕ್ರಿಯಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...