Homeಕರ್ನಾಟಕಬಿ.ಎಸ್.ಪಿ ಶಾಸಕ ಎನ್ ಮಹೇಶ್ ಉಚ್ಚಾಟನೆ: ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್...

ಬಿ.ಎಸ್.ಪಿ ಶಾಸಕ ಎನ್ ಮಹೇಶ್ ಉಚ್ಚಾಟನೆ: ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್ ಉಲ್ಲಂಘನೆ ಆರೋಪ

- Advertisement -
- Advertisement -

ಕರ್ನಾಟಕದ ಕೊಳ್ಳೆಗಾಲದ ಬಿ.ಎಸ್.ಪಿ ಶಾಸಕ ಎನ್ ಮಹೇಶ್ ರವರನ್ನು ಮೈತ್ರಿ ಪರ ಮತ ಹಾಕುವಂತೆ ಪಕ್ಷ ನೀಡಿದ ವಿಪ್ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಪಕ್ಷದ ನಾಯಕಿ ಮಾಯವತಿಯವರು ಟ್ವೀಟ್ ಮಾಡಿದ್ದಾರೆ.

ಅಷ್ಟೂ ದಿನ ಸದನದಲ್ಲಿ ಭಾಗವಹಿಸದೇ ಗೈರು ಹಾಜರಾಗಿದ್ದ ಅವರು ಪಕ್ಷದ ಸೂಚನೆಯನ್ನು ಮೀರಿದ್ದಾರೆ. ಹಾಗಾಗಿ ಕೂಡಲೇ ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಇನ್ನು ಈ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಪ್ರಗತಿಪರರು ಎನ್.ಮಹೇಶ್ ರವರ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಎನ್ ಮಹೇಶ್ ಅವರು ವಿಶ್ವಾಸ ಮತ ಯಾಚಿಸುವ ಅಧಿವೇಶನಕ್ಕೆ ಗೈರು ಉಳಿದರೇಕೆ? ಈ ಸರಕಾರವನ್ನು ಅವರು ರಕ್ಷಿಸಬೇಕಿರಲಿಲ್ಲ.. ಬಾಬಾ ಸಾಹೇಬರ ಸಂವಿಧಾನದ ಮೂಲಕ ಮೂರ್ತ ರೂಪ ಪಡೆದ ಪ್ರಜಾಪ್ರಭುತ್ವವನ್ನೇ ಪಕ್ಷಾಂತರದ ಮೂಲಕ ನಾಶ ಮಾಡುವ
ವ್ಯವಸ್ಥಿತ ಪ್ರಯತ್ನಗಳು ನಡೆದ ಈ ಸಂದರ್ಭದಲ್ಲಿ ಬಾಬಾ ಸಾಹೇಬರ ಪ್ರಜಾಪ್ರಭುತ್ವದ ಆಶಯಗಳನ್ನು ತಿಳಿಯಪಡಿಸುವ ಮಾತುಗಳನ್ನು ಆಡಲು ಈ ಅಧಿವೇಶನವನ್ನು ಬಳಿಸಿಕೊಳ್ಳಬಹುದಿತ್ತು. ಸರಕಾರದ ವೈಫಲ್ಯವನ್ನು ಎತ್ತಿ ತೋರಿಸಬಹುದಿತ್ತು. ಪ್ರಜಾಪ್ರಭುತ್ವವನ್ನೇ ಅಪೋಷನ್ ಮಾಡುತ್ತಿರುವ ಬಿಜೆಪಿಯ ಹುನ್ನಾರಗಳನ್ನು ಬಯಲು ಮಾಡಬಹುದಿತ್ತು. ಅಸೆಂಬ್ಲಿಯಲ್ಲಿ ಅಷ್ಟೆಲ್ಲ ಚರ್ಚೆ ನಡೆಯುತ್ತಿರುವಾಗ ಯಾವ ಮಹಾನ್ ಸಾಧನೆಗಾಗಿ ಇವರು ಗೈರಾದರೋ? ಗೈರಾಗುವ ಮೂಲಕ ಬಿಜೆಪಿಯನ್ನು ಇವರು ಈ ಪರಿ ಬೆಂಬಲಿಸಬಾರದಿತ್ತು. ಪರ್ಯಾಯ ನಾಯಕರಾಗಿ ಬೆಳೆಯಬಲ್ಲರೆಂಬ ನನ್ನ ಆಶಯಗಳಿಗೆ ಎಳ್ಳು ನೀರು ಬಿಟ್ಟು ಅವರ ಬಗೆಗಿನ ನನ್ನ ಕನಸುಗಳು ಕಮರಿವೆ. ಎಂದು ಬಸವರಾಜ ಸೂಳಿಬಾವಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಎನ್. ಮಹೇಶ್ ಬಂದು ಮೂರೂ ಪಕ್ಷಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಂದು, ಕಡೆಯವರೆಗೂ ಕಾದೆ.. ಕಡೆಗೂ ಅವರು ಗೈರು ಆದದ್ದು ಏಕೆಂದು ತಿಳಿಯಲೇಯಿಲ್ಲ..!? ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಮತ್ತು ಬಿ.ಎಸ್.ಪಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಿ.ಎಸ್ ದ್ವಾರಕನಾಥ್ ರವರು ಬರೆದಿದ್ದಾರೆ.

ಬಿ.ಜೆ.ಪಿ. ಹಾಗೆ, ಕಾಂಗ್ರಸ್ ಹೀಗೆ, ಸರಿ. ಬಿ.ಎಸ್.ಪಿ.ಯಾಕೆ ಹೀಗೆ? ಶಾಸಕ ಮಹೇಶ್ ಅವರ ಗೈರು ಹಾಜರಿ ಸಂಸದೀಯ ಬೇಜವಾಬ್ದಾರಿ ಅಲ್ಲವೇ? ನಿರ್ಣಾಯಕ ಸಂದರ್ಭದಲ್ಲಿ ಇವರು ಸದನಕ್ಕೆ ಹೋಗುವುದಿಲ್ಲ ಎಂದರೇನರ್ಥ? ಏನೇ ಅಭಿಪ್ರಾಯವಿದ್ದರೂ ಸದನಕ್ಕೆ ಹಾಜರಾಗಿ ತಮ್ಮ ವಿಚಾರವನ್ನು ಸದನದ ಮೂಲಕ ಜನರೆದುರು ಮಂಡಿಸಬೇಕಿತ್ತು. ಜನರೂ ಇವರಿಗೆ ಬೇಡವಾದರೆ? ಹಾಗಾದರೆ ಇವರು ಜನರಿಗೇಕೇ ಬೇಕು? ಸದನ ಬೇಡವಾದರೆ ಶಾಸಕತ್ವ ಏಕೆ ಬೇಕು? ಅವರೇ ನಿರ್ಧರಿಸಲಿ. ಇಬ್ಬಂದಿತನ ಖಂಡಿತ ಗೌರವಾರ್ಹವಲ್ಲ.

ಎನ್.ಮಹೇಶ್ ರಂತಹ ಹಿರಿಯರು ಪಕ್ಷದಿಂದ ಅಮಾನತ್ತಾಗುವುದು ನಿಜಕ್ಕೂ ದುಃಖಕರ. ಆದರೆ ಅವರ ತಪ್ಪು ನಡೆಯೇ ಇದಕ್ಕೆ ಕಾರಣವಾಯ್ತು. ಈ ಹಿನ್ನೆಲೆಯಲ್ಲಿ ಮಾಯಾವತಿಯವರ ತಕ್ಷಣದ ಕ್ರಮ ಸ್ವಾಗತಾರ್ಹ ಎಂದು ಬಿ ಪೀರ್ ಭಾಷಾರವರು ಪ್ರತಿಕ್ರಿಯಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...