Homeಮುಖಪುಟಪಕ್ಷ ವಿರೋಧಿ ಚಟುವಟಿಕೆ: ಬಿಎಸ್ಪಿಯಿಂದ ಸಂಸದ ಡ್ಯಾನಿಶ್ ಅಲಿ ಅಮಾನತು

ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ಪಿಯಿಂದ ಸಂಸದ ಡ್ಯಾನಿಶ್ ಅಲಿ ಅಮಾನತು

- Advertisement -
- Advertisement -

ಕೆಲ ತಿಂಗಳ ಹಿಂದೆ ಸಂಸತ್ತಿನಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿಯಿಂದ ಅವಾಚ್ಯ ಶಬ್ದಗಳ ನಿಂದನೆ ಎದುರಿಸಿ ಸುದ್ದಿಯಾಗಿದ್ದ ಉತ್ತರ ಪ್ರದೇಶದ ಅಮ್ರೋಹ್ ಸಂಸದ ಡ್ಯಾನಿಶ್ ಅಲಿ ಅವರನ್ನು ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷದಿಂದ (ಬಿಎಸ್ಪಿ) ಅಮಾನತುಗೊಳಿಸಲಾಗಿದೆ.

“ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಕ್ಕಾಗಿ ಸಂಸದ ಡ್ಯಾನಿಶ್ ಅಲಿ ಅವರನ್ನು ಇಂದು(ನವೆಂಬರ್‌ 9,2023) ಪಕ್ಷದಿಂದ ಅಮಾನತುಗೊಳಿಸಲಾಗಿದೆ” ಎಂದು ಬಿಎಸ್ಪಿ ಪ್ರಕಟನೆಯಲ್ಲಿ ತಿಳಿಸಿದೆ.

“ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ನಿಮಗೆ ಮೊದಲೇ ಸೂಚನೆ ನೀಡಲಾಗಿತ್ತು. ನೀವು ಯಾವಾಗಲೂ ಪಕ್ಷದ ಮಾರ್ಗವನ್ನು ಅನುಸರಿಸುತ್ತೀರಿ ಎಂದು ಭರವಸೆ ನೀಡಿದ ದೇವೇಗೌಡರ ಒತ್ತಾಯದ ಮೇರೆಗೆ ನಿಮಗೆ ಪಕ್ಷದಿಂದ ಟಿಕೆಟ್ ನೀಡಲಾಗಿತ್ತು. ಆದರೆ, ಪಕ್ಷಕ್ಕೆ ಸೇರ್ಪಡೆಗೊಳ್ಳುವಾಗ ನೀಡಿದ ಭರವಸೆಗಳನ್ನು ನೀವು ಮರೆತಿದ್ದೀರಿ. ಹೀಗಾಗಿ ನಿಮ್ಮನ್ನು ಅಮಾನತು ಮಾಡಲಾಗುತ್ತಿದೆ” ಎಂದು ಡ್ಯಾನಿಶ್ ಅಲಿ ಅವರಿಗೆ ನೀಡಿದ ನೋಟಿಸ್‌ನಲ್ಲಿ ಬಿಎಸ್ಪಿ ಹೇಳಿದೆ. ಸಂಸದರ ಅಮಾನತಿಗೆ ಯಾವುದೇ ನಿರ್ದಿಷ್ಟ ಕಾರಣ ನೋಟಿಸ್‌ನಲ್ಲಿ ಉಲ್ಲೇಖಿಸಿಲ್ಲ” ಎಂದು ಹಿಂದುಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಬಿಜೆಪಿ ಸಂಸದ ರಮೇಶ್ ಬಿಧುರಿಯಿಂದ ಆಕ್ಷೇಪಾರ್ಹ ನಿಂದನೆ ಎದುರಿಸಿದ ಬಳಿಕ ಡ್ಯಾನಿಶ್ ಅಲಿ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ನಾಯಕರೊಂದಿಗೆ ಮಾತುಕತೆ ನಡೆಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ಹಲವರು ರಮೇಶ್ ಬಿಧುರಿ ಹೇಳಿಕೆಯನ್ನು ಖಂಡಿಸಿದ್ದರು. ಡ್ಯಾನಿಶ್ ಅಲಿ ಬೆನ್ನಿಗೆ ನಿಂತಿದ್ದರು.

ನಿನ್ನೆ (ಡಿ.8) ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಿದ ಬಳಿಕ ಪ್ರತಿಭಟಿಸಿದವರಲ್ಲಿ ಡ್ಯಾನಿಶ್ ಅಲಿ ಮುಂಚೂಣಿಯಲ್ಲಿದ್ದರು. ತಾನು ಸಂಸತ್‌ನಲ್ಲಿ ನಿಂದನೆ ಎದುರಿಸಿದ್ದಾಗ ಧ್ವನಿಯೆತ್ತಿದ್ದ ಮಹುವಾ ಅವರಿಗೆ ಬೆಂಬಲ ವ್ಯಕ್ತಪಡಿಸಿ ಡ್ಯಾನಿಶ್ ಅಲಿ ಸಂಸತ್ತಿನ ಮುಂದೆ ಪ್ರತಿಭಟಿಸಿದ್ದರು. ಆದರೆ, ಇಂದು ಅವರನ್ನೇ ಪಕ್ಷ ಅಮಾನತ್ತು ಮಾಡಿದೆ.

ಗಮನಾರ್ಹ ಸಂಗತಿಯೆಂದರೆ ಮಾಯಾವತಿ ನೇತೃತ್ವದ ಬಿಎಸ್ಪಿ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಈ ಎರಡೂ ಒಕ್ಕೂಟಗಳನ್ನು ಸೇರಿಲ್ಲ. ಡ್ಯಾನಿಶ್ ಅಲಿ ಇಂಡಿಯಾ ಒಕ್ಕೂಟದ ನಾಯಕರ ಜೊತೆ ಕಾಣಿಸಿಕೊಂಡಿದ್ದಕ್ಕೆ ಪಕ್ಷದಿಂದ ಮಾನತು ಮಾಡಿರಬಹುದಾ? ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ : ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಯಾಚಿಸಿದ ಬಿಜೆಪಿ ಸಂಸದ ರಮೇಶ್ ಬಿಧುರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...