Homeಮುಖಪುಟವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

- Advertisement -
- Advertisement -

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಗುರುವಾರ ಹೇಳಿದ್ದಾರೆ.

ತಮ್ಮ 70 ನೇ ಹುಟ್ಟುಹಬ್ಬದಂದು ಲಕ್ನೋದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಯಾವತಿ, ಎಲ್ಲಾ ಸಣ್ಣ ಮತ್ತು ದೊಡ್ಡ ಚುನಾವಣೆಗಳನ್ನು ಸ್ವತಂತ್ರವಾಗಿ ಎದುರಿಸುವುದು ಹೆಚ್ಚು ಸೂಕ್ತ. ಯಾವುದೇ ಪಕ್ಷದೊಂದಿಗೆ ಯಾವುದೇ ರೀತಿಯ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷ ನಿರ್ಧರಿಸಿದೆ ಎಂದು ಹೇಳಿದರು.

“ಈ ಬಗ್ಗೆ ಯಾವುದೇ ಗೊಂದಲ ಇರಬಾರದು. ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಉತ್ತರ ಪ್ರದೇಶದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ” ಎಂದು ಅವರು ಹೇಳಿದರು.

ಆದರೆ, ಭವಿಷ್ಯದಲ್ಲಿ, ಮೈತ್ರಿಕೂಟದ ಪಾಲುದಾರ ತನ್ನ ಮತಗಳನ್ನು; ವಿಶೇಷವಾಗಿ ಮೇಲ್ಜಾತಿಗಳ ಮತಗಳನ್ನು ಬಿಎಸ್‌ಪಿಗೆ ಪರಿಣಾಮಕಾರಿಯಾಗಿ ವರ್ಗಾಯಿಸಬಹುದು ಎಂದು ಪಕ್ಷಕ್ಕೆ ಸಂಪೂರ್ಣವಾಗಿ ಮನವರಿಕೆಯಾದರೆ, ಮೈತ್ರಿಕೂಟದಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಬಗ್ಗೆ ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳಬಹುದು. ಆದರೂ ಅಂತಹ ಪರಿಸ್ಥಿತಿ ಕಾರ್ಯರೂಪಕ್ಕೆ ಬರಲು ವರ್ಷಗಳು ಬೇಕಾಗುತ್ತದೆ ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ಜನರು 2027 ರಲ್ಲಿ ಬಿಎಸ್‌ಪಿಯನ್ನು ಮತ್ತೆ ಅಧಿಕಾರಕ್ಕೆ ತರುವತ್ತ ಒಲವು ತೋರಿದ್ದಾರೆ. ಎಂದು ಮಾಯಾವತಿ ಹೇಳಿದ್ದಾರೆ. ಪಕ್ಷದ ಹಿಂದಿನ ನಾಲ್ಕು ಅವಧಿಗಳನ್ನು ನೆನಪಿಸಿಕೊಂಡ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಬಿಎಸ್‌ಪಿ ಸರ್ಕಾರ ರಚನೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಪಕ್ಷದ ಕಾರ್ಯಕರ್ತರು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಬಿಜೆಪಿ, ಕಾಂಗ್ರೆಸ್ ಮತ್ತು ಇತರ ಜಾತಿ ಆಧಾರಿತ ಪಕ್ಷಗಳ ಮೇಲೆ ವಾಗ್ದಾಳಿ ಮಾಡಿದ ಅವರು, ಬಿಎಸ್‌ಪಿ ಅವರಿಗೆ ಸೂಕ್ತ ಉತ್ತರವನ್ನು ನೀಡುತ್ತದೆ, ಉತ್ತರ ಪ್ರದೇಶದಲ್ಲಿ ಪಕ್ಷದ ಐದನೇ ಸರ್ಕಾರವನ್ನು ರಚಿಸುತ್ತದೆ ಎಂದು ಹೇಳಿದರು.

ಎಲೆಕ್ಟ್ರಾನಿಕ್ ಮತದಾನ ಯಂತ್ರಗಳ (ಇವಿಎಂ) ಬಗ್ಗೆಯೂ ಬಿಎಸ್‌ಪಿ ಮುಖ್ಯಸ್ಥೆ ಕಳವಳ ವ್ಯಕ್ತಪಡಿಸಿದರು. ಹಿಂದಿನ ಚುನಾವಣೆಗಳಲ್ಲಿ ಮೋಸ ಮತ್ತು ಅಪ್ರಾಮಾಣಿಕತೆ ಸಂಭವಿಸಿದೆ ಎಂದು ಆರೋಪಿಸಿದರು. ಆದರೆ ತಮ್ಮ ಪಕ್ಷವು ದೇಶಾದ್ಯಂತ ಚುನಾವಣೆಗಳಲ್ಲಿ ಪೂರ್ಣ ಬಲದಿಂದ ಸ್ಪರ್ಧಿಸುವುದನ್ನು ಮುಂದುವರಿಸುತ್ತದೆ ಎಂದು ಪ್ರತಿಪಾದಿಸಿದರು. ಇವಿಎಂಗಳಿಗೆ ದೇಶಾದ್ಯಂತ ವಿರೋಧ ಬೆಳೆಯುತ್ತಿದೆ ಎಂದು ಅವರು ಹೇಳಿದರು.

ಬಿಎಸ್‌ಪಿ ಸಂಸ್ಥಾಪಕ ಕಾನ್ಶಿ ರಾಮ್ ಅವರನ್ನು ಹಿಂದಿನ ಸರ್ಕಾರಗಳು ನಿರ್ಲಕ್ಷಿಸಿವೆ ಎಂದು ಮಾಯಾವತಿ ಆರೋಪಿಸಿದರು. ಅವರ ಮರಣದ ನಂತರ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿಲ್ಲ ಎಂದು ಆರೋಪಿಸಿದರು.

ಬಿಎಸ್‌ಪಿ ಆಳ್ವಿಕೆಯಲ್ಲಿ ಯಾವುದೇ ಕೋಮು ಗಲಭೆಗಳು ಸಂಭವಿಸಿಲ್ಲ. ಯಾದವರು ಸೇರಿದಂತೆ ಎಲ್ಲಾ ವರ್ಗಗಳನ್ನು ನೋಡಿಕೊಳ್ಳಲಾಗಿದೆ ಎಂದು ಪ್ರತಿಪಾದಿಸುತ್ತಾ ಅವರು, ಮುಸ್ಲಿಮರು ಮತ್ತು ಇತರ ಸಮುದಾಯಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಇದಕ್ಕೂ ಮುನ್ನ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮಾಯಾವತಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಆದಿತ್ಯನಾಥ್, ಮಾಯಾವತಿ ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಹಾರೈಸಿದರು. ಅಖಿಲೇಶ್ ಯಾದವ್ ಅವರು, ದಮನಿತರು ಮತ್ತು ಅಂಚಿನಲ್ಲಿರುವವರ ಹಕ್ಕುಗಳು ಮತ್ತು ಘನತೆಗಾಗಿ ಮಾಯಾವತಿ ಅವರ ಜೀವಮಾನದ ಹೋರಾಟವನ್ನು ಶ್ಲಾಘಿಸಿದರು.

ಮಾಯಾವತಿ ಗುರುವಾರ 70 ನೇ ವರ್ಷಕ್ಕೆ ಕಾಲಿಟ್ಟರು, ಬಿಎಸ್‌ಪಿ ಉತ್ತರ ಪ್ರದೇಶದಾದ್ಯಂತ ‘ಜನ ಕಲ್ಯಾಣಕಾರಿ ದಿವಸ್’ ಎಂದು ಆಚರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...