Homeಕರ್ನಾಟಕಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ ಎಂದ ಬಿಎಸ್‌ವೈ; ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದು ಯಾಕೆ?-ಶೆಟ್ಟರ್ ತಿರುಗೇಟು

ಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ ಎಂದ ಬಿಎಸ್‌ವೈ; ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದು ಯಾಕೆ?-ಶೆಟ್ಟರ್ ತಿರುಗೇಟು

- Advertisement -
- Advertisement -

”ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ನನ್ನ ಪರವಾಗಿ ಮಾತನಾಡಿದ್ದರು. ಆದರೆ, ಈಗ ಅವರು ನಾನು ಪಕ್ಷ ತೊರೆದಿರುವ ಬಗ್ಗೆ ಅಕ್ಷಮ್ಯ ಅಪರಾಧ ಎಂದು ಹೇಳಿಕೆ ನೀಡುತ್ತಿದ್ದಾರೆ. ಪಕ್ಷ ಬಿಡುವುದು ಅಪರಾಧ ಎನ್ನುವುದಾದರೆ, ಯಡಿಯೂರಪ್ಪ ಅವರು ಬಿಜೆಪಿ ತೊರೆದು ಕೆಜೆಪಿ ಪಕ್ಷ ಕಟ್ಟಿದ್ದು ಯಾಕೆ? ಆಗ ಅವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಿರಲಿಲ್ಲವೇ?” ಎಂದು ಪ್ರಶ್ನೆ ಮಾಡುವ ಮೂಲಕ ಬಿಎಸ್‌ವೈಗೆ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜೀನಾಮೆ ನೀಡಿ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡು ಸ್ಪರ್ಧೆ ಮಾಡುವುದು ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡುವ ಕುರಿತು ನಾನು ಹುಬ್ಬಳ್ಳಿಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

”ನನಗೆ ಪಕ್ಷ ಎಲ್ಲ ಸ್ಥಾನಮಾನವನ್ನು ಕೊಟ್ಟರೂ ನಾನು ಪಕ್ಷ ತೊರೆಯುತ್ತಿರುವುದರ ಬಗ್ಗೆ ಯಡಿಯೂರಪ್ಪ ಅವರು ಈ ಮಾತನಾಡುತ್ತಿದ್ದಾರೆ. ಹಾಗಾದರೆ ಈ ಹಿಂದೆ ಬಿ.ಎಸ್.‌ ಯಡಿಯೂರಪ್ಪ ಅವರಿಗೂ ಪಕ್ಷ ಸೂಕ್ತ ಸ್ಥಾನಮಾನವನ್ನು ಕೊಟ್ಟಿತ್ತು. ಆದರೆ, ಅವರು ಯಾಕೆ ಬಿಜೆಪಿ ಬಿಟ್ಟು ಕೆಜೆಪಿಯನ್ನು ಕಟ್ಟಿದರು?” ಎಂದು ಪ್ರಶ್ನೆ ಮಾಡಿದರು.

”ನಾನು ಈ ಹಿಂದೆ ನಿರ್ಧಾರ ಮಾಡಿದಂತೆ ರಾಜೀನಾಮೆ ನೀಡುತ್ತಿದ್ದೇನೆ. ಬಿಜೆಪಿ ನಾಯಕರು ಶನಿವಾರ (ಏ. 15) ನನ್ನನ್ನು ಸಂಪರ್ಕ ಮಾಡಿದ್ದರು. ಆದರೆ, ಅವರು ನನ್ನ ಬೇಡಿಕೆಯನ್ನು ಈಡೇರಿಸುವ ಕೆಲವನ್ನು ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ಭಾನುವಾರ ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಶೆಟ್ಟರ್ ಸ್ಪಷ್ಟಪಡಿಸಿದರು.

”ನನಗೆ ಯಾವ ದೊಡ್ಡ ಹುದ್ದೆ ಬೇಡ. ನನಗೆ ಶಾಸಕನಾಗಿ ಕೆಲಸ ಮಾಡುವ ಅವಕಾಶ ಕೊಟ್ಟರೆ ಸಾಕಿತ್ತು. ಪಕ್ಷಕ್ಕೆ ಸಹಕಾರ ಕೊಟ್ಟು ಸಂಘಟನೆ ಮಾಡಿದ್ದೇನೆ. ನನಗೆ ಯಾವುದೇ ಮುನ್ಸೂಚನೆ ಇಲ್ಲದೆ ಈ ರೀತಿ ಮಾಡಿರೋದು ಬೇಸರ ತರಿಸಿದೆ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಬೆಳವಣಿಗೆಗೆ ಅವಕಾಶ ಮಾಡಿಕೊಟ್ಟಿದೆ. ಮೂಲವಾಗಿ ಬಿಜೆಪಿಯಲ್ಲಿದ್ದೋರನ್ನು ಹೊರಗಡೆ ಹಾಕಲಾಗುತ್ತಿದೆ. ಇದು ಮಾನಸಿಕವಾಗಿ ಬೇಸರ ತರಿಸಿದೆ” ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಕೊನೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ

ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ನನಗೆ ಯಾವ ಕಾಂಗ್ರೆಸ್ ನಾಯಕರೂ ಕರೆ ಮಾಡಿಲ್ಲ. ನಾನು ಹುಬ್ಬಳ್ಳಿಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇನೆ. ಅಲ್ಲಿಗೆ ಹೋದ ಮೇಲೆ ಹೇಳುತ್ತೇನೆ” ಎಂದು ಶಿರಸಿಯಲ್ಲಿ ಶೆಟ್ಟರ್‌ ಪ್ರತಿಕ್ರಿಯೆ ನೀಡಿದರು.

ಬಿಎಸ್ ಯಡಿಯೂರಪ್ಪ ಹೇಳಿದ್ದೇನು?

”ಭಾರತೀಯ ಜನತಾ ಪಕ್ಷವು ಎಲ್ಲವನ್ನೂ ನೀಡಿದ್ದರೂ ಆ ಋಣವನ್ನು ತೀರಿಸದೆ ಇದೀಗ ಕಾಂಗ್ರೆಸ್‌ಗೆ ಹೊರಟಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ” ಎಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಕಿಡಿಕಾರಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ”ಈ ಪಕ್ಷವು ನನಗೆ, ಶೆಟ್ಟರ್‌ ಅವರಿಗೆ, ಲಕ್ಷ್ಮಣ ಸವದಿ ಅವರಿಗೆ ಹಾಗೂ ಈಶ್ವರಪ್ಪ ಅವರಿಗೆ ಅನೇಕ ಅವಕಾಶ ನೀಡಿದೆ. ನನ್ನಂತಹ ಸಾಮಾನ್ಯ ಕಾರ್ಯಕರ್ತ ರಾಜ್ಯದ ಎಲ್ಲೇ ಹೋದರೂ ವಿಶ್ವಾಸ ಗಳಿಸಲು ಬಿಜೆಪಿಯೇ ಕಾರಣ ಎನ್ನುವುದನ್ನು ನಾನು ಮರೆತಿಲ್ಲ” ಎಂದು ಹೇಳಿದರು.

”ಜಗದೀಶ ಶೆಟ್ಟರ್‌ ಜನಸಂಘದ ಕಾಲದಿಂದ ಬಿಜೆಪಿಯಲ್ಲಿರುವವರು. ವಿರೋಧ ಪಕ್ಷದ ನಾಯಕ, ಮಂತ್ರಿ ಜತೆಗೆ ಮುಖ್ಯಮಂತ್ರಿಯನ್ನಾಗಿಯೂ ಮಾಡಲಾಯಿತು. ಬಿಬಿ ಶಿವಪ್ಪ ಅವರನ್ನು ಎದುರು ಹಾಕಿಕೊಂಡು, ಒಬ್ಬ ಯುವಕ ಬೆಳೆಯಬೇಕು ಎಂಬ ಕಾರಣಕ್ಕೆ ಜಗದೀಶ ಶೆಟ್ಟರ್‌ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಾಯಿತು” ಎಂದರು.

”ನಾನು ಹಾಗೂ ಅನಂತಕುಮಾರ್‌, ಅವರ ಬೆನ್ನಿಗೆ ನಿಂತಿದ್ದೆವು. ನಾವೇ ಅವರನ್ನು ಮುಖ್ಯಮಂತ್ರಿಯನ್ನಾಗಿಯೂ ಮಾಡಿದ್ದೆವು. ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಮುನ್ನಡೆಯುತ್ತಿರುವ ಸಮಯದಲ್ಲಿ ನಾವು ಅವರೊಂದಿಗೆ ಹೆಜ್ಜೆ ಹಾಕಬೇಕಾಗಿತ್ತು. ಜಗದೀಶ ಶೆಟ್ಟರ್‌ ಅವರ ಹೇಳಿಕೆ ಹಾಗೂ ಅವರ ನಿರ್ಧಾರ, ಅವರು ನಂಬಿಕೊಂಡಿರುವ ವಿಚಾರಕ್ಕೆ ತದ್ವಿರುದ್ಧವಾಗಿದೆ. ಸ್ಥಾನಮಾನ ಸಿಗಲಿ, ಸಿಗದೇ ಇರಲಿ ದೇಶಕ್ಕಾಗಿ ಕೆಲಸ ಮಾಡುವಂತಹದ್ದು ನಾವು ನಡೆದುಕೊಂಡುಬಂದಿರುವ ದಾರಿ. ಜಗದೀಶ್‌ ಶೆಟ್ಟರ್‌ ಅವರನ್ನು ರಾಜ್ಯದ ಜನತೆ ಗುರುತು ಮಾಡಿದ್ದು ಭಾರತೀಯ ಜನತಾ ಪಾರ್ಟಿ ಮೂಲಕ. ಪಕ್ಷವಿಲ್ಲದೆ ವ್ಯಕ್ತಿ ಎತ್ತರಕ್ಕೆ ಬೆಳೆಯಲು ಸಾಧ್ಯವಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...