Homeಕರ್ನಾಟಕಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ ಎಂದ ಬಿಎಸ್‌ವೈ; ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದು ಯಾಕೆ?-ಶೆಟ್ಟರ್ ತಿರುಗೇಟು

ಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ ಎಂದ ಬಿಎಸ್‌ವೈ; ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದು ಯಾಕೆ?-ಶೆಟ್ಟರ್ ತಿರುಗೇಟು

- Advertisement -
- Advertisement -

”ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ನನ್ನ ಪರವಾಗಿ ಮಾತನಾಡಿದ್ದರು. ಆದರೆ, ಈಗ ಅವರು ನಾನು ಪಕ್ಷ ತೊರೆದಿರುವ ಬಗ್ಗೆ ಅಕ್ಷಮ್ಯ ಅಪರಾಧ ಎಂದು ಹೇಳಿಕೆ ನೀಡುತ್ತಿದ್ದಾರೆ. ಪಕ್ಷ ಬಿಡುವುದು ಅಪರಾಧ ಎನ್ನುವುದಾದರೆ, ಯಡಿಯೂರಪ್ಪ ಅವರು ಬಿಜೆಪಿ ತೊರೆದು ಕೆಜೆಪಿ ಪಕ್ಷ ಕಟ್ಟಿದ್ದು ಯಾಕೆ? ಆಗ ಅವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಿರಲಿಲ್ಲವೇ?” ಎಂದು ಪ್ರಶ್ನೆ ಮಾಡುವ ಮೂಲಕ ಬಿಎಸ್‌ವೈಗೆ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜೀನಾಮೆ ನೀಡಿ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡು ಸ್ಪರ್ಧೆ ಮಾಡುವುದು ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡುವ ಕುರಿತು ನಾನು ಹುಬ್ಬಳ್ಳಿಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

”ನನಗೆ ಪಕ್ಷ ಎಲ್ಲ ಸ್ಥಾನಮಾನವನ್ನು ಕೊಟ್ಟರೂ ನಾನು ಪಕ್ಷ ತೊರೆಯುತ್ತಿರುವುದರ ಬಗ್ಗೆ ಯಡಿಯೂರಪ್ಪ ಅವರು ಈ ಮಾತನಾಡುತ್ತಿದ್ದಾರೆ. ಹಾಗಾದರೆ ಈ ಹಿಂದೆ ಬಿ.ಎಸ್.‌ ಯಡಿಯೂರಪ್ಪ ಅವರಿಗೂ ಪಕ್ಷ ಸೂಕ್ತ ಸ್ಥಾನಮಾನವನ್ನು ಕೊಟ್ಟಿತ್ತು. ಆದರೆ, ಅವರು ಯಾಕೆ ಬಿಜೆಪಿ ಬಿಟ್ಟು ಕೆಜೆಪಿಯನ್ನು ಕಟ್ಟಿದರು?” ಎಂದು ಪ್ರಶ್ನೆ ಮಾಡಿದರು.

”ನಾನು ಈ ಹಿಂದೆ ನಿರ್ಧಾರ ಮಾಡಿದಂತೆ ರಾಜೀನಾಮೆ ನೀಡುತ್ತಿದ್ದೇನೆ. ಬಿಜೆಪಿ ನಾಯಕರು ಶನಿವಾರ (ಏ. 15) ನನ್ನನ್ನು ಸಂಪರ್ಕ ಮಾಡಿದ್ದರು. ಆದರೆ, ಅವರು ನನ್ನ ಬೇಡಿಕೆಯನ್ನು ಈಡೇರಿಸುವ ಕೆಲವನ್ನು ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ಭಾನುವಾರ ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಶೆಟ್ಟರ್ ಸ್ಪಷ್ಟಪಡಿಸಿದರು.

”ನನಗೆ ಯಾವ ದೊಡ್ಡ ಹುದ್ದೆ ಬೇಡ. ನನಗೆ ಶಾಸಕನಾಗಿ ಕೆಲಸ ಮಾಡುವ ಅವಕಾಶ ಕೊಟ್ಟರೆ ಸಾಕಿತ್ತು. ಪಕ್ಷಕ್ಕೆ ಸಹಕಾರ ಕೊಟ್ಟು ಸಂಘಟನೆ ಮಾಡಿದ್ದೇನೆ. ನನಗೆ ಯಾವುದೇ ಮುನ್ಸೂಚನೆ ಇಲ್ಲದೆ ಈ ರೀತಿ ಮಾಡಿರೋದು ಬೇಸರ ತರಿಸಿದೆ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಬೆಳವಣಿಗೆಗೆ ಅವಕಾಶ ಮಾಡಿಕೊಟ್ಟಿದೆ. ಮೂಲವಾಗಿ ಬಿಜೆಪಿಯಲ್ಲಿದ್ದೋರನ್ನು ಹೊರಗಡೆ ಹಾಕಲಾಗುತ್ತಿದೆ. ಇದು ಮಾನಸಿಕವಾಗಿ ಬೇಸರ ತರಿಸಿದೆ” ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಕೊನೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ

ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ನನಗೆ ಯಾವ ಕಾಂಗ್ರೆಸ್ ನಾಯಕರೂ ಕರೆ ಮಾಡಿಲ್ಲ. ನಾನು ಹುಬ್ಬಳ್ಳಿಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇನೆ. ಅಲ್ಲಿಗೆ ಹೋದ ಮೇಲೆ ಹೇಳುತ್ತೇನೆ” ಎಂದು ಶಿರಸಿಯಲ್ಲಿ ಶೆಟ್ಟರ್‌ ಪ್ರತಿಕ್ರಿಯೆ ನೀಡಿದರು.

ಬಿಎಸ್ ಯಡಿಯೂರಪ್ಪ ಹೇಳಿದ್ದೇನು?

”ಭಾರತೀಯ ಜನತಾ ಪಕ್ಷವು ಎಲ್ಲವನ್ನೂ ನೀಡಿದ್ದರೂ ಆ ಋಣವನ್ನು ತೀರಿಸದೆ ಇದೀಗ ಕಾಂಗ್ರೆಸ್‌ಗೆ ಹೊರಟಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ” ಎಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಕಿಡಿಕಾರಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ”ಈ ಪಕ್ಷವು ನನಗೆ, ಶೆಟ್ಟರ್‌ ಅವರಿಗೆ, ಲಕ್ಷ್ಮಣ ಸವದಿ ಅವರಿಗೆ ಹಾಗೂ ಈಶ್ವರಪ್ಪ ಅವರಿಗೆ ಅನೇಕ ಅವಕಾಶ ನೀಡಿದೆ. ನನ್ನಂತಹ ಸಾಮಾನ್ಯ ಕಾರ್ಯಕರ್ತ ರಾಜ್ಯದ ಎಲ್ಲೇ ಹೋದರೂ ವಿಶ್ವಾಸ ಗಳಿಸಲು ಬಿಜೆಪಿಯೇ ಕಾರಣ ಎನ್ನುವುದನ್ನು ನಾನು ಮರೆತಿಲ್ಲ” ಎಂದು ಹೇಳಿದರು.

”ಜಗದೀಶ ಶೆಟ್ಟರ್‌ ಜನಸಂಘದ ಕಾಲದಿಂದ ಬಿಜೆಪಿಯಲ್ಲಿರುವವರು. ವಿರೋಧ ಪಕ್ಷದ ನಾಯಕ, ಮಂತ್ರಿ ಜತೆಗೆ ಮುಖ್ಯಮಂತ್ರಿಯನ್ನಾಗಿಯೂ ಮಾಡಲಾಯಿತು. ಬಿಬಿ ಶಿವಪ್ಪ ಅವರನ್ನು ಎದುರು ಹಾಕಿಕೊಂಡು, ಒಬ್ಬ ಯುವಕ ಬೆಳೆಯಬೇಕು ಎಂಬ ಕಾರಣಕ್ಕೆ ಜಗದೀಶ ಶೆಟ್ಟರ್‌ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಾಯಿತು” ಎಂದರು.

”ನಾನು ಹಾಗೂ ಅನಂತಕುಮಾರ್‌, ಅವರ ಬೆನ್ನಿಗೆ ನಿಂತಿದ್ದೆವು. ನಾವೇ ಅವರನ್ನು ಮುಖ್ಯಮಂತ್ರಿಯನ್ನಾಗಿಯೂ ಮಾಡಿದ್ದೆವು. ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಮುನ್ನಡೆಯುತ್ತಿರುವ ಸಮಯದಲ್ಲಿ ನಾವು ಅವರೊಂದಿಗೆ ಹೆಜ್ಜೆ ಹಾಕಬೇಕಾಗಿತ್ತು. ಜಗದೀಶ ಶೆಟ್ಟರ್‌ ಅವರ ಹೇಳಿಕೆ ಹಾಗೂ ಅವರ ನಿರ್ಧಾರ, ಅವರು ನಂಬಿಕೊಂಡಿರುವ ವಿಚಾರಕ್ಕೆ ತದ್ವಿರುದ್ಧವಾಗಿದೆ. ಸ್ಥಾನಮಾನ ಸಿಗಲಿ, ಸಿಗದೇ ಇರಲಿ ದೇಶಕ್ಕಾಗಿ ಕೆಲಸ ಮಾಡುವಂತಹದ್ದು ನಾವು ನಡೆದುಕೊಂಡುಬಂದಿರುವ ದಾರಿ. ಜಗದೀಶ್‌ ಶೆಟ್ಟರ್‌ ಅವರನ್ನು ರಾಜ್ಯದ ಜನತೆ ಗುರುತು ಮಾಡಿದ್ದು ಭಾರತೀಯ ಜನತಾ ಪಾರ್ಟಿ ಮೂಲಕ. ಪಕ್ಷವಿಲ್ಲದೆ ವ್ಯಕ್ತಿ ಎತ್ತರಕ್ಕೆ ಬೆಳೆಯಲು ಸಾಧ್ಯವಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...