Homeಕರ್ನಾಟಕಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ ಎಂದ ಬಿಎಸ್‌ವೈ; ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದು ಯಾಕೆ?-ಶೆಟ್ಟರ್ ತಿರುಗೇಟು

ಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ ಎಂದ ಬಿಎಸ್‌ವೈ; ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದು ಯಾಕೆ?-ಶೆಟ್ಟರ್ ತಿರುಗೇಟು

- Advertisement -
- Advertisement -

”ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ನನ್ನ ಪರವಾಗಿ ಮಾತನಾಡಿದ್ದರು. ಆದರೆ, ಈಗ ಅವರು ನಾನು ಪಕ್ಷ ತೊರೆದಿರುವ ಬಗ್ಗೆ ಅಕ್ಷಮ್ಯ ಅಪರಾಧ ಎಂದು ಹೇಳಿಕೆ ನೀಡುತ್ತಿದ್ದಾರೆ. ಪಕ್ಷ ಬಿಡುವುದು ಅಪರಾಧ ಎನ್ನುವುದಾದರೆ, ಯಡಿಯೂರಪ್ಪ ಅವರು ಬಿಜೆಪಿ ತೊರೆದು ಕೆಜೆಪಿ ಪಕ್ಷ ಕಟ್ಟಿದ್ದು ಯಾಕೆ? ಆಗ ಅವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಿರಲಿಲ್ಲವೇ?” ಎಂದು ಪ್ರಶ್ನೆ ಮಾಡುವ ಮೂಲಕ ಬಿಎಸ್‌ವೈಗೆ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜೀನಾಮೆ ನೀಡಿ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡು ಸ್ಪರ್ಧೆ ಮಾಡುವುದು ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡುವ ಕುರಿತು ನಾನು ಹುಬ್ಬಳ್ಳಿಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

”ನನಗೆ ಪಕ್ಷ ಎಲ್ಲ ಸ್ಥಾನಮಾನವನ್ನು ಕೊಟ್ಟರೂ ನಾನು ಪಕ್ಷ ತೊರೆಯುತ್ತಿರುವುದರ ಬಗ್ಗೆ ಯಡಿಯೂರಪ್ಪ ಅವರು ಈ ಮಾತನಾಡುತ್ತಿದ್ದಾರೆ. ಹಾಗಾದರೆ ಈ ಹಿಂದೆ ಬಿ.ಎಸ್.‌ ಯಡಿಯೂರಪ್ಪ ಅವರಿಗೂ ಪಕ್ಷ ಸೂಕ್ತ ಸ್ಥಾನಮಾನವನ್ನು ಕೊಟ್ಟಿತ್ತು. ಆದರೆ, ಅವರು ಯಾಕೆ ಬಿಜೆಪಿ ಬಿಟ್ಟು ಕೆಜೆಪಿಯನ್ನು ಕಟ್ಟಿದರು?” ಎಂದು ಪ್ರಶ್ನೆ ಮಾಡಿದರು.

”ನಾನು ಈ ಹಿಂದೆ ನಿರ್ಧಾರ ಮಾಡಿದಂತೆ ರಾಜೀನಾಮೆ ನೀಡುತ್ತಿದ್ದೇನೆ. ಬಿಜೆಪಿ ನಾಯಕರು ಶನಿವಾರ (ಏ. 15) ನನ್ನನ್ನು ಸಂಪರ್ಕ ಮಾಡಿದ್ದರು. ಆದರೆ, ಅವರು ನನ್ನ ಬೇಡಿಕೆಯನ್ನು ಈಡೇರಿಸುವ ಕೆಲವನ್ನು ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ಭಾನುವಾರ ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಶೆಟ್ಟರ್ ಸ್ಪಷ್ಟಪಡಿಸಿದರು.

”ನನಗೆ ಯಾವ ದೊಡ್ಡ ಹುದ್ದೆ ಬೇಡ. ನನಗೆ ಶಾಸಕನಾಗಿ ಕೆಲಸ ಮಾಡುವ ಅವಕಾಶ ಕೊಟ್ಟರೆ ಸಾಕಿತ್ತು. ಪಕ್ಷಕ್ಕೆ ಸಹಕಾರ ಕೊಟ್ಟು ಸಂಘಟನೆ ಮಾಡಿದ್ದೇನೆ. ನನಗೆ ಯಾವುದೇ ಮುನ್ಸೂಚನೆ ಇಲ್ಲದೆ ಈ ರೀತಿ ಮಾಡಿರೋದು ಬೇಸರ ತರಿಸಿದೆ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಬೆಳವಣಿಗೆಗೆ ಅವಕಾಶ ಮಾಡಿಕೊಟ್ಟಿದೆ. ಮೂಲವಾಗಿ ಬಿಜೆಪಿಯಲ್ಲಿದ್ದೋರನ್ನು ಹೊರಗಡೆ ಹಾಕಲಾಗುತ್ತಿದೆ. ಇದು ಮಾನಸಿಕವಾಗಿ ಬೇಸರ ತರಿಸಿದೆ” ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಕೊನೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ

ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ನನಗೆ ಯಾವ ಕಾಂಗ್ರೆಸ್ ನಾಯಕರೂ ಕರೆ ಮಾಡಿಲ್ಲ. ನಾನು ಹುಬ್ಬಳ್ಳಿಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇನೆ. ಅಲ್ಲಿಗೆ ಹೋದ ಮೇಲೆ ಹೇಳುತ್ತೇನೆ” ಎಂದು ಶಿರಸಿಯಲ್ಲಿ ಶೆಟ್ಟರ್‌ ಪ್ರತಿಕ್ರಿಯೆ ನೀಡಿದರು.

ಬಿಎಸ್ ಯಡಿಯೂರಪ್ಪ ಹೇಳಿದ್ದೇನು?

”ಭಾರತೀಯ ಜನತಾ ಪಕ್ಷವು ಎಲ್ಲವನ್ನೂ ನೀಡಿದ್ದರೂ ಆ ಋಣವನ್ನು ತೀರಿಸದೆ ಇದೀಗ ಕಾಂಗ್ರೆಸ್‌ಗೆ ಹೊರಟಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ” ಎಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಕಿಡಿಕಾರಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ”ಈ ಪಕ್ಷವು ನನಗೆ, ಶೆಟ್ಟರ್‌ ಅವರಿಗೆ, ಲಕ್ಷ್ಮಣ ಸವದಿ ಅವರಿಗೆ ಹಾಗೂ ಈಶ್ವರಪ್ಪ ಅವರಿಗೆ ಅನೇಕ ಅವಕಾಶ ನೀಡಿದೆ. ನನ್ನಂತಹ ಸಾಮಾನ್ಯ ಕಾರ್ಯಕರ್ತ ರಾಜ್ಯದ ಎಲ್ಲೇ ಹೋದರೂ ವಿಶ್ವಾಸ ಗಳಿಸಲು ಬಿಜೆಪಿಯೇ ಕಾರಣ ಎನ್ನುವುದನ್ನು ನಾನು ಮರೆತಿಲ್ಲ” ಎಂದು ಹೇಳಿದರು.

”ಜಗದೀಶ ಶೆಟ್ಟರ್‌ ಜನಸಂಘದ ಕಾಲದಿಂದ ಬಿಜೆಪಿಯಲ್ಲಿರುವವರು. ವಿರೋಧ ಪಕ್ಷದ ನಾಯಕ, ಮಂತ್ರಿ ಜತೆಗೆ ಮುಖ್ಯಮಂತ್ರಿಯನ್ನಾಗಿಯೂ ಮಾಡಲಾಯಿತು. ಬಿಬಿ ಶಿವಪ್ಪ ಅವರನ್ನು ಎದುರು ಹಾಕಿಕೊಂಡು, ಒಬ್ಬ ಯುವಕ ಬೆಳೆಯಬೇಕು ಎಂಬ ಕಾರಣಕ್ಕೆ ಜಗದೀಶ ಶೆಟ್ಟರ್‌ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಾಯಿತು” ಎಂದರು.

”ನಾನು ಹಾಗೂ ಅನಂತಕುಮಾರ್‌, ಅವರ ಬೆನ್ನಿಗೆ ನಿಂತಿದ್ದೆವು. ನಾವೇ ಅವರನ್ನು ಮುಖ್ಯಮಂತ್ರಿಯನ್ನಾಗಿಯೂ ಮಾಡಿದ್ದೆವು. ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಮುನ್ನಡೆಯುತ್ತಿರುವ ಸಮಯದಲ್ಲಿ ನಾವು ಅವರೊಂದಿಗೆ ಹೆಜ್ಜೆ ಹಾಕಬೇಕಾಗಿತ್ತು. ಜಗದೀಶ ಶೆಟ್ಟರ್‌ ಅವರ ಹೇಳಿಕೆ ಹಾಗೂ ಅವರ ನಿರ್ಧಾರ, ಅವರು ನಂಬಿಕೊಂಡಿರುವ ವಿಚಾರಕ್ಕೆ ತದ್ವಿರುದ್ಧವಾಗಿದೆ. ಸ್ಥಾನಮಾನ ಸಿಗಲಿ, ಸಿಗದೇ ಇರಲಿ ದೇಶಕ್ಕಾಗಿ ಕೆಲಸ ಮಾಡುವಂತಹದ್ದು ನಾವು ನಡೆದುಕೊಂಡುಬಂದಿರುವ ದಾರಿ. ಜಗದೀಶ್‌ ಶೆಟ್ಟರ್‌ ಅವರನ್ನು ರಾಜ್ಯದ ಜನತೆ ಗುರುತು ಮಾಡಿದ್ದು ಭಾರತೀಯ ಜನತಾ ಪಾರ್ಟಿ ಮೂಲಕ. ಪಕ್ಷವಿಲ್ಲದೆ ವ್ಯಕ್ತಿ ಎತ್ತರಕ್ಕೆ ಬೆಳೆಯಲು ಸಾಧ್ಯವಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...