Homeಕರ್ನಾಟಕಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರಿಗಾಗಿ ಆಯವ್ಯಯದಲ್ಲಿ ಘೋಷಿಸಿದ ಒಟ್ಟು 1897 ಕೋಟಿ ರೂಗಳಲ್ಲಿ 892 ಕೋಟಿ ರೂಗಳನ್ನು ಕಡಿತಗೊಳಿಸಿದೆ. ಈ ಕುರಿತು ಡಾ.ರಝಾಕ ಉಸ್ತಾದ ಮಾಹಿತಿಪೂರ್ಣ ಲೇಖನ ಇಲ್ಲಿದೆ.

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರ ಪಡೆದಂತಹ ಮುಖ್ಯಮಂತ್ರಿಗಳು, ಸಚಿವರು ಅಧಿಕಾರಕ್ಕೆ ಬಂದ ನಂತರ ಸಂವಿಧಾನದ ಮೂಲಭೂತ ಆಶಯಗಳ ವಿರುದ್ದ ಕೆಲಸ ಮಾಡುತ್ತಿರುವದು ಅತ್ಯಂತ ವಿಷಾಧನೀಯವಾಗಿದೆ. ರಾಜಕೀಯ ಕಾರಣಕ್ಕೆ ಎಲ್ಲ ಪಕ್ಷಗಳು ತಮ್ಮದೇ ಆದ ಆದ್ಯತೆಯ ಕೆಲಸ ಮಾಡುತ್ತ ಆರೋಪ, ಪ್ರತ್ಯಾರೋಪ ಮಾಡುವದು ಸಾಮಾನ್ಯವಾದರೂ ಯಾವ ಸರಕಾರವೂ ಒಂದು ಸಮುದಾಯವನ್ನು ಇಷ್ಟೊಂದು ಅನ್ಯಾಯ ಮಾಡಿರುವದು ಇತಿಹಾಸದಲ್ಲಿ ಕಂಡು ಬರಲಿಕ್ಕಿಲ್ಲ. ಬಿ.ಎಸ್.ಯಡಿಯೂರಪ್ಪನವರ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಅದರ ಮೂಲಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧ, ಪಾರ್ಸಿ ಮತ್ತು ಜೈನ್ ಸಮುದಾಯದ ಮೇಲೆ ತೋರಿಸಿದಷ್ಟು ತಾತ್ಸಾರ, ದ್ವೇಷ, ಅಸೂಹೆ ದೇಶದ ಯಾವ ರಾಜ್ಯ ಸರಕಾರಗಳು ಕೂಡ ಇಷ್ಟೊಂದು ಅನ್ಯಾಯ ಮಾಡಿರುವ ಉದಾಹರಣೆ ಇಲ್ಲ.

ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಬಂದ ಮೇಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆ ನಿಗದಿಗೊಳಿಸುತ್ತ ಬಂದಿರುವ ಅನುದಾನ ಕಡಿತಗೊಳಿಸಿದ್ದಲ್ಲದೇ ಹಲವು ಯೋಜನೆಗಳನ್ನು ಬಂದ್ ಮಾಡಿದೆ. 2019-20ನೇ ಸಾಲಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ಬಜೆಟ್‌ನಲ್ಲಿ ಘೋಷಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು 1897.00 ಕೋಟಿ ರೂ. ಯಿಂದ 1571.00 ಕೋಟಿ ರೂ. ಗೆ ಕಡಿಮೆಗೊಳಿಸಿತು. 2020-21ನೇ ಸಾಲಿನಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಮಂಡಿಸಿದ ಬಜೆಟ್‌ನಲ್ಲಿ 1177.00 ಕೋ.ರೂ. ಯಷ್ಟಿದ್ದ ಅನುದಾನವನ್ನು ಮತ್ತೆ ಕಡಿತಗೊಳಿಸಿ 1055.00ಕೋ.ರೂ. ಗೆ ನಿಗದಿಗೊಳಿಸಿದೆ. ಇತ್ತೀಚಿಗೆ ಮತ್ತೆ 1055.00 ಕೋ.ರೂ. ಯಷ್ಟಿದ್ದ ಅನುದಾನದಲ್ಲಿ 50.00 ಕೋ.ರೂ. ಅನುದಾನ ಕಡಿತಗೊಳಿಸಿದೆ.

ಈಗ ಕಡಿತಗೊಳಿಸಿದ ಅನುದಾನದಲ್ಲಿ ಕಳೆದ 5 ವರ್ಷಗಳಿಂದ ಅನುಷ್ಠಾನ ಮಾಡಲಾಗುತ್ತಿದ್ದ ಹಲವು ಜನಪರ ಕಲ್ಯಾಣ ಯೋಜನೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅನುಷ್ಠಾನ ಮಾಡುವದನ್ನು ನಿಲ್ಲಿಸಿದೆ. ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಜಾರಿಗೊಳಿಸಿದ ಕಾಲೋನಿ ಅಭಿವೃದ್ದಿ ಯೋಜನೆ ಈಗಿನ ಸರಕಾರ ರದ್ದುಗೊಳಿಸಿದೆ, ಭಾರಿ ಸದ್ದುಗೊಳಿಸಿದ ಶಾದಿಭಾಗ್ಯ ಯೋಜನೆಯನ್ನು ಕೂಡ ರದ್ದುಗೊಳಿಸಿದೆ. ಈ ವರ್ಷ ಇದೆಲ್ಲವುಕ್ಕಿಂತ ಪ್ರಮುಖ ಯೋಜನೆಗಳಾದ ವಿದೇಶದಲ್ಲಿ ಉನ್ನತ ವ್ಯಾಸಂಗದ ಯೋಜನೆ, ನಾಗರೀಕ ಪರೀಕ್ಷೆ ತರಬೇತಿ ಯೋಜನೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿಯಂತಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದಂತಹ ಯೋಜನೆಗಳ 2019-20ನೇ ಸಾಲಿನ ಅನುದಾನ ಸರಕಾರ ಇಲ್ಲಿಯವರೆಗೆ ಬಿಡುಗಡೆಗೊಳಿಸದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುವಂತಹ ಕೆಲಸ ಮಾಡುತ್ತಿರುವದು ಅಕ್ಷಮ್ಯ ಅಪರಾಧವಾಗುತ್ತದೆ.

ರಾಜ್ಯದಲ್ಲಿ 2016-17 ರಿಂದ ಜಾರಿಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಸಂಶೋಧನೆ ಕೈಗೊಂಡಲ್ಲಿ ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು ಈ ವರ್ಷದಿಂದ ಪ್ರತಿ ತಿಂಗಳು 25000/- ರೂ ಯನ್ನು ಕಡಿತಗೊಳಿಸಿ 8333/- ರೂ ಗೆ ಇಳಿಸಿ ಯಾರೂ ಸಂಶೋಧನೆಯನ್ನು ಪೂರ್ಣಗೊಳಿಸದಂತಹ ವಾತಾವರಣ ನಿರ್ಮಿಸಿದೆ. 2020-21ನೇ ಸಾಲಿನಲ್ಲಿ ರಾಜ್ಯಾದ್ಯಂತಹ ಸುಮಾರು 300 ವಿದ್ಯಾರ್ಥಿಗಳು ಸಂಶೋಧನೆಗಾಗಿ ಪ್ರೋತ್ಸಾಹ ಧನ ಪಡೆಯುತ್ತಿದ್ದರೂ, ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 3.00 ಲಕ್ಷ ರೂ. ಯಾದರೂ ಒಟ್ಟು 300 ವಿದ್ಯಾರ್ಥಿಗಳಿಗೆ ಈ ಮೊತ್ತ 9.0 ಕೋ.ರೂ ಆಗುತ್ತದೆ. ಹಲವಾರು ಅನುಪಯುಕ್ತ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ವೆಚ್ಚ ಮಾಡುವ ಸರಕಾರ ಕೇವಲ 9.0 ಕೋ.ರೂ ಗೆ 300 ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ.

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ವಾರ್ಷಿಕವಾಗಿ ಕರ್ನಾಟಕ ರಾಜ್ಯದಿಂದ ಸುಮಾರು 12 ಲಕ್ಷ 50 ಸಾವಿರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರ ಸೇರಿ ಒಟ್ಟು 270.00 ಕೋ.ರೂ. ಅನುದಾನ ನಿಗದಿಗೊಳಿಸಲಾಗಿತ್ತು, ಆದರೆ 2019-20ನೇ ಸಾಲಿನಲ್ಲಿ ರಾಜ್ಯ ಸರಕಾರ ಅನುದಾನ ಬಿಡುಗಡೆಗೊಳಿಸದೇ ಇರುವದರಿಂದ ಶೇ 50 ರಷ್ಟು ವಿದ್ಯಾರ್ಥಿಗಳು ಕಳೆದ ವರ್ಷದ ವಿದ್ಯಾರ್ಥಿ ವೇತನ ಪಡೆಯಲು ಸಾದ್ಯವಾಗಿಲ್ಲ. ಈಗಲೂ ಜಾತಕ ಪಕ್ಷಿಯಂತೆ ಸರಕಾರದ ಕಡೆ ಇಂದು ಬಿಡುಗಡೆಯಾಗುವುದೋ ನಾಳೆ ಬಿಡುಗಡೆಯಾಗುವುದೋ ಎಂದು ನೋಡುವಂತಹ ಪರಸ್ಥಿತಿ ಬಡ ಅಲ್ಪಸಂಖ್ಯಾತ ವಿದ್ಯಾರ್ಥಿಗಳದ್ದು.

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

1980 ರಿಂದ ರಾಜ್ಯದಲ್ಲಿ ಎಲ್ಲ ಹಿಂದುಳಿದ ವಿದ್ಯಾರ್ಥಿಗಳಿಗೆ ಜಾರಿಯಲ್ಲಿದ್ದು, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರತ್ಯೇಕಗೊಂಡ ನಂತರ ಶುಲ್ಕವಿನಾಯತಿ ಯೋಜನೆ 2014 ರಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತ ಸಮುದಾಯದ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ನೀಡುತ್ತ ಬಂದಿದೆ. ಆದರೆ, 2019-20ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಈಗಲೂ ಅನುದಾನ ಬಿಡುಗಡೆಗೊಳಿಸದೇ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಡೋಲಾಯನಮಾನವಾಗಿದೆ.

ಅದೇ ರೀತಿ ರಾಜ್ಯದಲ್ಲಿ ಎಲ್ಲ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2014-15ನೇ ಸಾಲಿನಿಂದ ಮನೆ ಬಿಟ್ಟು ಬೇರೆ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಂದೇ ಸಿದ್ದರಾಮಯ್ಯ ನೇತೃತ್ವದ ಸರಕಾರ ಜಾರಿಗೊಳಿಸಿದ ವಿದ್ಯಾಸಿರಿ ಯೋಜನೆಯ 2019-20ನೇ ಸಾಲಿನ ಅನುದಾನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಬಿಡುಗಡೆಗೊಳಿಸಿದೇ ಇರುವದರಿಂದ ಈ ಯೋಜನೆಯ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳು ಆತಂಕದಲ್ಲಿದ್ದಾರೆ.

ಇನ್ನೂ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಮೂಲಕ ಅನುಷ್ಠಾನ ಮಾಡಲಾಗುತ್ತಿರುವ “ಅರಿವು” ಯೋಜನೆಯೂ ಸಹ ಈ ವರ್ಷ ದಾರಿ ತಪ್ಪಿದೆ, ಇದರ ಮೂಲಕ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತಗೊಳ್ಳುವಂತೆ ಮಾಡಿದೆ. ಅರಿವು ಯೋಜನೆಯ ಮೂಲಕ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನಿಗಮದಿಂದ ಶೈಕ್ಷಣಿಕ ಸಾಲ ನೀಡಲಾಗುತ್ತಿತ್ತು, ಈ ವರ್ಷ ಸದರಿ ಸಾಲವನ್ನು ವಿದ್ಯಾರ್ಥಿಗಳು ಕೋರ್ಸುಗಳಿಗೆ ಪಾವತಿಸುವ ಮೊತ್ತದ ಅರ್ಧ ಮೊತ್ತ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸಾಲದ ರೂಪದಲ್ಲಿ ನೀಡುತ್ತಿದೆ.

ಒಂದು ಕಡೆ ಪ್ರೋತ್ಸಾಹಧನ ಕಡಿತಗೊಳಿಸಿ, ಮತ್ತೊಂದು ಕಡೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನದ ಅನುದಾನ ಕಡಿತಗೊಳಿಸಿದ್ದಲ್ಲದೇ ಶುಲ್ಕವಿನಾಯತಿ, ವಿದ್ಯಾಸಿರಿ ಅನುದಾನವೂ ಸರಕಾರ ನೀಡುತ್ತಿಲ್ಲ, ಇದನ್ನು ಹೊರತುಪಡಿಸಿ ಇದ್ದಂತಹ ಅರಿವು ಸಾಲದ ಯೋಜನೆಯನ್ನು ಮೊಟುಕುಗೊಳಿಸಲು ಹೊರಟಿರುವದು ಸರಕಾರ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣ ಮೂಲೆಗುಂಪು ಮಾಡುವ ಶಪಥ ಮಾಡಿರುವಂತಿದೆ ಬಿ.ಎಸ್. ಯಡಿಯೂರಪ್ಪನವರ ಆಡಳಿತ ವೈಖರಿ.
ಈ ಇಲಾಖೆಯ ಸಚಿವ ಶ್ರೀಮಂತ ಪಾಟೀಲ್ ಇವರು ಕಳೆದ ಮೂರು ತಿಂಗಳಿಂದ ಕಛೇರಿಗೆ ಆಗಮಿಸದೇ ಇರುವದರಿಂದ ಕಛೇರಿಯ ಅಗುಹೋಗುಗಳನ್ನು, ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸುವವರು ಯಾರೂ ಇಲ್ಲದಂತಾಗಿದೆ. ಅದೇ ರೀತಿ ಕಳೆದ ಒಂದು ತಿಂಗಳಿಂದ ಇಲಾಖೆಯ ಪ್ರಭಾರಿ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನ ವಹಿಸಿಕೊಂಡಿರುವ ಅಲ್ಪಸಂಖ್ಯಾತ ಸಮುದಾಯದವರೇ ಆದ ಮಹೇಂದ್ರ ಜೈನ್ ಅವರು ಕಛೇರಿಗೆ ಬಾರದೇ ಇರುವದರಿಂದ ಇಲಾಖೆಗೆ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿ, ಇಡೀ ಇಲಾಖೆ ಅನಾಥವಾಗಿರುವದು ಆತಂಕದ ವಿಷಯವಾಗಿದೆ.

ಈ ನಡುವೆ ಚುನಾವಣೆಯ ದೃಷ್ಟಿಯಿಂದಲೋ ಅಥವಾ ಸಮುದಾಯಗಳ ಮೇಲಿರುವ ಪ್ರತಿಯಿಂದಲೋ ಹಲವಾರು ನಿಗಮ ಮಂಡಳಿ ರಚಿಸಿ ಅನುದಾನ ಘೋಷಿಸುತ್ತ ನಡೆದಿರುವದು ಅನುಮಾನಕ್ಕೆ ದಾರಿ ಮಾಡಿಕೊಡುತ್ತಿದೆ. ಇದ್ದಂತಹ ಇಲಾಖೆಗಳಿಗೆ ಅನುದಾನ ನೀಡದೇ ಹೊಸ ಹೊಸ ನಿಗಮಗಳನ್ನು ಘೋಷಿಸಿ ಅನುದಾನ ನೀಡುತ್ತೇವೆ ಎನ್ನುವದು ನಂಬಲಸಾದ್ಯವಾದ ಮಾತಿನಂತಿದೆ. ಇದೆಲ್ಲ ಗೊತ್ತಿದೆಯೋ ಗೊತ್ತಿಲ್ಲವೋ ವಿರೋಧ ಪಕ್ಷದ ನಾಯಕರಾರೂ ಚಕಾರವೆತ್ತದೇ ಇರುವದು ಕೂಡ ಅನುಮಾನ ಮೂಡಿಸುತ್ತಿದೆ. ವಿರೋಧ ಪಕ್ಷಗಳ ನಾಯಕರ ನಡುವಳಿಕೆ “ಮೌನಂ ಸಮ್ಮತಿ ಲಕ್ಷಣಂ” ಎನ್ನುವಂತಿದೆ. ಸಮುದಾಯದ ಅಭಿವೃದ್ದಿಗೆ ಸಂಬಂಧವೇ ಇಲ್ಲದ ಲವ್ ಜಿಹಾದ್, ಗೋಹತ್ಯೆ ನಿಷೇಧ ಕಾನೂನಿನ ಬಗ್ಗೆ ಮಾತನಾಡುವ ವಿರೋಧ ಪಕ್ಷದ ನಾಯಕರು ಅಲ್ಪಸಂಖ್ಯಾತ ಸಮುದಾಯದ ಶೈಕ್ಷಣಿಕ ಬೆಳವಣಿಗೆಗೆ ತೊಂದರೆಯಾಗುತ್ತಿರುವದು ಕಾಣುತ್ತಿಲ್ಲವೋ ಅಥವಾ ಜಾಣ ಕುರುಡುತನ ಪ್ರದರ್ಶಿಸಲಾಗುತ್ತಿರುವರೋ ತಿಳಿಯದಾಗಿದೆ. ಭಾರತೀಯ ಜನತಾ ಪಕ್ಷದ ಸರಕಾರ ಈ ರೀತಿ ಅನುದಾನ ಕಡಿತಗೊಳಿಸುತ್ತ ಹೋದಲ್ಲಿ ಅಲ್ಪಸಂಖ್ಯಾತರು ಜಾತ್ಯಾತೀತ ಪಕ್ಷವನ್ನು ಬಿಟ್ಟುಹೋಗಲು ಸಾದ್ಯವಾಗುವದಿಲ್ಲ ಎನ್ನುವ ದುರಾಲೋಚನೆಯೋ ವಿವರಿಸಬೇಕಾಗಿದೆ.

  • ಡಾ.ರಝಾಕ ಉಸ್ತಾದ

ರಾಯಚೂರಿನವರಾದ ಡಾ.ರಝಾಕ ಉಸ್ತಾದ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಹಿರಿಯ ಮುಖಂಡರು.


ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...