Homeಕರ್ನಾಟಕಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರಿಗಾಗಿ ಆಯವ್ಯಯದಲ್ಲಿ ಘೋಷಿಸಿದ ಒಟ್ಟು 1897 ಕೋಟಿ ರೂಗಳಲ್ಲಿ 892 ಕೋಟಿ ರೂಗಳನ್ನು ಕಡಿತಗೊಳಿಸಿದೆ. ಈ ಕುರಿತು ಡಾ.ರಝಾಕ ಉಸ್ತಾದ ಮಾಹಿತಿಪೂರ್ಣ ಲೇಖನ ಇಲ್ಲಿದೆ.

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರ ಪಡೆದಂತಹ ಮುಖ್ಯಮಂತ್ರಿಗಳು, ಸಚಿವರು ಅಧಿಕಾರಕ್ಕೆ ಬಂದ ನಂತರ ಸಂವಿಧಾನದ ಮೂಲಭೂತ ಆಶಯಗಳ ವಿರುದ್ದ ಕೆಲಸ ಮಾಡುತ್ತಿರುವದು ಅತ್ಯಂತ ವಿಷಾಧನೀಯವಾಗಿದೆ. ರಾಜಕೀಯ ಕಾರಣಕ್ಕೆ ಎಲ್ಲ ಪಕ್ಷಗಳು ತಮ್ಮದೇ ಆದ ಆದ್ಯತೆಯ ಕೆಲಸ ಮಾಡುತ್ತ ಆರೋಪ, ಪ್ರತ್ಯಾರೋಪ ಮಾಡುವದು ಸಾಮಾನ್ಯವಾದರೂ ಯಾವ ಸರಕಾರವೂ ಒಂದು ಸಮುದಾಯವನ್ನು ಇಷ್ಟೊಂದು ಅನ್ಯಾಯ ಮಾಡಿರುವದು ಇತಿಹಾಸದಲ್ಲಿ ಕಂಡು ಬರಲಿಕ್ಕಿಲ್ಲ. ಬಿ.ಎಸ್.ಯಡಿಯೂರಪ್ಪನವರ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಅದರ ಮೂಲಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧ, ಪಾರ್ಸಿ ಮತ್ತು ಜೈನ್ ಸಮುದಾಯದ ಮೇಲೆ ತೋರಿಸಿದಷ್ಟು ತಾತ್ಸಾರ, ದ್ವೇಷ, ಅಸೂಹೆ ದೇಶದ ಯಾವ ರಾಜ್ಯ ಸರಕಾರಗಳು ಕೂಡ ಇಷ್ಟೊಂದು ಅನ್ಯಾಯ ಮಾಡಿರುವ ಉದಾಹರಣೆ ಇಲ್ಲ.

ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಬಂದ ಮೇಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆ ನಿಗದಿಗೊಳಿಸುತ್ತ ಬಂದಿರುವ ಅನುದಾನ ಕಡಿತಗೊಳಿಸಿದ್ದಲ್ಲದೇ ಹಲವು ಯೋಜನೆಗಳನ್ನು ಬಂದ್ ಮಾಡಿದೆ. 2019-20ನೇ ಸಾಲಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ಬಜೆಟ್‌ನಲ್ಲಿ ಘೋಷಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು 1897.00 ಕೋಟಿ ರೂ. ಯಿಂದ 1571.00 ಕೋಟಿ ರೂ. ಗೆ ಕಡಿಮೆಗೊಳಿಸಿತು. 2020-21ನೇ ಸಾಲಿನಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಮಂಡಿಸಿದ ಬಜೆಟ್‌ನಲ್ಲಿ 1177.00 ಕೋ.ರೂ. ಯಷ್ಟಿದ್ದ ಅನುದಾನವನ್ನು ಮತ್ತೆ ಕಡಿತಗೊಳಿಸಿ 1055.00ಕೋ.ರೂ. ಗೆ ನಿಗದಿಗೊಳಿಸಿದೆ. ಇತ್ತೀಚಿಗೆ ಮತ್ತೆ 1055.00 ಕೋ.ರೂ. ಯಷ್ಟಿದ್ದ ಅನುದಾನದಲ್ಲಿ 50.00 ಕೋ.ರೂ. ಅನುದಾನ ಕಡಿತಗೊಳಿಸಿದೆ.

ಈಗ ಕಡಿತಗೊಳಿಸಿದ ಅನುದಾನದಲ್ಲಿ ಕಳೆದ 5 ವರ್ಷಗಳಿಂದ ಅನುಷ್ಠಾನ ಮಾಡಲಾಗುತ್ತಿದ್ದ ಹಲವು ಜನಪರ ಕಲ್ಯಾಣ ಯೋಜನೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅನುಷ್ಠಾನ ಮಾಡುವದನ್ನು ನಿಲ್ಲಿಸಿದೆ. ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಜಾರಿಗೊಳಿಸಿದ ಕಾಲೋನಿ ಅಭಿವೃದ್ದಿ ಯೋಜನೆ ಈಗಿನ ಸರಕಾರ ರದ್ದುಗೊಳಿಸಿದೆ, ಭಾರಿ ಸದ್ದುಗೊಳಿಸಿದ ಶಾದಿಭಾಗ್ಯ ಯೋಜನೆಯನ್ನು ಕೂಡ ರದ್ದುಗೊಳಿಸಿದೆ. ಈ ವರ್ಷ ಇದೆಲ್ಲವುಕ್ಕಿಂತ ಪ್ರಮುಖ ಯೋಜನೆಗಳಾದ ವಿದೇಶದಲ್ಲಿ ಉನ್ನತ ವ್ಯಾಸಂಗದ ಯೋಜನೆ, ನಾಗರೀಕ ಪರೀಕ್ಷೆ ತರಬೇತಿ ಯೋಜನೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿಯಂತಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದಂತಹ ಯೋಜನೆಗಳ 2019-20ನೇ ಸಾಲಿನ ಅನುದಾನ ಸರಕಾರ ಇಲ್ಲಿಯವರೆಗೆ ಬಿಡುಗಡೆಗೊಳಿಸದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುವಂತಹ ಕೆಲಸ ಮಾಡುತ್ತಿರುವದು ಅಕ್ಷಮ್ಯ ಅಪರಾಧವಾಗುತ್ತದೆ.

ರಾಜ್ಯದಲ್ಲಿ 2016-17 ರಿಂದ ಜಾರಿಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಸಂಶೋಧನೆ ಕೈಗೊಂಡಲ್ಲಿ ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು ಈ ವರ್ಷದಿಂದ ಪ್ರತಿ ತಿಂಗಳು 25000/- ರೂ ಯನ್ನು ಕಡಿತಗೊಳಿಸಿ 8333/- ರೂ ಗೆ ಇಳಿಸಿ ಯಾರೂ ಸಂಶೋಧನೆಯನ್ನು ಪೂರ್ಣಗೊಳಿಸದಂತಹ ವಾತಾವರಣ ನಿರ್ಮಿಸಿದೆ. 2020-21ನೇ ಸಾಲಿನಲ್ಲಿ ರಾಜ್ಯಾದ್ಯಂತಹ ಸುಮಾರು 300 ವಿದ್ಯಾರ್ಥಿಗಳು ಸಂಶೋಧನೆಗಾಗಿ ಪ್ರೋತ್ಸಾಹ ಧನ ಪಡೆಯುತ್ತಿದ್ದರೂ, ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 3.00 ಲಕ್ಷ ರೂ. ಯಾದರೂ ಒಟ್ಟು 300 ವಿದ್ಯಾರ್ಥಿಗಳಿಗೆ ಈ ಮೊತ್ತ 9.0 ಕೋ.ರೂ ಆಗುತ್ತದೆ. ಹಲವಾರು ಅನುಪಯುಕ್ತ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ವೆಚ್ಚ ಮಾಡುವ ಸರಕಾರ ಕೇವಲ 9.0 ಕೋ.ರೂ ಗೆ 300 ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ.

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ವಾರ್ಷಿಕವಾಗಿ ಕರ್ನಾಟಕ ರಾಜ್ಯದಿಂದ ಸುಮಾರು 12 ಲಕ್ಷ 50 ಸಾವಿರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರ ಸೇರಿ ಒಟ್ಟು 270.00 ಕೋ.ರೂ. ಅನುದಾನ ನಿಗದಿಗೊಳಿಸಲಾಗಿತ್ತು, ಆದರೆ 2019-20ನೇ ಸಾಲಿನಲ್ಲಿ ರಾಜ್ಯ ಸರಕಾರ ಅನುದಾನ ಬಿಡುಗಡೆಗೊಳಿಸದೇ ಇರುವದರಿಂದ ಶೇ 50 ರಷ್ಟು ವಿದ್ಯಾರ್ಥಿಗಳು ಕಳೆದ ವರ್ಷದ ವಿದ್ಯಾರ್ಥಿ ವೇತನ ಪಡೆಯಲು ಸಾದ್ಯವಾಗಿಲ್ಲ. ಈಗಲೂ ಜಾತಕ ಪಕ್ಷಿಯಂತೆ ಸರಕಾರದ ಕಡೆ ಇಂದು ಬಿಡುಗಡೆಯಾಗುವುದೋ ನಾಳೆ ಬಿಡುಗಡೆಯಾಗುವುದೋ ಎಂದು ನೋಡುವಂತಹ ಪರಸ್ಥಿತಿ ಬಡ ಅಲ್ಪಸಂಖ್ಯಾತ ವಿದ್ಯಾರ್ಥಿಗಳದ್ದು.

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

1980 ರಿಂದ ರಾಜ್ಯದಲ್ಲಿ ಎಲ್ಲ ಹಿಂದುಳಿದ ವಿದ್ಯಾರ್ಥಿಗಳಿಗೆ ಜಾರಿಯಲ್ಲಿದ್ದು, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರತ್ಯೇಕಗೊಂಡ ನಂತರ ಶುಲ್ಕವಿನಾಯತಿ ಯೋಜನೆ 2014 ರಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತ ಸಮುದಾಯದ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ನೀಡುತ್ತ ಬಂದಿದೆ. ಆದರೆ, 2019-20ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಈಗಲೂ ಅನುದಾನ ಬಿಡುಗಡೆಗೊಳಿಸದೇ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಡೋಲಾಯನಮಾನವಾಗಿದೆ.

ಅದೇ ರೀತಿ ರಾಜ್ಯದಲ್ಲಿ ಎಲ್ಲ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2014-15ನೇ ಸಾಲಿನಿಂದ ಮನೆ ಬಿಟ್ಟು ಬೇರೆ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಂದೇ ಸಿದ್ದರಾಮಯ್ಯ ನೇತೃತ್ವದ ಸರಕಾರ ಜಾರಿಗೊಳಿಸಿದ ವಿದ್ಯಾಸಿರಿ ಯೋಜನೆಯ 2019-20ನೇ ಸಾಲಿನ ಅನುದಾನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಬಿಡುಗಡೆಗೊಳಿಸಿದೇ ಇರುವದರಿಂದ ಈ ಯೋಜನೆಯ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳು ಆತಂಕದಲ್ಲಿದ್ದಾರೆ.

ಇನ್ನೂ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಮೂಲಕ ಅನುಷ್ಠಾನ ಮಾಡಲಾಗುತ್ತಿರುವ “ಅರಿವು” ಯೋಜನೆಯೂ ಸಹ ಈ ವರ್ಷ ದಾರಿ ತಪ್ಪಿದೆ, ಇದರ ಮೂಲಕ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತಗೊಳ್ಳುವಂತೆ ಮಾಡಿದೆ. ಅರಿವು ಯೋಜನೆಯ ಮೂಲಕ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನಿಗಮದಿಂದ ಶೈಕ್ಷಣಿಕ ಸಾಲ ನೀಡಲಾಗುತ್ತಿತ್ತು, ಈ ವರ್ಷ ಸದರಿ ಸಾಲವನ್ನು ವಿದ್ಯಾರ್ಥಿಗಳು ಕೋರ್ಸುಗಳಿಗೆ ಪಾವತಿಸುವ ಮೊತ್ತದ ಅರ್ಧ ಮೊತ್ತ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸಾಲದ ರೂಪದಲ್ಲಿ ನೀಡುತ್ತಿದೆ.

ಒಂದು ಕಡೆ ಪ್ರೋತ್ಸಾಹಧನ ಕಡಿತಗೊಳಿಸಿ, ಮತ್ತೊಂದು ಕಡೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನದ ಅನುದಾನ ಕಡಿತಗೊಳಿಸಿದ್ದಲ್ಲದೇ ಶುಲ್ಕವಿನಾಯತಿ, ವಿದ್ಯಾಸಿರಿ ಅನುದಾನವೂ ಸರಕಾರ ನೀಡುತ್ತಿಲ್ಲ, ಇದನ್ನು ಹೊರತುಪಡಿಸಿ ಇದ್ದಂತಹ ಅರಿವು ಸಾಲದ ಯೋಜನೆಯನ್ನು ಮೊಟುಕುಗೊಳಿಸಲು ಹೊರಟಿರುವದು ಸರಕಾರ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣ ಮೂಲೆಗುಂಪು ಮಾಡುವ ಶಪಥ ಮಾಡಿರುವಂತಿದೆ ಬಿ.ಎಸ್. ಯಡಿಯೂರಪ್ಪನವರ ಆಡಳಿತ ವೈಖರಿ.
ಈ ಇಲಾಖೆಯ ಸಚಿವ ಶ್ರೀಮಂತ ಪಾಟೀಲ್ ಇವರು ಕಳೆದ ಮೂರು ತಿಂಗಳಿಂದ ಕಛೇರಿಗೆ ಆಗಮಿಸದೇ ಇರುವದರಿಂದ ಕಛೇರಿಯ ಅಗುಹೋಗುಗಳನ್ನು, ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸುವವರು ಯಾರೂ ಇಲ್ಲದಂತಾಗಿದೆ. ಅದೇ ರೀತಿ ಕಳೆದ ಒಂದು ತಿಂಗಳಿಂದ ಇಲಾಖೆಯ ಪ್ರಭಾರಿ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನ ವಹಿಸಿಕೊಂಡಿರುವ ಅಲ್ಪಸಂಖ್ಯಾತ ಸಮುದಾಯದವರೇ ಆದ ಮಹೇಂದ್ರ ಜೈನ್ ಅವರು ಕಛೇರಿಗೆ ಬಾರದೇ ಇರುವದರಿಂದ ಇಲಾಖೆಗೆ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿ, ಇಡೀ ಇಲಾಖೆ ಅನಾಥವಾಗಿರುವದು ಆತಂಕದ ವಿಷಯವಾಗಿದೆ.

ಈ ನಡುವೆ ಚುನಾವಣೆಯ ದೃಷ್ಟಿಯಿಂದಲೋ ಅಥವಾ ಸಮುದಾಯಗಳ ಮೇಲಿರುವ ಪ್ರತಿಯಿಂದಲೋ ಹಲವಾರು ನಿಗಮ ಮಂಡಳಿ ರಚಿಸಿ ಅನುದಾನ ಘೋಷಿಸುತ್ತ ನಡೆದಿರುವದು ಅನುಮಾನಕ್ಕೆ ದಾರಿ ಮಾಡಿಕೊಡುತ್ತಿದೆ. ಇದ್ದಂತಹ ಇಲಾಖೆಗಳಿಗೆ ಅನುದಾನ ನೀಡದೇ ಹೊಸ ಹೊಸ ನಿಗಮಗಳನ್ನು ಘೋಷಿಸಿ ಅನುದಾನ ನೀಡುತ್ತೇವೆ ಎನ್ನುವದು ನಂಬಲಸಾದ್ಯವಾದ ಮಾತಿನಂತಿದೆ. ಇದೆಲ್ಲ ಗೊತ್ತಿದೆಯೋ ಗೊತ್ತಿಲ್ಲವೋ ವಿರೋಧ ಪಕ್ಷದ ನಾಯಕರಾರೂ ಚಕಾರವೆತ್ತದೇ ಇರುವದು ಕೂಡ ಅನುಮಾನ ಮೂಡಿಸುತ್ತಿದೆ. ವಿರೋಧ ಪಕ್ಷಗಳ ನಾಯಕರ ನಡುವಳಿಕೆ “ಮೌನಂ ಸಮ್ಮತಿ ಲಕ್ಷಣಂ” ಎನ್ನುವಂತಿದೆ. ಸಮುದಾಯದ ಅಭಿವೃದ್ದಿಗೆ ಸಂಬಂಧವೇ ಇಲ್ಲದ ಲವ್ ಜಿಹಾದ್, ಗೋಹತ್ಯೆ ನಿಷೇಧ ಕಾನೂನಿನ ಬಗ್ಗೆ ಮಾತನಾಡುವ ವಿರೋಧ ಪಕ್ಷದ ನಾಯಕರು ಅಲ್ಪಸಂಖ್ಯಾತ ಸಮುದಾಯದ ಶೈಕ್ಷಣಿಕ ಬೆಳವಣಿಗೆಗೆ ತೊಂದರೆಯಾಗುತ್ತಿರುವದು ಕಾಣುತ್ತಿಲ್ಲವೋ ಅಥವಾ ಜಾಣ ಕುರುಡುತನ ಪ್ರದರ್ಶಿಸಲಾಗುತ್ತಿರುವರೋ ತಿಳಿಯದಾಗಿದೆ. ಭಾರತೀಯ ಜನತಾ ಪಕ್ಷದ ಸರಕಾರ ಈ ರೀತಿ ಅನುದಾನ ಕಡಿತಗೊಳಿಸುತ್ತ ಹೋದಲ್ಲಿ ಅಲ್ಪಸಂಖ್ಯಾತರು ಜಾತ್ಯಾತೀತ ಪಕ್ಷವನ್ನು ಬಿಟ್ಟುಹೋಗಲು ಸಾದ್ಯವಾಗುವದಿಲ್ಲ ಎನ್ನುವ ದುರಾಲೋಚನೆಯೋ ವಿವರಿಸಬೇಕಾಗಿದೆ.

  • ಡಾ.ರಝಾಕ ಉಸ್ತಾದ

ರಾಯಚೂರಿನವರಾದ ಡಾ.ರಝಾಕ ಉಸ್ತಾದ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಹಿರಿಯ ಮುಖಂಡರು.


ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...