Homeಕರ್ನಾಟಕಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರಿಗಾಗಿ ಆಯವ್ಯಯದಲ್ಲಿ ಘೋಷಿಸಿದ ಒಟ್ಟು 1897 ಕೋಟಿ ರೂಗಳಲ್ಲಿ 892 ಕೋಟಿ ರೂಗಳನ್ನು ಕಡಿತಗೊಳಿಸಿದೆ. ಈ ಕುರಿತು ಡಾ.ರಝಾಕ ಉಸ್ತಾದ ಮಾಹಿತಿಪೂರ್ಣ ಲೇಖನ ಇಲ್ಲಿದೆ.

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರ ಪಡೆದಂತಹ ಮುಖ್ಯಮಂತ್ರಿಗಳು, ಸಚಿವರು ಅಧಿಕಾರಕ್ಕೆ ಬಂದ ನಂತರ ಸಂವಿಧಾನದ ಮೂಲಭೂತ ಆಶಯಗಳ ವಿರುದ್ದ ಕೆಲಸ ಮಾಡುತ್ತಿರುವದು ಅತ್ಯಂತ ವಿಷಾಧನೀಯವಾಗಿದೆ. ರಾಜಕೀಯ ಕಾರಣಕ್ಕೆ ಎಲ್ಲ ಪಕ್ಷಗಳು ತಮ್ಮದೇ ಆದ ಆದ್ಯತೆಯ ಕೆಲಸ ಮಾಡುತ್ತ ಆರೋಪ, ಪ್ರತ್ಯಾರೋಪ ಮಾಡುವದು ಸಾಮಾನ್ಯವಾದರೂ ಯಾವ ಸರಕಾರವೂ ಒಂದು ಸಮುದಾಯವನ್ನು ಇಷ್ಟೊಂದು ಅನ್ಯಾಯ ಮಾಡಿರುವದು ಇತಿಹಾಸದಲ್ಲಿ ಕಂಡು ಬರಲಿಕ್ಕಿಲ್ಲ. ಬಿ.ಎಸ್.ಯಡಿಯೂರಪ್ಪನವರ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಅದರ ಮೂಲಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧ, ಪಾರ್ಸಿ ಮತ್ತು ಜೈನ್ ಸಮುದಾಯದ ಮೇಲೆ ತೋರಿಸಿದಷ್ಟು ತಾತ್ಸಾರ, ದ್ವೇಷ, ಅಸೂಹೆ ದೇಶದ ಯಾವ ರಾಜ್ಯ ಸರಕಾರಗಳು ಕೂಡ ಇಷ್ಟೊಂದು ಅನ್ಯಾಯ ಮಾಡಿರುವ ಉದಾಹರಣೆ ಇಲ್ಲ.

ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಬಂದ ಮೇಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆ ನಿಗದಿಗೊಳಿಸುತ್ತ ಬಂದಿರುವ ಅನುದಾನ ಕಡಿತಗೊಳಿಸಿದ್ದಲ್ಲದೇ ಹಲವು ಯೋಜನೆಗಳನ್ನು ಬಂದ್ ಮಾಡಿದೆ. 2019-20ನೇ ಸಾಲಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ಬಜೆಟ್‌ನಲ್ಲಿ ಘೋಷಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು 1897.00 ಕೋಟಿ ರೂ. ಯಿಂದ 1571.00 ಕೋಟಿ ರೂ. ಗೆ ಕಡಿಮೆಗೊಳಿಸಿತು. 2020-21ನೇ ಸಾಲಿನಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಮಂಡಿಸಿದ ಬಜೆಟ್‌ನಲ್ಲಿ 1177.00 ಕೋ.ರೂ. ಯಷ್ಟಿದ್ದ ಅನುದಾನವನ್ನು ಮತ್ತೆ ಕಡಿತಗೊಳಿಸಿ 1055.00ಕೋ.ರೂ. ಗೆ ನಿಗದಿಗೊಳಿಸಿದೆ. ಇತ್ತೀಚಿಗೆ ಮತ್ತೆ 1055.00 ಕೋ.ರೂ. ಯಷ್ಟಿದ್ದ ಅನುದಾನದಲ್ಲಿ 50.00 ಕೋ.ರೂ. ಅನುದಾನ ಕಡಿತಗೊಳಿಸಿದೆ.

ಈಗ ಕಡಿತಗೊಳಿಸಿದ ಅನುದಾನದಲ್ಲಿ ಕಳೆದ 5 ವರ್ಷಗಳಿಂದ ಅನುಷ್ಠಾನ ಮಾಡಲಾಗುತ್ತಿದ್ದ ಹಲವು ಜನಪರ ಕಲ್ಯಾಣ ಯೋಜನೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅನುಷ್ಠಾನ ಮಾಡುವದನ್ನು ನಿಲ್ಲಿಸಿದೆ. ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಜಾರಿಗೊಳಿಸಿದ ಕಾಲೋನಿ ಅಭಿವೃದ್ದಿ ಯೋಜನೆ ಈಗಿನ ಸರಕಾರ ರದ್ದುಗೊಳಿಸಿದೆ, ಭಾರಿ ಸದ್ದುಗೊಳಿಸಿದ ಶಾದಿಭಾಗ್ಯ ಯೋಜನೆಯನ್ನು ಕೂಡ ರದ್ದುಗೊಳಿಸಿದೆ. ಈ ವರ್ಷ ಇದೆಲ್ಲವುಕ್ಕಿಂತ ಪ್ರಮುಖ ಯೋಜನೆಗಳಾದ ವಿದೇಶದಲ್ಲಿ ಉನ್ನತ ವ್ಯಾಸಂಗದ ಯೋಜನೆ, ನಾಗರೀಕ ಪರೀಕ್ಷೆ ತರಬೇತಿ ಯೋಜನೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿಯಂತಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದಂತಹ ಯೋಜನೆಗಳ 2019-20ನೇ ಸಾಲಿನ ಅನುದಾನ ಸರಕಾರ ಇಲ್ಲಿಯವರೆಗೆ ಬಿಡುಗಡೆಗೊಳಿಸದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುವಂತಹ ಕೆಲಸ ಮಾಡುತ್ತಿರುವದು ಅಕ್ಷಮ್ಯ ಅಪರಾಧವಾಗುತ್ತದೆ.

ರಾಜ್ಯದಲ್ಲಿ 2016-17 ರಿಂದ ಜಾರಿಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಸಂಶೋಧನೆ ಕೈಗೊಂಡಲ್ಲಿ ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು ಈ ವರ್ಷದಿಂದ ಪ್ರತಿ ತಿಂಗಳು 25000/- ರೂ ಯನ್ನು ಕಡಿತಗೊಳಿಸಿ 8333/- ರೂ ಗೆ ಇಳಿಸಿ ಯಾರೂ ಸಂಶೋಧನೆಯನ್ನು ಪೂರ್ಣಗೊಳಿಸದಂತಹ ವಾತಾವರಣ ನಿರ್ಮಿಸಿದೆ. 2020-21ನೇ ಸಾಲಿನಲ್ಲಿ ರಾಜ್ಯಾದ್ಯಂತಹ ಸುಮಾರು 300 ವಿದ್ಯಾರ್ಥಿಗಳು ಸಂಶೋಧನೆಗಾಗಿ ಪ್ರೋತ್ಸಾಹ ಧನ ಪಡೆಯುತ್ತಿದ್ದರೂ, ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 3.00 ಲಕ್ಷ ರೂ. ಯಾದರೂ ಒಟ್ಟು 300 ವಿದ್ಯಾರ್ಥಿಗಳಿಗೆ ಈ ಮೊತ್ತ 9.0 ಕೋ.ರೂ ಆಗುತ್ತದೆ. ಹಲವಾರು ಅನುಪಯುಕ್ತ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ವೆಚ್ಚ ಮಾಡುವ ಸರಕಾರ ಕೇವಲ 9.0 ಕೋ.ರೂ ಗೆ 300 ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ.

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ವಾರ್ಷಿಕವಾಗಿ ಕರ್ನಾಟಕ ರಾಜ್ಯದಿಂದ ಸುಮಾರು 12 ಲಕ್ಷ 50 ಸಾವಿರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರ ಸೇರಿ ಒಟ್ಟು 270.00 ಕೋ.ರೂ. ಅನುದಾನ ನಿಗದಿಗೊಳಿಸಲಾಗಿತ್ತು, ಆದರೆ 2019-20ನೇ ಸಾಲಿನಲ್ಲಿ ರಾಜ್ಯ ಸರಕಾರ ಅನುದಾನ ಬಿಡುಗಡೆಗೊಳಿಸದೇ ಇರುವದರಿಂದ ಶೇ 50 ರಷ್ಟು ವಿದ್ಯಾರ್ಥಿಗಳು ಕಳೆದ ವರ್ಷದ ವಿದ್ಯಾರ್ಥಿ ವೇತನ ಪಡೆಯಲು ಸಾದ್ಯವಾಗಿಲ್ಲ. ಈಗಲೂ ಜಾತಕ ಪಕ್ಷಿಯಂತೆ ಸರಕಾರದ ಕಡೆ ಇಂದು ಬಿಡುಗಡೆಯಾಗುವುದೋ ನಾಳೆ ಬಿಡುಗಡೆಯಾಗುವುದೋ ಎಂದು ನೋಡುವಂತಹ ಪರಸ್ಥಿತಿ ಬಡ ಅಲ್ಪಸಂಖ್ಯಾತ ವಿದ್ಯಾರ್ಥಿಗಳದ್ದು.

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

1980 ರಿಂದ ರಾಜ್ಯದಲ್ಲಿ ಎಲ್ಲ ಹಿಂದುಳಿದ ವಿದ್ಯಾರ್ಥಿಗಳಿಗೆ ಜಾರಿಯಲ್ಲಿದ್ದು, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರತ್ಯೇಕಗೊಂಡ ನಂತರ ಶುಲ್ಕವಿನಾಯತಿ ಯೋಜನೆ 2014 ರಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತ ಸಮುದಾಯದ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ನೀಡುತ್ತ ಬಂದಿದೆ. ಆದರೆ, 2019-20ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಈಗಲೂ ಅನುದಾನ ಬಿಡುಗಡೆಗೊಳಿಸದೇ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಡೋಲಾಯನಮಾನವಾಗಿದೆ.

ಅದೇ ರೀತಿ ರಾಜ್ಯದಲ್ಲಿ ಎಲ್ಲ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2014-15ನೇ ಸಾಲಿನಿಂದ ಮನೆ ಬಿಟ್ಟು ಬೇರೆ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಂದೇ ಸಿದ್ದರಾಮಯ್ಯ ನೇತೃತ್ವದ ಸರಕಾರ ಜಾರಿಗೊಳಿಸಿದ ವಿದ್ಯಾಸಿರಿ ಯೋಜನೆಯ 2019-20ನೇ ಸಾಲಿನ ಅನುದಾನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಬಿಡುಗಡೆಗೊಳಿಸಿದೇ ಇರುವದರಿಂದ ಈ ಯೋಜನೆಯ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳು ಆತಂಕದಲ್ಲಿದ್ದಾರೆ.

ಇನ್ನೂ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಮೂಲಕ ಅನುಷ್ಠಾನ ಮಾಡಲಾಗುತ್ತಿರುವ “ಅರಿವು” ಯೋಜನೆಯೂ ಸಹ ಈ ವರ್ಷ ದಾರಿ ತಪ್ಪಿದೆ, ಇದರ ಮೂಲಕ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತಗೊಳ್ಳುವಂತೆ ಮಾಡಿದೆ. ಅರಿವು ಯೋಜನೆಯ ಮೂಲಕ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನಿಗಮದಿಂದ ಶೈಕ್ಷಣಿಕ ಸಾಲ ನೀಡಲಾಗುತ್ತಿತ್ತು, ಈ ವರ್ಷ ಸದರಿ ಸಾಲವನ್ನು ವಿದ್ಯಾರ್ಥಿಗಳು ಕೋರ್ಸುಗಳಿಗೆ ಪಾವತಿಸುವ ಮೊತ್ತದ ಅರ್ಧ ಮೊತ್ತ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸಾಲದ ರೂಪದಲ್ಲಿ ನೀಡುತ್ತಿದೆ.

ಒಂದು ಕಡೆ ಪ್ರೋತ್ಸಾಹಧನ ಕಡಿತಗೊಳಿಸಿ, ಮತ್ತೊಂದು ಕಡೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನದ ಅನುದಾನ ಕಡಿತಗೊಳಿಸಿದ್ದಲ್ಲದೇ ಶುಲ್ಕವಿನಾಯತಿ, ವಿದ್ಯಾಸಿರಿ ಅನುದಾನವೂ ಸರಕಾರ ನೀಡುತ್ತಿಲ್ಲ, ಇದನ್ನು ಹೊರತುಪಡಿಸಿ ಇದ್ದಂತಹ ಅರಿವು ಸಾಲದ ಯೋಜನೆಯನ್ನು ಮೊಟುಕುಗೊಳಿಸಲು ಹೊರಟಿರುವದು ಸರಕಾರ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣ ಮೂಲೆಗುಂಪು ಮಾಡುವ ಶಪಥ ಮಾಡಿರುವಂತಿದೆ ಬಿ.ಎಸ್. ಯಡಿಯೂರಪ್ಪನವರ ಆಡಳಿತ ವೈಖರಿ.
ಈ ಇಲಾಖೆಯ ಸಚಿವ ಶ್ರೀಮಂತ ಪಾಟೀಲ್ ಇವರು ಕಳೆದ ಮೂರು ತಿಂಗಳಿಂದ ಕಛೇರಿಗೆ ಆಗಮಿಸದೇ ಇರುವದರಿಂದ ಕಛೇರಿಯ ಅಗುಹೋಗುಗಳನ್ನು, ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸುವವರು ಯಾರೂ ಇಲ್ಲದಂತಾಗಿದೆ. ಅದೇ ರೀತಿ ಕಳೆದ ಒಂದು ತಿಂಗಳಿಂದ ಇಲಾಖೆಯ ಪ್ರಭಾರಿ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನ ವಹಿಸಿಕೊಂಡಿರುವ ಅಲ್ಪಸಂಖ್ಯಾತ ಸಮುದಾಯದವರೇ ಆದ ಮಹೇಂದ್ರ ಜೈನ್ ಅವರು ಕಛೇರಿಗೆ ಬಾರದೇ ಇರುವದರಿಂದ ಇಲಾಖೆಗೆ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿ, ಇಡೀ ಇಲಾಖೆ ಅನಾಥವಾಗಿರುವದು ಆತಂಕದ ವಿಷಯವಾಗಿದೆ.

ಈ ನಡುವೆ ಚುನಾವಣೆಯ ದೃಷ್ಟಿಯಿಂದಲೋ ಅಥವಾ ಸಮುದಾಯಗಳ ಮೇಲಿರುವ ಪ್ರತಿಯಿಂದಲೋ ಹಲವಾರು ನಿಗಮ ಮಂಡಳಿ ರಚಿಸಿ ಅನುದಾನ ಘೋಷಿಸುತ್ತ ನಡೆದಿರುವದು ಅನುಮಾನಕ್ಕೆ ದಾರಿ ಮಾಡಿಕೊಡುತ್ತಿದೆ. ಇದ್ದಂತಹ ಇಲಾಖೆಗಳಿಗೆ ಅನುದಾನ ನೀಡದೇ ಹೊಸ ಹೊಸ ನಿಗಮಗಳನ್ನು ಘೋಷಿಸಿ ಅನುದಾನ ನೀಡುತ್ತೇವೆ ಎನ್ನುವದು ನಂಬಲಸಾದ್ಯವಾದ ಮಾತಿನಂತಿದೆ. ಇದೆಲ್ಲ ಗೊತ್ತಿದೆಯೋ ಗೊತ್ತಿಲ್ಲವೋ ವಿರೋಧ ಪಕ್ಷದ ನಾಯಕರಾರೂ ಚಕಾರವೆತ್ತದೇ ಇರುವದು ಕೂಡ ಅನುಮಾನ ಮೂಡಿಸುತ್ತಿದೆ. ವಿರೋಧ ಪಕ್ಷಗಳ ನಾಯಕರ ನಡುವಳಿಕೆ “ಮೌನಂ ಸಮ್ಮತಿ ಲಕ್ಷಣಂ” ಎನ್ನುವಂತಿದೆ. ಸಮುದಾಯದ ಅಭಿವೃದ್ದಿಗೆ ಸಂಬಂಧವೇ ಇಲ್ಲದ ಲವ್ ಜಿಹಾದ್, ಗೋಹತ್ಯೆ ನಿಷೇಧ ಕಾನೂನಿನ ಬಗ್ಗೆ ಮಾತನಾಡುವ ವಿರೋಧ ಪಕ್ಷದ ನಾಯಕರು ಅಲ್ಪಸಂಖ್ಯಾತ ಸಮುದಾಯದ ಶೈಕ್ಷಣಿಕ ಬೆಳವಣಿಗೆಗೆ ತೊಂದರೆಯಾಗುತ್ತಿರುವದು ಕಾಣುತ್ತಿಲ್ಲವೋ ಅಥವಾ ಜಾಣ ಕುರುಡುತನ ಪ್ರದರ್ಶಿಸಲಾಗುತ್ತಿರುವರೋ ತಿಳಿಯದಾಗಿದೆ. ಭಾರತೀಯ ಜನತಾ ಪಕ್ಷದ ಸರಕಾರ ಈ ರೀತಿ ಅನುದಾನ ಕಡಿತಗೊಳಿಸುತ್ತ ಹೋದಲ್ಲಿ ಅಲ್ಪಸಂಖ್ಯಾತರು ಜಾತ್ಯಾತೀತ ಪಕ್ಷವನ್ನು ಬಿಟ್ಟುಹೋಗಲು ಸಾದ್ಯವಾಗುವದಿಲ್ಲ ಎನ್ನುವ ದುರಾಲೋಚನೆಯೋ ವಿವರಿಸಬೇಕಾಗಿದೆ.

  • ಡಾ.ರಝಾಕ ಉಸ್ತಾದ

ರಾಯಚೂರಿನವರಾದ ಡಾ.ರಝಾಕ ಉಸ್ತಾದ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಹಿರಿಯ ಮುಖಂಡರು.


ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...