Homeಕರ್ನಾಟಕಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರಿಗಾಗಿ ಆಯವ್ಯಯದಲ್ಲಿ ಘೋಷಿಸಿದ ಒಟ್ಟು 1897 ಕೋಟಿ ರೂಗಳಲ್ಲಿ 892 ಕೋಟಿ ರೂಗಳನ್ನು ಕಡಿತಗೊಳಿಸಿದೆ. ಈ ಕುರಿತು ಡಾ.ರಝಾಕ ಉಸ್ತಾದ ಮಾಹಿತಿಪೂರ್ಣ ಲೇಖನ ಇಲ್ಲಿದೆ.

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರ ಪಡೆದಂತಹ ಮುಖ್ಯಮಂತ್ರಿಗಳು, ಸಚಿವರು ಅಧಿಕಾರಕ್ಕೆ ಬಂದ ನಂತರ ಸಂವಿಧಾನದ ಮೂಲಭೂತ ಆಶಯಗಳ ವಿರುದ್ದ ಕೆಲಸ ಮಾಡುತ್ತಿರುವದು ಅತ್ಯಂತ ವಿಷಾಧನೀಯವಾಗಿದೆ. ರಾಜಕೀಯ ಕಾರಣಕ್ಕೆ ಎಲ್ಲ ಪಕ್ಷಗಳು ತಮ್ಮದೇ ಆದ ಆದ್ಯತೆಯ ಕೆಲಸ ಮಾಡುತ್ತ ಆರೋಪ, ಪ್ರತ್ಯಾರೋಪ ಮಾಡುವದು ಸಾಮಾನ್ಯವಾದರೂ ಯಾವ ಸರಕಾರವೂ ಒಂದು ಸಮುದಾಯವನ್ನು ಇಷ್ಟೊಂದು ಅನ್ಯಾಯ ಮಾಡಿರುವದು ಇತಿಹಾಸದಲ್ಲಿ ಕಂಡು ಬರಲಿಕ್ಕಿಲ್ಲ. ಬಿ.ಎಸ್.ಯಡಿಯೂರಪ್ಪನವರ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಅದರ ಮೂಲಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧ, ಪಾರ್ಸಿ ಮತ್ತು ಜೈನ್ ಸಮುದಾಯದ ಮೇಲೆ ತೋರಿಸಿದಷ್ಟು ತಾತ್ಸಾರ, ದ್ವೇಷ, ಅಸೂಹೆ ದೇಶದ ಯಾವ ರಾಜ್ಯ ಸರಕಾರಗಳು ಕೂಡ ಇಷ್ಟೊಂದು ಅನ್ಯಾಯ ಮಾಡಿರುವ ಉದಾಹರಣೆ ಇಲ್ಲ.

ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಬಂದ ಮೇಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆ ನಿಗದಿಗೊಳಿಸುತ್ತ ಬಂದಿರುವ ಅನುದಾನ ಕಡಿತಗೊಳಿಸಿದ್ದಲ್ಲದೇ ಹಲವು ಯೋಜನೆಗಳನ್ನು ಬಂದ್ ಮಾಡಿದೆ. 2019-20ನೇ ಸಾಲಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ಬಜೆಟ್‌ನಲ್ಲಿ ಘೋಷಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು 1897.00 ಕೋಟಿ ರೂ. ಯಿಂದ 1571.00 ಕೋಟಿ ರೂ. ಗೆ ಕಡಿಮೆಗೊಳಿಸಿತು. 2020-21ನೇ ಸಾಲಿನಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಮಂಡಿಸಿದ ಬಜೆಟ್‌ನಲ್ಲಿ 1177.00 ಕೋ.ರೂ. ಯಷ್ಟಿದ್ದ ಅನುದಾನವನ್ನು ಮತ್ತೆ ಕಡಿತಗೊಳಿಸಿ 1055.00ಕೋ.ರೂ. ಗೆ ನಿಗದಿಗೊಳಿಸಿದೆ. ಇತ್ತೀಚಿಗೆ ಮತ್ತೆ 1055.00 ಕೋ.ರೂ. ಯಷ್ಟಿದ್ದ ಅನುದಾನದಲ್ಲಿ 50.00 ಕೋ.ರೂ. ಅನುದಾನ ಕಡಿತಗೊಳಿಸಿದೆ.

ಈಗ ಕಡಿತಗೊಳಿಸಿದ ಅನುದಾನದಲ್ಲಿ ಕಳೆದ 5 ವರ್ಷಗಳಿಂದ ಅನುಷ್ಠಾನ ಮಾಡಲಾಗುತ್ತಿದ್ದ ಹಲವು ಜನಪರ ಕಲ್ಯಾಣ ಯೋಜನೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅನುಷ್ಠಾನ ಮಾಡುವದನ್ನು ನಿಲ್ಲಿಸಿದೆ. ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಜಾರಿಗೊಳಿಸಿದ ಕಾಲೋನಿ ಅಭಿವೃದ್ದಿ ಯೋಜನೆ ಈಗಿನ ಸರಕಾರ ರದ್ದುಗೊಳಿಸಿದೆ, ಭಾರಿ ಸದ್ದುಗೊಳಿಸಿದ ಶಾದಿಭಾಗ್ಯ ಯೋಜನೆಯನ್ನು ಕೂಡ ರದ್ದುಗೊಳಿಸಿದೆ. ಈ ವರ್ಷ ಇದೆಲ್ಲವುಕ್ಕಿಂತ ಪ್ರಮುಖ ಯೋಜನೆಗಳಾದ ವಿದೇಶದಲ್ಲಿ ಉನ್ನತ ವ್ಯಾಸಂಗದ ಯೋಜನೆ, ನಾಗರೀಕ ಪರೀಕ್ಷೆ ತರಬೇತಿ ಯೋಜನೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿಯಂತಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದಂತಹ ಯೋಜನೆಗಳ 2019-20ನೇ ಸಾಲಿನ ಅನುದಾನ ಸರಕಾರ ಇಲ್ಲಿಯವರೆಗೆ ಬಿಡುಗಡೆಗೊಳಿಸದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುವಂತಹ ಕೆಲಸ ಮಾಡುತ್ತಿರುವದು ಅಕ್ಷಮ್ಯ ಅಪರಾಧವಾಗುತ್ತದೆ.

ರಾಜ್ಯದಲ್ಲಿ 2016-17 ರಿಂದ ಜಾರಿಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಸಂಶೋಧನೆ ಕೈಗೊಂಡಲ್ಲಿ ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು ಈ ವರ್ಷದಿಂದ ಪ್ರತಿ ತಿಂಗಳು 25000/- ರೂ ಯನ್ನು ಕಡಿತಗೊಳಿಸಿ 8333/- ರೂ ಗೆ ಇಳಿಸಿ ಯಾರೂ ಸಂಶೋಧನೆಯನ್ನು ಪೂರ್ಣಗೊಳಿಸದಂತಹ ವಾತಾವರಣ ನಿರ್ಮಿಸಿದೆ. 2020-21ನೇ ಸಾಲಿನಲ್ಲಿ ರಾಜ್ಯಾದ್ಯಂತಹ ಸುಮಾರು 300 ವಿದ್ಯಾರ್ಥಿಗಳು ಸಂಶೋಧನೆಗಾಗಿ ಪ್ರೋತ್ಸಾಹ ಧನ ಪಡೆಯುತ್ತಿದ್ದರೂ, ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 3.00 ಲಕ್ಷ ರೂ. ಯಾದರೂ ಒಟ್ಟು 300 ವಿದ್ಯಾರ್ಥಿಗಳಿಗೆ ಈ ಮೊತ್ತ 9.0 ಕೋ.ರೂ ಆಗುತ್ತದೆ. ಹಲವಾರು ಅನುಪಯುಕ್ತ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ವೆಚ್ಚ ಮಾಡುವ ಸರಕಾರ ಕೇವಲ 9.0 ಕೋ.ರೂ ಗೆ 300 ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ.

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ವಾರ್ಷಿಕವಾಗಿ ಕರ್ನಾಟಕ ರಾಜ್ಯದಿಂದ ಸುಮಾರು 12 ಲಕ್ಷ 50 ಸಾವಿರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರ ಸೇರಿ ಒಟ್ಟು 270.00 ಕೋ.ರೂ. ಅನುದಾನ ನಿಗದಿಗೊಳಿಸಲಾಗಿತ್ತು, ಆದರೆ 2019-20ನೇ ಸಾಲಿನಲ್ಲಿ ರಾಜ್ಯ ಸರಕಾರ ಅನುದಾನ ಬಿಡುಗಡೆಗೊಳಿಸದೇ ಇರುವದರಿಂದ ಶೇ 50 ರಷ್ಟು ವಿದ್ಯಾರ್ಥಿಗಳು ಕಳೆದ ವರ್ಷದ ವಿದ್ಯಾರ್ಥಿ ವೇತನ ಪಡೆಯಲು ಸಾದ್ಯವಾಗಿಲ್ಲ. ಈಗಲೂ ಜಾತಕ ಪಕ್ಷಿಯಂತೆ ಸರಕಾರದ ಕಡೆ ಇಂದು ಬಿಡುಗಡೆಯಾಗುವುದೋ ನಾಳೆ ಬಿಡುಗಡೆಯಾಗುವುದೋ ಎಂದು ನೋಡುವಂತಹ ಪರಸ್ಥಿತಿ ಬಡ ಅಲ್ಪಸಂಖ್ಯಾತ ವಿದ್ಯಾರ್ಥಿಗಳದ್ದು.

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

1980 ರಿಂದ ರಾಜ್ಯದಲ್ಲಿ ಎಲ್ಲ ಹಿಂದುಳಿದ ವಿದ್ಯಾರ್ಥಿಗಳಿಗೆ ಜಾರಿಯಲ್ಲಿದ್ದು, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರತ್ಯೇಕಗೊಂಡ ನಂತರ ಶುಲ್ಕವಿನಾಯತಿ ಯೋಜನೆ 2014 ರಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತ ಸಮುದಾಯದ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ನೀಡುತ್ತ ಬಂದಿದೆ. ಆದರೆ, 2019-20ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಈಗಲೂ ಅನುದಾನ ಬಿಡುಗಡೆಗೊಳಿಸದೇ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಡೋಲಾಯನಮಾನವಾಗಿದೆ.

ಅದೇ ರೀತಿ ರಾಜ್ಯದಲ್ಲಿ ಎಲ್ಲ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2014-15ನೇ ಸಾಲಿನಿಂದ ಮನೆ ಬಿಟ್ಟು ಬೇರೆ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಂದೇ ಸಿದ್ದರಾಮಯ್ಯ ನೇತೃತ್ವದ ಸರಕಾರ ಜಾರಿಗೊಳಿಸಿದ ವಿದ್ಯಾಸಿರಿ ಯೋಜನೆಯ 2019-20ನೇ ಸಾಲಿನ ಅನುದಾನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಬಿಡುಗಡೆಗೊಳಿಸಿದೇ ಇರುವದರಿಂದ ಈ ಯೋಜನೆಯ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳು ಆತಂಕದಲ್ಲಿದ್ದಾರೆ.

ಇನ್ನೂ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಮೂಲಕ ಅನುಷ್ಠಾನ ಮಾಡಲಾಗುತ್ತಿರುವ “ಅರಿವು” ಯೋಜನೆಯೂ ಸಹ ಈ ವರ್ಷ ದಾರಿ ತಪ್ಪಿದೆ, ಇದರ ಮೂಲಕ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತಗೊಳ್ಳುವಂತೆ ಮಾಡಿದೆ. ಅರಿವು ಯೋಜನೆಯ ಮೂಲಕ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನಿಗಮದಿಂದ ಶೈಕ್ಷಣಿಕ ಸಾಲ ನೀಡಲಾಗುತ್ತಿತ್ತು, ಈ ವರ್ಷ ಸದರಿ ಸಾಲವನ್ನು ವಿದ್ಯಾರ್ಥಿಗಳು ಕೋರ್ಸುಗಳಿಗೆ ಪಾವತಿಸುವ ಮೊತ್ತದ ಅರ್ಧ ಮೊತ್ತ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸಾಲದ ರೂಪದಲ್ಲಿ ನೀಡುತ್ತಿದೆ.

ಒಂದು ಕಡೆ ಪ್ರೋತ್ಸಾಹಧನ ಕಡಿತಗೊಳಿಸಿ, ಮತ್ತೊಂದು ಕಡೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನದ ಅನುದಾನ ಕಡಿತಗೊಳಿಸಿದ್ದಲ್ಲದೇ ಶುಲ್ಕವಿನಾಯತಿ, ವಿದ್ಯಾಸಿರಿ ಅನುದಾನವೂ ಸರಕಾರ ನೀಡುತ್ತಿಲ್ಲ, ಇದನ್ನು ಹೊರತುಪಡಿಸಿ ಇದ್ದಂತಹ ಅರಿವು ಸಾಲದ ಯೋಜನೆಯನ್ನು ಮೊಟುಕುಗೊಳಿಸಲು ಹೊರಟಿರುವದು ಸರಕಾರ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣ ಮೂಲೆಗುಂಪು ಮಾಡುವ ಶಪಥ ಮಾಡಿರುವಂತಿದೆ ಬಿ.ಎಸ್. ಯಡಿಯೂರಪ್ಪನವರ ಆಡಳಿತ ವೈಖರಿ.
ಈ ಇಲಾಖೆಯ ಸಚಿವ ಶ್ರೀಮಂತ ಪಾಟೀಲ್ ಇವರು ಕಳೆದ ಮೂರು ತಿಂಗಳಿಂದ ಕಛೇರಿಗೆ ಆಗಮಿಸದೇ ಇರುವದರಿಂದ ಕಛೇರಿಯ ಅಗುಹೋಗುಗಳನ್ನು, ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸುವವರು ಯಾರೂ ಇಲ್ಲದಂತಾಗಿದೆ. ಅದೇ ರೀತಿ ಕಳೆದ ಒಂದು ತಿಂಗಳಿಂದ ಇಲಾಖೆಯ ಪ್ರಭಾರಿ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನ ವಹಿಸಿಕೊಂಡಿರುವ ಅಲ್ಪಸಂಖ್ಯಾತ ಸಮುದಾಯದವರೇ ಆದ ಮಹೇಂದ್ರ ಜೈನ್ ಅವರು ಕಛೇರಿಗೆ ಬಾರದೇ ಇರುವದರಿಂದ ಇಲಾಖೆಗೆ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿ, ಇಡೀ ಇಲಾಖೆ ಅನಾಥವಾಗಿರುವದು ಆತಂಕದ ವಿಷಯವಾಗಿದೆ.

ಈ ನಡುವೆ ಚುನಾವಣೆಯ ದೃಷ್ಟಿಯಿಂದಲೋ ಅಥವಾ ಸಮುದಾಯಗಳ ಮೇಲಿರುವ ಪ್ರತಿಯಿಂದಲೋ ಹಲವಾರು ನಿಗಮ ಮಂಡಳಿ ರಚಿಸಿ ಅನುದಾನ ಘೋಷಿಸುತ್ತ ನಡೆದಿರುವದು ಅನುಮಾನಕ್ಕೆ ದಾರಿ ಮಾಡಿಕೊಡುತ್ತಿದೆ. ಇದ್ದಂತಹ ಇಲಾಖೆಗಳಿಗೆ ಅನುದಾನ ನೀಡದೇ ಹೊಸ ಹೊಸ ನಿಗಮಗಳನ್ನು ಘೋಷಿಸಿ ಅನುದಾನ ನೀಡುತ್ತೇವೆ ಎನ್ನುವದು ನಂಬಲಸಾದ್ಯವಾದ ಮಾತಿನಂತಿದೆ. ಇದೆಲ್ಲ ಗೊತ್ತಿದೆಯೋ ಗೊತ್ತಿಲ್ಲವೋ ವಿರೋಧ ಪಕ್ಷದ ನಾಯಕರಾರೂ ಚಕಾರವೆತ್ತದೇ ಇರುವದು ಕೂಡ ಅನುಮಾನ ಮೂಡಿಸುತ್ತಿದೆ. ವಿರೋಧ ಪಕ್ಷಗಳ ನಾಯಕರ ನಡುವಳಿಕೆ “ಮೌನಂ ಸಮ್ಮತಿ ಲಕ್ಷಣಂ” ಎನ್ನುವಂತಿದೆ. ಸಮುದಾಯದ ಅಭಿವೃದ್ದಿಗೆ ಸಂಬಂಧವೇ ಇಲ್ಲದ ಲವ್ ಜಿಹಾದ್, ಗೋಹತ್ಯೆ ನಿಷೇಧ ಕಾನೂನಿನ ಬಗ್ಗೆ ಮಾತನಾಡುವ ವಿರೋಧ ಪಕ್ಷದ ನಾಯಕರು ಅಲ್ಪಸಂಖ್ಯಾತ ಸಮುದಾಯದ ಶೈಕ್ಷಣಿಕ ಬೆಳವಣಿಗೆಗೆ ತೊಂದರೆಯಾಗುತ್ತಿರುವದು ಕಾಣುತ್ತಿಲ್ಲವೋ ಅಥವಾ ಜಾಣ ಕುರುಡುತನ ಪ್ರದರ್ಶಿಸಲಾಗುತ್ತಿರುವರೋ ತಿಳಿಯದಾಗಿದೆ. ಭಾರತೀಯ ಜನತಾ ಪಕ್ಷದ ಸರಕಾರ ಈ ರೀತಿ ಅನುದಾನ ಕಡಿತಗೊಳಿಸುತ್ತ ಹೋದಲ್ಲಿ ಅಲ್ಪಸಂಖ್ಯಾತರು ಜಾತ್ಯಾತೀತ ಪಕ್ಷವನ್ನು ಬಿಟ್ಟುಹೋಗಲು ಸಾದ್ಯವಾಗುವದಿಲ್ಲ ಎನ್ನುವ ದುರಾಲೋಚನೆಯೋ ವಿವರಿಸಬೇಕಾಗಿದೆ.

  • ಡಾ.ರಝಾಕ ಉಸ್ತಾದ

ರಾಯಚೂರಿನವರಾದ ಡಾ.ರಝಾಕ ಉಸ್ತಾದ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಹಿರಿಯ ಮುಖಂಡರು.


ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...