Homeಕರ್ನಾಟಕಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರಿಗಾಗಿ ಆಯವ್ಯಯದಲ್ಲಿ ಘೋಷಿಸಿದ ಒಟ್ಟು 1897 ಕೋಟಿ ರೂಗಳಲ್ಲಿ 892 ಕೋಟಿ ರೂಗಳನ್ನು ಕಡಿತಗೊಳಿಸಿದೆ. ಈ ಕುರಿತು ಡಾ.ರಝಾಕ ಉಸ್ತಾದ ಮಾಹಿತಿಪೂರ್ಣ ಲೇಖನ ಇಲ್ಲಿದೆ.

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರ ಪಡೆದಂತಹ ಮುಖ್ಯಮಂತ್ರಿಗಳು, ಸಚಿವರು ಅಧಿಕಾರಕ್ಕೆ ಬಂದ ನಂತರ ಸಂವಿಧಾನದ ಮೂಲಭೂತ ಆಶಯಗಳ ವಿರುದ್ದ ಕೆಲಸ ಮಾಡುತ್ತಿರುವದು ಅತ್ಯಂತ ವಿಷಾಧನೀಯವಾಗಿದೆ. ರಾಜಕೀಯ ಕಾರಣಕ್ಕೆ ಎಲ್ಲ ಪಕ್ಷಗಳು ತಮ್ಮದೇ ಆದ ಆದ್ಯತೆಯ ಕೆಲಸ ಮಾಡುತ್ತ ಆರೋಪ, ಪ್ರತ್ಯಾರೋಪ ಮಾಡುವದು ಸಾಮಾನ್ಯವಾದರೂ ಯಾವ ಸರಕಾರವೂ ಒಂದು ಸಮುದಾಯವನ್ನು ಇಷ್ಟೊಂದು ಅನ್ಯಾಯ ಮಾಡಿರುವದು ಇತಿಹಾಸದಲ್ಲಿ ಕಂಡು ಬರಲಿಕ್ಕಿಲ್ಲ. ಬಿ.ಎಸ್.ಯಡಿಯೂರಪ್ಪನವರ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಅದರ ಮೂಲಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧ, ಪಾರ್ಸಿ ಮತ್ತು ಜೈನ್ ಸಮುದಾಯದ ಮೇಲೆ ತೋರಿಸಿದಷ್ಟು ತಾತ್ಸಾರ, ದ್ವೇಷ, ಅಸೂಹೆ ದೇಶದ ಯಾವ ರಾಜ್ಯ ಸರಕಾರಗಳು ಕೂಡ ಇಷ್ಟೊಂದು ಅನ್ಯಾಯ ಮಾಡಿರುವ ಉದಾಹರಣೆ ಇಲ್ಲ.

ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಬಂದ ಮೇಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆ ನಿಗದಿಗೊಳಿಸುತ್ತ ಬಂದಿರುವ ಅನುದಾನ ಕಡಿತಗೊಳಿಸಿದ್ದಲ್ಲದೇ ಹಲವು ಯೋಜನೆಗಳನ್ನು ಬಂದ್ ಮಾಡಿದೆ. 2019-20ನೇ ಸಾಲಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ಬಜೆಟ್‌ನಲ್ಲಿ ಘೋಷಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು 1897.00 ಕೋಟಿ ರೂ. ಯಿಂದ 1571.00 ಕೋಟಿ ರೂ. ಗೆ ಕಡಿಮೆಗೊಳಿಸಿತು. 2020-21ನೇ ಸಾಲಿನಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಮಂಡಿಸಿದ ಬಜೆಟ್‌ನಲ್ಲಿ 1177.00 ಕೋ.ರೂ. ಯಷ್ಟಿದ್ದ ಅನುದಾನವನ್ನು ಮತ್ತೆ ಕಡಿತಗೊಳಿಸಿ 1055.00ಕೋ.ರೂ. ಗೆ ನಿಗದಿಗೊಳಿಸಿದೆ. ಇತ್ತೀಚಿಗೆ ಮತ್ತೆ 1055.00 ಕೋ.ರೂ. ಯಷ್ಟಿದ್ದ ಅನುದಾನದಲ್ಲಿ 50.00 ಕೋ.ರೂ. ಅನುದಾನ ಕಡಿತಗೊಳಿಸಿದೆ.

ಈಗ ಕಡಿತಗೊಳಿಸಿದ ಅನುದಾನದಲ್ಲಿ ಕಳೆದ 5 ವರ್ಷಗಳಿಂದ ಅನುಷ್ಠಾನ ಮಾಡಲಾಗುತ್ತಿದ್ದ ಹಲವು ಜನಪರ ಕಲ್ಯಾಣ ಯೋಜನೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅನುಷ್ಠಾನ ಮಾಡುವದನ್ನು ನಿಲ್ಲಿಸಿದೆ. ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಜಾರಿಗೊಳಿಸಿದ ಕಾಲೋನಿ ಅಭಿವೃದ್ದಿ ಯೋಜನೆ ಈಗಿನ ಸರಕಾರ ರದ್ದುಗೊಳಿಸಿದೆ, ಭಾರಿ ಸದ್ದುಗೊಳಿಸಿದ ಶಾದಿಭಾಗ್ಯ ಯೋಜನೆಯನ್ನು ಕೂಡ ರದ್ದುಗೊಳಿಸಿದೆ. ಈ ವರ್ಷ ಇದೆಲ್ಲವುಕ್ಕಿಂತ ಪ್ರಮುಖ ಯೋಜನೆಗಳಾದ ವಿದೇಶದಲ್ಲಿ ಉನ್ನತ ವ್ಯಾಸಂಗದ ಯೋಜನೆ, ನಾಗರೀಕ ಪರೀಕ್ಷೆ ತರಬೇತಿ ಯೋಜನೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿಯಂತಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದಂತಹ ಯೋಜನೆಗಳ 2019-20ನೇ ಸಾಲಿನ ಅನುದಾನ ಸರಕಾರ ಇಲ್ಲಿಯವರೆಗೆ ಬಿಡುಗಡೆಗೊಳಿಸದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುವಂತಹ ಕೆಲಸ ಮಾಡುತ್ತಿರುವದು ಅಕ್ಷಮ್ಯ ಅಪರಾಧವಾಗುತ್ತದೆ.

ರಾಜ್ಯದಲ್ಲಿ 2016-17 ರಿಂದ ಜಾರಿಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಸಂಶೋಧನೆ ಕೈಗೊಂಡಲ್ಲಿ ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು ಈ ವರ್ಷದಿಂದ ಪ್ರತಿ ತಿಂಗಳು 25000/- ರೂ ಯನ್ನು ಕಡಿತಗೊಳಿಸಿ 8333/- ರೂ ಗೆ ಇಳಿಸಿ ಯಾರೂ ಸಂಶೋಧನೆಯನ್ನು ಪೂರ್ಣಗೊಳಿಸದಂತಹ ವಾತಾವರಣ ನಿರ್ಮಿಸಿದೆ. 2020-21ನೇ ಸಾಲಿನಲ್ಲಿ ರಾಜ್ಯಾದ್ಯಂತಹ ಸುಮಾರು 300 ವಿದ್ಯಾರ್ಥಿಗಳು ಸಂಶೋಧನೆಗಾಗಿ ಪ್ರೋತ್ಸಾಹ ಧನ ಪಡೆಯುತ್ತಿದ್ದರೂ, ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 3.00 ಲಕ್ಷ ರೂ. ಯಾದರೂ ಒಟ್ಟು 300 ವಿದ್ಯಾರ್ಥಿಗಳಿಗೆ ಈ ಮೊತ್ತ 9.0 ಕೋ.ರೂ ಆಗುತ್ತದೆ. ಹಲವಾರು ಅನುಪಯುಕ್ತ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ವೆಚ್ಚ ಮಾಡುವ ಸರಕಾರ ಕೇವಲ 9.0 ಕೋ.ರೂ ಗೆ 300 ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ.

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ವಾರ್ಷಿಕವಾಗಿ ಕರ್ನಾಟಕ ರಾಜ್ಯದಿಂದ ಸುಮಾರು 12 ಲಕ್ಷ 50 ಸಾವಿರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರ ಸೇರಿ ಒಟ್ಟು 270.00 ಕೋ.ರೂ. ಅನುದಾನ ನಿಗದಿಗೊಳಿಸಲಾಗಿತ್ತು, ಆದರೆ 2019-20ನೇ ಸಾಲಿನಲ್ಲಿ ರಾಜ್ಯ ಸರಕಾರ ಅನುದಾನ ಬಿಡುಗಡೆಗೊಳಿಸದೇ ಇರುವದರಿಂದ ಶೇ 50 ರಷ್ಟು ವಿದ್ಯಾರ್ಥಿಗಳು ಕಳೆದ ವರ್ಷದ ವಿದ್ಯಾರ್ಥಿ ವೇತನ ಪಡೆಯಲು ಸಾದ್ಯವಾಗಿಲ್ಲ. ಈಗಲೂ ಜಾತಕ ಪಕ್ಷಿಯಂತೆ ಸರಕಾರದ ಕಡೆ ಇಂದು ಬಿಡುಗಡೆಯಾಗುವುದೋ ನಾಳೆ ಬಿಡುಗಡೆಯಾಗುವುದೋ ಎಂದು ನೋಡುವಂತಹ ಪರಸ್ಥಿತಿ ಬಡ ಅಲ್ಪಸಂಖ್ಯಾತ ವಿದ್ಯಾರ್ಥಿಗಳದ್ದು.

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

1980 ರಿಂದ ರಾಜ್ಯದಲ್ಲಿ ಎಲ್ಲ ಹಿಂದುಳಿದ ವಿದ್ಯಾರ್ಥಿಗಳಿಗೆ ಜಾರಿಯಲ್ಲಿದ್ದು, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರತ್ಯೇಕಗೊಂಡ ನಂತರ ಶುಲ್ಕವಿನಾಯತಿ ಯೋಜನೆ 2014 ರಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತ ಸಮುದಾಯದ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ನೀಡುತ್ತ ಬಂದಿದೆ. ಆದರೆ, 2019-20ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಈಗಲೂ ಅನುದಾನ ಬಿಡುಗಡೆಗೊಳಿಸದೇ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಡೋಲಾಯನಮಾನವಾಗಿದೆ.

ಅದೇ ರೀತಿ ರಾಜ್ಯದಲ್ಲಿ ಎಲ್ಲ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2014-15ನೇ ಸಾಲಿನಿಂದ ಮನೆ ಬಿಟ್ಟು ಬೇರೆ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಂದೇ ಸಿದ್ದರಾಮಯ್ಯ ನೇತೃತ್ವದ ಸರಕಾರ ಜಾರಿಗೊಳಿಸಿದ ವಿದ್ಯಾಸಿರಿ ಯೋಜನೆಯ 2019-20ನೇ ಸಾಲಿನ ಅನುದಾನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಬಿಡುಗಡೆಗೊಳಿಸಿದೇ ಇರುವದರಿಂದ ಈ ಯೋಜನೆಯ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳು ಆತಂಕದಲ್ಲಿದ್ದಾರೆ.

ಇನ್ನೂ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಮೂಲಕ ಅನುಷ್ಠಾನ ಮಾಡಲಾಗುತ್ತಿರುವ “ಅರಿವು” ಯೋಜನೆಯೂ ಸಹ ಈ ವರ್ಷ ದಾರಿ ತಪ್ಪಿದೆ, ಇದರ ಮೂಲಕ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತಗೊಳ್ಳುವಂತೆ ಮಾಡಿದೆ. ಅರಿವು ಯೋಜನೆಯ ಮೂಲಕ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನಿಗಮದಿಂದ ಶೈಕ್ಷಣಿಕ ಸಾಲ ನೀಡಲಾಗುತ್ತಿತ್ತು, ಈ ವರ್ಷ ಸದರಿ ಸಾಲವನ್ನು ವಿದ್ಯಾರ್ಥಿಗಳು ಕೋರ್ಸುಗಳಿಗೆ ಪಾವತಿಸುವ ಮೊತ್ತದ ಅರ್ಧ ಮೊತ್ತ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸಾಲದ ರೂಪದಲ್ಲಿ ನೀಡುತ್ತಿದೆ.

ಒಂದು ಕಡೆ ಪ್ರೋತ್ಸಾಹಧನ ಕಡಿತಗೊಳಿಸಿ, ಮತ್ತೊಂದು ಕಡೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನದ ಅನುದಾನ ಕಡಿತಗೊಳಿಸಿದ್ದಲ್ಲದೇ ಶುಲ್ಕವಿನಾಯತಿ, ವಿದ್ಯಾಸಿರಿ ಅನುದಾನವೂ ಸರಕಾರ ನೀಡುತ್ತಿಲ್ಲ, ಇದನ್ನು ಹೊರತುಪಡಿಸಿ ಇದ್ದಂತಹ ಅರಿವು ಸಾಲದ ಯೋಜನೆಯನ್ನು ಮೊಟುಕುಗೊಳಿಸಲು ಹೊರಟಿರುವದು ಸರಕಾರ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣ ಮೂಲೆಗುಂಪು ಮಾಡುವ ಶಪಥ ಮಾಡಿರುವಂತಿದೆ ಬಿ.ಎಸ್. ಯಡಿಯೂರಪ್ಪನವರ ಆಡಳಿತ ವೈಖರಿ.
ಈ ಇಲಾಖೆಯ ಸಚಿವ ಶ್ರೀಮಂತ ಪಾಟೀಲ್ ಇವರು ಕಳೆದ ಮೂರು ತಿಂಗಳಿಂದ ಕಛೇರಿಗೆ ಆಗಮಿಸದೇ ಇರುವದರಿಂದ ಕಛೇರಿಯ ಅಗುಹೋಗುಗಳನ್ನು, ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸುವವರು ಯಾರೂ ಇಲ್ಲದಂತಾಗಿದೆ. ಅದೇ ರೀತಿ ಕಳೆದ ಒಂದು ತಿಂಗಳಿಂದ ಇಲಾಖೆಯ ಪ್ರಭಾರಿ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನ ವಹಿಸಿಕೊಂಡಿರುವ ಅಲ್ಪಸಂಖ್ಯಾತ ಸಮುದಾಯದವರೇ ಆದ ಮಹೇಂದ್ರ ಜೈನ್ ಅವರು ಕಛೇರಿಗೆ ಬಾರದೇ ಇರುವದರಿಂದ ಇಲಾಖೆಗೆ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿ, ಇಡೀ ಇಲಾಖೆ ಅನಾಥವಾಗಿರುವದು ಆತಂಕದ ವಿಷಯವಾಗಿದೆ.

ಈ ನಡುವೆ ಚುನಾವಣೆಯ ದೃಷ್ಟಿಯಿಂದಲೋ ಅಥವಾ ಸಮುದಾಯಗಳ ಮೇಲಿರುವ ಪ್ರತಿಯಿಂದಲೋ ಹಲವಾರು ನಿಗಮ ಮಂಡಳಿ ರಚಿಸಿ ಅನುದಾನ ಘೋಷಿಸುತ್ತ ನಡೆದಿರುವದು ಅನುಮಾನಕ್ಕೆ ದಾರಿ ಮಾಡಿಕೊಡುತ್ತಿದೆ. ಇದ್ದಂತಹ ಇಲಾಖೆಗಳಿಗೆ ಅನುದಾನ ನೀಡದೇ ಹೊಸ ಹೊಸ ನಿಗಮಗಳನ್ನು ಘೋಷಿಸಿ ಅನುದಾನ ನೀಡುತ್ತೇವೆ ಎನ್ನುವದು ನಂಬಲಸಾದ್ಯವಾದ ಮಾತಿನಂತಿದೆ. ಇದೆಲ್ಲ ಗೊತ್ತಿದೆಯೋ ಗೊತ್ತಿಲ್ಲವೋ ವಿರೋಧ ಪಕ್ಷದ ನಾಯಕರಾರೂ ಚಕಾರವೆತ್ತದೇ ಇರುವದು ಕೂಡ ಅನುಮಾನ ಮೂಡಿಸುತ್ತಿದೆ. ವಿರೋಧ ಪಕ್ಷಗಳ ನಾಯಕರ ನಡುವಳಿಕೆ “ಮೌನಂ ಸಮ್ಮತಿ ಲಕ್ಷಣಂ” ಎನ್ನುವಂತಿದೆ. ಸಮುದಾಯದ ಅಭಿವೃದ್ದಿಗೆ ಸಂಬಂಧವೇ ಇಲ್ಲದ ಲವ್ ಜಿಹಾದ್, ಗೋಹತ್ಯೆ ನಿಷೇಧ ಕಾನೂನಿನ ಬಗ್ಗೆ ಮಾತನಾಡುವ ವಿರೋಧ ಪಕ್ಷದ ನಾಯಕರು ಅಲ್ಪಸಂಖ್ಯಾತ ಸಮುದಾಯದ ಶೈಕ್ಷಣಿಕ ಬೆಳವಣಿಗೆಗೆ ತೊಂದರೆಯಾಗುತ್ತಿರುವದು ಕಾಣುತ್ತಿಲ್ಲವೋ ಅಥವಾ ಜಾಣ ಕುರುಡುತನ ಪ್ರದರ್ಶಿಸಲಾಗುತ್ತಿರುವರೋ ತಿಳಿಯದಾಗಿದೆ. ಭಾರತೀಯ ಜನತಾ ಪಕ್ಷದ ಸರಕಾರ ಈ ರೀತಿ ಅನುದಾನ ಕಡಿತಗೊಳಿಸುತ್ತ ಹೋದಲ್ಲಿ ಅಲ್ಪಸಂಖ್ಯಾತರು ಜಾತ್ಯಾತೀತ ಪಕ್ಷವನ್ನು ಬಿಟ್ಟುಹೋಗಲು ಸಾದ್ಯವಾಗುವದಿಲ್ಲ ಎನ್ನುವ ದುರಾಲೋಚನೆಯೋ ವಿವರಿಸಬೇಕಾಗಿದೆ.

  • ಡಾ.ರಝಾಕ ಉಸ್ತಾದ

ರಾಯಚೂರಿನವರಾದ ಡಾ.ರಝಾಕ ಉಸ್ತಾದ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಹಿರಿಯ ಮುಖಂಡರು.


ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...