Homeಕರ್ನಾಟಕಕೊರೋನಾ ಹೆಸರಿನಲ್ಲಿ ಕಾರ್ಮಿಕರ ಹಣಕ್ಕೆ ಕೈ ಹಾಕಿದ ಬಿಎಸ್‍ವೈ ಸರ್ಕಾರ

ಕೊರೋನಾ ಹೆಸರಿನಲ್ಲಿ ಕಾರ್ಮಿಕರ ಹಣಕ್ಕೆ ಕೈ ಹಾಕಿದ ಬಿಎಸ್‍ವೈ ಸರ್ಕಾರ

- Advertisement -
- Advertisement -

ಕಟ್ಟಡ ಕಾರ್ಮಿಕರ ನಿಧಿಯನ್ನು ಕಾರ್ಮಿಕರ ಯೋಗಕ್ಷೇಮವಲ್ಲದೆ ಬೇರೆ ಯಾವುದೇ ಕೆಲಸಕ್ಕೆ ಬಳಸಿಕೊಳ್ಳಬಾರದು ಎಂದು ಸುಪ್ರಿಂ ಕೋರ್ಟ್ ತೀರ್ಪು ನೀಡಿದೆ. ಆದರೂ ಕರ್ನಾಟಕದಲ್ಲಿ ಈ ಹಣವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಅನರ್ಹ ಶಾಸಕರಿಂದ ಅಸ್ಥಿತ್ವಕ್ಕೆ ಬಂದ ರಾಜ್ಯ ಸರ್ಕಾರ ಅರ್ಹ ಫಲಾನುಭವಿಗಳಿಗೆ ಅನ್ಯಾಯವೆಸಗುತ್ತಿದೆ. ಸ್ವತಃ ಸಿಎಂ ಯಡಿಯೂರಪ್ಪನವರೇ ಇಂತಹ ಅಮಾನವೀಯ ಭ್ರಷ್ಟಾಚಾರಕ್ಕೆ ಅಂಕಿತ ಹಾಕಿರುವುದು ದುರಾದೃಷ್ಟಕರ.
ಟಿ ಉಮೇಶ್, ಸಿಐಟಿಯು

ಭಾರತ ಮತ್ತು ಕರ್ನಾಟಕದಲ್ಲಿ ಕೊರೋನಾ ಕೈಮೀರುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. ಪರಿಣಾಮ ನೆರೆಯ ಕೇರಳದಿಂದ ಹರಿಯಾಣದವರೆಗೆ ಎಲ್ಲಾ ಸರ್ಕಾರಗಳೂ ಜನಪರ ಯೋಜನೆಗಳ ಕಡೆಗೆ ಗಮನ ನೀಡುತ್ತಿದ್ದರೆ, ಕರ್ನಾಟಕದಲ್ಲಿ ಮಾತ್ರ ಸ್ವತಃ ರಾಜ್ಯ ಸರ್ಕಾರವೇ ಕಾರ್ಮಿಕರ ನಿಧಿಗೆ ಸದ್ದಿಲ್ಲದೆ ಕನ್ನ ಹಾಕುವ ಕೆಲಸಕ್ಕೆ ಮುಂದಾಗಿದೆ. ಪರಿಣಾಮ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ವಲಯ ಕೊರೋನಾಗಿಂತ ಮುಂಚಿತವಾಗಿಯೇ ಹಸಿವಿಗೆ ಬಲಿಯಾಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ.

ಕಳೆದ ತಿಂಗಳು ಪತ್ರಿಕಾಗೋಷ್ಠಿ ನಡೆಸಿ ವಿಶೇಷ ಕೊರೋನಾ ಪ್ಯಾಕೇಜ್ ಘೋಷಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಲ್ಲಾ ರಾಜ್ಯಗಳಲ್ಲೂ ಕಟ್ಟಡ ಕಾರ್ಮಿಕರ ನಿಧಿಯಲ್ಲಿ ಅಪಾರ ಪ್ರಮಾಣದ ಹಣ ಇದ್ದು ಈ ಹಣವನ್ನು ಕಾರ್ಮಿಕರ ಯೋಗಕ್ಷೇಮಕ್ಕೆ ಬಳಸಬೇಕು ಎಂದು ಸೂಚನೆ ನೀಡಿದ್ದರು. ಆದರೆ ಕರ್ನಾಟಕದಲ್ಲಿ ಮಾತ್ರ ಈ ಹಣ ಕೆಲವು ರಾಜಕಾರಣಿಗಳ ಯೋಗಕ್ಷೇಮಕ್ಕೆ ಬಳಕೆಯಾಗುತ್ತಿರುವುದು ವಿಷಾಧಕರ ಸಂಗತಿ. ಅಸಲಿಗೆ ಕರ್ನಾಟಕದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯಲ್ಲಿ ಸಂಗ್ರಹವಾಗಿರುವ ಹಣದ ಪ್ರಮಾಣ ಎಷ್ಟು? ರಾಜ್ಯದಲ್ಲಿರುವ ಕಾರ್ಮಿಕರ ಸಂಖ್ಯೆ ಎಷ್ಟು? ಕಾರ್ಮಿಕರ ಹಣವನ್ನು ಹೇಗೆಲ್ಲಾ ಲೂಟಿ ಮಾಡಲಾಗುತ್ತಿದೆ? ಲೂಟಿ ಮಾಡಲು ಸ್ವತಃ ಸಿಎಂ ಅನುವು ಮಾಡಿಕೊಟ್ಟರೇ? ಹೀಗೆ ಎಲ್ಲಾ ಪ್ರಶ್ನೆಗಳಿಗೂ ಇಲ್ಲದೆ ಉತ್ತರ!

ಕಟ್ಟಡ ಕಾರ್ಮಿಕರ ಸಂಖ್ಯೆ-ಸಂಗ್ರಹವಾಗಿರುವ ನಿಧಿ ಎಷ್ಟು?

2017ರ ವರೆಗೆ ಕಳೆದ 13 ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಕಟ್ಟಡ ಕಾರ್ಮಿಕರ ಸಂಖ್ಯೆ ಬರೋಬ್ಬರಿ 21 ಲಕ್ಷ. ಆದರೆ, 2018ರಲ್ಲಿ ನವೀಕರಿಸಿಕೊಂಡ ಕಾರ್ಮಿಕರ ಸಂಖ್ಯೆ ಕೇವಲ 1.3 ಲಕ್ಷ ಮಾತ್ರ. ಇನ್ನೂ ಬೆಂಗಳೂರಿನಲ್ಲೇ 3 ರಿಂದ 5 ಲಕ್ಷದ ವರೆಗೆ ಕಟ್ಟಡ ಕಾರ್ಮಿಕರಿದ್ದು ಈ ಪೈಕಿ ಬಹುಪಾಲು ಜನ ತಮ್ಮ ಹೆಸರನ್ನು ಸಂಘಟನೆಯಲ್ಲಿ ನೋಂದಾಯಿಸಿಕೊಂಡಿಲ್ಲ. ಕಾರಣ 2018ರಲ್ಲಿ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರ ಗುರುತನ್ನು ನೋಂದಾಯಿಸಲು ಆನ್ಲೈನ್ ವ್ಯವಸ್ಥೆಯನ್ನು ಪರಿಚಯಿಸಿತ್ತು. ಹೀಗಾಗಿ ಆನ್ಲೈನ್ ಬಳಸಲು ಬಾರದ ಅನೇಕರು ತಮ್ಮ ಹೆಸರನ್ನು ನೋಂದಾಯಿಸಲು ಸಾಧ್ಯವಾಗಿಲ್ಲ.

ಈ 21 ಲಕ್ಷ ಅಲ್ಲದೆ, ವಲಸೆ ಕಟ್ಟಡ ಕಾರ್ಮಿಕರೂ ಸೇರಿದಂತೆ ರಾಜ್ಯದಲ್ಲಿ ಈವರೆಗೆ ನೋಂದಾವಣೆಯಾಗದ ಕಾರ್ಮಿಕರ ಸಂಖ್ಯೆಯೇ ಸುಮಾರು ಅಂದಾಜು 12 ಲಕ್ಷ ಇದೆ. ಹೇಗೆ ನೋಡಿದರೂ ರಾಜ್ಯದಲ್ಲಿ ಒಟ್ಟು 33 ರಿಂದ 35 ಲಕ್ಷ ಕಟ್ಟಡ ಕಾರ್ಮಿಕರಿದ್ದಾರೆ ಎಂದು ಲೆಕ್ಕ ನೀಡುತ್ತಾರೆ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘಟನೆಯ ಕಾರ್ಯದರ್ಶಿ ಮಹಾಂತೇಶ್.

ಕಾರ್ಮಿಕರ ಯೋಗಕ್ಷೇಮವನ್ನು ನೋಡಿಕೊಳ್ಳುವ ಸಲುವಾಗಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಇದೆ. ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಈ ಮಂಡಳಿಯ ಅಧ್ಯಕ್ಷರು. ಇನ್ನೂ ಕಟ್ಟಡ ಮಾಲೀಕರು ಕಟ್ಟುವ ಶೇ.1 ರಷ್ಟು ಸೆಸ್ ಹಣ ಈ ಮಂಡಳಿಗೆ ಸಂದಾಯವಾಗುತ್ತದೆ. ಹೀಗೆ ಕಟ್ಟಡ ಕಾರ್ಮಿಕರ ನಿಧಿಯಲ್ಲಿ ಸಂಗ್ರಹವಾಗಿರುವ ಹಣವೇ ರಾಜ್ಯದಲ್ಲಿ ಬರೋಬ್ಬರಿ 8,500 ಕೋಟಿ ಇದೆ.

ಕೊರೋನಾ ಹೆಸರಲ್ಲಿ ಕಾರ್ಮಿಕರ ನಿಧಿಗೂ ಕನ್ನ!

ಕೊರೋನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್‍ಡೌನ್ ಘೋಷಣೆ ಮಾಡುತ್ತಿದ್ದಂತೆ ಊಟಕ್ಕಿಲ್ಲದೆ ಸಾವಿರಾರು ಜನ ಬೆಂಗಳೂರು, ಮಂಗಳೂರಿನಂತಹ ಮಹಾ ನಗರಗಳಿಂದ ತಮ್ಮ ಊರಿಗೆ ಕಾಲ್ನಡಿಗೆಯಲ್ಲೇ ಹೊರಟಿದ್ದರು. ಈ ವೇಳೆ ನೂರಾರು ಕಿಮೀ ನಡೆದಿದ್ದ ಗಂಗಮ್ಮ ಎಂಬ ಮಹಿಳೆ ಬಳ್ಳಾರಿ ಬಳಿ ಮೃತರಾಗಿದ್ದ ದುರಂತವನ್ನು ಭಾಗಶಃ ಕನ್ನಡಿಗರು ಮರೆತಿರಲಿಕ್ಕಿಲ್ಲ.

ಉತ್ತರ ಕರ್ನಾಟಕ ಮಾತ್ರವಲ್ಲ ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶದಿಂದ ಅಪಾರ ಸಂಖ್ಯೆಯ ಕಟ್ಟಡ ಕಾರ್ಮಿಕರು ಕೆಲಸಕ್ಕೆಂದು ವಲಸೆ ಬಂದು ಬೆಂಗಳೂರಿನಂತಹ ಮಹಾನಗರದ ಗೂಡು ಸೇರಿದ್ದಾರೆ. ಇನ್ನೂ ರಾಜ್ಯದ ನಾನಾ ಮೂಲೆಗಳಲ್ಲಿ ನೆಲೆಸಿರುವ ಕಟ್ಟಡ ಕಾರ್ಮಿಕರ ಸಂಖ್ಯೆಯೂ ಅಪಾರ. ಈ ಎಲ್ಲರೂ ದಿನನಿತ್ಯ ಕೂಲಿ ಮಾಡಿ ಬದುಕುವವರು. ಹೀಗಾಗಿ ಸರ್ಕಾರದ ಲಾಕ್‍ಡೌನ್ ನಿರ್ಧಾರ ಮೊದಲ ಪರಿಣಾಮ ಬೀರುವುದೇ ಇಂತಹ ಜನರ ಮೇಲೆ. ಇದೇ ಕಾರಣಕ್ಕೆ ಕಾರ್ಮಿಕರ ಸಂಘಟನೆಗಳು ಒಂದಾಗಿ ಕಲ್ಯಾಣ ಮಂಡಳಿ ಹಣ ಬಳಸಿ ಆರಂಭದ ದಿನದಲ್ಲೇ ಎಲ್ಲಾ ಕಾರ್ಮಿಕರಿಗೂ ಮನೆ ಮನೆಗೆ ಊಟ ತಲುಪಿಸುವ ಕೆಲಸಕ್ಕೆ ಮುಂದಾಗಿದ್ದವು.

ನಂತರ ಊಟದ ಬದಲು ಕಾರ್ಮಿಕರ ಮನೆಗಳಿಗೆ ಆಹಾರ ಧಾನ್ಯಗಳ ಕಿಟ್ ನೀಡಿದರೆ ಅವರೇ ಅಡುಗೆ ಮಾಡಿ ಊಟ ಮಾಡುತ್ತಾರೆ ಎಂದು ಉದ್ದೇಶಿಸಲಾಗಿತ್ತು. ಇಸ್ಕಾನ್ ಅವರ ಅಕ್ಷಯ ಪಾತ್ರೆ ಸಂಸ್ಥೆಗೆ ಅಕ್ಕಿ, ಬೇಳೆ, ಎಣ್ಣೆ ಸೇರಿದಂತೆ ಎಲ್ಲಾ ಅವಶ್ಯಕ ವಸ್ತುಗಳನ್ನೂ ಹೊಂದಿರುವ 750 ರೂ. ಮುಖ ಬೆಲೆಯ 1 ಲಕ್ಷ ಆಹಾರ ಕಿಟ್ ತಯಾರಿಸಿ ನೀಡಲು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಆದೇಶಿಸಿತ್ತು.
ಇದೊಂದು ಆದೇಶ ಸರಿಯಾಗಿ ಪಾಲನೆಯಾಗಿದ್ದರೆ ಭಾಗಶಃ ಇಂದು ಕಾರ್ಮಿಕರು ಹಸಿದ ರಾತ್ರಿಗಳನ್ನು ಕಾಣುತ್ತಿರಲಿಲ್ಲವೇನೋ? ಆದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೊರಡಿಸಿದ ಆ ಒಂದು ಆದೇಶ ಇಂದು ಕಾರ್ಮಿಕರ ಅನ್ನವನ್ನು ಕಸಿದುಬಿಟ್ಟಿದೆ.

ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಟ್ಟರಾ ಬಿಎಸ್‍ವೈ?

ಅಸಲಿಗೆ ಕಾರ್ಮಿಕರಿಗೆ ಬೇಕಾದ ಸವಲತ್ತುಗಳನ್ನು ಮೂಲಭೂತ ಅವಶ್ಯಕತೆಗಳನ್ನು ಒದಗಿಸುವ ಸಲುವಾಗಿಯೇ ಕಾರ್ಮಿಕ ಸಂಘಟನೆಗಳು ಇವೆ. ಇನ್ನೂ ಸರ್ಕಾರದ ಅಧೀನದಲ್ಲೇ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಇದೆ. ಯಾವುದೇ ಕಾರ್ಯಕ್ರಮವನ್ನು ಈ ಮಂಡಳಿ ಅಥವಾ ಕಾರ್ಮಿಕರ ಸಂಘಟನೆಯಿಂದ ಕಾರ್ಮಿಕರಿಗೆ ಯಶಸ್ವಿಯಾಗಿ ತಲುಪಿಸಲು ಸಾಧ್ಯ. ಹೀಗಾಗಿ ಆಹಾರದ ಕಿಟ್‍ಗಳನ್ನು ಮಂಡಳಿಯೇ ಕಾರ್ಮಿಕರಿಗೆ ನೀಡಲು ಮುಂದಾಗಿತ್ತು. ಆದರೆ, ಏಪ್ರಿಲ್ 06 ರಂದು ಆದೇಶ ಹೊರಡಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲಾ ಆಹಾರದ ಕಿಟ್‍ಗಳನ್ನು ಪಾಲಿಕೆ ಸದಸ್ಯರು ಮತ್ತು ಶಾಸಕರಿಂದಲೇ ಕಾರ್ಮಿಕರಿಗೆ ತಲುಪಿಸಬೇಕು ಎಂದು ಸುತ್ತೋಲೆಯೊಂದನ್ನು ಹೊರಡಿಸಿಬಿಟ್ಟಿದ್ದರು.

ಈ ಸುತ್ತೋಲೆ ಹೊರಡಿಸಿದ್ದೇ ತಡ ಎಲ್ಲಾ ಆಹಾರದ ಕಿಟ್‍ಗಳನ್ನು ಪ್ರತಿ ವಾರ್ಡ್‍ಗೆ ಇಷ್ಟು ಎಂದು ಲೆಕ್ಕ ಹಾಕಿ ಈಗಾಗಲೇ ಪಾಲಿಕೆ ಸದಸ್ಯರು ಮತ್ತು ಶಾಸಕರಿಗೆ ನೀಡಲಾಗಿದೆ. ಮತ್ತು ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಿಂದ ಖರೀದಿಸಲಾಗಿರುವ ಈ ಆಹಾರದ ಕಿಟ್‍ಗಳನ್ನು ಕಾರ್ಮಿಕರಿಗೆ ನೀಡಬೇಕು ಎಂದು ಸೂಚಿಸಲಾಗಿದೆ.

ಆದರೆ, ಶಾಸಕರು ಹಾಗೂ ಪಾಲಿಕೆ ಸದಸ್ಯರು ಮಾತ್ರ ಈ ಆಹಾರದ ಕಿಟ್‍ಗಳನ್ನು ಕಾರ್ಮಿಕರಿಗೆ ನೀಡುತ್ತಿಲ್ಲ, ಬದಲಾಗಿ ತಮ್ಮ ಕ್ಷೇತ್ರದ ಮತದಾರರಿಗೆ ಹಂಚುವ ಕೆಲಸದಲ್ಲಿ ನಿರತರಾಗಿದ್ದಾರೆ.

ಬೆಂಗಳೂರಿನಲ್ಲಿರುವ ಬಹುಪಾಲು ಕಟ್ಟಡ ಕಾರ್ಮಿಕರು ಇಲ್ಲಿನ ಮೂಲದವರಲ್ಲ. ಕೆಲಸಕ್ಕಾಗಿ ಹಳ್ಳಿಗಳಿಂದ ಇಲ್ಲಿಗೆ ವಲಸೆ ಬಂದವರು. ಹೀಗಾಗಿ ಇವರಿಗೆ ಸಾಮಾನ್ಯವಾಗಿ ಇಲ್ಲಿ ಮತದಾರ ಚೀಟಿ ಹಾಗೂ ಯಾವುದೇ ಗುರುತು ಇರುವುದಿಲ್ಲ. ಇಂತವರಿಗೆ ಕಿಟ್ ನೀಡುವ ಮೂಲಕ ರಾಜಕಾರಣಿಗಳಿಗೆ ಆಗುವ ಲಾಭವಾದರೂ ಏನು? ಹೀಗಾಗಿಯೇ ಅವರು ಆಹಾರದ ಕಿಟ್‍ಗಳನ್ನು ಕಾರ್ಮಿಕರಿಗೆ ನೀಡುವ ಮೂಲಕ ತಮ್ಮ ಕ್ಷೇತ್ರದ ಮತದಾರರಿಗೆ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಬೆಂಗಳೂರಿನಲ್ಲಿ ಈವರೆಗೆ ಅಂದಾಜು 60,000 ಕಾರ್ಮಿಕರಿಗೆ ಆಹಾರದ ಕಿಟ್‍ಗಳನ್ನು ವಿತರಿಸಲಾಗಿದೆ ಎಂದು ಕಾಪೆರ್Çೀಟರ್‍ಗಳು ಹಾಗೂ ಶಾಸಕರು ಹೇಳುತ್ತಿದ್ದಾರೆ. ಆದರೆ, ಯಾವ ವಾರ್ಡ್‍ನಲ್ಲಿ ಎಷ್ಟು? ಮತ್ತು ಯಾರಿಗೆ ವಿತರಿಸಲಾಗಿದೆ ಎಂಬ ಕುರಿತು ಯಾವುದೇ ಲೆಕ್ಕಾಚಾರ ಇಲ್ಲದಂತಾಗಿದೆ. ಪರಿಣಾಮ ಅತ್ತ ಕೆಲಸವೂ ಇಲ್ಲದೆ, ಕೂಲಿಯೂ ಇಲ್ಲದೆ ಇತ್ತ ಊಟವೂ ಇಲ್ಲದೆ ಬಡ ಕಾರ್ಮಿಕರು ಹೊಟ್ಟೆಯ ಮೇಲೆ ತಣ್ಣೀರ ಬಟ್ಟೆ ಹಾಕಿಕೊಂಡು ಮಲಗುವಂತಾಗಿದೆ.

ಕಾರ್ಮಿಕರ ನಿಧಿಯಲ್ಲಿ ಶಾಸಕರ ಶೋಕಿ ಪ್ರಚಾರ

ರಾಜ್ಯ ಕಟ್ಟಡ ಕಾರ್ಮಿಕರ ಹಣವನ್ನು ಕೊರೋನಾ ಹೆಸರಿನಲ್ಲಿ ಲೂಟಿ ಮಾಡಲಾಗುತ್ತಿದೆ ಎಂಬುದು ಒಂದೆಡೆಯಾದರೆ, ಮತ್ತೊಂದೆಡೆ ಕಾರ್ಮಿಕರ ಕಲ್ಯಾಣ ನಿಧಿಯಲ್ಲೇ ಖರೀದಿಸಿದ ಆಹಾರದ ಕಿಟ್‍ಗಳಿಗೆ ರಾಜಕಾರಣಿಗಳು ತಮ್ಮ ಫೋಟೋಗಳನ್ನು ಹಾಕಿಕೊಂಡು ಬಿಟ್ಟಿ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ. ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಇತ್ತೀಚೆಗೆ ಜನರಿಗೆ ವಿತರಿಸಲು ತಂದಿದ್ದ ಆಹಾರದ ಕಿಟ್‍ಗಳ ಮೇಲೆ ತಮ್ಮ ಭಾವಚಿತ್ರವನ್ನು ಮುದ್ರಿಸಿ ವಿತರಣೆ ಮಾಡುವ ಮೂಲಕ ವಿರೋಧ ಪಕ್ಷದ ನಾಯಕರ ಟೀಕೆಗೆ ಗುರಿಯಾಗಿದ್ದರು. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಟೀಕೆಗೆ ಗುರಿಯಾಗಿದ್ದರು.

ಅಲ್ಲದೆ, ಇತ್ತೀಚೆಗೆ ಚಿತ್ರನಟಿ ಬಿಜೆಪಿ ನಾಯಕಿ ಮಾಳವಿಕ ಆರ್‍ಎಸ್‍ಎಸ್ ಮುಖಂಡರ ಜೊತೆಗೂಡಿ ಬಡವರಿಗೆ ಆಹಾರ ವಿತರಣೆ ಮಾಡುವ ಕಾರ್ಯಕ್ರಮದ ಫೋಟೊವನ್ನು ಹಂಚಿಕೊಂಡಿದ್ದರು. ಆದರೆ, ಶಾಸಕ ಲಿಂಬಾವಳಿ ಮತ್ತು ಚಿತ್ರನಟಿ ಮಾಳವಿಕ ವಿತರಣೆ ಮಾಡಿದ್ದ ಎಲ್ಲಾ ಆಹಾರದ ಕಿಟ್‍ಗಳನ್ನೂ ಕಾರ್ಮಿಕರ ನಿಧಿಯಿಂದಲೇ ಖರೀದಿಸಲಾಗಿತ್ತು ಎಂಬುದು ಉಲ್ಲೇಖಾರ್ಹ. ಆದರೆ, ಕಾರ್ಮಿಕರ ನಿಧಿ ಹೀಗೆಲ್ಲಾ ದುರುಪಯೋಗವಾಗುತ್ತಿದ್ದರೂ, ಕಾರ್ಮಿಕರು ಒಂದೊತ್ತಿನ ಊಟಕ್ಕಾಗಿ ಪರದಾಡುತ್ತಿದ್ದರೂ ಸಹ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರದ್ದು ಮಾತ್ರ ಜಾಣ ಮೌನ.

ಇನ್ನಾದರೂ ಕಾರ್ಮಿಕರಿಗೆ ನ್ಯಾಯ ಒದಗಿಸಿ:

ರಾಜ್ಯದಲ್ಲಿ ಲಾಕ್‍ಡೌನ್ ಅವಧಿ ಮುಗಿಯುವವರೆಗೆ ಕಟ್ಟಡ ಕಾರ್ಮಿಕರಿಗೆ ಒಟ್ಟಾರೆ 2,000 ಹಣ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದರಲ್ಲೂ ಮಂಡಳಿಯಲ್ಲಿ ತಮ್ಮ ಹೆಸರನ್ನು ನವೀಕರಿಸಿರುವ 1.3 ಲಕ್ಷ ಜನರಿಗೆ ಮಾತ್ರ ಸರ್ಕಾರ ಈ ಹಣವನ್ನು ನೀಡಲಿದೆ. ಆದರೆ, ಕೇವಲ 2000 ರೂಪಾಯಿಯಲ್ಲಿ ಬಡ ಕಾರ್ಮಿಕರ ಬದುಕು ನಡೆಯುವುದಾದರೂ ಹೇಗೆ? ಹೀಗಾಗಿ ಹರಿಯಾಣ ಸರ್ಕಾರದ ಮಾದರಿಯಲ್ಲಿ ಎಲ್ಲಾ ಕುಟುಂಬಕ್ಕೂ ವಾರಕ್ಕೆ ಒಂದು ಸಾವಿರದಂತೆ ರಾಜ್ಯ ಸರ್ಕಾರ ಪರಿಹಾರ ನೀಡಲಿ.

ಅಲ್ಲದೆ, ರಾಜ್ಯದಲ್ಲಿ ಕೇವಲ ಶೇ.5 ರಷ್ಟು ಜನ ಮಾತ್ರ ಮಂಡಳಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಹೀಗಾಗಿ ಇಂತಹ ಸಂದರ್ಭದಲ್ಲಿ ಕಾನೂನನ್ನೂ ಮೀರಿ ಎಲ್ಲರಿಗೂ ಸಹಾಯ ಹಸ್ತ ಚಾಚಬೇಕು ಎಂಬುದು ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘಟನೆಯ ಕಾರ್ಯದರ್ಶಿ ಮಹಾಂತೇಶ್ ಅವರ ಅಭಿಮತ. ಆದರೆ, ರಾಜ್ಯ ಸರ್ಕಾರ ಈ ಕುರಿತು ಯಾವ ನಿರ್ಧಾರಕ್ಕೆ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾರ್ಮಿಕರ ನಿದಿಯ ಹಣವನ್ನು ಕಾರ್ಮಿಕರ ಏಳಿಗೆಗೆ ಮಾತ್ರ ಕರ್ಚು ಮಾಡಬೇಕು.

  2. ಕಾರ್ಮಿಕರ ಹಣ ಕಾರ್ಮಿಕರಿಗಾಗಿ ಖರ್ಚು ಮಾಡಲಾಗಿದೆ, ಇದು ಏನು ಆಧಾರ್ ಇಲ್ಲದೆ ಆರೋಪ ಮಾಡಿದ್ದಾರೆ ಕಾರ್ಮಿಕ ಹಣ ಯಾವ ಅದ್ಯಾದೆಶ ಯಾವ ಜಿ ಓ ಮೂಲಕ ತಗೆದಿದ್ದರೆ ಈ ಬಂಡಲ್ ಬಡಾಯಿ ಗಳು ಆಧಾರ್ ಇಲ್ಲದೆ ಆರೋಪಅಡುವುಫು ಒಂದು ಫ್ಯಾಶನ್

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...