Homeಕರ್ನಾಟಕಕೊರೋನಾ ಹೆಸರಿನಲ್ಲಿ ಕಾರ್ಮಿಕರ ಹಣಕ್ಕೆ ಕೈ ಹಾಕಿದ ಬಿಎಸ್‍ವೈ ಸರ್ಕಾರ

ಕೊರೋನಾ ಹೆಸರಿನಲ್ಲಿ ಕಾರ್ಮಿಕರ ಹಣಕ್ಕೆ ಕೈ ಹಾಕಿದ ಬಿಎಸ್‍ವೈ ಸರ್ಕಾರ

- Advertisement -
- Advertisement -

ಕಟ್ಟಡ ಕಾರ್ಮಿಕರ ನಿಧಿಯನ್ನು ಕಾರ್ಮಿಕರ ಯೋಗಕ್ಷೇಮವಲ್ಲದೆ ಬೇರೆ ಯಾವುದೇ ಕೆಲಸಕ್ಕೆ ಬಳಸಿಕೊಳ್ಳಬಾರದು ಎಂದು ಸುಪ್ರಿಂ ಕೋರ್ಟ್ ತೀರ್ಪು ನೀಡಿದೆ. ಆದರೂ ಕರ್ನಾಟಕದಲ್ಲಿ ಈ ಹಣವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಅನರ್ಹ ಶಾಸಕರಿಂದ ಅಸ್ಥಿತ್ವಕ್ಕೆ ಬಂದ ರಾಜ್ಯ ಸರ್ಕಾರ ಅರ್ಹ ಫಲಾನುಭವಿಗಳಿಗೆ ಅನ್ಯಾಯವೆಸಗುತ್ತಿದೆ. ಸ್ವತಃ ಸಿಎಂ ಯಡಿಯೂರಪ್ಪನವರೇ ಇಂತಹ ಅಮಾನವೀಯ ಭ್ರಷ್ಟಾಚಾರಕ್ಕೆ ಅಂಕಿತ ಹಾಕಿರುವುದು ದುರಾದೃಷ್ಟಕರ.
ಟಿ ಉಮೇಶ್, ಸಿಐಟಿಯು

ಭಾರತ ಮತ್ತು ಕರ್ನಾಟಕದಲ್ಲಿ ಕೊರೋನಾ ಕೈಮೀರುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. ಪರಿಣಾಮ ನೆರೆಯ ಕೇರಳದಿಂದ ಹರಿಯಾಣದವರೆಗೆ ಎಲ್ಲಾ ಸರ್ಕಾರಗಳೂ ಜನಪರ ಯೋಜನೆಗಳ ಕಡೆಗೆ ಗಮನ ನೀಡುತ್ತಿದ್ದರೆ, ಕರ್ನಾಟಕದಲ್ಲಿ ಮಾತ್ರ ಸ್ವತಃ ರಾಜ್ಯ ಸರ್ಕಾರವೇ ಕಾರ್ಮಿಕರ ನಿಧಿಗೆ ಸದ್ದಿಲ್ಲದೆ ಕನ್ನ ಹಾಕುವ ಕೆಲಸಕ್ಕೆ ಮುಂದಾಗಿದೆ. ಪರಿಣಾಮ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ವಲಯ ಕೊರೋನಾಗಿಂತ ಮುಂಚಿತವಾಗಿಯೇ ಹಸಿವಿಗೆ ಬಲಿಯಾಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ.

ಕಳೆದ ತಿಂಗಳು ಪತ್ರಿಕಾಗೋಷ್ಠಿ ನಡೆಸಿ ವಿಶೇಷ ಕೊರೋನಾ ಪ್ಯಾಕೇಜ್ ಘೋಷಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಲ್ಲಾ ರಾಜ್ಯಗಳಲ್ಲೂ ಕಟ್ಟಡ ಕಾರ್ಮಿಕರ ನಿಧಿಯಲ್ಲಿ ಅಪಾರ ಪ್ರಮಾಣದ ಹಣ ಇದ್ದು ಈ ಹಣವನ್ನು ಕಾರ್ಮಿಕರ ಯೋಗಕ್ಷೇಮಕ್ಕೆ ಬಳಸಬೇಕು ಎಂದು ಸೂಚನೆ ನೀಡಿದ್ದರು. ಆದರೆ ಕರ್ನಾಟಕದಲ್ಲಿ ಮಾತ್ರ ಈ ಹಣ ಕೆಲವು ರಾಜಕಾರಣಿಗಳ ಯೋಗಕ್ಷೇಮಕ್ಕೆ ಬಳಕೆಯಾಗುತ್ತಿರುವುದು ವಿಷಾಧಕರ ಸಂಗತಿ. ಅಸಲಿಗೆ ಕರ್ನಾಟಕದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯಲ್ಲಿ ಸಂಗ್ರಹವಾಗಿರುವ ಹಣದ ಪ್ರಮಾಣ ಎಷ್ಟು? ರಾಜ್ಯದಲ್ಲಿರುವ ಕಾರ್ಮಿಕರ ಸಂಖ್ಯೆ ಎಷ್ಟು? ಕಾರ್ಮಿಕರ ಹಣವನ್ನು ಹೇಗೆಲ್ಲಾ ಲೂಟಿ ಮಾಡಲಾಗುತ್ತಿದೆ? ಲೂಟಿ ಮಾಡಲು ಸ್ವತಃ ಸಿಎಂ ಅನುವು ಮಾಡಿಕೊಟ್ಟರೇ? ಹೀಗೆ ಎಲ್ಲಾ ಪ್ರಶ್ನೆಗಳಿಗೂ ಇಲ್ಲದೆ ಉತ್ತರ!

ಕಟ್ಟಡ ಕಾರ್ಮಿಕರ ಸಂಖ್ಯೆ-ಸಂಗ್ರಹವಾಗಿರುವ ನಿಧಿ ಎಷ್ಟು?

2017ರ ವರೆಗೆ ಕಳೆದ 13 ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಕಟ್ಟಡ ಕಾರ್ಮಿಕರ ಸಂಖ್ಯೆ ಬರೋಬ್ಬರಿ 21 ಲಕ್ಷ. ಆದರೆ, 2018ರಲ್ಲಿ ನವೀಕರಿಸಿಕೊಂಡ ಕಾರ್ಮಿಕರ ಸಂಖ್ಯೆ ಕೇವಲ 1.3 ಲಕ್ಷ ಮಾತ್ರ. ಇನ್ನೂ ಬೆಂಗಳೂರಿನಲ್ಲೇ 3 ರಿಂದ 5 ಲಕ್ಷದ ವರೆಗೆ ಕಟ್ಟಡ ಕಾರ್ಮಿಕರಿದ್ದು ಈ ಪೈಕಿ ಬಹುಪಾಲು ಜನ ತಮ್ಮ ಹೆಸರನ್ನು ಸಂಘಟನೆಯಲ್ಲಿ ನೋಂದಾಯಿಸಿಕೊಂಡಿಲ್ಲ. ಕಾರಣ 2018ರಲ್ಲಿ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರ ಗುರುತನ್ನು ನೋಂದಾಯಿಸಲು ಆನ್ಲೈನ್ ವ್ಯವಸ್ಥೆಯನ್ನು ಪರಿಚಯಿಸಿತ್ತು. ಹೀಗಾಗಿ ಆನ್ಲೈನ್ ಬಳಸಲು ಬಾರದ ಅನೇಕರು ತಮ್ಮ ಹೆಸರನ್ನು ನೋಂದಾಯಿಸಲು ಸಾಧ್ಯವಾಗಿಲ್ಲ.

ಈ 21 ಲಕ್ಷ ಅಲ್ಲದೆ, ವಲಸೆ ಕಟ್ಟಡ ಕಾರ್ಮಿಕರೂ ಸೇರಿದಂತೆ ರಾಜ್ಯದಲ್ಲಿ ಈವರೆಗೆ ನೋಂದಾವಣೆಯಾಗದ ಕಾರ್ಮಿಕರ ಸಂಖ್ಯೆಯೇ ಸುಮಾರು ಅಂದಾಜು 12 ಲಕ್ಷ ಇದೆ. ಹೇಗೆ ನೋಡಿದರೂ ರಾಜ್ಯದಲ್ಲಿ ಒಟ್ಟು 33 ರಿಂದ 35 ಲಕ್ಷ ಕಟ್ಟಡ ಕಾರ್ಮಿಕರಿದ್ದಾರೆ ಎಂದು ಲೆಕ್ಕ ನೀಡುತ್ತಾರೆ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘಟನೆಯ ಕಾರ್ಯದರ್ಶಿ ಮಹಾಂತೇಶ್.

ಕಾರ್ಮಿಕರ ಯೋಗಕ್ಷೇಮವನ್ನು ನೋಡಿಕೊಳ್ಳುವ ಸಲುವಾಗಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಇದೆ. ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಈ ಮಂಡಳಿಯ ಅಧ್ಯಕ್ಷರು. ಇನ್ನೂ ಕಟ್ಟಡ ಮಾಲೀಕರು ಕಟ್ಟುವ ಶೇ.1 ರಷ್ಟು ಸೆಸ್ ಹಣ ಈ ಮಂಡಳಿಗೆ ಸಂದಾಯವಾಗುತ್ತದೆ. ಹೀಗೆ ಕಟ್ಟಡ ಕಾರ್ಮಿಕರ ನಿಧಿಯಲ್ಲಿ ಸಂಗ್ರಹವಾಗಿರುವ ಹಣವೇ ರಾಜ್ಯದಲ್ಲಿ ಬರೋಬ್ಬರಿ 8,500 ಕೋಟಿ ಇದೆ.

ಕೊರೋನಾ ಹೆಸರಲ್ಲಿ ಕಾರ್ಮಿಕರ ನಿಧಿಗೂ ಕನ್ನ!

ಕೊರೋನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್‍ಡೌನ್ ಘೋಷಣೆ ಮಾಡುತ್ತಿದ್ದಂತೆ ಊಟಕ್ಕಿಲ್ಲದೆ ಸಾವಿರಾರು ಜನ ಬೆಂಗಳೂರು, ಮಂಗಳೂರಿನಂತಹ ಮಹಾ ನಗರಗಳಿಂದ ತಮ್ಮ ಊರಿಗೆ ಕಾಲ್ನಡಿಗೆಯಲ್ಲೇ ಹೊರಟಿದ್ದರು. ಈ ವೇಳೆ ನೂರಾರು ಕಿಮೀ ನಡೆದಿದ್ದ ಗಂಗಮ್ಮ ಎಂಬ ಮಹಿಳೆ ಬಳ್ಳಾರಿ ಬಳಿ ಮೃತರಾಗಿದ್ದ ದುರಂತವನ್ನು ಭಾಗಶಃ ಕನ್ನಡಿಗರು ಮರೆತಿರಲಿಕ್ಕಿಲ್ಲ.

ಉತ್ತರ ಕರ್ನಾಟಕ ಮಾತ್ರವಲ್ಲ ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶದಿಂದ ಅಪಾರ ಸಂಖ್ಯೆಯ ಕಟ್ಟಡ ಕಾರ್ಮಿಕರು ಕೆಲಸಕ್ಕೆಂದು ವಲಸೆ ಬಂದು ಬೆಂಗಳೂರಿನಂತಹ ಮಹಾನಗರದ ಗೂಡು ಸೇರಿದ್ದಾರೆ. ಇನ್ನೂ ರಾಜ್ಯದ ನಾನಾ ಮೂಲೆಗಳಲ್ಲಿ ನೆಲೆಸಿರುವ ಕಟ್ಟಡ ಕಾರ್ಮಿಕರ ಸಂಖ್ಯೆಯೂ ಅಪಾರ. ಈ ಎಲ್ಲರೂ ದಿನನಿತ್ಯ ಕೂಲಿ ಮಾಡಿ ಬದುಕುವವರು. ಹೀಗಾಗಿ ಸರ್ಕಾರದ ಲಾಕ್‍ಡೌನ್ ನಿರ್ಧಾರ ಮೊದಲ ಪರಿಣಾಮ ಬೀರುವುದೇ ಇಂತಹ ಜನರ ಮೇಲೆ. ಇದೇ ಕಾರಣಕ್ಕೆ ಕಾರ್ಮಿಕರ ಸಂಘಟನೆಗಳು ಒಂದಾಗಿ ಕಲ್ಯಾಣ ಮಂಡಳಿ ಹಣ ಬಳಸಿ ಆರಂಭದ ದಿನದಲ್ಲೇ ಎಲ್ಲಾ ಕಾರ್ಮಿಕರಿಗೂ ಮನೆ ಮನೆಗೆ ಊಟ ತಲುಪಿಸುವ ಕೆಲಸಕ್ಕೆ ಮುಂದಾಗಿದ್ದವು.

ನಂತರ ಊಟದ ಬದಲು ಕಾರ್ಮಿಕರ ಮನೆಗಳಿಗೆ ಆಹಾರ ಧಾನ್ಯಗಳ ಕಿಟ್ ನೀಡಿದರೆ ಅವರೇ ಅಡುಗೆ ಮಾಡಿ ಊಟ ಮಾಡುತ್ತಾರೆ ಎಂದು ಉದ್ದೇಶಿಸಲಾಗಿತ್ತು. ಇಸ್ಕಾನ್ ಅವರ ಅಕ್ಷಯ ಪಾತ್ರೆ ಸಂಸ್ಥೆಗೆ ಅಕ್ಕಿ, ಬೇಳೆ, ಎಣ್ಣೆ ಸೇರಿದಂತೆ ಎಲ್ಲಾ ಅವಶ್ಯಕ ವಸ್ತುಗಳನ್ನೂ ಹೊಂದಿರುವ 750 ರೂ. ಮುಖ ಬೆಲೆಯ 1 ಲಕ್ಷ ಆಹಾರ ಕಿಟ್ ತಯಾರಿಸಿ ನೀಡಲು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಆದೇಶಿಸಿತ್ತು.
ಇದೊಂದು ಆದೇಶ ಸರಿಯಾಗಿ ಪಾಲನೆಯಾಗಿದ್ದರೆ ಭಾಗಶಃ ಇಂದು ಕಾರ್ಮಿಕರು ಹಸಿದ ರಾತ್ರಿಗಳನ್ನು ಕಾಣುತ್ತಿರಲಿಲ್ಲವೇನೋ? ಆದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೊರಡಿಸಿದ ಆ ಒಂದು ಆದೇಶ ಇಂದು ಕಾರ್ಮಿಕರ ಅನ್ನವನ್ನು ಕಸಿದುಬಿಟ್ಟಿದೆ.

ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಟ್ಟರಾ ಬಿಎಸ್‍ವೈ?

ಅಸಲಿಗೆ ಕಾರ್ಮಿಕರಿಗೆ ಬೇಕಾದ ಸವಲತ್ತುಗಳನ್ನು ಮೂಲಭೂತ ಅವಶ್ಯಕತೆಗಳನ್ನು ಒದಗಿಸುವ ಸಲುವಾಗಿಯೇ ಕಾರ್ಮಿಕ ಸಂಘಟನೆಗಳು ಇವೆ. ಇನ್ನೂ ಸರ್ಕಾರದ ಅಧೀನದಲ್ಲೇ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಇದೆ. ಯಾವುದೇ ಕಾರ್ಯಕ್ರಮವನ್ನು ಈ ಮಂಡಳಿ ಅಥವಾ ಕಾರ್ಮಿಕರ ಸಂಘಟನೆಯಿಂದ ಕಾರ್ಮಿಕರಿಗೆ ಯಶಸ್ವಿಯಾಗಿ ತಲುಪಿಸಲು ಸಾಧ್ಯ. ಹೀಗಾಗಿ ಆಹಾರದ ಕಿಟ್‍ಗಳನ್ನು ಮಂಡಳಿಯೇ ಕಾರ್ಮಿಕರಿಗೆ ನೀಡಲು ಮುಂದಾಗಿತ್ತು. ಆದರೆ, ಏಪ್ರಿಲ್ 06 ರಂದು ಆದೇಶ ಹೊರಡಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲಾ ಆಹಾರದ ಕಿಟ್‍ಗಳನ್ನು ಪಾಲಿಕೆ ಸದಸ್ಯರು ಮತ್ತು ಶಾಸಕರಿಂದಲೇ ಕಾರ್ಮಿಕರಿಗೆ ತಲುಪಿಸಬೇಕು ಎಂದು ಸುತ್ತೋಲೆಯೊಂದನ್ನು ಹೊರಡಿಸಿಬಿಟ್ಟಿದ್ದರು.

ಈ ಸುತ್ತೋಲೆ ಹೊರಡಿಸಿದ್ದೇ ತಡ ಎಲ್ಲಾ ಆಹಾರದ ಕಿಟ್‍ಗಳನ್ನು ಪ್ರತಿ ವಾರ್ಡ್‍ಗೆ ಇಷ್ಟು ಎಂದು ಲೆಕ್ಕ ಹಾಕಿ ಈಗಾಗಲೇ ಪಾಲಿಕೆ ಸದಸ್ಯರು ಮತ್ತು ಶಾಸಕರಿಗೆ ನೀಡಲಾಗಿದೆ. ಮತ್ತು ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಿಂದ ಖರೀದಿಸಲಾಗಿರುವ ಈ ಆಹಾರದ ಕಿಟ್‍ಗಳನ್ನು ಕಾರ್ಮಿಕರಿಗೆ ನೀಡಬೇಕು ಎಂದು ಸೂಚಿಸಲಾಗಿದೆ.

ಆದರೆ, ಶಾಸಕರು ಹಾಗೂ ಪಾಲಿಕೆ ಸದಸ್ಯರು ಮಾತ್ರ ಈ ಆಹಾರದ ಕಿಟ್‍ಗಳನ್ನು ಕಾರ್ಮಿಕರಿಗೆ ನೀಡುತ್ತಿಲ್ಲ, ಬದಲಾಗಿ ತಮ್ಮ ಕ್ಷೇತ್ರದ ಮತದಾರರಿಗೆ ಹಂಚುವ ಕೆಲಸದಲ್ಲಿ ನಿರತರಾಗಿದ್ದಾರೆ.

ಬೆಂಗಳೂರಿನಲ್ಲಿರುವ ಬಹುಪಾಲು ಕಟ್ಟಡ ಕಾರ್ಮಿಕರು ಇಲ್ಲಿನ ಮೂಲದವರಲ್ಲ. ಕೆಲಸಕ್ಕಾಗಿ ಹಳ್ಳಿಗಳಿಂದ ಇಲ್ಲಿಗೆ ವಲಸೆ ಬಂದವರು. ಹೀಗಾಗಿ ಇವರಿಗೆ ಸಾಮಾನ್ಯವಾಗಿ ಇಲ್ಲಿ ಮತದಾರ ಚೀಟಿ ಹಾಗೂ ಯಾವುದೇ ಗುರುತು ಇರುವುದಿಲ್ಲ. ಇಂತವರಿಗೆ ಕಿಟ್ ನೀಡುವ ಮೂಲಕ ರಾಜಕಾರಣಿಗಳಿಗೆ ಆಗುವ ಲಾಭವಾದರೂ ಏನು? ಹೀಗಾಗಿಯೇ ಅವರು ಆಹಾರದ ಕಿಟ್‍ಗಳನ್ನು ಕಾರ್ಮಿಕರಿಗೆ ನೀಡುವ ಮೂಲಕ ತಮ್ಮ ಕ್ಷೇತ್ರದ ಮತದಾರರಿಗೆ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಬೆಂಗಳೂರಿನಲ್ಲಿ ಈವರೆಗೆ ಅಂದಾಜು 60,000 ಕಾರ್ಮಿಕರಿಗೆ ಆಹಾರದ ಕಿಟ್‍ಗಳನ್ನು ವಿತರಿಸಲಾಗಿದೆ ಎಂದು ಕಾಪೆರ್Çೀಟರ್‍ಗಳು ಹಾಗೂ ಶಾಸಕರು ಹೇಳುತ್ತಿದ್ದಾರೆ. ಆದರೆ, ಯಾವ ವಾರ್ಡ್‍ನಲ್ಲಿ ಎಷ್ಟು? ಮತ್ತು ಯಾರಿಗೆ ವಿತರಿಸಲಾಗಿದೆ ಎಂಬ ಕುರಿತು ಯಾವುದೇ ಲೆಕ್ಕಾಚಾರ ಇಲ್ಲದಂತಾಗಿದೆ. ಪರಿಣಾಮ ಅತ್ತ ಕೆಲಸವೂ ಇಲ್ಲದೆ, ಕೂಲಿಯೂ ಇಲ್ಲದೆ ಇತ್ತ ಊಟವೂ ಇಲ್ಲದೆ ಬಡ ಕಾರ್ಮಿಕರು ಹೊಟ್ಟೆಯ ಮೇಲೆ ತಣ್ಣೀರ ಬಟ್ಟೆ ಹಾಕಿಕೊಂಡು ಮಲಗುವಂತಾಗಿದೆ.

ಕಾರ್ಮಿಕರ ನಿಧಿಯಲ್ಲಿ ಶಾಸಕರ ಶೋಕಿ ಪ್ರಚಾರ

ರಾಜ್ಯ ಕಟ್ಟಡ ಕಾರ್ಮಿಕರ ಹಣವನ್ನು ಕೊರೋನಾ ಹೆಸರಿನಲ್ಲಿ ಲೂಟಿ ಮಾಡಲಾಗುತ್ತಿದೆ ಎಂಬುದು ಒಂದೆಡೆಯಾದರೆ, ಮತ್ತೊಂದೆಡೆ ಕಾರ್ಮಿಕರ ಕಲ್ಯಾಣ ನಿಧಿಯಲ್ಲೇ ಖರೀದಿಸಿದ ಆಹಾರದ ಕಿಟ್‍ಗಳಿಗೆ ರಾಜಕಾರಣಿಗಳು ತಮ್ಮ ಫೋಟೋಗಳನ್ನು ಹಾಕಿಕೊಂಡು ಬಿಟ್ಟಿ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ. ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಇತ್ತೀಚೆಗೆ ಜನರಿಗೆ ವಿತರಿಸಲು ತಂದಿದ್ದ ಆಹಾರದ ಕಿಟ್‍ಗಳ ಮೇಲೆ ತಮ್ಮ ಭಾವಚಿತ್ರವನ್ನು ಮುದ್ರಿಸಿ ವಿತರಣೆ ಮಾಡುವ ಮೂಲಕ ವಿರೋಧ ಪಕ್ಷದ ನಾಯಕರ ಟೀಕೆಗೆ ಗುರಿಯಾಗಿದ್ದರು. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಟೀಕೆಗೆ ಗುರಿಯಾಗಿದ್ದರು.

ಅಲ್ಲದೆ, ಇತ್ತೀಚೆಗೆ ಚಿತ್ರನಟಿ ಬಿಜೆಪಿ ನಾಯಕಿ ಮಾಳವಿಕ ಆರ್‍ಎಸ್‍ಎಸ್ ಮುಖಂಡರ ಜೊತೆಗೂಡಿ ಬಡವರಿಗೆ ಆಹಾರ ವಿತರಣೆ ಮಾಡುವ ಕಾರ್ಯಕ್ರಮದ ಫೋಟೊವನ್ನು ಹಂಚಿಕೊಂಡಿದ್ದರು. ಆದರೆ, ಶಾಸಕ ಲಿಂಬಾವಳಿ ಮತ್ತು ಚಿತ್ರನಟಿ ಮಾಳವಿಕ ವಿತರಣೆ ಮಾಡಿದ್ದ ಎಲ್ಲಾ ಆಹಾರದ ಕಿಟ್‍ಗಳನ್ನೂ ಕಾರ್ಮಿಕರ ನಿಧಿಯಿಂದಲೇ ಖರೀದಿಸಲಾಗಿತ್ತು ಎಂಬುದು ಉಲ್ಲೇಖಾರ್ಹ. ಆದರೆ, ಕಾರ್ಮಿಕರ ನಿಧಿ ಹೀಗೆಲ್ಲಾ ದುರುಪಯೋಗವಾಗುತ್ತಿದ್ದರೂ, ಕಾರ್ಮಿಕರು ಒಂದೊತ್ತಿನ ಊಟಕ್ಕಾಗಿ ಪರದಾಡುತ್ತಿದ್ದರೂ ಸಹ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರದ್ದು ಮಾತ್ರ ಜಾಣ ಮೌನ.

ಇನ್ನಾದರೂ ಕಾರ್ಮಿಕರಿಗೆ ನ್ಯಾಯ ಒದಗಿಸಿ:

ರಾಜ್ಯದಲ್ಲಿ ಲಾಕ್‍ಡೌನ್ ಅವಧಿ ಮುಗಿಯುವವರೆಗೆ ಕಟ್ಟಡ ಕಾರ್ಮಿಕರಿಗೆ ಒಟ್ಟಾರೆ 2,000 ಹಣ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದರಲ್ಲೂ ಮಂಡಳಿಯಲ್ಲಿ ತಮ್ಮ ಹೆಸರನ್ನು ನವೀಕರಿಸಿರುವ 1.3 ಲಕ್ಷ ಜನರಿಗೆ ಮಾತ್ರ ಸರ್ಕಾರ ಈ ಹಣವನ್ನು ನೀಡಲಿದೆ. ಆದರೆ, ಕೇವಲ 2000 ರೂಪಾಯಿಯಲ್ಲಿ ಬಡ ಕಾರ್ಮಿಕರ ಬದುಕು ನಡೆಯುವುದಾದರೂ ಹೇಗೆ? ಹೀಗಾಗಿ ಹರಿಯಾಣ ಸರ್ಕಾರದ ಮಾದರಿಯಲ್ಲಿ ಎಲ್ಲಾ ಕುಟುಂಬಕ್ಕೂ ವಾರಕ್ಕೆ ಒಂದು ಸಾವಿರದಂತೆ ರಾಜ್ಯ ಸರ್ಕಾರ ಪರಿಹಾರ ನೀಡಲಿ.

ಅಲ್ಲದೆ, ರಾಜ್ಯದಲ್ಲಿ ಕೇವಲ ಶೇ.5 ರಷ್ಟು ಜನ ಮಾತ್ರ ಮಂಡಳಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಹೀಗಾಗಿ ಇಂತಹ ಸಂದರ್ಭದಲ್ಲಿ ಕಾನೂನನ್ನೂ ಮೀರಿ ಎಲ್ಲರಿಗೂ ಸಹಾಯ ಹಸ್ತ ಚಾಚಬೇಕು ಎಂಬುದು ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘಟನೆಯ ಕಾರ್ಯದರ್ಶಿ ಮಹಾಂತೇಶ್ ಅವರ ಅಭಿಮತ. ಆದರೆ, ರಾಜ್ಯ ಸರ್ಕಾರ ಈ ಕುರಿತು ಯಾವ ನಿರ್ಧಾರಕ್ಕೆ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾರ್ಮಿಕರ ನಿದಿಯ ಹಣವನ್ನು ಕಾರ್ಮಿಕರ ಏಳಿಗೆಗೆ ಮಾತ್ರ ಕರ್ಚು ಮಾಡಬೇಕು.

  2. ಕಾರ್ಮಿಕರ ಹಣ ಕಾರ್ಮಿಕರಿಗಾಗಿ ಖರ್ಚು ಮಾಡಲಾಗಿದೆ, ಇದು ಏನು ಆಧಾರ್ ಇಲ್ಲದೆ ಆರೋಪ ಮಾಡಿದ್ದಾರೆ ಕಾರ್ಮಿಕ ಹಣ ಯಾವ ಅದ್ಯಾದೆಶ ಯಾವ ಜಿ ಓ ಮೂಲಕ ತಗೆದಿದ್ದರೆ ಈ ಬಂಡಲ್ ಬಡಾಯಿ ಗಳು ಆಧಾರ್ ಇಲ್ಲದೆ ಆರೋಪಅಡುವುಫು ಒಂದು ಫ್ಯಾಶನ್

LEAVE A REPLY

Please enter your comment!
Please enter your name here

- Advertisment -

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...