Homeಕರ್ನಾಟಕಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

ಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

- Advertisement -
- Advertisement -

ಬುಧವಾರ (ಏಪ್ರಿಲ್ 07) ಸಾರಿಗೆ ನೌಕರರು ಮುಷ್ಕರ ಹೂಡಲು ಸಜ್ಜಾಗಿದ್ದು, ರಾಜ್ಯ ಸರ್ಕಾರದ ವಿರುದ್ದ ಸಂಘರ್ಷಕ್ಕೆ ಮುಂದಾಗಿದ್ದಾರೆ. ಆದರೆ ಸರ್ಕಾರ ಮಾತ್ರ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ನೌಕರರು ಮುಷ್ಕರ ನಡೆಸಿದರೆ ಸರ್ಕಾರ ‘ಎಸ್ಮಾ’ ಜಾರಿಗೆ ಮುಂದಾಗಿದೆ ಎಂದು ಹೇಳಲಾಗಿದೆ.

ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರು ಪ್ರಮುಖವಾಗಿ, ‘ಆರನೇ ವೇತನ ಆಯೋಗದ ವರದಿ’ ಜಾರಿಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರವು ಆರನೇ ವೇತನ ಜಾರಿ ಬದಲು ಸಾರಿಗೆ ನೌಕರರಿಗೆ 8% ರಷ್ಟು ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಆದರೆ ಇದನ್ನು ನೌಕರರು ನಿರಾಕರಿಸಿದ್ದು, “ತಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ಆರನೇ ವೇತನ ಆಯೋಗ ಜಾರಿಯೇ ಆಗಬೇಕು. ಅದಕ್ಕಾಗಿ ಬುಧವಾರ ಮುಷ್ಕರ ನಡೆಸಿಯೇ ತೀರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಕೊರೊನಾ ಎಂದ ಭೈರತಿ ಬಸವರಾಜ್, ಎಸ್‌ಐಟಿ ವಿಚಾರಣೆಗೆ ಗೈರು ಸಾಧ್ಯತೆ

ನೌಕರರ ಮುಷ್ಕರ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಇದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ಇಲಾಖೆ ಎಸಿಎಸ್ ಅಂಜುಮ್ ಪರ್ವೇಜ್, KSRTC ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ ಸೇರಿ ಹಲವರು ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನೌಕರರು ಮುಷ್ಕರ ಹೂಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ವೇತನ ಹೆಚ್ಚಳದ ಭರವಸೆಗಳನ್ನು ನೀಡಿದರೂ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿಚಾರದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಭೆಯಲ್ಲಿ ಸೂಚಿಸಿದರೆಂಬ ಮಾಹಿತಿಯಿದೆ.

ಇದಾಗಿಯೂ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ನೌಕರರ ಜೊತೆ ಸಂಧಾನ ಸಾಧ್ಯತೆ ಇಲ್ಲವೇ ಇಲ್ಲ. ಎಸ್ಮಾ ಜಾರಿ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುವಂತೆ ಮುಖ್ಯಮಂತ್ರಿ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾರಿಗೆ ನೌಕರರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

“ಸಾರಿಗೆ ನೌಕರರ ಬೇಡಿಕೆ ನಮಗೆ ಗೊತ್ತಿದೆ. ಕೊರೊನಾ ಕಾರಣದಿಂದ ಸಾರಿಗೆ ಇಲಾಖೆ ಸಂಕಷ್ಟದಲ್ಲಿದೆ. ಆದರೂ ಕೂಡ ಸಿಬ್ಬಂದಿಯ ವೇತನ ಕಡಿತ ಮಾಡದೇ ಪೂರ್ಣ ಸಂಬಳ ನೀಡಿ ಜವಾಬ್ದಾರಿ ಮೆರೆದಿದ್ದೇವೆ. ಡಿಸಿಎಂ ಲಕ್ಷ್ಮಣ ಸವದಿ ಮೇ 2ರ ನಂತರ ಸಾರಿಗೆ ನೌಕರರ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದಾರೆ. 6ನೇ ವೇತನ ಆಯೋಗದ ಶಿಫಾರಸಿನಂತೆ ಸಂಬಳ ಹೆಚ್ಚಳ ಸಾಧ್ಯವಿಲ್ಲ. ಆದರೆ, 8% ದಷ್ಟು ಸಂಬಳ ಹೆಚ್ಚಳಕ್ಕೆ ಸರ್ಕಾರ ಸಿದ್ಧವಿದೆ. ಚುನಾವಣಾ ಆಯೋಗ ಅನುಮತಿ ನೀಡಿದರೆ ಈ ಆದೇಶ ಹೊರಡಿಸುತ್ತೇವೆ” ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

‘ಎಸ್ಮಾ’ ಎಂದರೆ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ. ಇದು ಜಾರಿಯಾದರೆ, ಜನರಿಗೆ ಅತ್ಯಗತ್ಯ ಎನಿಸುವ ಸೇವೆಗಳನ್ನ ಒದಗಿಸುವವರು ಉದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಗೈರಾದಾಗ ಕಾನೂನು ರೀತಿ ಕ್ರಮ ಕೈಗೊಳ್ಳಬಹುದು. ಒಂದು ವೇಳೆ ಎಸ್ಮಾ ಜಾರಿಯಾಗಿ, ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡರೆ ಅವರನ್ನ ಸೇವೆಯಿಂದಲೇ ಅಮಾನತುಗೊಳಿಸುವ ಅವಕಾಶವನ್ನು ಈ ಕಾಯ್ದೆ ನೀಡುತ್ತದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌, “ಸರ್ಕಾರವೇನು ಸರ್ವಾಧಿಕಾರಿಗಳಲ್ಲ, ಎಸ್ಮಾ ಜಾರಿ ಮಾಡುವುದಾದರೆ ಮಾಡಲಿ. ನಾವು ಅದಕ್ಕೆ ಸಿದ್ದರಿದ್ದೇವೆ” ಎಂದು ಕಿಡಿ ಕಾರಿದ್ದಾರೆ. ಅಲ್ಲದೆ ಹೋರಾಟದ ಬಗ್ಗೆ ಅವರು ಭಾನುವಾರದಂದು ಸ್ಪಷ್ಟವಾಗಿ ತಿಳಿಸಿದ್ದು, ಅವರ ಹೇಳಿಕೆಯನ್ನು ಕೆಳಗೆ ನೋಡಬಹುದಾಗಿದೆ.


ಇದನ್ನೂ ಓದಿ: ಕೇರಳದಲ್ಲಿ ಹಿಂದೂಗಳ ಬೆಂಬಲದಿಂದ BJP 10ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ: ನಳಿನ್ ಕುಮಾರ್ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...