Homeಕರ್ನಾಟಕಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

ಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

- Advertisement -
- Advertisement -

ಬುಧವಾರ (ಏಪ್ರಿಲ್ 07) ಸಾರಿಗೆ ನೌಕರರು ಮುಷ್ಕರ ಹೂಡಲು ಸಜ್ಜಾಗಿದ್ದು, ರಾಜ್ಯ ಸರ್ಕಾರದ ವಿರುದ್ದ ಸಂಘರ್ಷಕ್ಕೆ ಮುಂದಾಗಿದ್ದಾರೆ. ಆದರೆ ಸರ್ಕಾರ ಮಾತ್ರ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ನೌಕರರು ಮುಷ್ಕರ ನಡೆಸಿದರೆ ಸರ್ಕಾರ ‘ಎಸ್ಮಾ’ ಜಾರಿಗೆ ಮುಂದಾಗಿದೆ ಎಂದು ಹೇಳಲಾಗಿದೆ.

ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರು ಪ್ರಮುಖವಾಗಿ, ‘ಆರನೇ ವೇತನ ಆಯೋಗದ ವರದಿ’ ಜಾರಿಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರವು ಆರನೇ ವೇತನ ಜಾರಿ ಬದಲು ಸಾರಿಗೆ ನೌಕರರಿಗೆ 8% ರಷ್ಟು ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಆದರೆ ಇದನ್ನು ನೌಕರರು ನಿರಾಕರಿಸಿದ್ದು, “ತಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ಆರನೇ ವೇತನ ಆಯೋಗ ಜಾರಿಯೇ ಆಗಬೇಕು. ಅದಕ್ಕಾಗಿ ಬುಧವಾರ ಮುಷ್ಕರ ನಡೆಸಿಯೇ ತೀರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಕೊರೊನಾ ಎಂದ ಭೈರತಿ ಬಸವರಾಜ್, ಎಸ್‌ಐಟಿ ವಿಚಾರಣೆಗೆ ಗೈರು ಸಾಧ್ಯತೆ

ನೌಕರರ ಮುಷ್ಕರ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಇದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ಇಲಾಖೆ ಎಸಿಎಸ್ ಅಂಜುಮ್ ಪರ್ವೇಜ್, KSRTC ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ ಸೇರಿ ಹಲವರು ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನೌಕರರು ಮುಷ್ಕರ ಹೂಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ವೇತನ ಹೆಚ್ಚಳದ ಭರವಸೆಗಳನ್ನು ನೀಡಿದರೂ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿಚಾರದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಭೆಯಲ್ಲಿ ಸೂಚಿಸಿದರೆಂಬ ಮಾಹಿತಿಯಿದೆ.

ಇದಾಗಿಯೂ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ನೌಕರರ ಜೊತೆ ಸಂಧಾನ ಸಾಧ್ಯತೆ ಇಲ್ಲವೇ ಇಲ್ಲ. ಎಸ್ಮಾ ಜಾರಿ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುವಂತೆ ಮುಖ್ಯಮಂತ್ರಿ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾರಿಗೆ ನೌಕರರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

“ಸಾರಿಗೆ ನೌಕರರ ಬೇಡಿಕೆ ನಮಗೆ ಗೊತ್ತಿದೆ. ಕೊರೊನಾ ಕಾರಣದಿಂದ ಸಾರಿಗೆ ಇಲಾಖೆ ಸಂಕಷ್ಟದಲ್ಲಿದೆ. ಆದರೂ ಕೂಡ ಸಿಬ್ಬಂದಿಯ ವೇತನ ಕಡಿತ ಮಾಡದೇ ಪೂರ್ಣ ಸಂಬಳ ನೀಡಿ ಜವಾಬ್ದಾರಿ ಮೆರೆದಿದ್ದೇವೆ. ಡಿಸಿಎಂ ಲಕ್ಷ್ಮಣ ಸವದಿ ಮೇ 2ರ ನಂತರ ಸಾರಿಗೆ ನೌಕರರ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದಾರೆ. 6ನೇ ವೇತನ ಆಯೋಗದ ಶಿಫಾರಸಿನಂತೆ ಸಂಬಳ ಹೆಚ್ಚಳ ಸಾಧ್ಯವಿಲ್ಲ. ಆದರೆ, 8% ದಷ್ಟು ಸಂಬಳ ಹೆಚ್ಚಳಕ್ಕೆ ಸರ್ಕಾರ ಸಿದ್ಧವಿದೆ. ಚುನಾವಣಾ ಆಯೋಗ ಅನುಮತಿ ನೀಡಿದರೆ ಈ ಆದೇಶ ಹೊರಡಿಸುತ್ತೇವೆ” ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

‘ಎಸ್ಮಾ’ ಎಂದರೆ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ. ಇದು ಜಾರಿಯಾದರೆ, ಜನರಿಗೆ ಅತ್ಯಗತ್ಯ ಎನಿಸುವ ಸೇವೆಗಳನ್ನ ಒದಗಿಸುವವರು ಉದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಗೈರಾದಾಗ ಕಾನೂನು ರೀತಿ ಕ್ರಮ ಕೈಗೊಳ್ಳಬಹುದು. ಒಂದು ವೇಳೆ ಎಸ್ಮಾ ಜಾರಿಯಾಗಿ, ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡರೆ ಅವರನ್ನ ಸೇವೆಯಿಂದಲೇ ಅಮಾನತುಗೊಳಿಸುವ ಅವಕಾಶವನ್ನು ಈ ಕಾಯ್ದೆ ನೀಡುತ್ತದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌, “ಸರ್ಕಾರವೇನು ಸರ್ವಾಧಿಕಾರಿಗಳಲ್ಲ, ಎಸ್ಮಾ ಜಾರಿ ಮಾಡುವುದಾದರೆ ಮಾಡಲಿ. ನಾವು ಅದಕ್ಕೆ ಸಿದ್ದರಿದ್ದೇವೆ” ಎಂದು ಕಿಡಿ ಕಾರಿದ್ದಾರೆ. ಅಲ್ಲದೆ ಹೋರಾಟದ ಬಗ್ಗೆ ಅವರು ಭಾನುವಾರದಂದು ಸ್ಪಷ್ಟವಾಗಿ ತಿಳಿಸಿದ್ದು, ಅವರ ಹೇಳಿಕೆಯನ್ನು ಕೆಳಗೆ ನೋಡಬಹುದಾಗಿದೆ.


ಇದನ್ನೂ ಓದಿ: ಕೇರಳದಲ್ಲಿ ಹಿಂದೂಗಳ ಬೆಂಬಲದಿಂದ BJP 10ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ: ನಳಿನ್ ಕುಮಾರ್ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...