Homeಕರ್ನಾಟಕಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

ಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

- Advertisement -
- Advertisement -

ಬುಧವಾರ (ಏಪ್ರಿಲ್ 07) ಸಾರಿಗೆ ನೌಕರರು ಮುಷ್ಕರ ಹೂಡಲು ಸಜ್ಜಾಗಿದ್ದು, ರಾಜ್ಯ ಸರ್ಕಾರದ ವಿರುದ್ದ ಸಂಘರ್ಷಕ್ಕೆ ಮುಂದಾಗಿದ್ದಾರೆ. ಆದರೆ ಸರ್ಕಾರ ಮಾತ್ರ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ನೌಕರರು ಮುಷ್ಕರ ನಡೆಸಿದರೆ ಸರ್ಕಾರ ‘ಎಸ್ಮಾ’ ಜಾರಿಗೆ ಮುಂದಾಗಿದೆ ಎಂದು ಹೇಳಲಾಗಿದೆ.

ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರು ಪ್ರಮುಖವಾಗಿ, ‘ಆರನೇ ವೇತನ ಆಯೋಗದ ವರದಿ’ ಜಾರಿಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರವು ಆರನೇ ವೇತನ ಜಾರಿ ಬದಲು ಸಾರಿಗೆ ನೌಕರರಿಗೆ 8% ರಷ್ಟು ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಆದರೆ ಇದನ್ನು ನೌಕರರು ನಿರಾಕರಿಸಿದ್ದು, “ತಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ಆರನೇ ವೇತನ ಆಯೋಗ ಜಾರಿಯೇ ಆಗಬೇಕು. ಅದಕ್ಕಾಗಿ ಬುಧವಾರ ಮುಷ್ಕರ ನಡೆಸಿಯೇ ತೀರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಕೊರೊನಾ ಎಂದ ಭೈರತಿ ಬಸವರಾಜ್, ಎಸ್‌ಐಟಿ ವಿಚಾರಣೆಗೆ ಗೈರು ಸಾಧ್ಯತೆ

ನೌಕರರ ಮುಷ್ಕರ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಇದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ಇಲಾಖೆ ಎಸಿಎಸ್ ಅಂಜುಮ್ ಪರ್ವೇಜ್, KSRTC ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ ಸೇರಿ ಹಲವರು ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನೌಕರರು ಮುಷ್ಕರ ಹೂಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ವೇತನ ಹೆಚ್ಚಳದ ಭರವಸೆಗಳನ್ನು ನೀಡಿದರೂ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿಚಾರದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಭೆಯಲ್ಲಿ ಸೂಚಿಸಿದರೆಂಬ ಮಾಹಿತಿಯಿದೆ.

ಇದಾಗಿಯೂ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ನೌಕರರ ಜೊತೆ ಸಂಧಾನ ಸಾಧ್ಯತೆ ಇಲ್ಲವೇ ಇಲ್ಲ. ಎಸ್ಮಾ ಜಾರಿ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುವಂತೆ ಮುಖ್ಯಮಂತ್ರಿ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾರಿಗೆ ನೌಕರರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

“ಸಾರಿಗೆ ನೌಕರರ ಬೇಡಿಕೆ ನಮಗೆ ಗೊತ್ತಿದೆ. ಕೊರೊನಾ ಕಾರಣದಿಂದ ಸಾರಿಗೆ ಇಲಾಖೆ ಸಂಕಷ್ಟದಲ್ಲಿದೆ. ಆದರೂ ಕೂಡ ಸಿಬ್ಬಂದಿಯ ವೇತನ ಕಡಿತ ಮಾಡದೇ ಪೂರ್ಣ ಸಂಬಳ ನೀಡಿ ಜವಾಬ್ದಾರಿ ಮೆರೆದಿದ್ದೇವೆ. ಡಿಸಿಎಂ ಲಕ್ಷ್ಮಣ ಸವದಿ ಮೇ 2ರ ನಂತರ ಸಾರಿಗೆ ನೌಕರರ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದಾರೆ. 6ನೇ ವೇತನ ಆಯೋಗದ ಶಿಫಾರಸಿನಂತೆ ಸಂಬಳ ಹೆಚ್ಚಳ ಸಾಧ್ಯವಿಲ್ಲ. ಆದರೆ, 8% ದಷ್ಟು ಸಂಬಳ ಹೆಚ್ಚಳಕ್ಕೆ ಸರ್ಕಾರ ಸಿದ್ಧವಿದೆ. ಚುನಾವಣಾ ಆಯೋಗ ಅನುಮತಿ ನೀಡಿದರೆ ಈ ಆದೇಶ ಹೊರಡಿಸುತ್ತೇವೆ” ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

‘ಎಸ್ಮಾ’ ಎಂದರೆ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ. ಇದು ಜಾರಿಯಾದರೆ, ಜನರಿಗೆ ಅತ್ಯಗತ್ಯ ಎನಿಸುವ ಸೇವೆಗಳನ್ನ ಒದಗಿಸುವವರು ಉದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಗೈರಾದಾಗ ಕಾನೂನು ರೀತಿ ಕ್ರಮ ಕೈಗೊಳ್ಳಬಹುದು. ಒಂದು ವೇಳೆ ಎಸ್ಮಾ ಜಾರಿಯಾಗಿ, ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡರೆ ಅವರನ್ನ ಸೇವೆಯಿಂದಲೇ ಅಮಾನತುಗೊಳಿಸುವ ಅವಕಾಶವನ್ನು ಈ ಕಾಯ್ದೆ ನೀಡುತ್ತದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌, “ಸರ್ಕಾರವೇನು ಸರ್ವಾಧಿಕಾರಿಗಳಲ್ಲ, ಎಸ್ಮಾ ಜಾರಿ ಮಾಡುವುದಾದರೆ ಮಾಡಲಿ. ನಾವು ಅದಕ್ಕೆ ಸಿದ್ದರಿದ್ದೇವೆ” ಎಂದು ಕಿಡಿ ಕಾರಿದ್ದಾರೆ. ಅಲ್ಲದೆ ಹೋರಾಟದ ಬಗ್ಗೆ ಅವರು ಭಾನುವಾರದಂದು ಸ್ಪಷ್ಟವಾಗಿ ತಿಳಿಸಿದ್ದು, ಅವರ ಹೇಳಿಕೆಯನ್ನು ಕೆಳಗೆ ನೋಡಬಹುದಾಗಿದೆ.


ಇದನ್ನೂ ಓದಿ: ಕೇರಳದಲ್ಲಿ ಹಿಂದೂಗಳ ಬೆಂಬಲದಿಂದ BJP 10ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ: ನಳಿನ್ ಕುಮಾರ್ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...