Homeಕರ್ನಾಟಕಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ...

ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ ಬೈರೇಗೌಡ ಆರೋಪ

- Advertisement -
- Advertisement -

“ಬೆಂಗಳೂರು ಗಂಗೇನಹಳ್ಳಿ ಬಡಾವಣೆ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಸರ್ಕಾರಿ ಜಮೀನನ್ನು ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಜಂಟಿಯಾಗಿ, ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿ ಕುಮಾರಸ್ವಾಮಿ ಅವರ ಬಾಮೈದನ ಹೆಸರಲ್ಲಿ ನೋಂದಣಿ ಮಾಡಿದ್ದಾರೆ” ಎಂದು ಆರೋಪಿಸಿರುವ  ಕಾಂಗ್ರೆಸ್ ಸಚಿವರು, ಸುದ್ದಿಗೋ‍ಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರು ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1976 ರಲ್ಲೆ ಭೂ ಸ್ವಾಧೀನ ಮಾಡಿಕೊಂಡಿದೆ. 1976 ರಲ್ಲಿ ಆರಂಭವಾದ ಭೂ ಸ್ವಾಧೀನ ಪ್ರಕ್ರಿಯೆ 1978ರಲ್ಲಿ ಮುಗಿದಿದೆ. ಆದರೆ, ಎಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ತನಗೆ ಸಂಬಂಧವೇ ಇಲ್ಲದ ಈ ಪ್ರಕರಣದಲ್ಲಿ ಅತ್ಯುತ್ಸಾಹ ತೋರಿದ್ದು ಏಕೆ” ಎಂದು ಕೃಷ್ಣ ಬೈರೇಗೌಡ ಕಟುವಾಗಿ ಪ್ರಶ್ನಿಸಿದರು.

“ಈ ಮೂಲಕ ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆಯಿಂದ ವ್ಯವಸ್ಥಿತವಾಗಿ ಲೂಟಿ ಮಾಡಿದ್ದಾರೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಕ್ತ ದಾಖಲೆಗಳ ಸಮೇತ ಆಕ್ರೋಶ ಹೊರಹಾಕಿದರು.

“ಜಮೀನಿನ ವಾರಸುದಾರರಿಗೆ ಸಂಬಂಧವೇ ಇಲ್ಲದ ದಾರಿಯಲ್ಲಿ ಹೋಗೋ ದಾಸಯ್ಯ, ಯಾರೋ ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬವರು 1978ರಲ್ಲಿ ಭೂ ಸ್ವಾಧೀನಗೊಂಡ ಜಮೀನಿಗೆ ಡಿನೋಟಿಫೈ ಮಾಡಲು 2007ರಲ್ಲಿ ಸಿಎಂ ಕುಮಾರಸ್ವಾಮಿಯವರಿಗೆ ಅರ್ಜಿ ಹಾಕಿದ್ದಾರೆ. ಅಸಲಿಗೆ ರಾಜಶೇಖರಯ್ಯನಿಗೂ ಜಮೀನಿಗೂ ಸಂಬಂಧವೇ ಇಲ್ಲ. ಈತ ಯಾರು ಅಂತ ಈವರೆಗೆ ಗೊತ್ತಿಲ್ಲ. ಆದರೆ, ಈ ಅರ್ಜಿ ಬಂದ ಕೂಡಲೇ ಕುಮಾರಸ್ವಾಮಿಯವರು ಅದೇ ದಿನ ಅಧಿಕಾರಿಗಳಿಗೆ ಪತ್ರ ಬರೆದು ಈ ಅರ್ಜಿ ಮೇಲೆ ಕ್ರಮ ಕೈಗೊಳ್ಳಲು ಸೂಚಿಸುತ್ತಾರೆ” ಎಂದು ದಾಖಲೆ ಬಿಡುಗಡೆ ಮಾಡಿದರು.

“ಆದರೆ, ಅಧಿಕಾರಿಗಳು 1976ರಲ್ಲಿ ಆರಂಭಗೊಂಡ ಈ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆ 1978 ರಲ್ಲಿ ಮುಗಿದಿದೆ. ಹೀಗಾಗಿ ಭೂಸ್ವಾಧೀನ ಮಾಡಲು ಬರಲ್ಲ ಎಂದು ಸ್ಪಷ್ಟವಾಗಿ ಉತ್ತರಿಸಿದ್ದರು. ಆದರೂ, ಈ ವಿಚಾರವನ್ನು ಕೈಬಿಡದ ಕುಮಾರಸ್ವಾಮಿಯವರು ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ಕಾನೂನು ಪ್ರಕಾರ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

“ಇದೇ ಸಂದರ್ಭದಲ್ಲಿ ಈ ಜಮೀನಿನ ಅಸಲಿ ಮಾಲೀಕರಾದ 21 ಜನರ ಜೊತೆ ಕುಮಾರಸ್ವಾಮಿಯವರ ಅತ್ತೆಯವರು ಜಿಪಿಎ ಮಾಡಿಕೊಳ್ತಾರೆ. ಇದಾದ ಮೇಲೆ ಅಧಿಕಾರ ಹೊಂದಾಣಿಕೆ ಸಮಸ್ಯೆಯಿಂದ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿ ಕುಮಾರಸ್ವಾಮಿ ರಾಜೀನಾಮೆ ನೀಡ್ತಾರೆ. ಆನಂತರ ಯಡಿಯೂರಪ್ಪನವರು ಸಿಎಂ ಆಗ್ತಾರೆ. ಆದರೆ, ಅಲ್ಲಿಯವರೆಗೆ ಹಾವು ಮುಂಗಸಿಯಂತೆ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದರೂ ಸಹ ಇದೇ ಅರ್ಜಿ ಮೇಲೆ ಕ್ರಮವಹಿಸಲು ಯಡಿಯೂರಪ್ಪನವರು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದರು.

ಅಂದಿನ ಸಿಎಂ ಯಡಿಯೂರಪ್ಪನವರ ಸೂಚನೆಗೆ ಸ್ಪಷ್ಟವಾಗಿ ಉತ್ತರಿಸಿದ್ದ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿರಾಮಲಿಂಗಂ “ಗಂಗೇನಹಳ್ಳಿ ಬಡಾವಣೆಯ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು16/2 ಅನ್ವಯ ಈಗಾಗಲೇ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಹೀಗಾಗಿ ಡಿನೋಟಿಫೈ ಮಾಡಲು ಸಾಧ್ಯವಿಲ್ಲ ಎಂದು ಬರೆದಿದ್ದರು. ಆದರೆ, ಯಡಿಯೂರಪ್ಪನವರು ಪ್ರಧಾನ ಕಾರ್ಯದರ್ಶಿಗಳ ಅಭಿಪ್ರಾಯ ಗಾಳಿಗೆ ತೂರಿ ಸಂಬಂಧಿತ ಫೈಲ್ ಮೇಲೆ ಭೂಸ್ವಾಧೀನ ಕೈಬಿಡಲು ಆದೇಶಿಸಿದೆ ಎಂದು ಬರೆದಿದ್ದಾರೆ. 1978 ರಲ್ಲಿ ಭೂ ಸ್ವಾಧೀನ ಆಗಿರುವ ಜಮೀನಿಗೆ 2009-10 ರಲ್ಲಿ ಡಿನೋಟಿಫೈ ಮಾಡಿದ್ದಾರೆ” ಎಂದು ದಾಖಲೆಗಳ ಸಮೇತ ಅವರು ಆರೋಪಿಸಿದರು.

“ಇದು ಕಾಕತಾಳೀಯ ಅಂತಿರೋ ವ್ಯವಸ್ಥಿತ, ಪ್ರಾಯೋಜಿತ ಆಲೋಚಿತ ಅಕ್ರಮ ಅಂತಿರೋ ದರೋಡೆ ಅಂತಿರೋ, ಒಟ್ಟಾರೆ 1 ಎಕರೆ 11 ಗುಂಟೆ ಜಮೀನನ್ನು ಯಡಿಯೂರಪ್ಪ ಅವರನ್ನು ಉಪಯೋಗಿಸಿಕೊಂಡು ಡಿನೋಟಿಫೈ ಮಾಡಿಕೊಳ್ಳಲಾಗುತ್ತೆ. ಯಾರ ಜಮೀನಿಗೆ ಡಿನೋಟಿಫೈ ಆಗಿತ್ತು ಆತ ಸತ್ತೇ ಹೋಗಿದ್ದ, ಮೃತಪಟ್ಟವನ ಹೆಸರಿಗೆ ಡಿನೋಟಿಫೈ ಮಾಡಿದ್ದಾರೆ. ಸತ್ತೋದವನಿಂದ ಕುಮಾರಸ್ವಾಮಿಯವರ ಅತ್ತೆ ಹೆಸರಿಗೆ ಜಿಪಿಎ ಮಾಡಲಾಗಿದೆ. ಅವರಿಂದ ಕುಮಾರಸ್ವಾಮಿ ಅವರ ಬಾಮೈದನಿಗೆ ನೋಂದಣಿ ಮಾಡಿಕೊಡಲಾಗಿದೆ. ನೂರಾರು ಕೋಟಿ ಮೌಲ್ಯ ಇರುವ ಬಡವರಿಗೆ ನಿವೇಶನಗಳನ್ನು ಕಲ್ಪಿಸಬೇಕಾದ ಸ್ವತ್ತು, ಸರ್ಕಾರ ಭೂ ಸ್ವಾಧೀನ ಮಾಡಿ ಮುಗಿಸಿದ್ದ ಜಮೀನು ಹೀಗೆ ಅಕ್ರಮವಾಗಿ ಇಬ್ಬರು ಮಾಜಿ ಸಿಎಂಗಳ ಜಂಟಿ ಕಾರ್ಯಾಚರಣೆಯಿಂದ ಕಬಳಿಕೆಯಾಗಿದೆ” ಎಂದು ಆರೋಪಿಸಿದರು.

“ಸರ್ಕಾರದ ಆದೇಶದ ಪ್ರತಿಯ ಮೇಲೆ ಅಂದಿನ ಸಿಎಂ ಯಡಿಯೂರಪ್ಪ ಅವರ ಕೈ ಬರಹ ಸ್ಪಷ್ಟವಾಗಿದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆದೇಶಿಸಿದ್ದನ್ನು ಯಡಿಯೂರಪ್ಪ ಡಿನೋಟಿಫೈ ಮಾಡಿದ್ದಾರೆ. ಜಮೀನು ಕುಮಾರಸ್ವಾಮಿ ಅವರ ಬಾಮೈದನ ಪಾಲಾಗಿದೆ. ಈ ಇಬ್ಬರೂ ಸೇರಿ ಬಡವರ ಆಸ್ತಿ ಲಪಟಾಯಿಸಿರುವುದು ಕರ್ನಾಟಕದ ಜನರಗೆ ಮಾಡಿದ ಅನ್ಯಾಯ ಮೋಸ ಅಲ್ವ? ಇದು ವ್ಯವಸ್ಥಿತ ವಂಚನೆ ಹೌದ ಅಲ್ವ? ಇದು ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆ ಮಾಡಿ ವ್ಯವಸ್ಥಿತವಾಗಿ ಲೂಟಿ ಮಾಡಿರುವ ಪ್ರಕರಣ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು.

“ಈ ಪ್ರಕರಣದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ತನಿಖೆಯನ್ನು ವಜಾ ಮಾಡುವಂತೆ ಯಡಿಯೂರಪ್ಪನವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟಿನಲ್ಲಿ ಅಪೀಲು ವಜಾ ಆಗಿ ₹25,000 ದಂಡ ಹಾಕಿದ್ದಾರೆ. ಹೀಗಾಗಿ ಲೋಕಾಯುಕ್ತ ತತಕ್ಷಣ ಈ ಪ್ರಕರಣದ ತನಿಖೆ ಪೂರೈಸಿ ಈ ಬಗ್ಗೆ ವರದಿ ನೀಡಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಸಂತೋಷ್ ಲಾಡ್ ಉಪಸ್ಥಿತರಿದ್ದರು.

ಇದನ್ನೂ ಓದಿ; ಯಡಿಯೂರಪ್ಪ, ಕುಮಾರಸ್ವಾಮಿ ಜಂಟಿ ಹಗರಣ ಆರೋಪ | ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ನಿವೃತ್ತ ಐಎಎಸ್ ಅಧಿಕಾರಿ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...