Homeಕರ್ನಾಟಕಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ...

ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ ಬೈರೇಗೌಡ ಆರೋಪ

- Advertisement -
- Advertisement -

“ಬೆಂಗಳೂರು ಗಂಗೇನಹಳ್ಳಿ ಬಡಾವಣೆ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಸರ್ಕಾರಿ ಜಮೀನನ್ನು ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಜಂಟಿಯಾಗಿ, ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿ ಕುಮಾರಸ್ವಾಮಿ ಅವರ ಬಾಮೈದನ ಹೆಸರಲ್ಲಿ ನೋಂದಣಿ ಮಾಡಿದ್ದಾರೆ” ಎಂದು ಆರೋಪಿಸಿರುವ  ಕಾಂಗ್ರೆಸ್ ಸಚಿವರು, ಸುದ್ದಿಗೋ‍ಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರು ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1976 ರಲ್ಲೆ ಭೂ ಸ್ವಾಧೀನ ಮಾಡಿಕೊಂಡಿದೆ. 1976 ರಲ್ಲಿ ಆರಂಭವಾದ ಭೂ ಸ್ವಾಧೀನ ಪ್ರಕ್ರಿಯೆ 1978ರಲ್ಲಿ ಮುಗಿದಿದೆ. ಆದರೆ, ಎಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ತನಗೆ ಸಂಬಂಧವೇ ಇಲ್ಲದ ಈ ಪ್ರಕರಣದಲ್ಲಿ ಅತ್ಯುತ್ಸಾಹ ತೋರಿದ್ದು ಏಕೆ” ಎಂದು ಕೃಷ್ಣ ಬೈರೇಗೌಡ ಕಟುವಾಗಿ ಪ್ರಶ್ನಿಸಿದರು.

“ಈ ಮೂಲಕ ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆಯಿಂದ ವ್ಯವಸ್ಥಿತವಾಗಿ ಲೂಟಿ ಮಾಡಿದ್ದಾರೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಕ್ತ ದಾಖಲೆಗಳ ಸಮೇತ ಆಕ್ರೋಶ ಹೊರಹಾಕಿದರು.

“ಜಮೀನಿನ ವಾರಸುದಾರರಿಗೆ ಸಂಬಂಧವೇ ಇಲ್ಲದ ದಾರಿಯಲ್ಲಿ ಹೋಗೋ ದಾಸಯ್ಯ, ಯಾರೋ ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬವರು 1978ರಲ್ಲಿ ಭೂ ಸ್ವಾಧೀನಗೊಂಡ ಜಮೀನಿಗೆ ಡಿನೋಟಿಫೈ ಮಾಡಲು 2007ರಲ್ಲಿ ಸಿಎಂ ಕುಮಾರಸ್ವಾಮಿಯವರಿಗೆ ಅರ್ಜಿ ಹಾಕಿದ್ದಾರೆ. ಅಸಲಿಗೆ ರಾಜಶೇಖರಯ್ಯನಿಗೂ ಜಮೀನಿಗೂ ಸಂಬಂಧವೇ ಇಲ್ಲ. ಈತ ಯಾರು ಅಂತ ಈವರೆಗೆ ಗೊತ್ತಿಲ್ಲ. ಆದರೆ, ಈ ಅರ್ಜಿ ಬಂದ ಕೂಡಲೇ ಕುಮಾರಸ್ವಾಮಿಯವರು ಅದೇ ದಿನ ಅಧಿಕಾರಿಗಳಿಗೆ ಪತ್ರ ಬರೆದು ಈ ಅರ್ಜಿ ಮೇಲೆ ಕ್ರಮ ಕೈಗೊಳ್ಳಲು ಸೂಚಿಸುತ್ತಾರೆ” ಎಂದು ದಾಖಲೆ ಬಿಡುಗಡೆ ಮಾಡಿದರು.

“ಆದರೆ, ಅಧಿಕಾರಿಗಳು 1976ರಲ್ಲಿ ಆರಂಭಗೊಂಡ ಈ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆ 1978 ರಲ್ಲಿ ಮುಗಿದಿದೆ. ಹೀಗಾಗಿ ಭೂಸ್ವಾಧೀನ ಮಾಡಲು ಬರಲ್ಲ ಎಂದು ಸ್ಪಷ್ಟವಾಗಿ ಉತ್ತರಿಸಿದ್ದರು. ಆದರೂ, ಈ ವಿಚಾರವನ್ನು ಕೈಬಿಡದ ಕುಮಾರಸ್ವಾಮಿಯವರು ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ಕಾನೂನು ಪ್ರಕಾರ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

“ಇದೇ ಸಂದರ್ಭದಲ್ಲಿ ಈ ಜಮೀನಿನ ಅಸಲಿ ಮಾಲೀಕರಾದ 21 ಜನರ ಜೊತೆ ಕುಮಾರಸ್ವಾಮಿಯವರ ಅತ್ತೆಯವರು ಜಿಪಿಎ ಮಾಡಿಕೊಳ್ತಾರೆ. ಇದಾದ ಮೇಲೆ ಅಧಿಕಾರ ಹೊಂದಾಣಿಕೆ ಸಮಸ್ಯೆಯಿಂದ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿ ಕುಮಾರಸ್ವಾಮಿ ರಾಜೀನಾಮೆ ನೀಡ್ತಾರೆ. ಆನಂತರ ಯಡಿಯೂರಪ್ಪನವರು ಸಿಎಂ ಆಗ್ತಾರೆ. ಆದರೆ, ಅಲ್ಲಿಯವರೆಗೆ ಹಾವು ಮುಂಗಸಿಯಂತೆ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದರೂ ಸಹ ಇದೇ ಅರ್ಜಿ ಮೇಲೆ ಕ್ರಮವಹಿಸಲು ಯಡಿಯೂರಪ್ಪನವರು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದರು.

ಅಂದಿನ ಸಿಎಂ ಯಡಿಯೂರಪ್ಪನವರ ಸೂಚನೆಗೆ ಸ್ಪಷ್ಟವಾಗಿ ಉತ್ತರಿಸಿದ್ದ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿರಾಮಲಿಂಗಂ “ಗಂಗೇನಹಳ್ಳಿ ಬಡಾವಣೆಯ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು16/2 ಅನ್ವಯ ಈಗಾಗಲೇ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಹೀಗಾಗಿ ಡಿನೋಟಿಫೈ ಮಾಡಲು ಸಾಧ್ಯವಿಲ್ಲ ಎಂದು ಬರೆದಿದ್ದರು. ಆದರೆ, ಯಡಿಯೂರಪ್ಪನವರು ಪ್ರಧಾನ ಕಾರ್ಯದರ್ಶಿಗಳ ಅಭಿಪ್ರಾಯ ಗಾಳಿಗೆ ತೂರಿ ಸಂಬಂಧಿತ ಫೈಲ್ ಮೇಲೆ ಭೂಸ್ವಾಧೀನ ಕೈಬಿಡಲು ಆದೇಶಿಸಿದೆ ಎಂದು ಬರೆದಿದ್ದಾರೆ. 1978 ರಲ್ಲಿ ಭೂ ಸ್ವಾಧೀನ ಆಗಿರುವ ಜಮೀನಿಗೆ 2009-10 ರಲ್ಲಿ ಡಿನೋಟಿಫೈ ಮಾಡಿದ್ದಾರೆ” ಎಂದು ದಾಖಲೆಗಳ ಸಮೇತ ಅವರು ಆರೋಪಿಸಿದರು.

“ಇದು ಕಾಕತಾಳೀಯ ಅಂತಿರೋ ವ್ಯವಸ್ಥಿತ, ಪ್ರಾಯೋಜಿತ ಆಲೋಚಿತ ಅಕ್ರಮ ಅಂತಿರೋ ದರೋಡೆ ಅಂತಿರೋ, ಒಟ್ಟಾರೆ 1 ಎಕರೆ 11 ಗುಂಟೆ ಜಮೀನನ್ನು ಯಡಿಯೂರಪ್ಪ ಅವರನ್ನು ಉಪಯೋಗಿಸಿಕೊಂಡು ಡಿನೋಟಿಫೈ ಮಾಡಿಕೊಳ್ಳಲಾಗುತ್ತೆ. ಯಾರ ಜಮೀನಿಗೆ ಡಿನೋಟಿಫೈ ಆಗಿತ್ತು ಆತ ಸತ್ತೇ ಹೋಗಿದ್ದ, ಮೃತಪಟ್ಟವನ ಹೆಸರಿಗೆ ಡಿನೋಟಿಫೈ ಮಾಡಿದ್ದಾರೆ. ಸತ್ತೋದವನಿಂದ ಕುಮಾರಸ್ವಾಮಿಯವರ ಅತ್ತೆ ಹೆಸರಿಗೆ ಜಿಪಿಎ ಮಾಡಲಾಗಿದೆ. ಅವರಿಂದ ಕುಮಾರಸ್ವಾಮಿ ಅವರ ಬಾಮೈದನಿಗೆ ನೋಂದಣಿ ಮಾಡಿಕೊಡಲಾಗಿದೆ. ನೂರಾರು ಕೋಟಿ ಮೌಲ್ಯ ಇರುವ ಬಡವರಿಗೆ ನಿವೇಶನಗಳನ್ನು ಕಲ್ಪಿಸಬೇಕಾದ ಸ್ವತ್ತು, ಸರ್ಕಾರ ಭೂ ಸ್ವಾಧೀನ ಮಾಡಿ ಮುಗಿಸಿದ್ದ ಜಮೀನು ಹೀಗೆ ಅಕ್ರಮವಾಗಿ ಇಬ್ಬರು ಮಾಜಿ ಸಿಎಂಗಳ ಜಂಟಿ ಕಾರ್ಯಾಚರಣೆಯಿಂದ ಕಬಳಿಕೆಯಾಗಿದೆ” ಎಂದು ಆರೋಪಿಸಿದರು.

“ಸರ್ಕಾರದ ಆದೇಶದ ಪ್ರತಿಯ ಮೇಲೆ ಅಂದಿನ ಸಿಎಂ ಯಡಿಯೂರಪ್ಪ ಅವರ ಕೈ ಬರಹ ಸ್ಪಷ್ಟವಾಗಿದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆದೇಶಿಸಿದ್ದನ್ನು ಯಡಿಯೂರಪ್ಪ ಡಿನೋಟಿಫೈ ಮಾಡಿದ್ದಾರೆ. ಜಮೀನು ಕುಮಾರಸ್ವಾಮಿ ಅವರ ಬಾಮೈದನ ಪಾಲಾಗಿದೆ. ಈ ಇಬ್ಬರೂ ಸೇರಿ ಬಡವರ ಆಸ್ತಿ ಲಪಟಾಯಿಸಿರುವುದು ಕರ್ನಾಟಕದ ಜನರಗೆ ಮಾಡಿದ ಅನ್ಯಾಯ ಮೋಸ ಅಲ್ವ? ಇದು ವ್ಯವಸ್ಥಿತ ವಂಚನೆ ಹೌದ ಅಲ್ವ? ಇದು ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆ ಮಾಡಿ ವ್ಯವಸ್ಥಿತವಾಗಿ ಲೂಟಿ ಮಾಡಿರುವ ಪ್ರಕರಣ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು.

“ಈ ಪ್ರಕರಣದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ತನಿಖೆಯನ್ನು ವಜಾ ಮಾಡುವಂತೆ ಯಡಿಯೂರಪ್ಪನವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟಿನಲ್ಲಿ ಅಪೀಲು ವಜಾ ಆಗಿ ₹25,000 ದಂಡ ಹಾಕಿದ್ದಾರೆ. ಹೀಗಾಗಿ ಲೋಕಾಯುಕ್ತ ತತಕ್ಷಣ ಈ ಪ್ರಕರಣದ ತನಿಖೆ ಪೂರೈಸಿ ಈ ಬಗ್ಗೆ ವರದಿ ನೀಡಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಸಂತೋಷ್ ಲಾಡ್ ಉಪಸ್ಥಿತರಿದ್ದರು.

ಇದನ್ನೂ ಓದಿ; ಯಡಿಯೂರಪ್ಪ, ಕುಮಾರಸ್ವಾಮಿ ಜಂಟಿ ಹಗರಣ ಆರೋಪ | ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ನಿವೃತ್ತ ಐಎಎಸ್ ಅಧಿಕಾರಿ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...