Homeಕರ್ನಾಟಕಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ...

ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ ಬೈರೇಗೌಡ ಆರೋಪ

- Advertisement -
- Advertisement -

“ಬೆಂಗಳೂರು ಗಂಗೇನಹಳ್ಳಿ ಬಡಾವಣೆ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಸರ್ಕಾರಿ ಜಮೀನನ್ನು ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಜಂಟಿಯಾಗಿ, ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿ ಕುಮಾರಸ್ವಾಮಿ ಅವರ ಬಾಮೈದನ ಹೆಸರಲ್ಲಿ ನೋಂದಣಿ ಮಾಡಿದ್ದಾರೆ” ಎಂದು ಆರೋಪಿಸಿರುವ  ಕಾಂಗ್ರೆಸ್ ಸಚಿವರು, ಸುದ್ದಿಗೋ‍ಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರು ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1976 ರಲ್ಲೆ ಭೂ ಸ್ವಾಧೀನ ಮಾಡಿಕೊಂಡಿದೆ. 1976 ರಲ್ಲಿ ಆರಂಭವಾದ ಭೂ ಸ್ವಾಧೀನ ಪ್ರಕ್ರಿಯೆ 1978ರಲ್ಲಿ ಮುಗಿದಿದೆ. ಆದರೆ, ಎಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ತನಗೆ ಸಂಬಂಧವೇ ಇಲ್ಲದ ಈ ಪ್ರಕರಣದಲ್ಲಿ ಅತ್ಯುತ್ಸಾಹ ತೋರಿದ್ದು ಏಕೆ” ಎಂದು ಕೃಷ್ಣ ಬೈರೇಗೌಡ ಕಟುವಾಗಿ ಪ್ರಶ್ನಿಸಿದರು.

“ಈ ಮೂಲಕ ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆಯಿಂದ ವ್ಯವಸ್ಥಿತವಾಗಿ ಲೂಟಿ ಮಾಡಿದ್ದಾರೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಕ್ತ ದಾಖಲೆಗಳ ಸಮೇತ ಆಕ್ರೋಶ ಹೊರಹಾಕಿದರು.

“ಜಮೀನಿನ ವಾರಸುದಾರರಿಗೆ ಸಂಬಂಧವೇ ಇಲ್ಲದ ದಾರಿಯಲ್ಲಿ ಹೋಗೋ ದಾಸಯ್ಯ, ಯಾರೋ ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬವರು 1978ರಲ್ಲಿ ಭೂ ಸ್ವಾಧೀನಗೊಂಡ ಜಮೀನಿಗೆ ಡಿನೋಟಿಫೈ ಮಾಡಲು 2007ರಲ್ಲಿ ಸಿಎಂ ಕುಮಾರಸ್ವಾಮಿಯವರಿಗೆ ಅರ್ಜಿ ಹಾಕಿದ್ದಾರೆ. ಅಸಲಿಗೆ ರಾಜಶೇಖರಯ್ಯನಿಗೂ ಜಮೀನಿಗೂ ಸಂಬಂಧವೇ ಇಲ್ಲ. ಈತ ಯಾರು ಅಂತ ಈವರೆಗೆ ಗೊತ್ತಿಲ್ಲ. ಆದರೆ, ಈ ಅರ್ಜಿ ಬಂದ ಕೂಡಲೇ ಕುಮಾರಸ್ವಾಮಿಯವರು ಅದೇ ದಿನ ಅಧಿಕಾರಿಗಳಿಗೆ ಪತ್ರ ಬರೆದು ಈ ಅರ್ಜಿ ಮೇಲೆ ಕ್ರಮ ಕೈಗೊಳ್ಳಲು ಸೂಚಿಸುತ್ತಾರೆ” ಎಂದು ದಾಖಲೆ ಬಿಡುಗಡೆ ಮಾಡಿದರು.

“ಆದರೆ, ಅಧಿಕಾರಿಗಳು 1976ರಲ್ಲಿ ಆರಂಭಗೊಂಡ ಈ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆ 1978 ರಲ್ಲಿ ಮುಗಿದಿದೆ. ಹೀಗಾಗಿ ಭೂಸ್ವಾಧೀನ ಮಾಡಲು ಬರಲ್ಲ ಎಂದು ಸ್ಪಷ್ಟವಾಗಿ ಉತ್ತರಿಸಿದ್ದರು. ಆದರೂ, ಈ ವಿಚಾರವನ್ನು ಕೈಬಿಡದ ಕುಮಾರಸ್ವಾಮಿಯವರು ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ಕಾನೂನು ಪ್ರಕಾರ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

“ಇದೇ ಸಂದರ್ಭದಲ್ಲಿ ಈ ಜಮೀನಿನ ಅಸಲಿ ಮಾಲೀಕರಾದ 21 ಜನರ ಜೊತೆ ಕುಮಾರಸ್ವಾಮಿಯವರ ಅತ್ತೆಯವರು ಜಿಪಿಎ ಮಾಡಿಕೊಳ್ತಾರೆ. ಇದಾದ ಮೇಲೆ ಅಧಿಕಾರ ಹೊಂದಾಣಿಕೆ ಸಮಸ್ಯೆಯಿಂದ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿ ಕುಮಾರಸ್ವಾಮಿ ರಾಜೀನಾಮೆ ನೀಡ್ತಾರೆ. ಆನಂತರ ಯಡಿಯೂರಪ್ಪನವರು ಸಿಎಂ ಆಗ್ತಾರೆ. ಆದರೆ, ಅಲ್ಲಿಯವರೆಗೆ ಹಾವು ಮುಂಗಸಿಯಂತೆ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದರೂ ಸಹ ಇದೇ ಅರ್ಜಿ ಮೇಲೆ ಕ್ರಮವಹಿಸಲು ಯಡಿಯೂರಪ್ಪನವರು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದರು.

ಅಂದಿನ ಸಿಎಂ ಯಡಿಯೂರಪ್ಪನವರ ಸೂಚನೆಗೆ ಸ್ಪಷ್ಟವಾಗಿ ಉತ್ತರಿಸಿದ್ದ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿರಾಮಲಿಂಗಂ “ಗಂಗೇನಹಳ್ಳಿ ಬಡಾವಣೆಯ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು16/2 ಅನ್ವಯ ಈಗಾಗಲೇ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಹೀಗಾಗಿ ಡಿನೋಟಿಫೈ ಮಾಡಲು ಸಾಧ್ಯವಿಲ್ಲ ಎಂದು ಬರೆದಿದ್ದರು. ಆದರೆ, ಯಡಿಯೂರಪ್ಪನವರು ಪ್ರಧಾನ ಕಾರ್ಯದರ್ಶಿಗಳ ಅಭಿಪ್ರಾಯ ಗಾಳಿಗೆ ತೂರಿ ಸಂಬಂಧಿತ ಫೈಲ್ ಮೇಲೆ ಭೂಸ್ವಾಧೀನ ಕೈಬಿಡಲು ಆದೇಶಿಸಿದೆ ಎಂದು ಬರೆದಿದ್ದಾರೆ. 1978 ರಲ್ಲಿ ಭೂ ಸ್ವಾಧೀನ ಆಗಿರುವ ಜಮೀನಿಗೆ 2009-10 ರಲ್ಲಿ ಡಿನೋಟಿಫೈ ಮಾಡಿದ್ದಾರೆ” ಎಂದು ದಾಖಲೆಗಳ ಸಮೇತ ಅವರು ಆರೋಪಿಸಿದರು.

“ಇದು ಕಾಕತಾಳೀಯ ಅಂತಿರೋ ವ್ಯವಸ್ಥಿತ, ಪ್ರಾಯೋಜಿತ ಆಲೋಚಿತ ಅಕ್ರಮ ಅಂತಿರೋ ದರೋಡೆ ಅಂತಿರೋ, ಒಟ್ಟಾರೆ 1 ಎಕರೆ 11 ಗುಂಟೆ ಜಮೀನನ್ನು ಯಡಿಯೂರಪ್ಪ ಅವರನ್ನು ಉಪಯೋಗಿಸಿಕೊಂಡು ಡಿನೋಟಿಫೈ ಮಾಡಿಕೊಳ್ಳಲಾಗುತ್ತೆ. ಯಾರ ಜಮೀನಿಗೆ ಡಿನೋಟಿಫೈ ಆಗಿತ್ತು ಆತ ಸತ್ತೇ ಹೋಗಿದ್ದ, ಮೃತಪಟ್ಟವನ ಹೆಸರಿಗೆ ಡಿನೋಟಿಫೈ ಮಾಡಿದ್ದಾರೆ. ಸತ್ತೋದವನಿಂದ ಕುಮಾರಸ್ವಾಮಿಯವರ ಅತ್ತೆ ಹೆಸರಿಗೆ ಜಿಪಿಎ ಮಾಡಲಾಗಿದೆ. ಅವರಿಂದ ಕುಮಾರಸ್ವಾಮಿ ಅವರ ಬಾಮೈದನಿಗೆ ನೋಂದಣಿ ಮಾಡಿಕೊಡಲಾಗಿದೆ. ನೂರಾರು ಕೋಟಿ ಮೌಲ್ಯ ಇರುವ ಬಡವರಿಗೆ ನಿವೇಶನಗಳನ್ನು ಕಲ್ಪಿಸಬೇಕಾದ ಸ್ವತ್ತು, ಸರ್ಕಾರ ಭೂ ಸ್ವಾಧೀನ ಮಾಡಿ ಮುಗಿಸಿದ್ದ ಜಮೀನು ಹೀಗೆ ಅಕ್ರಮವಾಗಿ ಇಬ್ಬರು ಮಾಜಿ ಸಿಎಂಗಳ ಜಂಟಿ ಕಾರ್ಯಾಚರಣೆಯಿಂದ ಕಬಳಿಕೆಯಾಗಿದೆ” ಎಂದು ಆರೋಪಿಸಿದರು.

“ಸರ್ಕಾರದ ಆದೇಶದ ಪ್ರತಿಯ ಮೇಲೆ ಅಂದಿನ ಸಿಎಂ ಯಡಿಯೂರಪ್ಪ ಅವರ ಕೈ ಬರಹ ಸ್ಪಷ್ಟವಾಗಿದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆದೇಶಿಸಿದ್ದನ್ನು ಯಡಿಯೂರಪ್ಪ ಡಿನೋಟಿಫೈ ಮಾಡಿದ್ದಾರೆ. ಜಮೀನು ಕುಮಾರಸ್ವಾಮಿ ಅವರ ಬಾಮೈದನ ಪಾಲಾಗಿದೆ. ಈ ಇಬ್ಬರೂ ಸೇರಿ ಬಡವರ ಆಸ್ತಿ ಲಪಟಾಯಿಸಿರುವುದು ಕರ್ನಾಟಕದ ಜನರಗೆ ಮಾಡಿದ ಅನ್ಯಾಯ ಮೋಸ ಅಲ್ವ? ಇದು ವ್ಯವಸ್ಥಿತ ವಂಚನೆ ಹೌದ ಅಲ್ವ? ಇದು ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆ ಮಾಡಿ ವ್ಯವಸ್ಥಿತವಾಗಿ ಲೂಟಿ ಮಾಡಿರುವ ಪ್ರಕರಣ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು.

“ಈ ಪ್ರಕರಣದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ತನಿಖೆಯನ್ನು ವಜಾ ಮಾಡುವಂತೆ ಯಡಿಯೂರಪ್ಪನವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟಿನಲ್ಲಿ ಅಪೀಲು ವಜಾ ಆಗಿ ₹25,000 ದಂಡ ಹಾಕಿದ್ದಾರೆ. ಹೀಗಾಗಿ ಲೋಕಾಯುಕ್ತ ತತಕ್ಷಣ ಈ ಪ್ರಕರಣದ ತನಿಖೆ ಪೂರೈಸಿ ಈ ಬಗ್ಗೆ ವರದಿ ನೀಡಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಸಂತೋಷ್ ಲಾಡ್ ಉಪಸ್ಥಿತರಿದ್ದರು.

ಇದನ್ನೂ ಓದಿ; ಯಡಿಯೂರಪ್ಪ, ಕುಮಾರಸ್ವಾಮಿ ಜಂಟಿ ಹಗರಣ ಆರೋಪ | ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ನಿವೃತ್ತ ಐಎಎಸ್ ಅಧಿಕಾರಿ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...