Homeಕರ್ನಾಟಕಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ...

ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ ಬೈರೇಗೌಡ ಆರೋಪ

- Advertisement -
- Advertisement -

“ಬೆಂಗಳೂರು ಗಂಗೇನಹಳ್ಳಿ ಬಡಾವಣೆ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಸರ್ಕಾರಿ ಜಮೀನನ್ನು ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಜಂಟಿಯಾಗಿ, ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿ ಕುಮಾರಸ್ವಾಮಿ ಅವರ ಬಾಮೈದನ ಹೆಸರಲ್ಲಿ ನೋಂದಣಿ ಮಾಡಿದ್ದಾರೆ” ಎಂದು ಆರೋಪಿಸಿರುವ  ಕಾಂಗ್ರೆಸ್ ಸಚಿವರು, ಸುದ್ದಿಗೋ‍ಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರು ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1976 ರಲ್ಲೆ ಭೂ ಸ್ವಾಧೀನ ಮಾಡಿಕೊಂಡಿದೆ. 1976 ರಲ್ಲಿ ಆರಂಭವಾದ ಭೂ ಸ್ವಾಧೀನ ಪ್ರಕ್ರಿಯೆ 1978ರಲ್ಲಿ ಮುಗಿದಿದೆ. ಆದರೆ, ಎಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ತನಗೆ ಸಂಬಂಧವೇ ಇಲ್ಲದ ಈ ಪ್ರಕರಣದಲ್ಲಿ ಅತ್ಯುತ್ಸಾಹ ತೋರಿದ್ದು ಏಕೆ” ಎಂದು ಕೃಷ್ಣ ಬೈರೇಗೌಡ ಕಟುವಾಗಿ ಪ್ರಶ್ನಿಸಿದರು.

“ಈ ಮೂಲಕ ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆಯಿಂದ ವ್ಯವಸ್ಥಿತವಾಗಿ ಲೂಟಿ ಮಾಡಿದ್ದಾರೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಕ್ತ ದಾಖಲೆಗಳ ಸಮೇತ ಆಕ್ರೋಶ ಹೊರಹಾಕಿದರು.

“ಜಮೀನಿನ ವಾರಸುದಾರರಿಗೆ ಸಂಬಂಧವೇ ಇಲ್ಲದ ದಾರಿಯಲ್ಲಿ ಹೋಗೋ ದಾಸಯ್ಯ, ಯಾರೋ ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬವರು 1978ರಲ್ಲಿ ಭೂ ಸ್ವಾಧೀನಗೊಂಡ ಜಮೀನಿಗೆ ಡಿನೋಟಿಫೈ ಮಾಡಲು 2007ರಲ್ಲಿ ಸಿಎಂ ಕುಮಾರಸ್ವಾಮಿಯವರಿಗೆ ಅರ್ಜಿ ಹಾಕಿದ್ದಾರೆ. ಅಸಲಿಗೆ ರಾಜಶೇಖರಯ್ಯನಿಗೂ ಜಮೀನಿಗೂ ಸಂಬಂಧವೇ ಇಲ್ಲ. ಈತ ಯಾರು ಅಂತ ಈವರೆಗೆ ಗೊತ್ತಿಲ್ಲ. ಆದರೆ, ಈ ಅರ್ಜಿ ಬಂದ ಕೂಡಲೇ ಕುಮಾರಸ್ವಾಮಿಯವರು ಅದೇ ದಿನ ಅಧಿಕಾರಿಗಳಿಗೆ ಪತ್ರ ಬರೆದು ಈ ಅರ್ಜಿ ಮೇಲೆ ಕ್ರಮ ಕೈಗೊಳ್ಳಲು ಸೂಚಿಸುತ್ತಾರೆ” ಎಂದು ದಾಖಲೆ ಬಿಡುಗಡೆ ಮಾಡಿದರು.

“ಆದರೆ, ಅಧಿಕಾರಿಗಳು 1976ರಲ್ಲಿ ಆರಂಭಗೊಂಡ ಈ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆ 1978 ರಲ್ಲಿ ಮುಗಿದಿದೆ. ಹೀಗಾಗಿ ಭೂಸ್ವಾಧೀನ ಮಾಡಲು ಬರಲ್ಲ ಎಂದು ಸ್ಪಷ್ಟವಾಗಿ ಉತ್ತರಿಸಿದ್ದರು. ಆದರೂ, ಈ ವಿಚಾರವನ್ನು ಕೈಬಿಡದ ಕುಮಾರಸ್ವಾಮಿಯವರು ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ಕಾನೂನು ಪ್ರಕಾರ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

“ಇದೇ ಸಂದರ್ಭದಲ್ಲಿ ಈ ಜಮೀನಿನ ಅಸಲಿ ಮಾಲೀಕರಾದ 21 ಜನರ ಜೊತೆ ಕುಮಾರಸ್ವಾಮಿಯವರ ಅತ್ತೆಯವರು ಜಿಪಿಎ ಮಾಡಿಕೊಳ್ತಾರೆ. ಇದಾದ ಮೇಲೆ ಅಧಿಕಾರ ಹೊಂದಾಣಿಕೆ ಸಮಸ್ಯೆಯಿಂದ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿ ಕುಮಾರಸ್ವಾಮಿ ರಾಜೀನಾಮೆ ನೀಡ್ತಾರೆ. ಆನಂತರ ಯಡಿಯೂರಪ್ಪನವರು ಸಿಎಂ ಆಗ್ತಾರೆ. ಆದರೆ, ಅಲ್ಲಿಯವರೆಗೆ ಹಾವು ಮುಂಗಸಿಯಂತೆ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದರೂ ಸಹ ಇದೇ ಅರ್ಜಿ ಮೇಲೆ ಕ್ರಮವಹಿಸಲು ಯಡಿಯೂರಪ್ಪನವರು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದರು.

ಅಂದಿನ ಸಿಎಂ ಯಡಿಯೂರಪ್ಪನವರ ಸೂಚನೆಗೆ ಸ್ಪಷ್ಟವಾಗಿ ಉತ್ತರಿಸಿದ್ದ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿರಾಮಲಿಂಗಂ “ಗಂಗೇನಹಳ್ಳಿ ಬಡಾವಣೆಯ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು16/2 ಅನ್ವಯ ಈಗಾಗಲೇ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಹೀಗಾಗಿ ಡಿನೋಟಿಫೈ ಮಾಡಲು ಸಾಧ್ಯವಿಲ್ಲ ಎಂದು ಬರೆದಿದ್ದರು. ಆದರೆ, ಯಡಿಯೂರಪ್ಪನವರು ಪ್ರಧಾನ ಕಾರ್ಯದರ್ಶಿಗಳ ಅಭಿಪ್ರಾಯ ಗಾಳಿಗೆ ತೂರಿ ಸಂಬಂಧಿತ ಫೈಲ್ ಮೇಲೆ ಭೂಸ್ವಾಧೀನ ಕೈಬಿಡಲು ಆದೇಶಿಸಿದೆ ಎಂದು ಬರೆದಿದ್ದಾರೆ. 1978 ರಲ್ಲಿ ಭೂ ಸ್ವಾಧೀನ ಆಗಿರುವ ಜಮೀನಿಗೆ 2009-10 ರಲ್ಲಿ ಡಿನೋಟಿಫೈ ಮಾಡಿದ್ದಾರೆ” ಎಂದು ದಾಖಲೆಗಳ ಸಮೇತ ಅವರು ಆರೋಪಿಸಿದರು.

“ಇದು ಕಾಕತಾಳೀಯ ಅಂತಿರೋ ವ್ಯವಸ್ಥಿತ, ಪ್ರಾಯೋಜಿತ ಆಲೋಚಿತ ಅಕ್ರಮ ಅಂತಿರೋ ದರೋಡೆ ಅಂತಿರೋ, ಒಟ್ಟಾರೆ 1 ಎಕರೆ 11 ಗುಂಟೆ ಜಮೀನನ್ನು ಯಡಿಯೂರಪ್ಪ ಅವರನ್ನು ಉಪಯೋಗಿಸಿಕೊಂಡು ಡಿನೋಟಿಫೈ ಮಾಡಿಕೊಳ್ಳಲಾಗುತ್ತೆ. ಯಾರ ಜಮೀನಿಗೆ ಡಿನೋಟಿಫೈ ಆಗಿತ್ತು ಆತ ಸತ್ತೇ ಹೋಗಿದ್ದ, ಮೃತಪಟ್ಟವನ ಹೆಸರಿಗೆ ಡಿನೋಟಿಫೈ ಮಾಡಿದ್ದಾರೆ. ಸತ್ತೋದವನಿಂದ ಕುಮಾರಸ್ವಾಮಿಯವರ ಅತ್ತೆ ಹೆಸರಿಗೆ ಜಿಪಿಎ ಮಾಡಲಾಗಿದೆ. ಅವರಿಂದ ಕುಮಾರಸ್ವಾಮಿ ಅವರ ಬಾಮೈದನಿಗೆ ನೋಂದಣಿ ಮಾಡಿಕೊಡಲಾಗಿದೆ. ನೂರಾರು ಕೋಟಿ ಮೌಲ್ಯ ಇರುವ ಬಡವರಿಗೆ ನಿವೇಶನಗಳನ್ನು ಕಲ್ಪಿಸಬೇಕಾದ ಸ್ವತ್ತು, ಸರ್ಕಾರ ಭೂ ಸ್ವಾಧೀನ ಮಾಡಿ ಮುಗಿಸಿದ್ದ ಜಮೀನು ಹೀಗೆ ಅಕ್ರಮವಾಗಿ ಇಬ್ಬರು ಮಾಜಿ ಸಿಎಂಗಳ ಜಂಟಿ ಕಾರ್ಯಾಚರಣೆಯಿಂದ ಕಬಳಿಕೆಯಾಗಿದೆ” ಎಂದು ಆರೋಪಿಸಿದರು.

“ಸರ್ಕಾರದ ಆದೇಶದ ಪ್ರತಿಯ ಮೇಲೆ ಅಂದಿನ ಸಿಎಂ ಯಡಿಯೂರಪ್ಪ ಅವರ ಕೈ ಬರಹ ಸ್ಪಷ್ಟವಾಗಿದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆದೇಶಿಸಿದ್ದನ್ನು ಯಡಿಯೂರಪ್ಪ ಡಿನೋಟಿಫೈ ಮಾಡಿದ್ದಾರೆ. ಜಮೀನು ಕುಮಾರಸ್ವಾಮಿ ಅವರ ಬಾಮೈದನ ಪಾಲಾಗಿದೆ. ಈ ಇಬ್ಬರೂ ಸೇರಿ ಬಡವರ ಆಸ್ತಿ ಲಪಟಾಯಿಸಿರುವುದು ಕರ್ನಾಟಕದ ಜನರಗೆ ಮಾಡಿದ ಅನ್ಯಾಯ ಮೋಸ ಅಲ್ವ? ಇದು ವ್ಯವಸ್ಥಿತ ವಂಚನೆ ಹೌದ ಅಲ್ವ? ಇದು ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆ ಮಾಡಿ ವ್ಯವಸ್ಥಿತವಾಗಿ ಲೂಟಿ ಮಾಡಿರುವ ಪ್ರಕರಣ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು.

“ಈ ಪ್ರಕರಣದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ತನಿಖೆಯನ್ನು ವಜಾ ಮಾಡುವಂತೆ ಯಡಿಯೂರಪ್ಪನವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟಿನಲ್ಲಿ ಅಪೀಲು ವಜಾ ಆಗಿ ₹25,000 ದಂಡ ಹಾಕಿದ್ದಾರೆ. ಹೀಗಾಗಿ ಲೋಕಾಯುಕ್ತ ತತಕ್ಷಣ ಈ ಪ್ರಕರಣದ ತನಿಖೆ ಪೂರೈಸಿ ಈ ಬಗ್ಗೆ ವರದಿ ನೀಡಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಸಂತೋಷ್ ಲಾಡ್ ಉಪಸ್ಥಿತರಿದ್ದರು.

ಇದನ್ನೂ ಓದಿ; ಯಡಿಯೂರಪ್ಪ, ಕುಮಾರಸ್ವಾಮಿ ಜಂಟಿ ಹಗರಣ ಆರೋಪ | ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ನಿವೃತ್ತ ಐಎಎಸ್ ಅಧಿಕಾರಿ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...