Homeಕರ್ನಾಟಕಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ...

ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ ಬೈರೇಗೌಡ ಆರೋಪ

- Advertisement -
- Advertisement -

“ಬೆಂಗಳೂರು ಗಂಗೇನಹಳ್ಳಿ ಬಡಾವಣೆ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಸರ್ಕಾರಿ ಜಮೀನನ್ನು ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಜಂಟಿಯಾಗಿ, ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿ ಕುಮಾರಸ್ವಾಮಿ ಅವರ ಬಾಮೈದನ ಹೆಸರಲ್ಲಿ ನೋಂದಣಿ ಮಾಡಿದ್ದಾರೆ” ಎಂದು ಆರೋಪಿಸಿರುವ  ಕಾಂಗ್ರೆಸ್ ಸಚಿವರು, ಸುದ್ದಿಗೋ‍ಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರು ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1976 ರಲ್ಲೆ ಭೂ ಸ್ವಾಧೀನ ಮಾಡಿಕೊಂಡಿದೆ. 1976 ರಲ್ಲಿ ಆರಂಭವಾದ ಭೂ ಸ್ವಾಧೀನ ಪ್ರಕ್ರಿಯೆ 1978ರಲ್ಲಿ ಮುಗಿದಿದೆ. ಆದರೆ, ಎಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ತನಗೆ ಸಂಬಂಧವೇ ಇಲ್ಲದ ಈ ಪ್ರಕರಣದಲ್ಲಿ ಅತ್ಯುತ್ಸಾಹ ತೋರಿದ್ದು ಏಕೆ” ಎಂದು ಕೃಷ್ಣ ಬೈರೇಗೌಡ ಕಟುವಾಗಿ ಪ್ರಶ್ನಿಸಿದರು.

“ಈ ಮೂಲಕ ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆಯಿಂದ ವ್ಯವಸ್ಥಿತವಾಗಿ ಲೂಟಿ ಮಾಡಿದ್ದಾರೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಕ್ತ ದಾಖಲೆಗಳ ಸಮೇತ ಆಕ್ರೋಶ ಹೊರಹಾಕಿದರು.

“ಜಮೀನಿನ ವಾರಸುದಾರರಿಗೆ ಸಂಬಂಧವೇ ಇಲ್ಲದ ದಾರಿಯಲ್ಲಿ ಹೋಗೋ ದಾಸಯ್ಯ, ಯಾರೋ ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬವರು 1978ರಲ್ಲಿ ಭೂ ಸ್ವಾಧೀನಗೊಂಡ ಜಮೀನಿಗೆ ಡಿನೋಟಿಫೈ ಮಾಡಲು 2007ರಲ್ಲಿ ಸಿಎಂ ಕುಮಾರಸ್ವಾಮಿಯವರಿಗೆ ಅರ್ಜಿ ಹಾಕಿದ್ದಾರೆ. ಅಸಲಿಗೆ ರಾಜಶೇಖರಯ್ಯನಿಗೂ ಜಮೀನಿಗೂ ಸಂಬಂಧವೇ ಇಲ್ಲ. ಈತ ಯಾರು ಅಂತ ಈವರೆಗೆ ಗೊತ್ತಿಲ್ಲ. ಆದರೆ, ಈ ಅರ್ಜಿ ಬಂದ ಕೂಡಲೇ ಕುಮಾರಸ್ವಾಮಿಯವರು ಅದೇ ದಿನ ಅಧಿಕಾರಿಗಳಿಗೆ ಪತ್ರ ಬರೆದು ಈ ಅರ್ಜಿ ಮೇಲೆ ಕ್ರಮ ಕೈಗೊಳ್ಳಲು ಸೂಚಿಸುತ್ತಾರೆ” ಎಂದು ದಾಖಲೆ ಬಿಡುಗಡೆ ಮಾಡಿದರು.

“ಆದರೆ, ಅಧಿಕಾರಿಗಳು 1976ರಲ್ಲಿ ಆರಂಭಗೊಂಡ ಈ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆ 1978 ರಲ್ಲಿ ಮುಗಿದಿದೆ. ಹೀಗಾಗಿ ಭೂಸ್ವಾಧೀನ ಮಾಡಲು ಬರಲ್ಲ ಎಂದು ಸ್ಪಷ್ಟವಾಗಿ ಉತ್ತರಿಸಿದ್ದರು. ಆದರೂ, ಈ ವಿಚಾರವನ್ನು ಕೈಬಿಡದ ಕುಮಾರಸ್ವಾಮಿಯವರು ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ಕಾನೂನು ಪ್ರಕಾರ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

“ಇದೇ ಸಂದರ್ಭದಲ್ಲಿ ಈ ಜಮೀನಿನ ಅಸಲಿ ಮಾಲೀಕರಾದ 21 ಜನರ ಜೊತೆ ಕುಮಾರಸ್ವಾಮಿಯವರ ಅತ್ತೆಯವರು ಜಿಪಿಎ ಮಾಡಿಕೊಳ್ತಾರೆ. ಇದಾದ ಮೇಲೆ ಅಧಿಕಾರ ಹೊಂದಾಣಿಕೆ ಸಮಸ್ಯೆಯಿಂದ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿ ಕುಮಾರಸ್ವಾಮಿ ರಾಜೀನಾಮೆ ನೀಡ್ತಾರೆ. ಆನಂತರ ಯಡಿಯೂರಪ್ಪನವರು ಸಿಎಂ ಆಗ್ತಾರೆ. ಆದರೆ, ಅಲ್ಲಿಯವರೆಗೆ ಹಾವು ಮುಂಗಸಿಯಂತೆ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದರೂ ಸಹ ಇದೇ ಅರ್ಜಿ ಮೇಲೆ ಕ್ರಮವಹಿಸಲು ಯಡಿಯೂರಪ್ಪನವರು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದರು.

ಅಂದಿನ ಸಿಎಂ ಯಡಿಯೂರಪ್ಪನವರ ಸೂಚನೆಗೆ ಸ್ಪಷ್ಟವಾಗಿ ಉತ್ತರಿಸಿದ್ದ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿರಾಮಲಿಂಗಂ “ಗಂಗೇನಹಳ್ಳಿ ಬಡಾವಣೆಯ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು16/2 ಅನ್ವಯ ಈಗಾಗಲೇ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಹೀಗಾಗಿ ಡಿನೋಟಿಫೈ ಮಾಡಲು ಸಾಧ್ಯವಿಲ್ಲ ಎಂದು ಬರೆದಿದ್ದರು. ಆದರೆ, ಯಡಿಯೂರಪ್ಪನವರು ಪ್ರಧಾನ ಕಾರ್ಯದರ್ಶಿಗಳ ಅಭಿಪ್ರಾಯ ಗಾಳಿಗೆ ತೂರಿ ಸಂಬಂಧಿತ ಫೈಲ್ ಮೇಲೆ ಭೂಸ್ವಾಧೀನ ಕೈಬಿಡಲು ಆದೇಶಿಸಿದೆ ಎಂದು ಬರೆದಿದ್ದಾರೆ. 1978 ರಲ್ಲಿ ಭೂ ಸ್ವಾಧೀನ ಆಗಿರುವ ಜಮೀನಿಗೆ 2009-10 ರಲ್ಲಿ ಡಿನೋಟಿಫೈ ಮಾಡಿದ್ದಾರೆ” ಎಂದು ದಾಖಲೆಗಳ ಸಮೇತ ಅವರು ಆರೋಪಿಸಿದರು.

“ಇದು ಕಾಕತಾಳೀಯ ಅಂತಿರೋ ವ್ಯವಸ್ಥಿತ, ಪ್ರಾಯೋಜಿತ ಆಲೋಚಿತ ಅಕ್ರಮ ಅಂತಿರೋ ದರೋಡೆ ಅಂತಿರೋ, ಒಟ್ಟಾರೆ 1 ಎಕರೆ 11 ಗುಂಟೆ ಜಮೀನನ್ನು ಯಡಿಯೂರಪ್ಪ ಅವರನ್ನು ಉಪಯೋಗಿಸಿಕೊಂಡು ಡಿನೋಟಿಫೈ ಮಾಡಿಕೊಳ್ಳಲಾಗುತ್ತೆ. ಯಾರ ಜಮೀನಿಗೆ ಡಿನೋಟಿಫೈ ಆಗಿತ್ತು ಆತ ಸತ್ತೇ ಹೋಗಿದ್ದ, ಮೃತಪಟ್ಟವನ ಹೆಸರಿಗೆ ಡಿನೋಟಿಫೈ ಮಾಡಿದ್ದಾರೆ. ಸತ್ತೋದವನಿಂದ ಕುಮಾರಸ್ವಾಮಿಯವರ ಅತ್ತೆ ಹೆಸರಿಗೆ ಜಿಪಿಎ ಮಾಡಲಾಗಿದೆ. ಅವರಿಂದ ಕುಮಾರಸ್ವಾಮಿ ಅವರ ಬಾಮೈದನಿಗೆ ನೋಂದಣಿ ಮಾಡಿಕೊಡಲಾಗಿದೆ. ನೂರಾರು ಕೋಟಿ ಮೌಲ್ಯ ಇರುವ ಬಡವರಿಗೆ ನಿವೇಶನಗಳನ್ನು ಕಲ್ಪಿಸಬೇಕಾದ ಸ್ವತ್ತು, ಸರ್ಕಾರ ಭೂ ಸ್ವಾಧೀನ ಮಾಡಿ ಮುಗಿಸಿದ್ದ ಜಮೀನು ಹೀಗೆ ಅಕ್ರಮವಾಗಿ ಇಬ್ಬರು ಮಾಜಿ ಸಿಎಂಗಳ ಜಂಟಿ ಕಾರ್ಯಾಚರಣೆಯಿಂದ ಕಬಳಿಕೆಯಾಗಿದೆ” ಎಂದು ಆರೋಪಿಸಿದರು.

“ಸರ್ಕಾರದ ಆದೇಶದ ಪ್ರತಿಯ ಮೇಲೆ ಅಂದಿನ ಸಿಎಂ ಯಡಿಯೂರಪ್ಪ ಅವರ ಕೈ ಬರಹ ಸ್ಪಷ್ಟವಾಗಿದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆದೇಶಿಸಿದ್ದನ್ನು ಯಡಿಯೂರಪ್ಪ ಡಿನೋಟಿಫೈ ಮಾಡಿದ್ದಾರೆ. ಜಮೀನು ಕುಮಾರಸ್ವಾಮಿ ಅವರ ಬಾಮೈದನ ಪಾಲಾಗಿದೆ. ಈ ಇಬ್ಬರೂ ಸೇರಿ ಬಡವರ ಆಸ್ತಿ ಲಪಟಾಯಿಸಿರುವುದು ಕರ್ನಾಟಕದ ಜನರಗೆ ಮಾಡಿದ ಅನ್ಯಾಯ ಮೋಸ ಅಲ್ವ? ಇದು ವ್ಯವಸ್ಥಿತ ವಂಚನೆ ಹೌದ ಅಲ್ವ? ಇದು ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆ ಮಾಡಿ ವ್ಯವಸ್ಥಿತವಾಗಿ ಲೂಟಿ ಮಾಡಿರುವ ಪ್ರಕರಣ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು.

“ಈ ಪ್ರಕರಣದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ತನಿಖೆಯನ್ನು ವಜಾ ಮಾಡುವಂತೆ ಯಡಿಯೂರಪ್ಪನವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟಿನಲ್ಲಿ ಅಪೀಲು ವಜಾ ಆಗಿ ₹25,000 ದಂಡ ಹಾಕಿದ್ದಾರೆ. ಹೀಗಾಗಿ ಲೋಕಾಯುಕ್ತ ತತಕ್ಷಣ ಈ ಪ್ರಕರಣದ ತನಿಖೆ ಪೂರೈಸಿ ಈ ಬಗ್ಗೆ ವರದಿ ನೀಡಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಸಂತೋಷ್ ಲಾಡ್ ಉಪಸ್ಥಿತರಿದ್ದರು.

ಇದನ್ನೂ ಓದಿ; ಯಡಿಯೂರಪ್ಪ, ಕುಮಾರಸ್ವಾಮಿ ಜಂಟಿ ಹಗರಣ ಆರೋಪ | ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ನಿವೃತ್ತ ಐಎಎಸ್ ಅಧಿಕಾರಿ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...