Homeಕರ್ನಾಟಕಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ...

ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ ಬೈರೇಗೌಡ ಆರೋಪ

- Advertisement -
- Advertisement -

“ಬೆಂಗಳೂರು ಗಂಗೇನಹಳ್ಳಿ ಬಡಾವಣೆ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಸರ್ಕಾರಿ ಜಮೀನನ್ನು ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಜಂಟಿಯಾಗಿ, ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿ ಕುಮಾರಸ್ವಾಮಿ ಅವರ ಬಾಮೈದನ ಹೆಸರಲ್ಲಿ ನೋಂದಣಿ ಮಾಡಿದ್ದಾರೆ” ಎಂದು ಆರೋಪಿಸಿರುವ  ಕಾಂಗ್ರೆಸ್ ಸಚಿವರು, ಸುದ್ದಿಗೋ‍ಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರು ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1976 ರಲ್ಲೆ ಭೂ ಸ್ವಾಧೀನ ಮಾಡಿಕೊಂಡಿದೆ. 1976 ರಲ್ಲಿ ಆರಂಭವಾದ ಭೂ ಸ್ವಾಧೀನ ಪ್ರಕ್ರಿಯೆ 1978ರಲ್ಲಿ ಮುಗಿದಿದೆ. ಆದರೆ, ಎಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ತನಗೆ ಸಂಬಂಧವೇ ಇಲ್ಲದ ಈ ಪ್ರಕರಣದಲ್ಲಿ ಅತ್ಯುತ್ಸಾಹ ತೋರಿದ್ದು ಏಕೆ” ಎಂದು ಕೃಷ್ಣ ಬೈರೇಗೌಡ ಕಟುವಾಗಿ ಪ್ರಶ್ನಿಸಿದರು.

“ಈ ಮೂಲಕ ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆಯಿಂದ ವ್ಯವಸ್ಥಿತವಾಗಿ ಲೂಟಿ ಮಾಡಿದ್ದಾರೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಕ್ತ ದಾಖಲೆಗಳ ಸಮೇತ ಆಕ್ರೋಶ ಹೊರಹಾಕಿದರು.

“ಜಮೀನಿನ ವಾರಸುದಾರರಿಗೆ ಸಂಬಂಧವೇ ಇಲ್ಲದ ದಾರಿಯಲ್ಲಿ ಹೋಗೋ ದಾಸಯ್ಯ, ಯಾರೋ ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬವರು 1978ರಲ್ಲಿ ಭೂ ಸ್ವಾಧೀನಗೊಂಡ ಜಮೀನಿಗೆ ಡಿನೋಟಿಫೈ ಮಾಡಲು 2007ರಲ್ಲಿ ಸಿಎಂ ಕುಮಾರಸ್ವಾಮಿಯವರಿಗೆ ಅರ್ಜಿ ಹಾಕಿದ್ದಾರೆ. ಅಸಲಿಗೆ ರಾಜಶೇಖರಯ್ಯನಿಗೂ ಜಮೀನಿಗೂ ಸಂಬಂಧವೇ ಇಲ್ಲ. ಈತ ಯಾರು ಅಂತ ಈವರೆಗೆ ಗೊತ್ತಿಲ್ಲ. ಆದರೆ, ಈ ಅರ್ಜಿ ಬಂದ ಕೂಡಲೇ ಕುಮಾರಸ್ವಾಮಿಯವರು ಅದೇ ದಿನ ಅಧಿಕಾರಿಗಳಿಗೆ ಪತ್ರ ಬರೆದು ಈ ಅರ್ಜಿ ಮೇಲೆ ಕ್ರಮ ಕೈಗೊಳ್ಳಲು ಸೂಚಿಸುತ್ತಾರೆ” ಎಂದು ದಾಖಲೆ ಬಿಡುಗಡೆ ಮಾಡಿದರು.

“ಆದರೆ, ಅಧಿಕಾರಿಗಳು 1976ರಲ್ಲಿ ಆರಂಭಗೊಂಡ ಈ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆ 1978 ರಲ್ಲಿ ಮುಗಿದಿದೆ. ಹೀಗಾಗಿ ಭೂಸ್ವಾಧೀನ ಮಾಡಲು ಬರಲ್ಲ ಎಂದು ಸ್ಪಷ್ಟವಾಗಿ ಉತ್ತರಿಸಿದ್ದರು. ಆದರೂ, ಈ ವಿಚಾರವನ್ನು ಕೈಬಿಡದ ಕುಮಾರಸ್ವಾಮಿಯವರು ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ಕಾನೂನು ಪ್ರಕಾರ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

“ಇದೇ ಸಂದರ್ಭದಲ್ಲಿ ಈ ಜಮೀನಿನ ಅಸಲಿ ಮಾಲೀಕರಾದ 21 ಜನರ ಜೊತೆ ಕುಮಾರಸ್ವಾಮಿಯವರ ಅತ್ತೆಯವರು ಜಿಪಿಎ ಮಾಡಿಕೊಳ್ತಾರೆ. ಇದಾದ ಮೇಲೆ ಅಧಿಕಾರ ಹೊಂದಾಣಿಕೆ ಸಮಸ್ಯೆಯಿಂದ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿ ಕುಮಾರಸ್ವಾಮಿ ರಾಜೀನಾಮೆ ನೀಡ್ತಾರೆ. ಆನಂತರ ಯಡಿಯೂರಪ್ಪನವರು ಸಿಎಂ ಆಗ್ತಾರೆ. ಆದರೆ, ಅಲ್ಲಿಯವರೆಗೆ ಹಾವು ಮುಂಗಸಿಯಂತೆ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದರೂ ಸಹ ಇದೇ ಅರ್ಜಿ ಮೇಲೆ ಕ್ರಮವಹಿಸಲು ಯಡಿಯೂರಪ್ಪನವರು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದರು.

ಅಂದಿನ ಸಿಎಂ ಯಡಿಯೂರಪ್ಪನವರ ಸೂಚನೆಗೆ ಸ್ಪಷ್ಟವಾಗಿ ಉತ್ತರಿಸಿದ್ದ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿರಾಮಲಿಂಗಂ “ಗಂಗೇನಹಳ್ಳಿ ಬಡಾವಣೆಯ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು16/2 ಅನ್ವಯ ಈಗಾಗಲೇ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಹೀಗಾಗಿ ಡಿನೋಟಿಫೈ ಮಾಡಲು ಸಾಧ್ಯವಿಲ್ಲ ಎಂದು ಬರೆದಿದ್ದರು. ಆದರೆ, ಯಡಿಯೂರಪ್ಪನವರು ಪ್ರಧಾನ ಕಾರ್ಯದರ್ಶಿಗಳ ಅಭಿಪ್ರಾಯ ಗಾಳಿಗೆ ತೂರಿ ಸಂಬಂಧಿತ ಫೈಲ್ ಮೇಲೆ ಭೂಸ್ವಾಧೀನ ಕೈಬಿಡಲು ಆದೇಶಿಸಿದೆ ಎಂದು ಬರೆದಿದ್ದಾರೆ. 1978 ರಲ್ಲಿ ಭೂ ಸ್ವಾಧೀನ ಆಗಿರುವ ಜಮೀನಿಗೆ 2009-10 ರಲ್ಲಿ ಡಿನೋಟಿಫೈ ಮಾಡಿದ್ದಾರೆ” ಎಂದು ದಾಖಲೆಗಳ ಸಮೇತ ಅವರು ಆರೋಪಿಸಿದರು.

“ಇದು ಕಾಕತಾಳೀಯ ಅಂತಿರೋ ವ್ಯವಸ್ಥಿತ, ಪ್ರಾಯೋಜಿತ ಆಲೋಚಿತ ಅಕ್ರಮ ಅಂತಿರೋ ದರೋಡೆ ಅಂತಿರೋ, ಒಟ್ಟಾರೆ 1 ಎಕರೆ 11 ಗುಂಟೆ ಜಮೀನನ್ನು ಯಡಿಯೂರಪ್ಪ ಅವರನ್ನು ಉಪಯೋಗಿಸಿಕೊಂಡು ಡಿನೋಟಿಫೈ ಮಾಡಿಕೊಳ್ಳಲಾಗುತ್ತೆ. ಯಾರ ಜಮೀನಿಗೆ ಡಿನೋಟಿಫೈ ಆಗಿತ್ತು ಆತ ಸತ್ತೇ ಹೋಗಿದ್ದ, ಮೃತಪಟ್ಟವನ ಹೆಸರಿಗೆ ಡಿನೋಟಿಫೈ ಮಾಡಿದ್ದಾರೆ. ಸತ್ತೋದವನಿಂದ ಕುಮಾರಸ್ವಾಮಿಯವರ ಅತ್ತೆ ಹೆಸರಿಗೆ ಜಿಪಿಎ ಮಾಡಲಾಗಿದೆ. ಅವರಿಂದ ಕುಮಾರಸ್ವಾಮಿ ಅವರ ಬಾಮೈದನಿಗೆ ನೋಂದಣಿ ಮಾಡಿಕೊಡಲಾಗಿದೆ. ನೂರಾರು ಕೋಟಿ ಮೌಲ್ಯ ಇರುವ ಬಡವರಿಗೆ ನಿವೇಶನಗಳನ್ನು ಕಲ್ಪಿಸಬೇಕಾದ ಸ್ವತ್ತು, ಸರ್ಕಾರ ಭೂ ಸ್ವಾಧೀನ ಮಾಡಿ ಮುಗಿಸಿದ್ದ ಜಮೀನು ಹೀಗೆ ಅಕ್ರಮವಾಗಿ ಇಬ್ಬರು ಮಾಜಿ ಸಿಎಂಗಳ ಜಂಟಿ ಕಾರ್ಯಾಚರಣೆಯಿಂದ ಕಬಳಿಕೆಯಾಗಿದೆ” ಎಂದು ಆರೋಪಿಸಿದರು.

“ಸರ್ಕಾರದ ಆದೇಶದ ಪ್ರತಿಯ ಮೇಲೆ ಅಂದಿನ ಸಿಎಂ ಯಡಿಯೂರಪ್ಪ ಅವರ ಕೈ ಬರಹ ಸ್ಪಷ್ಟವಾಗಿದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆದೇಶಿಸಿದ್ದನ್ನು ಯಡಿಯೂರಪ್ಪ ಡಿನೋಟಿಫೈ ಮಾಡಿದ್ದಾರೆ. ಜಮೀನು ಕುಮಾರಸ್ವಾಮಿ ಅವರ ಬಾಮೈದನ ಪಾಲಾಗಿದೆ. ಈ ಇಬ್ಬರೂ ಸೇರಿ ಬಡವರ ಆಸ್ತಿ ಲಪಟಾಯಿಸಿರುವುದು ಕರ್ನಾಟಕದ ಜನರಗೆ ಮಾಡಿದ ಅನ್ಯಾಯ ಮೋಸ ಅಲ್ವ? ಇದು ವ್ಯವಸ್ಥಿತ ವಂಚನೆ ಹೌದ ಅಲ್ವ? ಇದು ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆ ಮಾಡಿ ವ್ಯವಸ್ಥಿತವಾಗಿ ಲೂಟಿ ಮಾಡಿರುವ ಪ್ರಕರಣ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು.

“ಈ ಪ್ರಕರಣದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ತನಿಖೆಯನ್ನು ವಜಾ ಮಾಡುವಂತೆ ಯಡಿಯೂರಪ್ಪನವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟಿನಲ್ಲಿ ಅಪೀಲು ವಜಾ ಆಗಿ ₹25,000 ದಂಡ ಹಾಕಿದ್ದಾರೆ. ಹೀಗಾಗಿ ಲೋಕಾಯುಕ್ತ ತತಕ್ಷಣ ಈ ಪ್ರಕರಣದ ತನಿಖೆ ಪೂರೈಸಿ ಈ ಬಗ್ಗೆ ವರದಿ ನೀಡಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಸಂತೋಷ್ ಲಾಡ್ ಉಪಸ್ಥಿತರಿದ್ದರು.

ಇದನ್ನೂ ಓದಿ; ಯಡಿಯೂರಪ್ಪ, ಕುಮಾರಸ್ವಾಮಿ ಜಂಟಿ ಹಗರಣ ಆರೋಪ | ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ನಿವೃತ್ತ ಐಎಎಸ್ ಅಧಿಕಾರಿ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...