Homeಕರ್ನಾಟಕಬಿಎಸ್‌ವೈ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?

ಬಿಎಸ್‌ವೈ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?

- Advertisement -
- Advertisement -

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುವುದಾಗಿ ಕೊನೆಗೂ ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಮುಂದಿನ ಸಿಎಂ ಯಾರಾಗುತ್ತಾರೆ ಎಂಬುವುದು ಕೂಡಾ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರವಾಗಿ ಚರ್ಚೆಯಾಗುತ್ತಿದೆ. ಪ್ರಸ್ತುತ ರಾಜ್ಯದ ಸಂಪುಟದಲ್ಲಿ ಸಚಿವರಾಗಿರುವ ಮುರುಗೇಶ್‌ ನಿರಾಣಿ, ಬಸವರಾಜ್‌ ಬೊಮ್ಮಾಯಿ ಹಾಗೂ ಒಕ್ಕೂಟ ಸರ್ಕಾರದ ಸಚಿವ ಪ್ರಹ್ಲಾದ್‌ ಜೋಷಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿಎಲ್‌ ಸಂತೋಷ್‌‌ ಪ್ರಸ್ತುತ ಸಿಎಂ ಆಕಾಂಕ್ಷಿಗಳು ಎಂದು ಬಿಂಬಿಸಲ್ಪಡುತ್ತಿದ್ದಾರೆ.

ಈ ಪೈಕಿ ಮುರುಗೇಶ್‌ ನಿರಾಣಿ ಅವರನ್ನು ಮುಂದಿನ ಸಿಎಂ ಅಗಿ ಬಿಜೆಪಿ ಹೈಕಮಾಂಡ್‌ ಘೋಷಿಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದು ಬಂದಿದೆ. ಅಲ್ಲದೆ, ಉಪ ಮುಖ್ಯಮಂತ್ರಿಯಾಗಿ ಶ್ರೀರಾಮುಲು ಮತ್ತು ಇನ್ನೊಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್ ಯಡಿಯೂರಪ್ಪ

ಯಡಿಯೂರಪ್ಪ ಅವರು ದೆಹಲಿ ಭೇಟಿ ಮುಗಿಸಿ ವಾಪಾಸು ರಾಜ್ಯಕ್ಕೆ ಬಂದ ಬಳಿಕ, ಮುರುಗೇಶ್‌ ನಿರಾಣಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದರು. ಸಿಎಂ ಸ್ಥಾನಕ್ಕಾಗಿ ಬಿಜೆಪಿ ಹೈಕಮಾಂಡ್‌ ಮುಂದೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೆ, ಬಿಜೆಪಿಯಲ್ಲೇ ಇದ್ದುಕೊಂಡು, ಬಿಜೆಪಿ ನಾಯಕರ ವಿರುದ್ದವೇ ಸದಾ ಬುಸುಗುಡುತ್ತಿರುವ ಶಾಸಕ ಬಸನಗೌಡ ಯತ್ನಾಳ್‌ ಅವರು ಕೂಡಾ, ಸಿಎಂ ಸ್ಥಾನಕ್ಕೆ ನಿರಾಣಿ ಭಾರೀ ಲಾಬಿ ನಡೆಸುತ್ತಿದ್ಧಾರೆ ಎಂದು ಇತ್ತೀಚೆಗೆ ಆರೋಪಿಸಿದ್ದರು.

ಮುರುಗೇಶ್‌ ನಿರಾಣಿ ಅವರು ಯಡಿಯೂರಪ್ಪ ಸರ್ಕಾರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾಗಿದ್ದು, ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದಾರೆ.

ಈ ನಡುವೆ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಅವರ ಹೆಸರು ಕೂಡಾ ಕೇಳಿಬಂದಿತ್ತಾದರೂ, ಕಳೆದ ಒಂದೆರೆಡು ದಿನಗಳಿಂದ ಅದು ಹಿನ್ನಲೆಗೆ ಸರಿದಿದೆ.

ಇದನ್ನೂ ಓದಿ: ರಾಜೀನಾಮೆ ನೀಡುವಂತೆ ಯಾರು ಒತ್ತಡ ತಂದಿಲ್ಲ: ಬಿ.ಎಸ್ ಯಡಿಯೂರಪ್ಪ

ಮುರುಗೇಶ್‌ ನಿರಾಣಿ 2004 ರಲ್ಲಿ ಮೊದಲ ಬಾರಿಗೆ ಬೀಳಗಿ ಕ್ಷೇತ್ರದಿಂದ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದರು. 2008 ರಲ್ಲಿ ಮತ್ತೆ ಆಯ್ಕೆಯಾದ ನಿರಾಣಿ, ಯಡಿಯೂರಪ್ಪ ಸರಕಾರದಲ್ಲಿ ಸಚಿವರಾಗಿದ್ದರು. 2008 ರಿಂದ 2014 ರವರೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಬಿಜೆಪಿ ಸರಕಾರದಲ್ಲಿ ಕಾರ್ಯನಿರ್ವಹಿಸಿದ್ದ ನಿರಾಣಿ, ಸಚಿವರಾಗಿದ್ದೂ 2014ರಲ್ಲಿ ಸೋಲುಂಡಿದ್ದರು. ಮತ್ತೆ 2018 ರಲ್ಲಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ವರ್ಷಗಳ ಹಿಂದೆ ಸಮ್ಮಿಶ್ರ ಸರ್ಕಾರ ಬಿದ್ದು, ಬಿಜೆಪಿ ಸರ್ಕಾರ ಅಧಿಕಾರ ಹಿಡಿದಾಗ ಎರಡನೇ ಬಾರಿ ಸಚಿವರಾಗಿ ಯಡಿಯೂರಪ್ಪ ಸಂಪುಟಕ್ಕೆ ಮರು ಪ್ರವೇಶ ಪಡೆದಿದ್ದರು.

“ಬಿಜೆಪಿ ಪಕ್ಷದ 120 ಶಾಸಕರೆಲ್ಲರೂ ಸಿಎಂ ಹುದ್ದೆಗೆ ಅರ್ಹತೆ ಹೊಂದಿದ್ದಾರೆ. ನಿರೀಕ್ಷೆಯಿಲ್ಲದೆ ಪಕ್ಷ ನನಗೆ ಹಲವು ಜವಾಬ್ದಾರಿ ನೀಡಿದೆ. ಮೊದಲ ಬಾರಿ ಶಾಸಕನಾದಾಗಲೇ ಹೈಕಮಾಂಡ್ ನನ್ನನ್ನು ಸಚಿವನನ್ನಾಗಿ ಮಾಡಿದೆ. ಈಗಲೂ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಹಿಂದೆಯೂ ನಾನು ಯಾವುದೇ ಹುದ್ದೆ ಅಪೇಕ್ಷೆ ಮಾಡಿದವನಲ್ಲ, ಈಗಲೂ ಮಾಡುವುದಿಲ್ಲ” ಎಂದು ನಿರಾಣಿ ಇತ್ತೀಚೆಗಷ್ಟೇ ಹೇಳಿದ್ದರು.

“ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ” ಎಂದು ಅವರು ಅಂದು ಹೇಳಿದ್ದರು.

ಇದನ್ನೂ ಓದಿ: ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...