Homeಕರ್ನಾಟಕಬಿಎಸ್‌ವೈ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?

ಬಿಎಸ್‌ವೈ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?

- Advertisement -
- Advertisement -

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುವುದಾಗಿ ಕೊನೆಗೂ ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಮುಂದಿನ ಸಿಎಂ ಯಾರಾಗುತ್ತಾರೆ ಎಂಬುವುದು ಕೂಡಾ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರವಾಗಿ ಚರ್ಚೆಯಾಗುತ್ತಿದೆ. ಪ್ರಸ್ತುತ ರಾಜ್ಯದ ಸಂಪುಟದಲ್ಲಿ ಸಚಿವರಾಗಿರುವ ಮುರುಗೇಶ್‌ ನಿರಾಣಿ, ಬಸವರಾಜ್‌ ಬೊಮ್ಮಾಯಿ ಹಾಗೂ ಒಕ್ಕೂಟ ಸರ್ಕಾರದ ಸಚಿವ ಪ್ರಹ್ಲಾದ್‌ ಜೋಷಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿಎಲ್‌ ಸಂತೋಷ್‌‌ ಪ್ರಸ್ತುತ ಸಿಎಂ ಆಕಾಂಕ್ಷಿಗಳು ಎಂದು ಬಿಂಬಿಸಲ್ಪಡುತ್ತಿದ್ದಾರೆ.

ಈ ಪೈಕಿ ಮುರುಗೇಶ್‌ ನಿರಾಣಿ ಅವರನ್ನು ಮುಂದಿನ ಸಿಎಂ ಅಗಿ ಬಿಜೆಪಿ ಹೈಕಮಾಂಡ್‌ ಘೋಷಿಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದು ಬಂದಿದೆ. ಅಲ್ಲದೆ, ಉಪ ಮುಖ್ಯಮಂತ್ರಿಯಾಗಿ ಶ್ರೀರಾಮುಲು ಮತ್ತು ಇನ್ನೊಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್ ಯಡಿಯೂರಪ್ಪ

ಯಡಿಯೂರಪ್ಪ ಅವರು ದೆಹಲಿ ಭೇಟಿ ಮುಗಿಸಿ ವಾಪಾಸು ರಾಜ್ಯಕ್ಕೆ ಬಂದ ಬಳಿಕ, ಮುರುಗೇಶ್‌ ನಿರಾಣಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದರು. ಸಿಎಂ ಸ್ಥಾನಕ್ಕಾಗಿ ಬಿಜೆಪಿ ಹೈಕಮಾಂಡ್‌ ಮುಂದೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೆ, ಬಿಜೆಪಿಯಲ್ಲೇ ಇದ್ದುಕೊಂಡು, ಬಿಜೆಪಿ ನಾಯಕರ ವಿರುದ್ದವೇ ಸದಾ ಬುಸುಗುಡುತ್ತಿರುವ ಶಾಸಕ ಬಸನಗೌಡ ಯತ್ನಾಳ್‌ ಅವರು ಕೂಡಾ, ಸಿಎಂ ಸ್ಥಾನಕ್ಕೆ ನಿರಾಣಿ ಭಾರೀ ಲಾಬಿ ನಡೆಸುತ್ತಿದ್ಧಾರೆ ಎಂದು ಇತ್ತೀಚೆಗೆ ಆರೋಪಿಸಿದ್ದರು.

ಮುರುಗೇಶ್‌ ನಿರಾಣಿ ಅವರು ಯಡಿಯೂರಪ್ಪ ಸರ್ಕಾರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾಗಿದ್ದು, ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದಾರೆ.

ಈ ನಡುವೆ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಅವರ ಹೆಸರು ಕೂಡಾ ಕೇಳಿಬಂದಿತ್ತಾದರೂ, ಕಳೆದ ಒಂದೆರೆಡು ದಿನಗಳಿಂದ ಅದು ಹಿನ್ನಲೆಗೆ ಸರಿದಿದೆ.

ಇದನ್ನೂ ಓದಿ: ರಾಜೀನಾಮೆ ನೀಡುವಂತೆ ಯಾರು ಒತ್ತಡ ತಂದಿಲ್ಲ: ಬಿ.ಎಸ್ ಯಡಿಯೂರಪ್ಪ

ಮುರುಗೇಶ್‌ ನಿರಾಣಿ 2004 ರಲ್ಲಿ ಮೊದಲ ಬಾರಿಗೆ ಬೀಳಗಿ ಕ್ಷೇತ್ರದಿಂದ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದರು. 2008 ರಲ್ಲಿ ಮತ್ತೆ ಆಯ್ಕೆಯಾದ ನಿರಾಣಿ, ಯಡಿಯೂರಪ್ಪ ಸರಕಾರದಲ್ಲಿ ಸಚಿವರಾಗಿದ್ದರು. 2008 ರಿಂದ 2014 ರವರೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಬಿಜೆಪಿ ಸರಕಾರದಲ್ಲಿ ಕಾರ್ಯನಿರ್ವಹಿಸಿದ್ದ ನಿರಾಣಿ, ಸಚಿವರಾಗಿದ್ದೂ 2014ರಲ್ಲಿ ಸೋಲುಂಡಿದ್ದರು. ಮತ್ತೆ 2018 ರಲ್ಲಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ವರ್ಷಗಳ ಹಿಂದೆ ಸಮ್ಮಿಶ್ರ ಸರ್ಕಾರ ಬಿದ್ದು, ಬಿಜೆಪಿ ಸರ್ಕಾರ ಅಧಿಕಾರ ಹಿಡಿದಾಗ ಎರಡನೇ ಬಾರಿ ಸಚಿವರಾಗಿ ಯಡಿಯೂರಪ್ಪ ಸಂಪುಟಕ್ಕೆ ಮರು ಪ್ರವೇಶ ಪಡೆದಿದ್ದರು.

“ಬಿಜೆಪಿ ಪಕ್ಷದ 120 ಶಾಸಕರೆಲ್ಲರೂ ಸಿಎಂ ಹುದ್ದೆಗೆ ಅರ್ಹತೆ ಹೊಂದಿದ್ದಾರೆ. ನಿರೀಕ್ಷೆಯಿಲ್ಲದೆ ಪಕ್ಷ ನನಗೆ ಹಲವು ಜವಾಬ್ದಾರಿ ನೀಡಿದೆ. ಮೊದಲ ಬಾರಿ ಶಾಸಕನಾದಾಗಲೇ ಹೈಕಮಾಂಡ್ ನನ್ನನ್ನು ಸಚಿವನನ್ನಾಗಿ ಮಾಡಿದೆ. ಈಗಲೂ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಹಿಂದೆಯೂ ನಾನು ಯಾವುದೇ ಹುದ್ದೆ ಅಪೇಕ್ಷೆ ಮಾಡಿದವನಲ್ಲ, ಈಗಲೂ ಮಾಡುವುದಿಲ್ಲ” ಎಂದು ನಿರಾಣಿ ಇತ್ತೀಚೆಗಷ್ಟೇ ಹೇಳಿದ್ದರು.

“ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ” ಎಂದು ಅವರು ಅಂದು ಹೇಳಿದ್ದರು.

ಇದನ್ನೂ ಓದಿ: ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...